Homeಕರ್ನಾಟಕಜಿಟಿಜಿಟಿ ಮಳೆಯ ನಡುವೆ ಮುಗಿಲು ಮುಟ್ಟಿದ ಜೈಭೀಮ್ ಘೋಷಣೆ: ಒಳಮೀಸಲಾತಿಗಾಗಿ ಹರಿದು ಬಂತು ಭೀಮಸಾಗರ

ಜಿಟಿಜಿಟಿ ಮಳೆಯ ನಡುವೆ ಮುಗಿಲು ಮುಟ್ಟಿದ ಜೈಭೀಮ್ ಘೋಷಣೆ: ಒಳಮೀಸಲಾತಿಗಾಗಿ ಹರಿದು ಬಂತು ಭೀಮಸಾಗರ

- Advertisement -
- Advertisement -

ಅದು ಮೂವತ್ತು ವರ್ಷಗಳ ಕೂಗು. ಸರ್ಕಾರಗಳು ಬಂದವು, ಸರ್ಕಾರಗಳು ಹೋದವು. ಪಕ್ಷಗಳು ಅಧಿಕಾರ ಪಡೆದವು, ಅಧಿಕಾರ ಕಳೆದುಕೊಂಡವು. ಕೊಟ್ಟ ಭರವಸೆಯನ್ನು ಯಾವ ಸರ್ಕಾರವೂ ಈಡೇರಿಸಲೇ ಇಲ್ಲ. ಜಸ್ಟೀಸ್‌ ಎ.ಜೆ.ಸದಾಶಿವ ಆಯೋಗದ ವರದಿ ಮಾತ್ರ ವಿಧಾನಸೌಧದಲ್ಲಿ ಧೂಳು ಹಿಡಿಯುತ್ತಿದೆ. ಅದನ್ನು ಕನಿಷ್ಠ ಸೌಜನ್ಯಕ್ಕಾದರೂ ತೆರೆದು ನೋಡಲಿಲ್ಲ. ಈಗ ಮತ್ತೆ ದಲಿತರು ಬೀದಿಗಿಳಿದಿದ್ದಾರೆ.

ಜನಸಂಖ್ಯೆಗನುಗುಣವಾಗಿ ಒಳಮೀಸಲಾತಿಯನ್ನು ಜಾರಿಗೊಳಿಸಬೇಕೆಂದು ಒತ್ತಾಯಿಸಿ ಮತ್ತೆ ಹೋರಾಟದ ಕಾವು ಪಡೆದಿದೆ. ಸಾರ್ವಜನಿಕವಾಗಿ ಸೋರಿಕೆಯಾಗಿರುವ ಮಾಹಿತಿಯ ಪ್ರಕಾರ- ಜಸ್ಟೀಸ್ ಎ.ಜೆ.ಸದಾಶಿವ ಆಯೋಗವು ಪರಿಶಿಷ್ಟ ಜಾತಿಯಲ್ಲಿನ 101 ಉಪಪಂಗಡಗಳನ್ನು 4 ಗುಂಪುಗಳಾಗಿ ವರ್ಗೀಕರಿಸಿ, ಶೇ.15ರ ಮೀಸಲಾತಿಯನ್ನು ಜನಸಂಖ್ಯೆ ಆಧಾರದ ಮೇಲೆ ಹಂಚಿಕೆ ಮಾಡಿದೆ. ಅದರಂತೆ ಶೇ. 33.4ರಷ್ಟಿರುವ ಎಡಗೈ(ಮಾದಿಗ) ಸಮುದಾಯಕ್ಕೆ ಶೇ. 6ರಷ್ಟು, ಶೇ. 32ರಷ್ಟಿರುವ ಬಲಗೈ (ಹೊಲೆಯ) ಸಮುದಾಯಕ್ಕೆ ಶೇ. 5ರಷ್ಟು, ಶೇ. 23.64ರಷ್ಟಿರುವ ಸ್ಪೃಶ್ಯ ಪರಿಶಿಷ್ಟರಿಗೆ ಶೇ. 3ರಷ್ಟು ಹಾಗೂ ಇತರೆ ಪರಿಶಿಷ್ಟರಿಗೆ ಶೇ. 1ರಷ್ಟು ಮೀಸಲಾತಿ ನೀಡಬೇಕೆಂದು ಶಿಫಾರಸ್ಸು ಮಾಡಲಾಗಿದೆ ಎನ್ನಲಾಗುತ್ತಿದೆ. ಈ ವರದಿಯನ್ನು ಬಿಡುಗಡೆ ಮಾಡಿ ಸಾರ್ವಜನಿಕ ಚರ್ಚೆಗೆ ಒಳಪಡಿಸಬೇಕೆಂಬ ಕೂಗು ಮತ್ತೆ ಶುರುವಾಗಿದೆ.

