Homeಚಳವಳಿವಿಶಾಖಪಟ್ಟಣಂ ಉಕ್ಕು ಕಾರ್ಖಾನೆ ಖಾಸಗೀಕರಣದ ವಿರುದ್ದ ಜೈಲ್‌ ಭರೋ ಚಳವಳಿ

ವಿಶಾಖಪಟ್ಟಣಂ ಉಕ್ಕು ಕಾರ್ಖಾನೆ ಖಾಸಗೀಕರಣದ ವಿರುದ್ದ ಜೈಲ್‌ ಭರೋ ಚಳವಳಿ

- Advertisement -
- Advertisement -

ವಿಶಾಖಪಟ್ಟಣಂ ಉಕ್ಕು ಕಾರ್ಖಾನೆಯನ್ನು ಖಾಸಗೀಕರಣಗೊಳಿಸುವ ಒಕ್ಕೂಟ ಸರ್ಕಾರದ ನಿರ್ಧಾರಗಳ ವಿರುದ್ಧ ಕಳೆದ ಒಂದು ವರ್ಷದಿಂದ ಪ್ರತಿಭಟನೆಗಳು ನಡೆಯುತ್ತಿವೆ. ಆದರೆ, ಜಗನ್‌ಮೋಹನ್ ರೆಡ್ಡಿಯವರ ವೈಎಸ್‌ಆರ್ ಕಾಂಗ್ರೆಸ್ ಸರ್ಕಾರ ಈ ನಿರ್ಧಾರವನ್ನು ವಿರೋಧಿಸಿ, ಪ್ರತಿಭಟನಾಕಾರರಿಗೆ ಬೆಂಬಲಿಸಿದ್ದಾರೆ. ಈ ಹೋರಾಟವು ಭಾನುವಾರಕ್ಕೆ (ಫೆ.13) ಒಂದು ವರ್ಷವನ್ನು ಪೂರೈಸಲಿದ್ದು, ಅದರ ಭಾಗವಾಗಿ ಶನಿವಾರ ಬೃಹತ್ ಪ್ರತಿಭಟನೆಗಳು ಮತ್ತು ಭಾನುವಾರ ಜೈಲ್ ಭರೋ ಹೋರಾಟವನ್ನು ನಡೆಸಲು ನಿರ್ಧರಿಸಲಾಗಿದೆ.

ವೈಎಸ್ಆರ್ ಕಾಂಗ್ರೆಸ್ ಪಕ್ಷದ ನಾಯಕ, ವಿಶಾಖಪಟ್ಟಣಂ ಸಂಸದ ಎಂವಿವಿ ಸತ್ಯನಾರಾಯಣ ಅವರು ಸೋಮವಾರ ಲೋಕಸಭೆಯಲ್ಲಿ ವಿಶಾಖಪಟ್ಟಣಂ ಸ್ಟೀಲ್ ಪ್ಲಾಂಟ್ ಖಾಸಗೀಕರಣದ ವಿಷಯವನ್ನು ಪ್ರಸ್ತಾಪಿಸಿದ್ದು, “ವೈಜಾಗ್‌ ಸ್ಟೀಲ್ ಪ್ಲಾಂಟ್ ತೆಲುಗು ಜನರ ಸ್ವಾಭಿಮಾನವಾಗಿದೆ. ವಿಶಾಖ ಉಕ್ಕು-ಆಂಧ್ರ ಹಕ್ಕು ಎಂಬ ಘೋಷಣೆಯೊಂದಿಗೆ ಆಂಧ್ರ ಜನರ ಬಹುಕಾಲದ ಕನಸು 1982ರಲ್ಲಿ ವಿಶಾಖ ಉಕ್ಕು ಉದ್ಯಮದ ಸ್ಥಾಪನೆಯಿಂದ ನನಸಾಗಿದೆ. ಆ ಕಾರ್ಖಾನೆಯನ್ನು ಖಾಸಗೀಕರಣಗೊಳಿಸುವ ನಿರ್ಧಾರವನ್ನು ಒಕ್ಕೂಟ ಸರ್ಕಾರ ಹಿಂಪಡೆಯಬೇಕು” ಎಂದು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಕೋವಿಡ್‌ ಅವಧಿಯಲ್ಲಿ ಮೋದಿಯ ವಾರಣಾಸಿ ಕಂಡ ಸಾವು ನೋವು: ಬೆಚ್ಚಿಬೀಳಿಸುವ ವರದಿ ಬಹಿರಂಗ

