Homeಕರ್ನಾಟಕಜಿಟಿಜಿಟಿ ಮಳೆಯ ನಡುವೆ ಮುಗಿಲು ಮುಟ್ಟಿದ ಜೈಭೀಮ್ ಘೋಷಣೆ: ಒಳಮೀಸಲಾತಿಗಾಗಿ ಹರಿದು ಬಂತು ಭೀಮಸಾಗರ

ಜಿಟಿಜಿಟಿ ಮಳೆಯ ನಡುವೆ ಮುಗಿಲು ಮುಟ್ಟಿದ ಜೈಭೀಮ್ ಘೋಷಣೆ: ಒಳಮೀಸಲಾತಿಗಾಗಿ ಹರಿದು ಬಂತು ಭೀಮಸಾಗರ

- Advertisement -
- Advertisement -

ಅದು ಮೂವತ್ತು ವರ್ಷಗಳ ಕೂಗು. ಸರ್ಕಾರಗಳು ಬಂದವು, ಸರ್ಕಾರಗಳು ಹೋದವು. ಪಕ್ಷಗಳು ಅಧಿಕಾರ ಪಡೆದವು, ಅಧಿಕಾರ ಕಳೆದುಕೊಂಡವು. ಕೊಟ್ಟ ಭರವಸೆಯನ್ನು ಯಾವ ಸರ್ಕಾರವೂ ಈಡೇರಿಸಲೇ ಇಲ್ಲ. ಜಸ್ಟೀಸ್‌ ಎ.ಜೆ.ಸದಾಶಿವ ಆಯೋಗದ ವರದಿ ಮಾತ್ರ ವಿಧಾನಸೌಧದಲ್ಲಿ ಧೂಳು ಹಿಡಿಯುತ್ತಿದೆ. ಅದನ್ನು ಕನಿಷ್ಠ ಸೌಜನ್ಯಕ್ಕಾದರೂ ತೆರೆದು ನೋಡಲಿಲ್ಲ. ಈಗ ಮತ್ತೆ ದಲಿತರು ಬೀದಿಗಿಳಿದಿದ್ದಾರೆ.

ಜನಸಂಖ್ಯೆಗನುಗುಣವಾಗಿ ಒಳಮೀಸಲಾತಿಯನ್ನು ಜಾರಿಗೊಳಿಸಬೇಕೆಂದು ಒತ್ತಾಯಿಸಿ ಮತ್ತೆ ಹೋರಾಟದ ಕಾವು ಪಡೆದಿದೆ. ಸಾರ್ವಜನಿಕವಾಗಿ ಸೋರಿಕೆಯಾಗಿರುವ ಮಾಹಿತಿಯ ಪ್ರಕಾರ- ಜಸ್ಟೀಸ್ ಎ.ಜೆ.ಸದಾಶಿವ ಆಯೋಗವು ಪರಿಶಿಷ್ಟ ಜಾತಿಯಲ್ಲಿನ 101 ಉಪಪಂಗಡಗಳನ್ನು 4 ಗುಂಪುಗಳಾಗಿ ವರ್ಗೀಕರಿಸಿ, ಶೇ.15ರ ಮೀಸಲಾತಿಯನ್ನು ಜನಸಂಖ್ಯೆ ಆಧಾರದ ಮೇಲೆ ಹಂಚಿಕೆ ಮಾಡಿದೆ. ಅದರಂತೆ ಶೇ. 33.4ರಷ್ಟಿರುವ ಎಡಗೈ(ಮಾದಿಗ) ಸಮುದಾಯಕ್ಕೆ ಶೇ. 6ರಷ್ಟು, ಶೇ. 32ರಷ್ಟಿರುವ ಬಲಗೈ (ಹೊಲೆಯ) ಸಮುದಾಯಕ್ಕೆ ಶೇ. 5ರಷ್ಟು, ಶೇ. 23.64ರಷ್ಟಿರುವ ಸ್ಪೃಶ್ಯ ಪರಿಶಿಷ್ಟರಿಗೆ ಶೇ. 3ರಷ್ಟು ಹಾಗೂ ಇತರೆ ಪರಿಶಿಷ್ಟರಿಗೆ ಶೇ. 1ರಷ್ಟು ಮೀಸಲಾತಿ ನೀಡಬೇಕೆಂದು ಶಿಫಾರಸ್ಸು ಮಾಡಲಾಗಿದೆ ಎನ್ನಲಾಗುತ್ತಿದೆ. ಈ ವರದಿಯನ್ನು ಬಿಡುಗಡೆ ಮಾಡಿ ಸಾರ್ವಜನಿಕ ಚರ್ಚೆಗೆ ಒಳಪಡಿಸಬೇಕೆಂಬ ಕೂಗು ಮತ್ತೆ ಶುರುವಾಗಿದೆ.