ಪರಿಶಿಷ್ಟ ಜಾತಿಗಳ ಒಳಮೀಸಲಾತಿಗಾಗಿ ಜಾರಿ ಹೋರಾಟ ಸಮಿತಿ ನೇತೃತ್ವದಲ್ಲಿ ನಡೆದ ಪಾದಯಾತ್ರೆ ಭಾನುವಾರ (ಡಿಸೆಂಬರ್‌ 11) ಬೆಂಗಳೂರಿನ ಫ್ರೀಡಂ ಪಾರ್ಕ್ ತಲುಪಿದೆ. ಹಿರಿಯೂರು ತಾಲ್ಲೂಕಿನ ಆದಿವಾಲ ಗ್ರಾಮದಲ್ಲಿ ದಲಿತ ಸಂಘರ್ಷ ಸಮಿತಿ ಸ್ಥಾಪಕ, ಹೋರಾಟಗಾರ ಹರಿಹರದ ಪ್ರೊ.ಬಿ. ಕೃಷ್ಣಪ್ಪ ಸ್ಮಾರಕದಿಂದ ಆರಂಭವಾದ ಪಾದಯಾತ್ರೆ ರಾಜಧಾನಿಯನ್ನು ತಲುಪಿದ ಹಿನ್ನೆಲೆಯಲ್ಲಿ ಸಾವಿರಾರು ಸಂಖ್ಯೆಯಲ್ಲಿ ದಲಿತರು ಇಂದು ಜಮಾಯಿಸಿದ್ದರು.

ಕಳೆದೆರಡು ದಿನಗಳಿಂದಲೂ ಬೆಂಗಳೂರಿನಲ್ಲಿ ಜಿಟಿಜಿಟಿ ಮಳೆ ಹಾಗೂ ಕಪ್ಪು ಸುರಿದ ಮೋಡ ಆವರಿಸಿದ್ದರೂ ಹೋರಾಟಗಾರರು ಯಾವುದಕ್ಕೂ ಅಂಜದೆ ಫ್ರೀಡಂ ಪಾರ್ಕ್‌ಗೆ ಬಂದು ಸೇರಿದರು. ಜೈ ಭೀಮ್‌ ಘೋಷಣೆ ಮೊಳಗಿತು. ಸಂವಿಧಾನಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌, ಬಾಬು ಜಗಜೀವನರಾಮ್‌, ಪ್ರೊ.ಬಿ.ಕೃಷ್ಣಪ್ಪ ಅವರ ಭಾವಚಿತ್ರಗಳನ್ನು ಒಳಗೊಂಡ ನೀಲಿ ಭಾವುಟಗಳನ್ನು ಹಿಡಿದ ದಲಿತ ಶಕ್ತಿ ಸಾಗೋರೋಪಾದಿಯಲ್ಲಿ ಹರಿದುಬಂತು. ಸಂಚಾರಿ ವೇದಿಕೆಯನ್ನು ರಸ್ತೆಯಲ್ಲಿ ನಿಲ್ಲಿಸಲಾಗಿತ್ತು. ಮುಖ್ಯರಸ್ತೆಯ ಉದ್ದಕ್ಕೂ ಭೀಮ ಶಕ್ತಿ ಮೊಳಗಿತು.

