Homeಮುಖಪುಟಸರ್ಕಾರಿ ಕಾರ್ಯಕ್ರಮದಲ್ಲಿ ಜೈ ಶ್ರೀರಾಮ್ ಘೋಷಣೆ: ಸಂಸದೆ ಮಹುವಾ ಮೊಯಿತ್ರಾ ವಿರೋಧ

ಸರ್ಕಾರಿ ಕಾರ್ಯಕ್ರಮದಲ್ಲಿ ಜೈ ಶ್ರೀರಾಮ್ ಘೋಷಣೆ: ಸಂಸದೆ ಮಹುವಾ ಮೊಯಿತ್ರಾ ವಿರೋಧ

’ಸರ್ಕಾರಿ ಕಾರ್ಯಕ್ರಮವೊಂದರಲ್ಲಿ, ಜಾತ್ಯತೀತ ಪ್ರಜಾಪ್ರಭುತ್ವ ಇರುವವರೆಗೂ ನೀವು ಧರ್ಮ ಪಠಣಗಳನ್ನು ಮಾಡಲು ಸಾಧ್ಯವಿಲ್ಲ’ ಎಂದು ಅವರು ಹೇಳಿದ್ದಾರೆ.

- Advertisement -
- Advertisement -

ನೇತಾಜಿ ವಾರ್ಷಿಕೋತ್ಸವದಂದು ನಡೆದ ಕೇಂದ್ರದ ಕಾರ್ಯಕ್ರಮದಲ್ಲಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಮಾತನಾಡುವ ಮೊದಲು ಕೇಳಿ ಬಂದ ಜೈ ಶ್ರೀರಾಮ್ ಘೋಷಣೆಗಳಿಗೆ ವೇದಿಕೆಯಲ್ಲೇ ಪ್ರತಿಭಟಿಸಿರುವ ಘಟನೆ ಶನಿವಾರ ನಡೆದಿದೆ. ಕೇಂದ್ರ ಸರ್ಕಾರ ಆಯೋಜಿಸಿದ್ದ ಈ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಕೂಡ ಭಾಗಿಯಾಗಿದ್ದರು.

ಈ ಘಟನೆ ಕುರಿತು ಪ್ರತಿಕ್ರಿಯಿಸಿರುವ ತೃಣಮೂಲ ಸಂಸದೆ ಮೆಹುವಾ ಮೊಯಿತ್ರಾ, “ಕೇಂದ್ರ ಸರ್ಕಾರವು ಬಹು-ನಂಬಿಕೆಯ ಪ್ರಜಾಪ್ರಭುತ್ವದ ಎಲ್ಲಾ ಪಾವಿತ್ರ್ಯವನ್ನು ಸಂಪೂರ್ಣವಾಗಿ ಉಲ್ಲಂಘಿಸಿದೆ. ಅಧಿಕೃತ ಕಾರ್ಯಕ್ರಮವೊಂದರಲ್ಲಿ ಜಾತ್ಯತೀತ ಪ್ರಜಾಪ್ರಭುತ್ವದ ಈ ನೆಲದಲ್ಲಿ ಧರ್ಮದ ಪಠಣಗಳನ್ನು ಚೀರುವುದು ಅಕ್ಷಮ್ಯ. ಬಿಜೆಪಿಯ ಅಶಿಕ್ಷಿತ/ಹುಂಬ ಜನರು ಮಾತ್ರ ಈ ರೀತಿಯ ಅಸಂಬದ್ಧತೆಯನ್ನು ಪ್ರದರ್ಶಿಸಬಲ್ಲರು’’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಸೇನಾ ರಹಸ್ಯ ಬಹಿರಂಗ: ಅರ್ನಾಬ್‌ನನ್ನು ಮತ್ತೆ ಅರೆಸ್ಟ್ ಮಾಡುತ್ತಾ ಮಹಾಸರ್ಕಾರ?

ಈ ಕುರಿತು ಟ್ವೀಟ್ ಕೂಡ ಮಾಡಿರುವ ಸಂಸದೆ ಮೆಹುವಾ, “ಧರ್ಮವು ಸರ್ಕಾರಕ್ಕೆ ಸಮನಾಗಿರುತ್ತದೆ ಎಂಬುದನ್ನು ನಾವು ಅರ್ಥ ಮಾಡಿಕೊಳ್ಳಬೇಕು ಅಥವಾ ಭಾರತವು ನಾಶವಾಗುತ್ತಿರುವ ಈ ದೊಡ್ಡ ವಿನಾಶವಾದಿ ಕೆಲಸ ನಿಲ್ಲಬೇಕು” ಎಂದು ಜನರನ್ನು ಒತ್ತಾಯಿಸಿದ್ದಾರೆ.

ಹಿಂದೂಗಳು ಇತರ ಧರ್ಮಗಳಿಗೆ ಅಸಹಿಷ್ಣುತೆ ತೋರುವುದನ್ನು ತನ್ನ ತಂದೆ ಒಪ್ಪುತ್ತಿರಲಿಲ್ಲ ಎಂದು ನೇತಾಜಿ ಮಗಳು ಅನಿತಾ ಬೋಸ್ ಹೇಳಿದ್ದಾರೆ ಎಂದು ಮೆಹುವಾ ಹೇಳಿದ್ದಾರೆ. ತಮ್ಮ ಟ್ವೀಟ್‌ನ ಕೊನೆಯಲ್ಲಿ ಅವರು, ಜೈ ಶ್ರೀ ಸಂವಿಧಾನ್ ಎಂಬ ಮಹತ್ವದ ಘೋಷಣೆ ಹಾಕಿದ್ದಾರೆ.

