Homeಕರ್ನಾಟಕಜಿಟಿಜಿಟಿ ಮಳೆಯ ನಡುವೆ ಮುಗಿಲು ಮುಟ್ಟಿದ ಜೈಭೀಮ್ ಘೋಷಣೆ: ಒಳಮೀಸಲಾತಿಗಾಗಿ ಹರಿದು ಬಂತು ಭೀಮಸಾಗರ

ಜಿಟಿಜಿಟಿ ಮಳೆಯ ನಡುವೆ ಮುಗಿಲು ಮುಟ್ಟಿದ ಜೈಭೀಮ್ ಘೋಷಣೆ: ಒಳಮೀಸಲಾತಿಗಾಗಿ ಹರಿದು ಬಂತು ಭೀಮಸಾಗರ

- Advertisement -
- Advertisement -

ಅದು ಮೂವತ್ತು ವರ್ಷಗಳ ಕೂಗು. ಸರ್ಕಾರಗಳು ಬಂದವು, ಸರ್ಕಾರಗಳು ಹೋದವು. ಪಕ್ಷಗಳು ಅಧಿಕಾರ ಪಡೆದವು, ಅಧಿಕಾರ ಕಳೆದುಕೊಂಡವು. ಕೊಟ್ಟ ಭರವಸೆಯನ್ನು ಯಾವ ಸರ್ಕಾರವೂ ಈಡೇರಿಸಲೇ ಇಲ್ಲ. ಜಸ್ಟೀಸ್‌ ಎ.ಜೆ.ಸದಾಶಿವ ಆಯೋಗದ ವರದಿ ಮಾತ್ರ ವಿಧಾನಸೌಧದಲ್ಲಿ ಧೂಳು ಹಿಡಿಯುತ್ತಿದೆ. ಅದನ್ನು ಕನಿಷ್ಠ ಸೌಜನ್ಯಕ್ಕಾದರೂ ತೆರೆದು ನೋಡಲಿಲ್ಲ. ಈಗ ಮತ್ತೆ ದಲಿತರು ಬೀದಿಗಿಳಿದಿದ್ದಾರೆ.

ಜನಸಂಖ್ಯೆಗನುಗುಣವಾಗಿ ಒಳಮೀಸಲಾತಿಯನ್ನು ಜಾರಿಗೊಳಿಸಬೇಕೆಂದು ಒತ್ತಾಯಿಸಿ ಮತ್ತೆ ಹೋರಾಟದ ಕಾವು ಪಡೆದಿದೆ. ಸಾರ್ವಜನಿಕವಾಗಿ ಸೋರಿಕೆಯಾಗಿರುವ ಮಾಹಿತಿಯ ಪ್ರಕಾರ- ಜಸ್ಟೀಸ್ ಎ.ಜೆ.ಸದಾಶಿವ ಆಯೋಗವು ಪರಿಶಿಷ್ಟ ಜಾತಿಯಲ್ಲಿನ 101 ಉಪಪಂಗಡಗಳನ್ನು 4 ಗುಂಪುಗಳಾಗಿ ವರ್ಗೀಕರಿಸಿ, ಶೇ.15ರ ಮೀಸಲಾತಿಯನ್ನು ಜನಸಂಖ್ಯೆ ಆಧಾರದ ಮೇಲೆ ಹಂಚಿಕೆ ಮಾಡಿದೆ. ಅದರಂತೆ ಶೇ. 33.4ರಷ್ಟಿರುವ ಎಡಗೈ(ಮಾದಿಗ) ಸಮುದಾಯಕ್ಕೆ ಶೇ. 6ರಷ್ಟು, ಶೇ. 32ರಷ್ಟಿರುವ ಬಲಗೈ (ಹೊಲೆಯ) ಸಮುದಾಯಕ್ಕೆ ಶೇ. 5ರಷ್ಟು, ಶೇ. 23.64ರಷ್ಟಿರುವ ಸ್ಪೃಶ್ಯ ಪರಿಶಿಷ್ಟರಿಗೆ ಶೇ. 3ರಷ್ಟು ಹಾಗೂ ಇತರೆ ಪರಿಶಿಷ್ಟರಿಗೆ ಶೇ. 1ರಷ್ಟು ಮೀಸಲಾತಿ ನೀಡಬೇಕೆಂದು ಶಿಫಾರಸ್ಸು ಮಾಡಲಾಗಿದೆ ಎನ್ನಲಾಗುತ್ತಿದೆ. ಈ ವರದಿಯನ್ನು ಬಿಡುಗಡೆ ಮಾಡಿ ಸಾರ್ವಜನಿಕ ಚರ್ಚೆಗೆ ಒಳಪಡಿಸಬೇಕೆಂಬ ಕೂಗು ಮತ್ತೆ ಶುರುವಾಗಿದೆ.

