Homeಮುಖಪುಟಸರ್ಕಾರಿ ಕಾರ್ಯಕ್ರಮದಲ್ಲಿ ಜೈ ಶ್ರೀರಾಮ್ ಘೋಷಣೆ: ಸಂಸದೆ ಮಹುವಾ ಮೊಯಿತ್ರಾ ವಿರೋಧ

ಸರ್ಕಾರಿ ಕಾರ್ಯಕ್ರಮದಲ್ಲಿ ಜೈ ಶ್ರೀರಾಮ್ ಘೋಷಣೆ: ಸಂಸದೆ ಮಹುವಾ ಮೊಯಿತ್ರಾ ವಿರೋಧ

’ಸರ್ಕಾರಿ ಕಾರ್ಯಕ್ರಮವೊಂದರಲ್ಲಿ, ಜಾತ್ಯತೀತ ಪ್ರಜಾಪ್ರಭುತ್ವ ಇರುವವರೆಗೂ ನೀವು ಧರ್ಮ ಪಠಣಗಳನ್ನು ಮಾಡಲು ಸಾಧ್ಯವಿಲ್ಲ’ ಎಂದು ಅವರು ಹೇಳಿದ್ದಾರೆ.

- Advertisement -
- Advertisement -

ನೇತಾಜಿ ವಾರ್ಷಿಕೋತ್ಸವದಂದು ನಡೆದ ಕೇಂದ್ರದ ಕಾರ್ಯಕ್ರಮದಲ್ಲಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಮಾತನಾಡುವ ಮೊದಲು ಕೇಳಿ ಬಂದ ಜೈ ಶ್ರೀರಾಮ್ ಘೋಷಣೆಗಳಿಗೆ ವೇದಿಕೆಯಲ್ಲೇ ಪ್ರತಿಭಟಿಸಿರುವ ಘಟನೆ ಶನಿವಾರ ನಡೆದಿದೆ. ಕೇಂದ್ರ ಸರ್ಕಾರ ಆಯೋಜಿಸಿದ್ದ ಈ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಕೂಡ ಭಾಗಿಯಾಗಿದ್ದರು.

ಈ ಘಟನೆ ಕುರಿತು ಪ್ರತಿಕ್ರಿಯಿಸಿರುವ ತೃಣಮೂಲ ಸಂಸದೆ ಮೆಹುವಾ ಮೊಯಿತ್ರಾ, “ಕೇಂದ್ರ ಸರ್ಕಾರವು ಬಹು-ನಂಬಿಕೆಯ ಪ್ರಜಾಪ್ರಭುತ್ವದ ಎಲ್ಲಾ ಪಾವಿತ್ರ್ಯವನ್ನು ಸಂಪೂರ್ಣವಾಗಿ ಉಲ್ಲಂಘಿಸಿದೆ. ಅಧಿಕೃತ ಕಾರ್ಯಕ್ರಮವೊಂದರಲ್ಲಿ ಜಾತ್ಯತೀತ ಪ್ರಜಾಪ್ರಭುತ್ವದ ಈ ನೆಲದಲ್ಲಿ ಧರ್ಮದ ಪಠಣಗಳನ್ನು ಚೀರುವುದು ಅಕ್ಷಮ್ಯ. ಬಿಜೆಪಿಯ ಅಶಿಕ್ಷಿತ/ಹುಂಬ ಜನರು ಮಾತ್ರ ಈ ರೀತಿಯ ಅಸಂಬದ್ಧತೆಯನ್ನು ಪ್ರದರ್ಶಿಸಬಲ್ಲರು’’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಸೇನಾ ರಹಸ್ಯ ಬಹಿರಂಗ: ಅರ್ನಾಬ್‌ನನ್ನು ಮತ್ತೆ ಅರೆಸ್ಟ್ ಮಾಡುತ್ತಾ ಮಹಾಸರ್ಕಾರ?

ಈ ಕುರಿತು ಟ್ವೀಟ್ ಕೂಡ ಮಾಡಿರುವ ಸಂಸದೆ ಮೆಹುವಾ, “ಧರ್ಮವು ಸರ್ಕಾರಕ್ಕೆ ಸಮನಾಗಿರುತ್ತದೆ ಎಂಬುದನ್ನು ನಾವು ಅರ್ಥ ಮಾಡಿಕೊಳ್ಳಬೇಕು ಅಥವಾ ಭಾರತವು ನಾಶವಾಗುತ್ತಿರುವ ಈ ದೊಡ್ಡ ವಿನಾಶವಾದಿ ಕೆಲಸ ನಿಲ್ಲಬೇಕು” ಎಂದು ಜನರನ್ನು ಒತ್ತಾಯಿಸಿದ್ದಾರೆ.

ಹಿಂದೂಗಳು ಇತರ ಧರ್ಮಗಳಿಗೆ ಅಸಹಿಷ್ಣುತೆ ತೋರುವುದನ್ನು ತನ್ನ ತಂದೆ ಒಪ್ಪುತ್ತಿರಲಿಲ್ಲ ಎಂದು ನೇತಾಜಿ ಮಗಳು ಅನಿತಾ ಬೋಸ್ ಹೇಳಿದ್ದಾರೆ ಎಂದು ಮೆಹುವಾ ಹೇಳಿದ್ದಾರೆ. ತಮ್ಮ ಟ್ವೀಟ್‌ನ ಕೊನೆಯಲ್ಲಿ ಅವರು, ಜೈ ಶ್ರೀ ಸಂವಿಧಾನ್ ಎಂಬ ಮಹತ್ವದ ಘೋಷಣೆ ಹಾಕಿದ್ದಾರೆ.