ಮತ್ತೊಬ್ಬ ಟಿಎಂಸಿ ಸಂಸದ ಡೆರೆಕ್ ಒಬ್ರಿಯೆನ್, ಆ ಸಭೆಯಲ್ಲಿ ಮಮತಾ ಬ್ಯಾನರ್ಜಿಯವರ ಭಾಷಣಕ್ಕೆ ಅಡೆತಡೆ ಮಾಡಿದ್ದನ್ನು ಖಂಡಿಸಿದ್ದಾರೆ, ಅನಾಗರಿಕರಿಗೆ ಘನತೆಯನ್ನು ಕಲಿಸಲಾಗುವುದಿಲ್ಲ ಎಂದು ಟೀಕಿಸಿದ್ದಾರೆ.

ಇದನ್ನೂ ಓದಿ: ಕೃಷಿಕಾಯ್ದೆ: ಮೋದಿ ನಿಲುವಿಗೆ ವಿರೋಧ, ಬಿಜೆಪಿ ತೊರೆದು ಅಕಾಲಿದಳ ಸೇರುತ್ತಿರುವ ನಾಯಕರು!

ಮಮತಾ ಅವರ ಕ್ರಮವು ತನ್ನ ಹತಾಶೆಯನ್ನು ತೋರಿಸಿದೆ ಎಂದು ಬಿಜೆಪಿ ಮುಖಂಡ ಕೈಲಾಶ್ ವಿಜಯ ವರ್ಗಿಯಾ ಹೇಳಿದ್ದಾರೆ. “ಜೈ ಶ್ರೀ ರಾಮ್ ಜಪಿಸುವುದರಲ್ಲಿ ಏನು ಸಮಸ್ಯೆ ಇದೆ ಮತ್ತು ಮಮತಾ ಅದರ ಬಗ್ಗೆ ಏಕೆ ಸಿಟ್ಟಾಗುತ್ತಾರೆ ಎಂಬುದನ್ನು ನಾನು ಅರ್ಥಮಾಡಿಕೊಳ್ಳುವಲ್ಲಿ ವಿಫಲವಾಗಿದ್ದೇನೆ. ಮಮತಾ ಅವರು ಎದ್ದುನಿಂತಾಗ ಅವರ ಗೌರವಾರ್ಥವಾಗಿ ಘೋಷಣೆ ಕೂಗಲಾಗಿದೆ ಎಂದು ನಾನು ಭಾವಿಸುತ್ತೇನೆ. ಘೋಷಣೆಯಿಂದಾಗಿ ವೇದಿಕೆಯಿಂದ ಹೊರನಡೆಯುವುದು ಹತಾಶೆಯನ್ನು ಸೂಚಿಸುತ್ತದೆ” ಎಂದು ಅವರು ಪ್ರತಿಕ್ರಿಯಿಸಿದ್ದಾರೆ.

ಈ ವರ್ಷದ ಮೇ ತಿಂಗಳಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಮುನ್ನ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ಉದ್ವೇಗ ಹೆಚ್ಚುತ್ತಿದೆ. ಉನ್ನತ ನಾಯಕರು, ಮಂತ್ರಿಗಳು ತೃಣಮೂಲ ಪಕ್ಷವನ್ನು ತೊರೆದಿದ್ದು, ಪಕ್ಷದೊಳಗಿನ ಬಿರುಕುಗಳು ಸಾರ್ವಜನಿಕವಾಗಿ ಕಾಣಿಸಿಕೊಂಡಿವೆ. ಈ ಪಕ್ಷಾಂತರ ಬಿಜೆಪಿಯಲ್ಲೂ ಸಮಸ್ಯೆಯನ್ನು ತಂದಿದೆ.

ನೇತಾಜಿ ಜನ್ಮದಿನಾಚರಣೆಯು ಬಿಜೆಪಿ ಮತ್ತು ತೃಣಮೂಲ ನಡುವೆ ಘರ್ಷಣೆಯ ಹಂತ ತಲುಪಿದೆ. ಈ ಪರಿಸ್ಥಿತಿಯನ್ನು ಗಮನಿಸಿದರೆ, ಪ್ರಧಾನಿ ಮೋದಿ ಮತ್ತು ಸಿಎಂ ಮಮತಾ ಬ್ಯಾನರ್ಜಿ ಈ ಕಾರ್ಯಕ್ರಮದಲ್ಲಿ ಜಂಟಿಯಾಗಿ ಕಾಣಿಸಿಕೊಂಡಿರುವುದು ಆಶ್ಚರ್ಯಕರವಾಗಿತ್ತು! ಆದರೆ ಮಮತಾ ಅವರು ತಮಗೆ ಅವಮಾನಿಸಲಾಗಿದೆ ಎಂದು ಈ ಸಂದರ್ಭದಲ್ಲಿ ಭಾಷಣ ಮಾಡಲು ನಿರಾಕರಿಸಿ ವೇದಿಕೆಯಿಂದ ಹೊರನಡೆದಿದ್ದರು.

ಇದನ್ನೂ ಓದಿ: ರ್‍ಯಾಲಿಗೆ ಟ್ರಾಕ್ಟರ್‌ ತರಬೇಡಿ ಎಂದ ಬೆಂಗಳೂರು ಪೊಲೀಸರು: ತಂದೇ ತರುತ್ತೇವೆ ಎಂದ ರೈತರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...