ಪರಿಶಿಷ್ಟ ಜಾತಿಗಳ ಒಳಮೀಸಲಾತಿಗಾಗಿ ಜಾರಿ ಹೋರಾಟ ಸಮಿತಿ ನೇತೃತ್ವದಲ್ಲಿ ನಡೆದ ಪಾದಯಾತ್ರೆ ಭಾನುವಾರ (ಡಿಸೆಂಬರ್‌ 11) ಬೆಂಗಳೂರಿನ ಫ್ರೀಡಂ ಪಾರ್ಕ್ ತಲುಪಿದೆ. ಹಿರಿಯೂರು ತಾಲ್ಲೂಕಿನ ಆದಿವಾಲ ಗ್ರಾಮದಲ್ಲಿ ದಲಿತ ಸಂಘರ್ಷ ಸಮಿತಿ ಸ್ಥಾಪಕ, ಹೋರಾಟಗಾರ ಹರಿಹರದ ಪ್ರೊ.ಬಿ. ಕೃಷ್ಣಪ್ಪ ಸ್ಮಾರಕದಿಂದ ಆರಂಭವಾದ ಪಾದಯಾತ್ರೆ ರಾಜಧಾನಿಯನ್ನು ತಲುಪಿದ ಹಿನ್ನೆಲೆಯಲ್ಲಿ ಸಾವಿರಾರು ಸಂಖ್ಯೆಯಲ್ಲಿ ದಲಿತರು ಇಂದು ಜಮಾಯಿಸಿದ್ದರು.

ಕಳೆದೆರಡು ದಿನಗಳಿಂದಲೂ ಬೆಂಗಳೂರಿನಲ್ಲಿ ಜಿಟಿಜಿಟಿ ಮಳೆ ಹಾಗೂ ಕಪ್ಪು ಸುರಿದ ಮೋಡ ಆವರಿಸಿದ್ದರೂ ಹೋರಾಟಗಾರರು ಯಾವುದಕ್ಕೂ ಅಂಜದೆ ಫ್ರೀಡಂ ಪಾರ್ಕ್‌ಗೆ ಬಂದು ಸೇರಿದರು. ಜೈ ಭೀಮ್‌ ಘೋಷಣೆ ಮೊಳಗಿತು. ಸಂವಿಧಾನಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌, ಬಾಬು ಜಗಜೀವನರಾಮ್‌, ಪ್ರೊ.ಬಿ.ಕೃಷ್ಣಪ್ಪ ಅವರ ಭಾವಚಿತ್ರಗಳನ್ನು ಒಳಗೊಂಡ ನೀಲಿ ಭಾವುಟಗಳನ್ನು ಹಿಡಿದ ದಲಿತ ಶಕ್ತಿ ಸಾಗೋರೋಪಾದಿಯಲ್ಲಿ ಹರಿದುಬಂತು. ಸಂಚಾರಿ ವೇದಿಕೆಯನ್ನು ರಸ್ತೆಯಲ್ಲಿ ನಿಲ್ಲಿಸಲಾಗಿತ್ತು. ಮುಖ್ಯರಸ್ತೆಯ ಉದ್ದಕ್ಕೂ ಭೀಮ ಶಕ್ತಿ ಮೊಳಗಿತು.

