Homeಕರ್ನಾಟಕಜಿಟಿಜಿಟಿ ಮಳೆಯ ನಡುವೆ ಮುಗಿಲು ಮುಟ್ಟಿದ ಜೈಭೀಮ್ ಘೋಷಣೆ: ಒಳಮೀಸಲಾತಿಗಾಗಿ ಹರಿದು ಬಂತು ಭೀಮಸಾಗರ

ಜಿಟಿಜಿಟಿ ಮಳೆಯ ನಡುವೆ ಮುಗಿಲು ಮುಟ್ಟಿದ ಜೈಭೀಮ್ ಘೋಷಣೆ: ಒಳಮೀಸಲಾತಿಗಾಗಿ ಹರಿದು ಬಂತು ಭೀಮಸಾಗರ

- Advertisement -
- Advertisement -

ಅದು ಮೂವತ್ತು ವರ್ಷಗಳ ಕೂಗು. ಸರ್ಕಾರಗಳು ಬಂದವು, ಸರ್ಕಾರಗಳು ಹೋದವು. ಪಕ್ಷಗಳು ಅಧಿಕಾರ ಪಡೆದವು, ಅಧಿಕಾರ ಕಳೆದುಕೊಂಡವು. ಕೊಟ್ಟ ಭರವಸೆಯನ್ನು ಯಾವ ಸರ್ಕಾರವೂ ಈಡೇರಿಸಲೇ ಇಲ್ಲ. ಜಸ್ಟೀಸ್‌ ಎ.ಜೆ.ಸದಾಶಿವ ಆಯೋಗದ ವರದಿ ಮಾತ್ರ ವಿಧಾನಸೌಧದಲ್ಲಿ ಧೂಳು ಹಿಡಿಯುತ್ತಿದೆ. ಅದನ್ನು ಕನಿಷ್ಠ ಸೌಜನ್ಯಕ್ಕಾದರೂ ತೆರೆದು ನೋಡಲಿಲ್ಲ. ಈಗ ಮತ್ತೆ ದಲಿತರು ಬೀದಿಗಿಳಿದಿದ್ದಾರೆ.

ಜನಸಂಖ್ಯೆಗನುಗುಣವಾಗಿ ಒಳಮೀಸಲಾತಿಯನ್ನು ಜಾರಿಗೊಳಿಸಬೇಕೆಂದು ಒತ್ತಾಯಿಸಿ ಮತ್ತೆ ಹೋರಾಟದ ಕಾವು ಪಡೆದಿದೆ. ಸಾರ್ವಜನಿಕವಾಗಿ ಸೋರಿಕೆಯಾಗಿರುವ ಮಾಹಿತಿಯ ಪ್ರಕಾರ- ಜಸ್ಟೀಸ್ ಎ.ಜೆ.ಸದಾಶಿವ ಆಯೋಗವು ಪರಿಶಿಷ್ಟ ಜಾತಿಯಲ್ಲಿನ 101 ಉಪಪಂಗಡಗಳನ್ನು 4 ಗುಂಪುಗಳಾಗಿ ವರ್ಗೀಕರಿಸಿ, ಶೇ.15ರ ಮೀಸಲಾತಿಯನ್ನು ಜನಸಂಖ್ಯೆ ಆಧಾರದ ಮೇಲೆ ಹಂಚಿಕೆ ಮಾಡಿದೆ. ಅದರಂತೆ ಶೇ. 33.4ರಷ್ಟಿರುವ ಎಡಗೈ(ಮಾದಿಗ) ಸಮುದಾಯಕ್ಕೆ ಶೇ. 6ರಷ್ಟು, ಶೇ. 32ರಷ್ಟಿರುವ ಬಲಗೈ (ಹೊಲೆಯ) ಸಮುದಾಯಕ್ಕೆ ಶೇ. 5ರಷ್ಟು, ಶೇ. 23.64ರಷ್ಟಿರುವ ಸ್ಪೃಶ್ಯ ಪರಿಶಿಷ್ಟರಿಗೆ ಶೇ. 3ರಷ್ಟು ಹಾಗೂ ಇತರೆ ಪರಿಶಿಷ್ಟರಿಗೆ ಶೇ. 1ರಷ್ಟು ಮೀಸಲಾತಿ ನೀಡಬೇಕೆಂದು ಶಿಫಾರಸ್ಸು ಮಾಡಲಾಗಿದೆ ಎನ್ನಲಾಗುತ್ತಿದೆ. ಈ ವರದಿಯನ್ನು ಬಿಡುಗಡೆ ಮಾಡಿ ಸಾರ್ವಜನಿಕ ಚರ್ಚೆಗೆ ಒಳಪಡಿಸಬೇಕೆಂಬ ಕೂಗು ಮತ್ತೆ ಶುರುವಾಗಿದೆ.