ರಾಜ್ಯದ ಮೂಲೆಮೂಲೆಗಳಿಂದ ಬಂದ ಒಳಮೀಸಲಾತಿ ಹೋರಾಟಗಾರರು, ಸುರಿವ ಮಳೆಯಲ್ಲೇ ನಿಂತು ಹೋರಾಟಗಾರರ ಮಾತುಗಳನ್ನು ಆಲಿಸಿದರು. ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿತ್ತು. ಪ್ರತಿಭಟನಾ ಸ್ಥಳದಲ್ಲಿ ಇಂಟರ್‌ನೆಟ್ ನಿರ್ಬಂಧ ಹೇರಲಾಗಿತ್ತು.

ಹೋರಾಟಗಾರರು ಕಾಂಗ್ರೆಸ್, ಜೆಡಿಎಸ್‌, ಬಿಜೆಪಿ ನಾಯಕರನ್ನು ತರಾಟೆಗೆ ತೆಗೆದುಕೊಂಡರು. ಮೂವತ್ತು ವರ್ಷಗಳ ನೋವು, ಮಾತುಗಳ ಮೂಲಕ ಬೆಂಕಿಯುಂಡೆಯಾಗಿ ಹೊರಬಿದ್ದವು. ಮುಂದಿನ ಚುನಾವಣೆಯಲ್ಲಿ ಈ ಮೂರು ಪಕ್ಷಗಳಿಗೆ ದಲಿತರು ಪಾಠ ಕಲಿಸುತ್ತೇವೆ ಎಂಬ ಎಚ್ಚರಿಕೆಯನ್ನು ನೀಡಿದರು.

ಪಾದಯಾತ್ರೆಯ ನೇತೃತ್ವ ವಹಿಸಿದ್ದ ದಲಿತ ಮುಖಂಡರಾದ ಅಂಬಣ್ಣ ಅರೋಲಿಕರ್‌ ಹಾಡಿನ ಮೂಲಕ ರಾಜಕೀಯ ಪಕ್ಷಗಳನ್ನು ಟೀಕಿಸಿದರು. ಮೂರು ಪಕ್ಷಗಳ ನಾಯಕರುಗಳ ವಿರುದ್ಧ ಹಾಡಿನ ಮೂಲಕವೇ ವಾಗ್ದಾಳಿ ನಡೆಸಿದರು. “ನಾವು ಯಾವ ಪಕ್ಷದ ಪರವೂ ಇಲ್ಲ. ವಿರೋಧವೂ ಇಲ್ಲ. ನೋಟಿಗೆ ವೋಟು ಹಾಕುವುದಿಲ್ಲ. ಸದಾಶಿವ ಆಯೋಗದ ವರದಿಗೆ ವೋಟು ಹಾಕುತ್ತೇವೆ” ಎಂದು ಗುಡುಗಿದರು.

