Homeಚಳವಳಿವಿಶಾಖಪಟ್ಟಣಂ ಉಕ್ಕು ಕಾರ್ಖಾನೆ ಖಾಸಗೀಕರಣದ ವಿರುದ್ದ ಜೈಲ್‌ ಭರೋ ಚಳವಳಿ

ವಿಶಾಖಪಟ್ಟಣಂ ಉಕ್ಕು ಕಾರ್ಖಾನೆ ಖಾಸಗೀಕರಣದ ವಿರುದ್ದ ಜೈಲ್‌ ಭರೋ ಚಳವಳಿ

- Advertisement -
- Advertisement -

ವಿಶಾಖಪಟ್ಟಣಂ ಉಕ್ಕು ಕಾರ್ಖಾನೆಯನ್ನು ಖಾಸಗೀಕರಣಗೊಳಿಸುವ ಒಕ್ಕೂಟ ಸರ್ಕಾರದ ನಿರ್ಧಾರಗಳ ವಿರುದ್ಧ ಕಳೆದ ಒಂದು ವರ್ಷದಿಂದ ಪ್ರತಿಭಟನೆಗಳು ನಡೆಯುತ್ತಿವೆ. ಆದರೆ, ಜಗನ್‌ಮೋಹನ್ ರೆಡ್ಡಿಯವರ ವೈಎಸ್‌ಆರ್ ಕಾಂಗ್ರೆಸ್ ಸರ್ಕಾರ ಈ ನಿರ್ಧಾರವನ್ನು ವಿರೋಧಿಸಿ, ಪ್ರತಿಭಟನಾಕಾರರಿಗೆ ಬೆಂಬಲಿಸಿದ್ದಾರೆ. ಈ ಹೋರಾಟವು ಭಾನುವಾರಕ್ಕೆ (ಫೆ.13) ಒಂದು ವರ್ಷವನ್ನು ಪೂರೈಸಲಿದ್ದು, ಅದರ ಭಾಗವಾಗಿ ಶನಿವಾರ ಬೃಹತ್ ಪ್ರತಿಭಟನೆಗಳು ಮತ್ತು ಭಾನುವಾರ ಜೈಲ್ ಭರೋ ಹೋರಾಟವನ್ನು ನಡೆಸಲು ನಿರ್ಧರಿಸಲಾಗಿದೆ.

ವೈಎಸ್ಆರ್ ಕಾಂಗ್ರೆಸ್ ಪಕ್ಷದ ನಾಯಕ, ವಿಶಾಖಪಟ್ಟಣಂ ಸಂಸದ ಎಂವಿವಿ ಸತ್ಯನಾರಾಯಣ ಅವರು ಸೋಮವಾರ ಲೋಕಸಭೆಯಲ್ಲಿ ವಿಶಾಖಪಟ್ಟಣಂ ಸ್ಟೀಲ್ ಪ್ಲಾಂಟ್ ಖಾಸಗೀಕರಣದ ವಿಷಯವನ್ನು ಪ್ರಸ್ತಾಪಿಸಿದ್ದು, “ವೈಜಾಗ್‌ ಸ್ಟೀಲ್ ಪ್ಲಾಂಟ್ ತೆಲುಗು ಜನರ ಸ್ವಾಭಿಮಾನವಾಗಿದೆ. ವಿಶಾಖ ಉಕ್ಕು-ಆಂಧ್ರ ಹಕ್ಕು ಎಂಬ ಘೋಷಣೆಯೊಂದಿಗೆ ಆಂಧ್ರ ಜನರ ಬಹುಕಾಲದ ಕನಸು 1982ರಲ್ಲಿ ವಿಶಾಖ ಉಕ್ಕು ಉದ್ಯಮದ ಸ್ಥಾಪನೆಯಿಂದ ನನಸಾಗಿದೆ. ಆ ಕಾರ್ಖಾನೆಯನ್ನು ಖಾಸಗೀಕರಣಗೊಳಿಸುವ ನಿರ್ಧಾರವನ್ನು ಒಕ್ಕೂಟ ಸರ್ಕಾರ ಹಿಂಪಡೆಯಬೇಕು” ಎಂದು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಕೋವಿಡ್‌ ಅವಧಿಯಲ್ಲಿ ಮೋದಿಯ ವಾರಣಾಸಿ ಕಂಡ ಸಾವು ನೋವು: ಬೆಚ್ಚಿಬೀಳಿಸುವ ವರದಿ ಬಹಿರಂಗ