ಪರಿಶಿಷ್ಟ ಜಾತಿಗಳ ಒಳಮೀಸಲಾತಿಗಾಗಿ ಜಾರಿ ಹೋರಾಟ ಸಮಿತಿ ನೇತೃತ್ವದಲ್ಲಿ ನಡೆದ ಪಾದಯಾತ್ರೆ ಭಾನುವಾರ (ಡಿಸೆಂಬರ್‌ 11) ಬೆಂಗಳೂರಿನ ಫ್ರೀಡಂ ಪಾರ್ಕ್ ತಲುಪಿದೆ. ಹಿರಿಯೂರು ತಾಲ್ಲೂಕಿನ ಆದಿವಾಲ ಗ್ರಾಮದಲ್ಲಿ ದಲಿತ ಸಂಘರ್ಷ ಸಮಿತಿ ಸ್ಥಾಪಕ, ಹೋರಾಟಗಾರ ಹರಿಹರದ ಪ್ರೊ.ಬಿ. ಕೃಷ್ಣಪ್ಪ ಸ್ಮಾರಕದಿಂದ ಆರಂಭವಾದ ಪಾದಯಾತ್ರೆ ರಾಜಧಾನಿಯನ್ನು ತಲುಪಿದ ಹಿನ್ನೆಲೆಯಲ್ಲಿ ಸಾವಿರಾರು ಸಂಖ್ಯೆಯಲ್ಲಿ ದಲಿತರು ಇಂದು ಜಮಾಯಿಸಿದ್ದರು.

ಕಳೆದೆರಡು ದಿನಗಳಿಂದಲೂ ಬೆಂಗಳೂರಿನಲ್ಲಿ ಜಿಟಿಜಿಟಿ ಮಳೆ ಹಾಗೂ ಕಪ್ಪು ಸುರಿದ ಮೋಡ ಆವರಿಸಿದ್ದರೂ ಹೋರಾಟಗಾರರು ಯಾವುದಕ್ಕೂ ಅಂಜದೆ ಫ್ರೀಡಂ ಪಾರ್ಕ್‌ಗೆ ಬಂದು ಸೇರಿದರು. ಜೈ ಭೀಮ್‌ ಘೋಷಣೆ ಮೊಳಗಿತು. ಸಂವಿಧಾನಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌, ಬಾಬು ಜಗಜೀವನರಾಮ್‌, ಪ್ರೊ.ಬಿ.ಕೃಷ್ಣಪ್ಪ ಅವರ ಭಾವಚಿತ್ರಗಳನ್ನು ಒಳಗೊಂಡ ನೀಲಿ ಭಾವುಟಗಳನ್ನು ಹಿಡಿದ ದಲಿತ ಶಕ್ತಿ ಸಾಗೋರೋಪಾದಿಯಲ್ಲಿ ಹರಿದುಬಂತು. ಸಂಚಾರಿ ವೇದಿಕೆಯನ್ನು ರಸ್ತೆಯಲ್ಲಿ ನಿಲ್ಲಿಸಲಾಗಿತ್ತು. ಮುಖ್ಯರಸ್ತೆಯ ಉದ್ದಕ್ಕೂ ಭೀಮ ಶಕ್ತಿ ಮೊಳಗಿತು.