ಆದರೆ, ಆಂಧ್ರ ಜನರ ಪ್ರತಿಭಟನೆ ಮತ್ತು ಆಂಧ್ರ ಸರ್ಕಾರ ಹಾಗೂ ಸಂಸದರ ಒತ್ತಾಯದ ವಿಚಾರವಾಗಿ ಒಕ್ಕೂಟ ಸರ್ಕಾರ ಯಾವುದೇ ರೀತಿಯ ಸ್ಪಂದನೆಯನ್ನಾಗಿಲೀ, ಪ್ರತಿಕ್ರಿಯೆಯನ್ನಾಗಲೀ ನೀಡಿಲ್ಲ.

ಈ ಹಿನ್ನೆಲೆಯಲ್ಲಿ, ಎರಡು ದಿನಗಳ ತೀವ್ರ ಆಂದೋಲನ ನಡೆಸಲು ಆಂಧ್ರದ ಸಂಘಟನೆಗಳು ನಿರ್ಧರಿಸಿವೆ. ಈ ಆಂದೋಲನದಲ್ಲಿ ಸಾವಿರಾರು ಜನರು ಭಾಗವಹಿಸುವ ನಿರೀಕ್ಷೆಯಿದೆ. ಒಕ್ಕೂಟ ಸರ್ಕಾರವು ವೈಜಾಗ್‌ ಸ್ಟೀಲ್‌ ಪ್ಲಾಂಟ್‌ ಅನ್ನು ಮಾರಾಟ ಮಾಡುವ ನಿರ್ಧಾರವನ್ನು ಹಿಂಪಡೆಯುವವರೆಗೆ ನಮ್ಮ ಹೋರಾಟ ಮುಂದುವರಿಯುತ್ತದೆ ಎಂದು ಸಿಐಟಿಯು ರಾಜ್ಯ ಅಧ್ಯಕ್ಷ ಸಿ.ಎಚ್. ನರಸಿಂಗ ರಾವ್ ಹೇಳಿದ್ದಾರೆ.

“ಈ ಪ್ರಮುಖ ಉದ್ಯಮವನ್ನು ದಕ್ಷಿಣ ಕೊರಿಯಾದ ಪೋಸ್ಕೋ ಕಂಪನಿಗೆ ಮಾರಾಟ ಮಾಡಲು ಬಿಜೆಪಿ ಸರ್ಕಾರ ಪಿತೂರಿ ನಡೆಸುತ್ತಿದೆ. ಕೊರಿಯಾದ ಪ್ರಮುಖ ಖಾಸಗೀ ಕಂಪನಿಗಳು ರೋಬೋಟ್‌ಗಳನ್ನು ಬಳಸುತ್ತಿದ್ದಾರೆ. ಅವರು ಕಡಿಮೆ ಮಾನವಶಕ್ತಿಯನ್ನು ಬಳಸುತ್ತಿದ್ದಾರೆ” ಎಂದು ನರಸಿಂಗ ರಾವ್ ಆರೋಪಿಸಿದ್ದಾರೆ.