ದಲಿತ ಹೋರಾಟಗಾರ ವೆಂಕಟಗಿರಿಯಯ್ಯ ಮಾತನಾಡಿ, “ಎಸ್‌.ಎಂ.ಕೃಷ್ಣ ಅವರು ಮುಖ್ಯಮಂತ್ರಿಯಾಗಿದ್ದಾಗ ದಲಿತರು ಹೋರಾಟ ಮಾಡಿದರು. ಒಳಮೀಸಲಾತಿಗಾಗಿ ಆಯೋಗವನ್ನು ರಚನೆ ಮಾಡುವ ತೀರ್ಮಾನ ಮಾಡಲಾಯಿತು. ಸದಾಶಿವ ಆಯೋಗವು ನೀಡಿರುವ ವರದಿಯು ವೈಜ್ಞಾನಿಕವಾಗಿದೆ. ನಮ್ಮ ಪಾಲನ್ನು ಹಂಚಿಕೊಳ್ಳುವುದಕ್ಕೆ ಯಾರಿಂದಲೂ ಭಿಕ್ಷೆ ಬೇಡಬೇಕಿಲ್ಲ. ಸಿದ್ದರಾಮಯ್ಯ, ಎಚ್‌.ಡಿ.ಕುಮಾರಸ್ವಾಮಿ, ಯಡಿಯೂರಪ್ಪ ಈಗ ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾಗಿದ್ದಾರೆ. ಇವರಿಗೆ ಈ ಜನರ ಬಗ್ಗೆ, ಸಾಮಾಜಿಕ ನ್ಯಾಯದ ಬಗ್ಗೆ ಕಳಕಳಿ ಇದ್ದದ್ದೇ ನಿಜವಾದರೆ, ಒಳಮೀಸಲಾತಿ ಜಾರಿಗೆ ಕ್ರಮವಹಿಸಲಿ. ಆದರೆ ಈ ಮನುವಾದಿ ಪಕ್ಷಗಳು, ದಲಿತರನ್ನು ಒಡೆದು ಆಳಲು ಬಯಸುತ್ತಿವೆ” ಎಂದು ಆಕ್ರೋಶ ಹೊರಹಾಕಿದರು.

ದಲಿತ ಮುಖಂಡರಾದ ಮೋಹನ್ ರಾಜ್ ಮಾತನಾಡಿ, “ಒಳಮೀಸಲಾತಿ ಜಾರಿ ಜೊತೆಗೆ, ಪಿಟಿಸಿಎಲ್‌ ಕಾಯ್ದೆಯನ್ನು ಬಲಪಡಿಸಬೇಕು. ಲಿಂಗಾಯತ ಬೇಡ ಜಂಗಮರು ಪರಿಶಿಷ್ಟ ಜಾತಿ ಪ್ರಮಾಣಪತ್ರವನ್ನು ಪಡೆಯುತ್ತಿರುವುದನ್ನು ಸರ್ಕಾರ ಕೂಡಲೇ ತಡೆಯಬೇಕು” ಎಂದು ಆಗ್ರಹಿಸಿದರು.

ಹೋರಾಟಗಾರರ ಬಂಧನ; ಆಕ್ರೋಶ

ಸ್ಥಳಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಆಗಮಿಸಬೇಕೆಂದು ಹೋರಾಟಗಾರರು ಪಟ್ಟು ಹಿಡಿದರು. ಇಳಿಸಂಜೆಯವರೆಗೆ ತಾಳ್ಮೆ ವಹಿಸಿದ್ದ ದಲಿತರು ಅಂತಿಮವಾಗಿ ಅರೆಬೆತ್ತಲೆ ಮೆರವಣಿಗೆ ಮೂಲಕ ಸಿಎಂ ನಿವಾಸದತ್ತ ಹೊರಟಿದ್ದರು. ಆಗ ಪೊಲೀಸರು ಒಳಮೀಸಲಾತಿ ಹೋರಾಟಗಾರರನ್ನು ಬಂಧಿಸಿದ್ದಾರೆ. ಪೊಲೀಸ್ ನೂಕಾಟದಲ್ಲಿ ಹಿರಿಯ ಹೋರಾಟಗಾರ ಕರಿಯಪ್ಪ ಗುಡಿಮನಿಯವರ ತಲೆಗೆ ಪೆಟ್ಟಾಗಿದೆ. ವಯೋಸಹಜ ಸಮಸ್ಯೆಗಳಿಂದ ಬಳಲುತ್ತಿರುವ ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.