ರಾಜ್ಯದ ಮೂಲೆಮೂಲೆಗಳಿಂದ ಬಂದ ಒಳಮೀಸಲಾತಿ ಹೋರಾಟಗಾರರು, ಸುರಿವ ಮಳೆಯಲ್ಲೇ ನಿಂತು ಹೋರಾಟಗಾರರ ಮಾತುಗಳನ್ನು ಆಲಿಸಿದರು. ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿತ್ತು. ಪ್ರತಿಭಟನಾ ಸ್ಥಳದಲ್ಲಿ ಇಂಟರ್‌ನೆಟ್ ನಿರ್ಬಂಧ ಹೇರಲಾಗಿತ್ತು.

ಹೋರಾಟಗಾರರು ಕಾಂಗ್ರೆಸ್, ಜೆಡಿಎಸ್‌, ಬಿಜೆಪಿ ನಾಯಕರನ್ನು ತರಾಟೆಗೆ ತೆಗೆದುಕೊಂಡರು. ಮೂವತ್ತು ವರ್ಷಗಳ ನೋವು, ಮಾತುಗಳ ಮೂಲಕ ಬೆಂಕಿಯುಂಡೆಯಾಗಿ ಹೊರಬಿದ್ದವು. ಮುಂದಿನ ಚುನಾವಣೆಯಲ್ಲಿ ಈ ಮೂರು ಪಕ್ಷಗಳಿಗೆ ದಲಿತರು ಪಾಠ ಕಲಿಸುತ್ತೇವೆ ಎಂಬ ಎಚ್ಚರಿಕೆಯನ್ನು ನೀಡಿದರು.

ಪಾದಯಾತ್ರೆಯ ನೇತೃತ್ವ ವಹಿಸಿದ್ದ ದಲಿತ ಮುಖಂಡರಾದ ಅಂಬಣ್ಣ ಅರೋಲಿಕರ್‌ ಹಾಡಿನ ಮೂಲಕ ರಾಜಕೀಯ ಪಕ್ಷಗಳನ್ನು ಟೀಕಿಸಿದರು. ಮೂರು ಪಕ್ಷಗಳ ನಾಯಕರುಗಳ ವಿರುದ್ಧ ಹಾಡಿನ ಮೂಲಕವೇ ವಾಗ್ದಾಳಿ ನಡೆಸಿದರು. “ನಾವು ಯಾವ ಪಕ್ಷದ ಪರವೂ ಇಲ್ಲ. ವಿರೋಧವೂ ಇಲ್ಲ. ನೋಟಿಗೆ ವೋಟು ಹಾಕುವುದಿಲ್ಲ. ಸದಾಶಿವ ಆಯೋಗದ ವರದಿಗೆ ವೋಟು ಹಾಕುತ್ತೇವೆ” ಎಂದು ಗುಡುಗಿದರು.