ಮತ್ತೊಬ್ಬ ಟಿಎಂಸಿ ಸಂಸದ ಡೆರೆಕ್ ಒಬ್ರಿಯೆನ್, ಆ ಸಭೆಯಲ್ಲಿ ಮಮತಾ ಬ್ಯಾನರ್ಜಿಯವರ ಭಾಷಣಕ್ಕೆ ಅಡೆತಡೆ ಮಾಡಿದ್ದನ್ನು ಖಂಡಿಸಿದ್ದಾರೆ, ಅನಾಗರಿಕರಿಗೆ ಘನತೆಯನ್ನು ಕಲಿಸಲಾಗುವುದಿಲ್ಲ ಎಂದು ಟೀಕಿಸಿದ್ದಾರೆ.

ಇದನ್ನೂ ಓದಿ: ಕೃಷಿಕಾಯ್ದೆ: ಮೋದಿ ನಿಲುವಿಗೆ ವಿರೋಧ, ಬಿಜೆಪಿ ತೊರೆದು ಅಕಾಲಿದಳ ಸೇರುತ್ತಿರುವ ನಾಯಕರು!

ಮಮತಾ ಅವರ ಕ್ರಮವು ತನ್ನ ಹತಾಶೆಯನ್ನು ತೋರಿಸಿದೆ ಎಂದು ಬಿಜೆಪಿ ಮುಖಂಡ ಕೈಲಾಶ್ ವಿಜಯ ವರ್ಗಿಯಾ ಹೇಳಿದ್ದಾರೆ. “ಜೈ ಶ್ರೀ ರಾಮ್ ಜಪಿಸುವುದರಲ್ಲಿ ಏನು ಸಮಸ್ಯೆ ಇದೆ ಮತ್ತು ಮಮತಾ ಅದರ ಬಗ್ಗೆ ಏಕೆ ಸಿಟ್ಟಾಗುತ್ತಾರೆ ಎಂಬುದನ್ನು ನಾನು ಅರ್ಥಮಾಡಿಕೊಳ್ಳುವಲ್ಲಿ ವಿಫಲವಾಗಿದ್ದೇನೆ. ಮಮತಾ ಅವರು ಎದ್ದುನಿಂತಾಗ ಅವರ ಗೌರವಾರ್ಥವಾಗಿ ಘೋಷಣೆ ಕೂಗಲಾಗಿದೆ ಎಂದು ನಾನು ಭಾವಿಸುತ್ತೇನೆ. ಘೋಷಣೆಯಿಂದಾಗಿ ವೇದಿಕೆಯಿಂದ ಹೊರನಡೆಯುವುದು ಹತಾಶೆಯನ್ನು ಸೂಚಿಸುತ್ತದೆ” ಎಂದು ಅವರು ಪ್ರತಿಕ್ರಿಯಿಸಿದ್ದಾರೆ.

ಈ ವರ್ಷದ ಮೇ ತಿಂಗಳಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಮುನ್ನ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ಉದ್ವೇಗ ಹೆಚ್ಚುತ್ತಿದೆ. ಉನ್ನತ ನಾಯಕರು, ಮಂತ್ರಿಗಳು ತೃಣಮೂಲ ಪಕ್ಷವನ್ನು ತೊರೆದಿದ್ದು, ಪಕ್ಷದೊಳಗಿನ ಬಿರುಕುಗಳು ಸಾರ್ವಜನಿಕವಾಗಿ ಕಾಣಿಸಿಕೊಂಡಿವೆ. ಈ ಪಕ್ಷಾಂತರ ಬಿಜೆಪಿಯಲ್ಲೂ ಸಮಸ್ಯೆಯನ್ನು ತಂದಿದೆ.

ನೇತಾಜಿ ಜನ್ಮದಿನಾಚರಣೆಯು ಬಿಜೆಪಿ ಮತ್ತು ತೃಣಮೂಲ ನಡುವೆ ಘರ್ಷಣೆಯ ಹಂತ ತಲುಪಿದೆ. ಈ ಪರಿಸ್ಥಿತಿಯನ್ನು ಗಮನಿಸಿದರೆ, ಪ್ರಧಾನಿ ಮೋದಿ ಮತ್ತು ಸಿಎಂ ಮಮತಾ ಬ್ಯಾನರ್ಜಿ ಈ ಕಾರ್ಯಕ್ರಮದಲ್ಲಿ ಜಂಟಿಯಾಗಿ ಕಾಣಿಸಿಕೊಂಡಿರುವುದು ಆಶ್ಚರ್ಯಕರವಾಗಿತ್ತು! ಆದರೆ ಮಮತಾ ಅವರು ತಮಗೆ ಅವಮಾನಿಸಲಾಗಿದೆ ಎಂದು ಈ ಸಂದರ್ಭದಲ್ಲಿ ಭಾಷಣ ಮಾಡಲು ನಿರಾಕರಿಸಿ ವೇದಿಕೆಯಿಂದ ಹೊರನಡೆದಿದ್ದರು.

ಇದನ್ನೂ ಓದಿ: ರ್‍ಯಾಲಿಗೆ ಟ್ರಾಕ್ಟರ್‌ ತರಬೇಡಿ ಎಂದ ಬೆಂಗಳೂರು ಪೊಲೀಸರು: ತಂದೇ ತರುತ್ತೇವೆ ಎಂದ ರೈತರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...