ಆದರೆ, ಆಂಧ್ರ ಜನರ ಪ್ರತಿಭಟನೆ ಮತ್ತು ಆಂಧ್ರ ಸರ್ಕಾರ ಹಾಗೂ ಸಂಸದರ ಒತ್ತಾಯದ ವಿಚಾರವಾಗಿ ಒಕ್ಕೂಟ ಸರ್ಕಾರ ಯಾವುದೇ ರೀತಿಯ ಸ್ಪಂದನೆಯನ್ನಾಗಿಲೀ, ಪ್ರತಿಕ್ರಿಯೆಯನ್ನಾಗಲೀ ನೀಡಿಲ್ಲ.

ಈ ಹಿನ್ನೆಲೆಯಲ್ಲಿ, ಎರಡು ದಿನಗಳ ತೀವ್ರ ಆಂದೋಲನ ನಡೆಸಲು ಆಂಧ್ರದ ಸಂಘಟನೆಗಳು ನಿರ್ಧರಿಸಿವೆ. ಈ ಆಂದೋಲನದಲ್ಲಿ ಸಾವಿರಾರು ಜನರು ಭಾಗವಹಿಸುವ ನಿರೀಕ್ಷೆಯಿದೆ. ಒಕ್ಕೂಟ ಸರ್ಕಾರವು ವೈಜಾಗ್‌ ಸ್ಟೀಲ್‌ ಪ್ಲಾಂಟ್‌ ಅನ್ನು ಮಾರಾಟ ಮಾಡುವ ನಿರ್ಧಾರವನ್ನು ಹಿಂಪಡೆಯುವವರೆಗೆ ನಮ್ಮ ಹೋರಾಟ ಮುಂದುವರಿಯುತ್ತದೆ ಎಂದು ಸಿಐಟಿಯು ರಾಜ್ಯ ಅಧ್ಯಕ್ಷ ಸಿ.ಎಚ್. ನರಸಿಂಗ ರಾವ್ ಹೇಳಿದ್ದಾರೆ.

“ಈ ಪ್ರಮುಖ ಉದ್ಯಮವನ್ನು ದಕ್ಷಿಣ ಕೊರಿಯಾದ ಪೋಸ್ಕೋ ಕಂಪನಿಗೆ ಮಾರಾಟ ಮಾಡಲು ಬಿಜೆಪಿ ಸರ್ಕಾರ ಪಿತೂರಿ ನಡೆಸುತ್ತಿದೆ. ಕೊರಿಯಾದ ಪ್ರಮುಖ ಖಾಸಗೀ ಕಂಪನಿಗಳು ರೋಬೋಟ್‌ಗಳನ್ನು ಬಳಸುತ್ತಿದ್ದಾರೆ. ಅವರು ಕಡಿಮೆ ಮಾನವಶಕ್ತಿಯನ್ನು ಬಳಸುತ್ತಿದ್ದಾರೆ” ಎಂದು ನರಸಿಂಗ ರಾವ್ ಆರೋಪಿಸಿದ್ದಾರೆ.