ರಾಜ್ಯದ ಮೂಲೆಮೂಲೆಗಳಿಂದ ಬಂದ ಒಳಮೀಸಲಾತಿ ಹೋರಾಟಗಾರರು, ಸುರಿವ ಮಳೆಯಲ್ಲೇ ನಿಂತು ಹೋರಾಟಗಾರರ ಮಾತುಗಳನ್ನು ಆಲಿಸಿದರು. ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿತ್ತು. ಪ್ರತಿಭಟನಾ ಸ್ಥಳದಲ್ಲಿ ಇಂಟರ್‌ನೆಟ್ ನಿರ್ಬಂಧ ಹೇರಲಾಗಿತ್ತು.

ಹೋರಾಟಗಾರರು ಕಾಂಗ್ರೆಸ್, ಜೆಡಿಎಸ್‌, ಬಿಜೆಪಿ ನಾಯಕರನ್ನು ತರಾಟೆಗೆ ತೆಗೆದುಕೊಂಡರು. ಮೂವತ್ತು ವರ್ಷಗಳ ನೋವು, ಮಾತುಗಳ ಮೂಲಕ ಬೆಂಕಿಯುಂಡೆಯಾಗಿ ಹೊರಬಿದ್ದವು. ಮುಂದಿನ ಚುನಾವಣೆಯಲ್ಲಿ ಈ ಮೂರು ಪಕ್ಷಗಳಿಗೆ ದಲಿತರು ಪಾಠ ಕಲಿಸುತ್ತೇವೆ ಎಂಬ ಎಚ್ಚರಿಕೆಯನ್ನು ನೀಡಿದರು.

ಪಾದಯಾತ್ರೆಯ ನೇತೃತ್ವ ವಹಿಸಿದ್ದ ದಲಿತ ಮುಖಂಡರಾದ ಅಂಬಣ್ಣ ಅರೋಲಿಕರ್‌ ಹಾಡಿನ ಮೂಲಕ ರಾಜಕೀಯ ಪಕ್ಷಗಳನ್ನು ಟೀಕಿಸಿದರು. ಮೂರು ಪಕ್ಷಗಳ ನಾಯಕರುಗಳ ವಿರುದ್ಧ ಹಾಡಿನ ಮೂಲಕವೇ ವಾಗ್ದಾಳಿ ನಡೆಸಿದರು. “ನಾವು ಯಾವ ಪಕ್ಷದ ಪರವೂ ಇಲ್ಲ. ವಿರೋಧವೂ ಇಲ್ಲ. ನೋಟಿಗೆ ವೋಟು ಹಾಕುವುದಿಲ್ಲ. ಸದಾಶಿವ ಆಯೋಗದ ವರದಿಗೆ ವೋಟು ಹಾಕುತ್ತೇವೆ” ಎಂದು ಗುಡುಗಿದರು.