ಪರಿಶಿಷ್ಟ ಜಾತಿಗಳ ಒಳಮೀಸಲಾತಿಗಾಗಿ ಜಾರಿ ಹೋರಾಟ ಸಮಿತಿ ನೇತೃತ್ವದಲ್ಲಿ ನಡೆದ ಪಾದಯಾತ್ರೆ ಭಾನುವಾರ (ಡಿಸೆಂಬರ್‌ 11) ಬೆಂಗಳೂರಿನ ಫ್ರೀಡಂ ಪಾರ್ಕ್ ತಲುಪಿದೆ. ಹಿರಿಯೂರು ತಾಲ್ಲೂಕಿನ ಆದಿವಾಲ ಗ್ರಾಮದಲ್ಲಿ ದಲಿತ ಸಂಘರ್ಷ ಸಮಿತಿ ಸ್ಥಾಪಕ, ಹೋರಾಟಗಾರ ಹರಿಹರದ ಪ್ರೊ.ಬಿ. ಕೃಷ್ಣಪ್ಪ ಸ್ಮಾರಕದಿಂದ ಆರಂಭವಾದ ಪಾದಯಾತ್ರೆ ರಾಜಧಾನಿಯನ್ನು ತಲುಪಿದ ಹಿನ್ನೆಲೆಯಲ್ಲಿ ಸಾವಿರಾರು ಸಂಖ್ಯೆಯಲ್ಲಿ ದಲಿತರು ಇಂದು ಜಮಾಯಿಸಿದ್ದರು.

ಕಳೆದೆರಡು ದಿನಗಳಿಂದಲೂ ಬೆಂಗಳೂರಿನಲ್ಲಿ ಜಿಟಿಜಿಟಿ ಮಳೆ ಹಾಗೂ ಕಪ್ಪು ಸುರಿದ ಮೋಡ ಆವರಿಸಿದ್ದರೂ ಹೋರಾಟಗಾರರು ಯಾವುದಕ್ಕೂ ಅಂಜದೆ ಫ್ರೀಡಂ ಪಾರ್ಕ್‌ಗೆ ಬಂದು ಸೇರಿದರು. ಜೈ ಭೀಮ್‌ ಘೋಷಣೆ ಮೊಳಗಿತು. ಸಂವಿಧಾನಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌, ಬಾಬು ಜಗಜೀವನರಾಮ್‌, ಪ್ರೊ.ಬಿ.ಕೃಷ್ಣಪ್ಪ ಅವರ ಭಾವಚಿತ್ರಗಳನ್ನು ಒಳಗೊಂಡ ನೀಲಿ ಭಾವುಟಗಳನ್ನು ಹಿಡಿದ ದಲಿತ ಶಕ್ತಿ ಸಾಗೋರೋಪಾದಿಯಲ್ಲಿ ಹರಿದುಬಂತು. ಸಂಚಾರಿ ವೇದಿಕೆಯನ್ನು ರಸ್ತೆಯಲ್ಲಿ ನಿಲ್ಲಿಸಲಾಗಿತ್ತು. ಮುಖ್ಯರಸ್ತೆಯ ಉದ್ದಕ್ಕೂ ಭೀಮ ಶಕ್ತಿ ಮೊಳಗಿತು.