“ಖಾಸಗಿ ಕಂಪನಿಗಳಲ್ಲಿ ಯಾವುದೇ ಸಾಮಾಜಿಕ ನ್ಯಾಯ ಇರುವುದಿಲ್ಲ. ಇದರಿಂದ ಈ ಭಾಗದ ಅಭಿವೃದ್ಧಿ ಕುಂಠಿತವಾಗಲಿದೆ. ಭೂಮಿ ಕಳೆದುಕೊಂಡ ಜನರು ತುಂಬಾ ತೊಂದರೆ ಅನುಭವಿಸುತ್ತಾರೆ. ಇಲ್ಲಿನ ಜನರಿಗೆ ಖಾಸಗೀಕರಣದ ವಿರುದ್ಧ ಹೋರಾಟ ಮಾಡದೆ ಬೇರೆ ದಾರಿ ಇಲ್ಲ. ಕಾಯಂ ನೌಕರರೊಂದಿಗೆ ಅಧಿಕಾರಿಗಳ ಸಂಘಗಳು, ಗುತ್ತಿಗೆ ಕಾರ್ಮಿಕ ಸಂಘಟನೆಗಳನ್ನು ಒಗ್ಗೂಡಿಸಿ ‘ವಿಶಾಖ ಉಕ್ಕು ಪರಿರಕ್ಷಣಾ ಹೋರಾಟ ಸಮಿತಿ’ ರಚಿಸಲಾಗಿದೆ. ಈ ಸಮಿತಿಯಲ್ಲಿ ಬಿಜೆಪಿಯ ಅಂಗಸಂಸ್ಥೆಯಾದ ಬಿಎಂಎಸ್ ಕೂಡ ಇದೆ. ವೈಜಾಗ್ ಸ್ಟೀಲ್ ಪ್ಲಾಂಟ್ ಅನ್ನು ಮಾರಾಟ ಮಾಡಲು ನಾವು ಬಿಡುವುದಿಲ್ಲ ಎಂಬುದು ನಮ್ಮ ಏಕೈಕ ಅಜೆಂಡಾವಾಗಿದೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ:ಮಮತಾ ಬ್ಯಾನರ್ಜಿ-ಅಭಿಷೇಕ್ ಬ್ಯಾನರ್ಜಿ ನಡುವೆ ಬಿರುಕು : ಮಧ್ಯದಲ್ಲಿ ಸಿಕ್ಕಿಕೊಂಡ ಪ್ರಶಾಂತ್ ಕಿಶೋರ್! 

ವೈಜಾಗ್ ಸ್ಟೀಲ್ ಪ್ಲಾಂಟ್‌ನಲ್ಲಿ ಸರ್ಕಾರಿ ಷೇರುಗಳನ್ನು 100% ಖಾಸಗೀಕರಣಗೊಳಿಸಲು ಬಿಜೆಪಿ ಸರ್ಕಾರ ನಿರ್ಧರಿಸಿದ್ದು, ಅಂದಿನಿಂದ ಜನರು ಪ್ರತಿಭಟನೆ ನಡೆಸುತ್ತಿದ್ದಾರೆ. ಬಿಜೆಪಿ ಸರ್ಕಾರ 2ನೇ ಬಾರಿಗೆ ಆಡಳಿತಕ್ಕೆ ಬಂದ ನಂತರ ಪ್ರಮುಖ ಖಾಸಗೀ ಕೈಗಾರಿಕೆಗಳಿಗೆ ಆದ್ಯತೆ ನೀಡಲು ಆಕ್ರಮಣಕಾರಿಯಾಗಿ ಮುಂದುವರಿಯುತ್ತಿದೆ. ಆದರೆ, ವೈಜಾಗ್ ಸ್ಟೀಲ್ ಪ್ಲಾಂಟ್‌ನ ಖಾಸಗೀಕರಣದ ವಿರುದ್ಧ ಬೃಹತ್‌ ಹೋರಾಟ ನಡೆಯುತ್ತಿದೆ” ಎಂದು ಅವರು ತಿಳಿಸಿದ್ದಾರೆ.