ದಲಿತ ಹೋರಾಟಗಾರ ವೆಂಕಟಗಿರಿಯಯ್ಯ ಮಾತನಾಡಿ, “ಎಸ್‌.ಎಂ.ಕೃಷ್ಣ ಅವರು ಮುಖ್ಯಮಂತ್ರಿಯಾಗಿದ್ದಾಗ ದಲಿತರು ಹೋರಾಟ ಮಾಡಿದರು. ಒಳಮೀಸಲಾತಿಗಾಗಿ ಆಯೋಗವನ್ನು ರಚನೆ ಮಾಡುವ ತೀರ್ಮಾನ ಮಾಡಲಾಯಿತು. ಸದಾಶಿವ ಆಯೋಗವು ನೀಡಿರುವ ವರದಿಯು ವೈಜ್ಞಾನಿಕವಾಗಿದೆ. ನಮ್ಮ ಪಾಲನ್ನು ಹಂಚಿಕೊಳ್ಳುವುದಕ್ಕೆ ಯಾರಿಂದಲೂ ಭಿಕ್ಷೆ ಬೇಡಬೇಕಿಲ್ಲ. ಸಿದ್ದರಾಮಯ್ಯ, ಎಚ್‌.ಡಿ.ಕುಮಾರಸ್ವಾಮಿ, ಯಡಿಯೂರಪ್ಪ ಈಗ ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾಗಿದ್ದಾರೆ. ಇವರಿಗೆ ಈ ಜನರ ಬಗ್ಗೆ, ಸಾಮಾಜಿಕ ನ್ಯಾಯದ ಬಗ್ಗೆ ಕಳಕಳಿ ಇದ್ದದ್ದೇ ನಿಜವಾದರೆ, ಒಳಮೀಸಲಾತಿ ಜಾರಿಗೆ ಕ್ರಮವಹಿಸಲಿ. ಆದರೆ ಈ ಮನುವಾದಿ ಪಕ್ಷಗಳು, ದಲಿತರನ್ನು ಒಡೆದು ಆಳಲು ಬಯಸುತ್ತಿವೆ” ಎಂದು ಆಕ್ರೋಶ ಹೊರಹಾಕಿದರು.

ದಲಿತ ಮುಖಂಡರಾದ ಮೋಹನ್ ರಾಜ್ ಮಾತನಾಡಿ, “ಒಳಮೀಸಲಾತಿ ಜಾರಿ ಜೊತೆಗೆ, ಪಿಟಿಸಿಎಲ್‌ ಕಾಯ್ದೆಯನ್ನು ಬಲಪಡಿಸಬೇಕು. ಲಿಂಗಾಯತ ಬೇಡ ಜಂಗಮರು ಪರಿಶಿಷ್ಟ ಜಾತಿ ಪ್ರಮಾಣಪತ್ರವನ್ನು ಪಡೆಯುತ್ತಿರುವುದನ್ನು ಸರ್ಕಾರ ಕೂಡಲೇ ತಡೆಯಬೇಕು” ಎಂದು ಆಗ್ರಹಿಸಿದರು.

ಹೋರಾಟಗಾರರ ಬಂಧನ; ಆಕ್ರೋಶ

ಸ್ಥಳಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಆಗಮಿಸಬೇಕೆಂದು ಹೋರಾಟಗಾರರು ಪಟ್ಟು ಹಿಡಿದರು. ಇಳಿಸಂಜೆಯವರೆಗೆ ತಾಳ್ಮೆ ವಹಿಸಿದ್ದ ದಲಿತರು ಅಂತಿಮವಾಗಿ ಅರೆಬೆತ್ತಲೆ ಮೆರವಣಿಗೆ ಮೂಲಕ ಸಿಎಂ ನಿವಾಸದತ್ತ ಹೊರಟಿದ್ದರು. ಆಗ ಪೊಲೀಸರು ಒಳಮೀಸಲಾತಿ ಹೋರಾಟಗಾರರನ್ನು ಬಂಧಿಸಿದ್ದಾರೆ. ಪೊಲೀಸ್ ನೂಕಾಟದಲ್ಲಿ ಹಿರಿಯ ಹೋರಾಟಗಾರ ಕರಿಯಪ್ಪ ಗುಡಿಮನಿಯವರ ತಲೆಗೆ ಪೆಟ್ಟಾಗಿದೆ. ವಯೋಸಹಜ ಸಮಸ್ಯೆಗಳಿಂದ ಬಳಲುತ್ತಿರುವ ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.