“ಖಾಸಗಿ ಕಂಪನಿಗಳಲ್ಲಿ ಯಾವುದೇ ಸಾಮಾಜಿಕ ನ್ಯಾಯ ಇರುವುದಿಲ್ಲ. ಇದರಿಂದ ಈ ಭಾಗದ ಅಭಿವೃದ್ಧಿ ಕುಂಠಿತವಾಗಲಿದೆ. ಭೂಮಿ ಕಳೆದುಕೊಂಡ ಜನರು ತುಂಬಾ ತೊಂದರೆ ಅನುಭವಿಸುತ್ತಾರೆ. ಇಲ್ಲಿನ ಜನರಿಗೆ ಖಾಸಗೀಕರಣದ ವಿರುದ್ಧ ಹೋರಾಟ ಮಾಡದೆ ಬೇರೆ ದಾರಿ ಇಲ್ಲ. ಕಾಯಂ ನೌಕರರೊಂದಿಗೆ ಅಧಿಕಾರಿಗಳ ಸಂಘಗಳು, ಗುತ್ತಿಗೆ ಕಾರ್ಮಿಕ ಸಂಘಟನೆಗಳನ್ನು ಒಗ್ಗೂಡಿಸಿ ‘ವಿಶಾಖ ಉಕ್ಕು ಪರಿರಕ್ಷಣಾ ಹೋರಾಟ ಸಮಿತಿ’ ರಚಿಸಲಾಗಿದೆ. ಈ ಸಮಿತಿಯಲ್ಲಿ ಬಿಜೆಪಿಯ ಅಂಗಸಂಸ್ಥೆಯಾದ ಬಿಎಂಎಸ್ ಕೂಡ ಇದೆ. ವೈಜಾಗ್ ಸ್ಟೀಲ್ ಪ್ಲಾಂಟ್ ಅನ್ನು ಮಾರಾಟ ಮಾಡಲು ನಾವು ಬಿಡುವುದಿಲ್ಲ ಎಂಬುದು ನಮ್ಮ ಏಕೈಕ ಅಜೆಂಡಾವಾಗಿದೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ:ಮಮತಾ ಬ್ಯಾನರ್ಜಿ-ಅಭಿಷೇಕ್ ಬ್ಯಾನರ್ಜಿ ನಡುವೆ ಬಿರುಕು : ಮಧ್ಯದಲ್ಲಿ ಸಿಕ್ಕಿಕೊಂಡ ಪ್ರಶಾಂತ್ ಕಿಶೋರ್! 

ವೈಜಾಗ್ ಸ್ಟೀಲ್ ಪ್ಲಾಂಟ್‌ನಲ್ಲಿ ಸರ್ಕಾರಿ ಷೇರುಗಳನ್ನು 100% ಖಾಸಗೀಕರಣಗೊಳಿಸಲು ಬಿಜೆಪಿ ಸರ್ಕಾರ ನಿರ್ಧರಿಸಿದ್ದು, ಅಂದಿನಿಂದ ಜನರು ಪ್ರತಿಭಟನೆ ನಡೆಸುತ್ತಿದ್ದಾರೆ. ಬಿಜೆಪಿ ಸರ್ಕಾರ 2ನೇ ಬಾರಿಗೆ ಆಡಳಿತಕ್ಕೆ ಬಂದ ನಂತರ ಪ್ರಮುಖ ಖಾಸಗೀ ಕೈಗಾರಿಕೆಗಳಿಗೆ ಆದ್ಯತೆ ನೀಡಲು ಆಕ್ರಮಣಕಾರಿಯಾಗಿ ಮುಂದುವರಿಯುತ್ತಿದೆ. ಆದರೆ, ವೈಜಾಗ್ ಸ್ಟೀಲ್ ಪ್ಲಾಂಟ್‌ನ ಖಾಸಗೀಕರಣದ ವಿರುದ್ಧ ಬೃಹತ್‌ ಹೋರಾಟ ನಡೆಯುತ್ತಿದೆ” ಎಂದು ಅವರು ತಿಳಿಸಿದ್ದಾರೆ.