ರಾಜ್ಯದ ಮೂಲೆಮೂಲೆಗಳಿಂದ ಬಂದ ಒಳಮೀಸಲಾತಿ ಹೋರಾಟಗಾರರು, ಸುರಿವ ಮಳೆಯಲ್ಲೇ ನಿಂತು ಹೋರಾಟಗಾರರ ಮಾತುಗಳನ್ನು ಆಲಿಸಿದರು. ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿತ್ತು. ಪ್ರತಿಭಟನಾ ಸ್ಥಳದಲ್ಲಿ ಇಂಟರ್‌ನೆಟ್ ನಿರ್ಬಂಧ ಹೇರಲಾಗಿತ್ತು.

ಹೋರಾಟಗಾರರು ಕಾಂಗ್ರೆಸ್, ಜೆಡಿಎಸ್‌, ಬಿಜೆಪಿ ನಾಯಕರನ್ನು ತರಾಟೆಗೆ ತೆಗೆದುಕೊಂಡರು. ಮೂವತ್ತು ವರ್ಷಗಳ ನೋವು, ಮಾತುಗಳ ಮೂಲಕ ಬೆಂಕಿಯುಂಡೆಯಾಗಿ ಹೊರಬಿದ್ದವು. ಮುಂದಿನ ಚುನಾವಣೆಯಲ್ಲಿ ಈ ಮೂರು ಪಕ್ಷಗಳಿಗೆ ದಲಿತರು ಪಾಠ ಕಲಿಸುತ್ತೇವೆ ಎಂಬ ಎಚ್ಚರಿಕೆಯನ್ನು ನೀಡಿದರು.

ಪಾದಯಾತ್ರೆಯ ನೇತೃತ್ವ ವಹಿಸಿದ್ದ ದಲಿತ ಮುಖಂಡರಾದ ಅಂಬಣ್ಣ ಅರೋಲಿಕರ್‌ ಹಾಡಿನ ಮೂಲಕ ರಾಜಕೀಯ ಪಕ್ಷಗಳನ್ನು ಟೀಕಿಸಿದರು. ಮೂರು ಪಕ್ಷಗಳ ನಾಯಕರುಗಳ ವಿರುದ್ಧ ಹಾಡಿನ ಮೂಲಕವೇ ವಾಗ್ದಾಳಿ ನಡೆಸಿದರು. “ನಾವು ಯಾವ ಪಕ್ಷದ ಪರವೂ ಇಲ್ಲ. ವಿರೋಧವೂ ಇಲ್ಲ. ನೋಟಿಗೆ ವೋಟು ಹಾಕುವುದಿಲ್ಲ. ಸದಾಶಿವ ಆಯೋಗದ ವರದಿಗೆ ವೋಟು ಹಾಕುತ್ತೇವೆ” ಎಂದು ಗುಡುಗಿದರು.