ಇದನ್ನೂ ಓದಿರಿ: ದಲಿತ ಮಹಿಳೆಗೆ ಥಳಿಸಿದ ಸಚಿವ ಸೋಮಣ್ಣರನ್ನು ಸಂಧಾನಕ್ಕೆ ಕಳಿಸ್ತೀರಾ? ಒಳಮೀಸಲಾತಿ ಹೋರಾಟಗಾರರ ಆಕ್ರೋಶ

ಕರಿಯಪ್ಪ ಗುಡಿಮನಿಯವರು ಪ್ರತಿಕ್ರಿಯಿಸಿ, “ಕೊಟ್ಟ ಮಾತು ತಪ್ಪಿದೆ ಬಿಜೆಪಿ ಸರ್ಕಾರ. ಸದಾಶಿವ ವರದಿ ಜಾರಿಗೆ ತರುತ್ತೇವೆ ಎಂದು ನಮ್ಮವರ ನಂಬಿಸಿ ಈಗ ಬೆನ್ನಿಗೆ ಚೂರಿ ಹಾಕಿದೆ. 10 ವರ್ಷದ ಹಿಂದೆ ಇದೇ ದಿನ ಬೆಳಗಾವಿಯಲ್ಲಿ ನಮ್ಮ ಮೇಲೆ ಲಾಠಿ ಛಾರ್ಜ್ ಮಾಡಲಾಗಿತ್ತು. ಇವತ್ತು ಮತ್ತೆ ನಮ್ಮ ಮೇಲೆ ದಾಳಿ ಮಾಡಿ ನಮ್ಮ ದನಿಯನ್ನು ತುಳಿಯಲು ನೋಡುತ್ತಿದೆ. ನನ್ನ ತಲೆಗೆ ಪಟ್ಟಾಗಿದೆ. ಆಸ್ಪತ್ರೆಯಲ್ಲಿದ್ದೇನೆ. ನನ್ನ ಪ್ರಾಣ ಹೋದರೂ ಚಿಂತೆ ಇಲ್ಲ. ಹೋರಾಟ ನಿಲ್ಲಬಾರದು. ಸಮುದಾಯ ಸೋಲಬಾರದು. ನಾಳೆ ಇನ್ನೂ ಬಿರುಸಿನ ಹೋರಾಟ ನಡೆಯಲಿದೆ. ಎಲ್ಲಾ ಬಂಧುಗಳು ಗೆಲ್ಲುವ ಹೋರಾಟಕ್ಕೆ ಸಿದ್ಧರಾಗೋಣ” ಎಂದು ಕರೆ ನೀಡಿದ್ದಾರೆ.

ಅಂಬಣ್ಣ ಅರೋಲಿಕರ್‌ ಮಾತನಾಡಿ, “ಸಹಜ ಆಶಯವನ್ನು ಸರ್ಕಾರ ಗಾಳಿಗೆ ತೂರಿದೆ. ಚಳಿ, ಗಾಳಿ, ಮಳೆಯನ್ನು ಲೆಕ್ಕಿಸದೆ ಭೀಮ ಸೈನಿಕರು ರಸ್ತೆಯಲ್ಲಿದ್ದರು. ಮುಖ್ಯಮಂತ್ರಿಯವರು ಕನಿಷ್ಠ ಸೌಜನ್ಯದಿಂದ ನಮ್ಮೊಂದಿಗೆ ಮಾತನಾಡಬೇಕಿತ್ತು. ನಾವೇನು ಭಯೋತ್ಪಾದಕರಾ? ಭಾರತದ ನಿವಾಸಿಗಳಲ್ಲವಾ? ಪ್ರಜಾಪ್ರಭುತ್ವದ ಹಾದಿಯಲ್ಲಿ ನಾವು ನಡೆಯುತ್ತಿಲ್ಲವಾ? ನೀವು ಮುಂದಿನ ದಿನಗಳಲ್ಲಿ ಪಶ್ಚಾತ್ತಾಪ ಪಡುತ್ತೀರಿ. ಮುಂದಿನ ಚುನಾವಣೆಯಲ್ಲಿ ಸೋಲುತ್ತೀರಿ, ಮೂಲೆಗುಂಪಾಗುತ್ತೀರಿ” ಎಂದು ಎಚ್ಚರಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...