ವಿಶಾಖಪಟ್ಟಣಂ ಸ್ಟೀಲ್ ಪ್ಲಾಂಟ್ ಕಾರ್ಖಾನೆಯು ಆಂಧ್ರಪ್ರದೇಶದ ಕೈಗಾರಿಕಾ ಕಿರೀಟದಲ್ಲಿರುವ ರತ್ನವಾಗಿದೆ. 32 ಜನರ ಜೀವ ತ್ಯಾಗದಿಂದ ಇದನ್ನು ಸ್ಥಾಪಿಸಲಾಗಿದೆ. ಭಾರತದ ಸಮುದ್ರ ತೀರದಲ್ಲಿರುವ ಏಕೈಕ ಸ್ಟೀಲ್ ಪ್ಲಾಂಟ್ ಇದು. ರೈತರ ತ್ಯಾಗದಿಂದ 22,000 ಎಕರೆ ಭೂಮಿಯಲ್ಲಿ ಸ್ಥಾಪನೆಯಾಗಿದೆ. ಈ ಕಾರ್ಖಾನೆ ವರ್ಷಕ್ಕೆ ಉತ್ತಮ ಗುಣಮಟ್ಟದ 60 ಲಕ್ಷ ಟನ್ ಉಕ್ಕನ್ನು ಉತ್ಪಾದಿಸುತ್ತದೆ. ಕಳೆದ ಒಂಬತ್ತು ತಿಂಗಳ ಅವಧಿಯಲ್ಲಿ 20,000 ಕೋಟಿ ರೂ. ವಹಿವಾಟು ನಡೆಸಿ 700 ಕೋಟಿ ರೂ. ಲಾಭ ಗಳಿಸಿದೆ. ಇಲ್ಲಿ ಸುಮಾರು 32,000 ಮಂದಿ ಕೆಲಸ ಮಾಡುತ್ತಿದ್ದಾರೆ ಎಂದು ಅವರು ವಿವರಿಸಿದ್ದಾರೆ.

ವೈಜಾಗ್ ಸ್ಟೀಲ್ ಪ್ಲಾಂಟ್‌ನ ಏಕೈಕ ಸಮಸ್ಯೆ ಎಂದರೆ ಅದು ಯಾವುದೇ ಕಬ್ಬಿಣದ ಗಣಿಗಳನ್ನು ಹೊಂದಿರದ ಕಾರಣ ಕಬ್ಬಿಣದ ಅದಿರಿನ ಮೇಲೆ ವರ್ಷಕ್ಕೆ ಸುಮಾರು 3,000 ಕೋಟಿ ರೂಪಾಯಿ ಹೆಚ್ಚುವರಿ ವೆಚ್ಚವಾಗುತ್ತಿದೆ ಎಂದು ಹೇಳಿರುವ ಸಿಐಟಿಯು ನಾಯಕ, “ಒಕ್ಕೂಟ ಸರ್ಕಾರವು ಎಲ್ಲಾ ಖಾಸಗಿ ಮತ್ತು ಸಾರ್ವಜನಿಕ ಉಕ್ಕಿನ ಕಾರ್ಖಾನೆಗಳಿಗೆ ಸ್ವಂತ ಗಣಿಗಳನ್ನು ನೀಡಿದೆ. ಅಲ್ಲದೆ, ಯಾವುದೇ ಉದ್ಯಮವನ್ನು ಹೊಂದಿರದ ಗಾಲಿ ಜನಾರ್ದನ ರೆಡ್ಡಿಗೆ ಮತ್ತು ಪೋಸ್ಕೋ ಕಂಪನಿಗೂ ಸಹ ಗಣಿಗಳನ್ನು ಮಂಜೂರು ಮಾಡಿದೆ. ಆದರೆ, ವೈಜಾಗ್ ಸ್ಟೀಲ್ ಪ್ಲಾಂಟ್‌ಗೆ ಮಾತ್ರ ಯಾವುದೇ ಗಣಿಗಳನ್ನು ನೀಡಲಿಲ್ಲ. ಏಕೆಂದರೆ, ಇದನ್ನು ಖಾಸಗಿ ಕಾರ್ಪೊರೇಟ್‌ಗಳಿಗೆ ಮಾರಾಟ ಮಾಡುವ ಹುನ್ನಾರವನ್ನು ಸರ್ಕಾರ ಹೊಂದಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಹಿಜಾಬ್‌ಗೆ ಬೆಂಬಲ; ರಾಜ್ಯ ಸರ್ಕಾರವನ್ನು ‘ಸರ್ವಾಧಿಕಾರಿ’ ಎಂದ ಎನ್‌ಸಿಪಿ ಸಂಸದೆ ಸುಪ್ರಿಯಾ ಸುಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...