ಇದನ್ನೂ ಓದಿರಿ: ದಲಿತ ಮಹಿಳೆಗೆ ಥಳಿಸಿದ ಸಚಿವ ಸೋಮಣ್ಣರನ್ನು ಸಂಧಾನಕ್ಕೆ ಕಳಿಸ್ತೀರಾ? ಒಳಮೀಸಲಾತಿ ಹೋರಾಟಗಾರರ ಆಕ್ರೋಶ

ಕರಿಯಪ್ಪ ಗುಡಿಮನಿಯವರು ಪ್ರತಿಕ್ರಿಯಿಸಿ, “ಕೊಟ್ಟ ಮಾತು ತಪ್ಪಿದೆ ಬಿಜೆಪಿ ಸರ್ಕಾರ. ಸದಾಶಿವ ವರದಿ ಜಾರಿಗೆ ತರುತ್ತೇವೆ ಎಂದು ನಮ್ಮವರ ನಂಬಿಸಿ ಈಗ ಬೆನ್ನಿಗೆ ಚೂರಿ ಹಾಕಿದೆ. 10 ವರ್ಷದ ಹಿಂದೆ ಇದೇ ದಿನ ಬೆಳಗಾವಿಯಲ್ಲಿ ನಮ್ಮ ಮೇಲೆ ಲಾಠಿ ಛಾರ್ಜ್ ಮಾಡಲಾಗಿತ್ತು. ಇವತ್ತು ಮತ್ತೆ ನಮ್ಮ ಮೇಲೆ ದಾಳಿ ಮಾಡಿ ನಮ್ಮ ದನಿಯನ್ನು ತುಳಿಯಲು ನೋಡುತ್ತಿದೆ. ನನ್ನ ತಲೆಗೆ ಪಟ್ಟಾಗಿದೆ. ಆಸ್ಪತ್ರೆಯಲ್ಲಿದ್ದೇನೆ. ನನ್ನ ಪ್ರಾಣ ಹೋದರೂ ಚಿಂತೆ ಇಲ್ಲ. ಹೋರಾಟ ನಿಲ್ಲಬಾರದು. ಸಮುದಾಯ ಸೋಲಬಾರದು. ನಾಳೆ ಇನ್ನೂ ಬಿರುಸಿನ ಹೋರಾಟ ನಡೆಯಲಿದೆ. ಎಲ್ಲಾ ಬಂಧುಗಳು ಗೆಲ್ಲುವ ಹೋರಾಟಕ್ಕೆ ಸಿದ್ಧರಾಗೋಣ” ಎಂದು ಕರೆ ನೀಡಿದ್ದಾರೆ.

ಅಂಬಣ್ಣ ಅರೋಲಿಕರ್‌ ಮಾತನಾಡಿ, “ಸಹಜ ಆಶಯವನ್ನು ಸರ್ಕಾರ ಗಾಳಿಗೆ ತೂರಿದೆ. ಚಳಿ, ಗಾಳಿ, ಮಳೆಯನ್ನು ಲೆಕ್ಕಿಸದೆ ಭೀಮ ಸೈನಿಕರು ರಸ್ತೆಯಲ್ಲಿದ್ದರು. ಮುಖ್ಯಮಂತ್ರಿಯವರು ಕನಿಷ್ಠ ಸೌಜನ್ಯದಿಂದ ನಮ್ಮೊಂದಿಗೆ ಮಾತನಾಡಬೇಕಿತ್ತು. ನಾವೇನು ಭಯೋತ್ಪಾದಕರಾ? ಭಾರತದ ನಿವಾಸಿಗಳಲ್ಲವಾ? ಪ್ರಜಾಪ್ರಭುತ್ವದ ಹಾದಿಯಲ್ಲಿ ನಾವು ನಡೆಯುತ್ತಿಲ್ಲವಾ? ನೀವು ಮುಂದಿನ ದಿನಗಳಲ್ಲಿ ಪಶ್ಚಾತ್ತಾಪ ಪಡುತ್ತೀರಿ. ಮುಂದಿನ ಚುನಾವಣೆಯಲ್ಲಿ ಸೋಲುತ್ತೀರಿ, ಮೂಲೆಗುಂಪಾಗುತ್ತೀರಿ” ಎಂದು ಎಚ್ಚರಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...