ದಲಿತ ಹೋರಾಟಗಾರ ವೆಂಕಟಗಿರಿಯಯ್ಯ ಮಾತನಾಡಿ, “ಎಸ್‌.ಎಂ.ಕೃಷ್ಣ ಅವರು ಮುಖ್ಯಮಂತ್ರಿಯಾಗಿದ್ದಾಗ ದಲಿತರು ಹೋರಾಟ ಮಾಡಿದರು. ಒಳಮೀಸಲಾತಿಗಾಗಿ ಆಯೋಗವನ್ನು ರಚನೆ ಮಾಡುವ ತೀರ್ಮಾನ ಮಾಡಲಾಯಿತು. ಸದಾಶಿವ ಆಯೋಗವು ನೀಡಿರುವ ವರದಿಯು ವೈಜ್ಞಾನಿಕವಾಗಿದೆ. ನಮ್ಮ ಪಾಲನ್ನು ಹಂಚಿಕೊಳ್ಳುವುದಕ್ಕೆ ಯಾರಿಂದಲೂ ಭಿಕ್ಷೆ ಬೇಡಬೇಕಿಲ್ಲ. ಸಿದ್ದರಾಮಯ್ಯ, ಎಚ್‌.ಡಿ.ಕುಮಾರಸ್ವಾಮಿ, ಯಡಿಯೂರಪ್ಪ ಈಗ ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾಗಿದ್ದಾರೆ. ಇವರಿಗೆ ಈ ಜನರ ಬಗ್ಗೆ, ಸಾಮಾಜಿಕ ನ್ಯಾಯದ ಬಗ್ಗೆ ಕಳಕಳಿ ಇದ್ದದ್ದೇ ನಿಜವಾದರೆ, ಒಳಮೀಸಲಾತಿ ಜಾರಿಗೆ ಕ್ರಮವಹಿಸಲಿ. ಆದರೆ ಈ ಮನುವಾದಿ ಪಕ್ಷಗಳು, ದಲಿತರನ್ನು ಒಡೆದು ಆಳಲು ಬಯಸುತ್ತಿವೆ” ಎಂದು ಆಕ್ರೋಶ ಹೊರಹಾಕಿದರು.

ದಲಿತ ಮುಖಂಡರಾದ ಮೋಹನ್ ರಾಜ್ ಮಾತನಾಡಿ, “ಒಳಮೀಸಲಾತಿ ಜಾರಿ ಜೊತೆಗೆ, ಪಿಟಿಸಿಎಲ್‌ ಕಾಯ್ದೆಯನ್ನು ಬಲಪಡಿಸಬೇಕು. ಲಿಂಗಾಯತ ಬೇಡ ಜಂಗಮರು ಪರಿಶಿಷ್ಟ ಜಾತಿ ಪ್ರಮಾಣಪತ್ರವನ್ನು ಪಡೆಯುತ್ತಿರುವುದನ್ನು ಸರ್ಕಾರ ಕೂಡಲೇ ತಡೆಯಬೇಕು” ಎಂದು ಆಗ್ರಹಿಸಿದರು.

ಹೋರಾಟಗಾರರ ಬಂಧನ; ಆಕ್ರೋಶ

ಸ್ಥಳಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಆಗಮಿಸಬೇಕೆಂದು ಹೋರಾಟಗಾರರು ಪಟ್ಟು ಹಿಡಿದರು. ಇಳಿಸಂಜೆಯವರೆಗೆ ತಾಳ್ಮೆ ವಹಿಸಿದ್ದ ದಲಿತರು ಅಂತಿಮವಾಗಿ ಅರೆಬೆತ್ತಲೆ ಮೆರವಣಿಗೆ ಮೂಲಕ ಸಿಎಂ ನಿವಾಸದತ್ತ ಹೊರಟಿದ್ದರು. ಆಗ ಪೊಲೀಸರು ಒಳಮೀಸಲಾತಿ ಹೋರಾಟಗಾರರನ್ನು ಬಂಧಿಸಿದ್ದಾರೆ. ಪೊಲೀಸ್ ನೂಕಾಟದಲ್ಲಿ ಹಿರಿಯ ಹೋರಾಟಗಾರ ಕರಿಯಪ್ಪ ಗುಡಿಮನಿಯವರ ತಲೆಗೆ ಪೆಟ್ಟಾಗಿದೆ. ವಯೋಸಹಜ ಸಮಸ್ಯೆಗಳಿಂದ ಬಳಲುತ್ತಿರುವ ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.