ದಲಿತ ಹೋರಾಟಗಾರ ವೆಂಕಟಗಿರಿಯಯ್ಯ ಮಾತನಾಡಿ, “ಎಸ್‌.ಎಂ.ಕೃಷ್ಣ ಅವರು ಮುಖ್ಯಮಂತ್ರಿಯಾಗಿದ್ದಾಗ ದಲಿತರು ಹೋರಾಟ ಮಾಡಿದರು. ಒಳಮೀಸಲಾತಿಗಾಗಿ ಆಯೋಗವನ್ನು ರಚನೆ ಮಾಡುವ ತೀರ್ಮಾನ ಮಾಡಲಾಯಿತು. ಸದಾಶಿವ ಆಯೋಗವು ನೀಡಿರುವ ವರದಿಯು ವೈಜ್ಞಾನಿಕವಾಗಿದೆ. ನಮ್ಮ ಪಾಲನ್ನು ಹಂಚಿಕೊಳ್ಳುವುದಕ್ಕೆ ಯಾರಿಂದಲೂ ಭಿಕ್ಷೆ ಬೇಡಬೇಕಿಲ್ಲ. ಸಿದ್ದರಾಮಯ್ಯ, ಎಚ್‌.ಡಿ.ಕುಮಾರಸ್ವಾಮಿ, ಯಡಿಯೂರಪ್ಪ ಈಗ ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾಗಿದ್ದಾರೆ. ಇವರಿಗೆ ಈ ಜನರ ಬಗ್ಗೆ, ಸಾಮಾಜಿಕ ನ್ಯಾಯದ ಬಗ್ಗೆ ಕಳಕಳಿ ಇದ್ದದ್ದೇ ನಿಜವಾದರೆ, ಒಳಮೀಸಲಾತಿ ಜಾರಿಗೆ ಕ್ರಮವಹಿಸಲಿ. ಆದರೆ ಈ ಮನುವಾದಿ ಪಕ್ಷಗಳು, ದಲಿತರನ್ನು ಒಡೆದು ಆಳಲು ಬಯಸುತ್ತಿವೆ” ಎಂದು ಆಕ್ರೋಶ ಹೊರಹಾಕಿದರು.

ದಲಿತ ಮುಖಂಡರಾದ ಮೋಹನ್ ರಾಜ್ ಮಾತನಾಡಿ, “ಒಳಮೀಸಲಾತಿ ಜಾರಿ ಜೊತೆಗೆ, ಪಿಟಿಸಿಎಲ್‌ ಕಾಯ್ದೆಯನ್ನು ಬಲಪಡಿಸಬೇಕು. ಲಿಂಗಾಯತ ಬೇಡ ಜಂಗಮರು ಪರಿಶಿಷ್ಟ ಜಾತಿ ಪ್ರಮಾಣಪತ್ರವನ್ನು ಪಡೆಯುತ್ತಿರುವುದನ್ನು ಸರ್ಕಾರ ಕೂಡಲೇ ತಡೆಯಬೇಕು” ಎಂದು ಆಗ್ರಹಿಸಿದರು.

ಹೋರಾಟಗಾರರ ಬಂಧನ; ಆಕ್ರೋಶ

ಸ್ಥಳಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಆಗಮಿಸಬೇಕೆಂದು ಹೋರಾಟಗಾರರು ಪಟ್ಟು ಹಿಡಿದರು. ಇಳಿಸಂಜೆಯವರೆಗೆ ತಾಳ್ಮೆ ವಹಿಸಿದ್ದ ದಲಿತರು ಅಂತಿಮವಾಗಿ ಅರೆಬೆತ್ತಲೆ ಮೆರವಣಿಗೆ ಮೂಲಕ ಸಿಎಂ ನಿವಾಸದತ್ತ ಹೊರಟಿದ್ದರು. ಆಗ ಪೊಲೀಸರು ಒಳಮೀಸಲಾತಿ ಹೋರಾಟಗಾರರನ್ನು ಬಂಧಿಸಿದ್ದಾರೆ. ಪೊಲೀಸ್ ನೂಕಾಟದಲ್ಲಿ ಹಿರಿಯ ಹೋರಾಟಗಾರ ಕರಿಯಪ್ಪ ಗುಡಿಮನಿಯವರ ತಲೆಗೆ ಪೆಟ್ಟಾಗಿದೆ. ವಯೋಸಹಜ ಸಮಸ್ಯೆಗಳಿಂದ ಬಳಲುತ್ತಿರುವ ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.