ವಿಶಾಖಪಟ್ಟಣಂ ಸ್ಟೀಲ್ ಪ್ಲಾಂಟ್ ಕಾರ್ಖಾನೆಯು ಆಂಧ್ರಪ್ರದೇಶದ ಕೈಗಾರಿಕಾ ಕಿರೀಟದಲ್ಲಿರುವ ರತ್ನವಾಗಿದೆ. 32 ಜನರ ಜೀವ ತ್ಯಾಗದಿಂದ ಇದನ್ನು ಸ್ಥಾಪಿಸಲಾಗಿದೆ. ಭಾರತದ ಸಮುದ್ರ ತೀರದಲ್ಲಿರುವ ಏಕೈಕ ಸ್ಟೀಲ್ ಪ್ಲಾಂಟ್ ಇದು. ರೈತರ ತ್ಯಾಗದಿಂದ 22,000 ಎಕರೆ ಭೂಮಿಯಲ್ಲಿ ಸ್ಥಾಪನೆಯಾಗಿದೆ. ಈ ಕಾರ್ಖಾನೆ ವರ್ಷಕ್ಕೆ ಉತ್ತಮ ಗುಣಮಟ್ಟದ 60 ಲಕ್ಷ ಟನ್ ಉಕ್ಕನ್ನು ಉತ್ಪಾದಿಸುತ್ತದೆ. ಕಳೆದ ಒಂಬತ್ತು ತಿಂಗಳ ಅವಧಿಯಲ್ಲಿ 20,000 ಕೋಟಿ ರೂ. ವಹಿವಾಟು ನಡೆಸಿ 700 ಕೋಟಿ ರೂ. ಲಾಭ ಗಳಿಸಿದೆ. ಇಲ್ಲಿ ಸುಮಾರು 32,000 ಮಂದಿ ಕೆಲಸ ಮಾಡುತ್ತಿದ್ದಾರೆ ಎಂದು ಅವರು ವಿವರಿಸಿದ್ದಾರೆ.

ವೈಜಾಗ್ ಸ್ಟೀಲ್ ಪ್ಲಾಂಟ್‌ನ ಏಕೈಕ ಸಮಸ್ಯೆ ಎಂದರೆ ಅದು ಯಾವುದೇ ಕಬ್ಬಿಣದ ಗಣಿಗಳನ್ನು ಹೊಂದಿರದ ಕಾರಣ ಕಬ್ಬಿಣದ ಅದಿರಿನ ಮೇಲೆ ವರ್ಷಕ್ಕೆ ಸುಮಾರು 3,000 ಕೋಟಿ ರೂಪಾಯಿ ಹೆಚ್ಚುವರಿ ವೆಚ್ಚವಾಗುತ್ತಿದೆ ಎಂದು ಹೇಳಿರುವ ಸಿಐಟಿಯು ನಾಯಕ, “ಒಕ್ಕೂಟ ಸರ್ಕಾರವು ಎಲ್ಲಾ ಖಾಸಗಿ ಮತ್ತು ಸಾರ್ವಜನಿಕ ಉಕ್ಕಿನ ಕಾರ್ಖಾನೆಗಳಿಗೆ ಸ್ವಂತ ಗಣಿಗಳನ್ನು ನೀಡಿದೆ. ಅಲ್ಲದೆ, ಯಾವುದೇ ಉದ್ಯಮವನ್ನು ಹೊಂದಿರದ ಗಾಲಿ ಜನಾರ್ದನ ರೆಡ್ಡಿಗೆ ಮತ್ತು ಪೋಸ್ಕೋ ಕಂಪನಿಗೂ ಸಹ ಗಣಿಗಳನ್ನು ಮಂಜೂರು ಮಾಡಿದೆ. ಆದರೆ, ವೈಜಾಗ್ ಸ್ಟೀಲ್ ಪ್ಲಾಂಟ್‌ಗೆ ಮಾತ್ರ ಯಾವುದೇ ಗಣಿಗಳನ್ನು ನೀಡಲಿಲ್ಲ. ಏಕೆಂದರೆ, ಇದನ್ನು ಖಾಸಗಿ ಕಾರ್ಪೊರೇಟ್‌ಗಳಿಗೆ ಮಾರಾಟ ಮಾಡುವ ಹುನ್ನಾರವನ್ನು ಸರ್ಕಾರ ಹೊಂದಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಹಿಜಾಬ್‌ಗೆ ಬೆಂಬಲ; ರಾಜ್ಯ ಸರ್ಕಾರವನ್ನು ‘ಸರ್ವಾಧಿಕಾರಿ’ ಎಂದ ಎನ್‌ಸಿಪಿ ಸಂಸದೆ ಸುಪ್ರಿಯಾ ಸುಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...