ಇದನ್ನೂ ಓದಿರಿ: ದಲಿತ ಮಹಿಳೆಗೆ ಥಳಿಸಿದ ಸಚಿವ ಸೋಮಣ್ಣರನ್ನು ಸಂಧಾನಕ್ಕೆ ಕಳಿಸ್ತೀರಾ? ಒಳಮೀಸಲಾತಿ ಹೋರಾಟಗಾರರ ಆಕ್ರೋಶ

ಕರಿಯಪ್ಪ ಗುಡಿಮನಿಯವರು ಪ್ರತಿಕ್ರಿಯಿಸಿ, “ಕೊಟ್ಟ ಮಾತು ತಪ್ಪಿದೆ ಬಿಜೆಪಿ ಸರ್ಕಾರ. ಸದಾಶಿವ ವರದಿ ಜಾರಿಗೆ ತರುತ್ತೇವೆ ಎಂದು ನಮ್ಮವರ ನಂಬಿಸಿ ಈಗ ಬೆನ್ನಿಗೆ ಚೂರಿ ಹಾಕಿದೆ. 10 ವರ್ಷದ ಹಿಂದೆ ಇದೇ ದಿನ ಬೆಳಗಾವಿಯಲ್ಲಿ ನಮ್ಮ ಮೇಲೆ ಲಾಠಿ ಛಾರ್ಜ್ ಮಾಡಲಾಗಿತ್ತು. ಇವತ್ತು ಮತ್ತೆ ನಮ್ಮ ಮೇಲೆ ದಾಳಿ ಮಾಡಿ ನಮ್ಮ ದನಿಯನ್ನು ತುಳಿಯಲು ನೋಡುತ್ತಿದೆ. ನನ್ನ ತಲೆಗೆ ಪಟ್ಟಾಗಿದೆ. ಆಸ್ಪತ್ರೆಯಲ್ಲಿದ್ದೇನೆ. ನನ್ನ ಪ್ರಾಣ ಹೋದರೂ ಚಿಂತೆ ಇಲ್ಲ. ಹೋರಾಟ ನಿಲ್ಲಬಾರದು. ಸಮುದಾಯ ಸೋಲಬಾರದು. ನಾಳೆ ಇನ್ನೂ ಬಿರುಸಿನ ಹೋರಾಟ ನಡೆಯಲಿದೆ. ಎಲ್ಲಾ ಬಂಧುಗಳು ಗೆಲ್ಲುವ ಹೋರಾಟಕ್ಕೆ ಸಿದ್ಧರಾಗೋಣ” ಎಂದು ಕರೆ ನೀಡಿದ್ದಾರೆ.

ಅಂಬಣ್ಣ ಅರೋಲಿಕರ್‌ ಮಾತನಾಡಿ, “ಸಹಜ ಆಶಯವನ್ನು ಸರ್ಕಾರ ಗಾಳಿಗೆ ತೂರಿದೆ. ಚಳಿ, ಗಾಳಿ, ಮಳೆಯನ್ನು ಲೆಕ್ಕಿಸದೆ ಭೀಮ ಸೈನಿಕರು ರಸ್ತೆಯಲ್ಲಿದ್ದರು. ಮುಖ್ಯಮಂತ್ರಿಯವರು ಕನಿಷ್ಠ ಸೌಜನ್ಯದಿಂದ ನಮ್ಮೊಂದಿಗೆ ಮಾತನಾಡಬೇಕಿತ್ತು. ನಾವೇನು ಭಯೋತ್ಪಾದಕರಾ? ಭಾರತದ ನಿವಾಸಿಗಳಲ್ಲವಾ? ಪ್ರಜಾಪ್ರಭುತ್ವದ ಹಾದಿಯಲ್ಲಿ ನಾವು ನಡೆಯುತ್ತಿಲ್ಲವಾ? ನೀವು ಮುಂದಿನ ದಿನಗಳಲ್ಲಿ ಪಶ್ಚಾತ್ತಾಪ ಪಡುತ್ತೀರಿ. ಮುಂದಿನ ಚುನಾವಣೆಯಲ್ಲಿ ಸೋಲುತ್ತೀರಿ, ಮೂಲೆಗುಂಪಾಗುತ್ತೀರಿ” ಎಂದು ಎಚ್ಚರಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...