ಇದನ್ನೂ ಓದಿರಿ: ದಲಿತ ಮಹಿಳೆಗೆ ಥಳಿಸಿದ ಸಚಿವ ಸೋಮಣ್ಣರನ್ನು ಸಂಧಾನಕ್ಕೆ ಕಳಿಸ್ತೀರಾ? ಒಳಮೀಸಲಾತಿ ಹೋರಾಟಗಾರರ ಆಕ್ರೋಶ

ಕರಿಯಪ್ಪ ಗುಡಿಮನಿಯವರು ಪ್ರತಿಕ್ರಿಯಿಸಿ, “ಕೊಟ್ಟ ಮಾತು ತಪ್ಪಿದೆ ಬಿಜೆಪಿ ಸರ್ಕಾರ. ಸದಾಶಿವ ವರದಿ ಜಾರಿಗೆ ತರುತ್ತೇವೆ ಎಂದು ನಮ್ಮವರ ನಂಬಿಸಿ ಈಗ ಬೆನ್ನಿಗೆ ಚೂರಿ ಹಾಕಿದೆ. 10 ವರ್ಷದ ಹಿಂದೆ ಇದೇ ದಿನ ಬೆಳಗಾವಿಯಲ್ಲಿ ನಮ್ಮ ಮೇಲೆ ಲಾಠಿ ಛಾರ್ಜ್ ಮಾಡಲಾಗಿತ್ತು. ಇವತ್ತು ಮತ್ತೆ ನಮ್ಮ ಮೇಲೆ ದಾಳಿ ಮಾಡಿ ನಮ್ಮ ದನಿಯನ್ನು ತುಳಿಯಲು ನೋಡುತ್ತಿದೆ. ನನ್ನ ತಲೆಗೆ ಪಟ್ಟಾಗಿದೆ. ಆಸ್ಪತ್ರೆಯಲ್ಲಿದ್ದೇನೆ. ನನ್ನ ಪ್ರಾಣ ಹೋದರೂ ಚಿಂತೆ ಇಲ್ಲ. ಹೋರಾಟ ನಿಲ್ಲಬಾರದು. ಸಮುದಾಯ ಸೋಲಬಾರದು. ನಾಳೆ ಇನ್ನೂ ಬಿರುಸಿನ ಹೋರಾಟ ನಡೆಯಲಿದೆ. ಎಲ್ಲಾ ಬಂಧುಗಳು ಗೆಲ್ಲುವ ಹೋರಾಟಕ್ಕೆ ಸಿದ್ಧರಾಗೋಣ” ಎಂದು ಕರೆ ನೀಡಿದ್ದಾರೆ.

ಅಂಬಣ್ಣ ಅರೋಲಿಕರ್‌ ಮಾತನಾಡಿ, “ಸಹಜ ಆಶಯವನ್ನು ಸರ್ಕಾರ ಗಾಳಿಗೆ ತೂರಿದೆ. ಚಳಿ, ಗಾಳಿ, ಮಳೆಯನ್ನು ಲೆಕ್ಕಿಸದೆ ಭೀಮ ಸೈನಿಕರು ರಸ್ತೆಯಲ್ಲಿದ್ದರು. ಮುಖ್ಯಮಂತ್ರಿಯವರು ಕನಿಷ್ಠ ಸೌಜನ್ಯದಿಂದ ನಮ್ಮೊಂದಿಗೆ ಮಾತನಾಡಬೇಕಿತ್ತು. ನಾವೇನು ಭಯೋತ್ಪಾದಕರಾ? ಭಾರತದ ನಿವಾಸಿಗಳಲ್ಲವಾ? ಪ್ರಜಾಪ್ರಭುತ್ವದ ಹಾದಿಯಲ್ಲಿ ನಾವು ನಡೆಯುತ್ತಿಲ್ಲವಾ? ನೀವು ಮುಂದಿನ ದಿನಗಳಲ್ಲಿ ಪಶ್ಚಾತ್ತಾಪ ಪಡುತ್ತೀರಿ. ಮುಂದಿನ ಚುನಾವಣೆಯಲ್ಲಿ ಸೋಲುತ್ತೀರಿ, ಮೂಲೆಗುಂಪಾಗುತ್ತೀರಿ” ಎಂದು ಎಚ್ಚರಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...