Homeಚಳವಳಿವಿಶಾಖಪಟ್ಟಣಂ ಉಕ್ಕು ಕಾರ್ಖಾನೆ ಖಾಸಗೀಕರಣದ ವಿರುದ್ದ ಜೈಲ್‌ ಭರೋ ಚಳವಳಿ

ವಿಶಾಖಪಟ್ಟಣಂ ಉಕ್ಕು ಕಾರ್ಖಾನೆ ಖಾಸಗೀಕರಣದ ವಿರುದ್ದ ಜೈಲ್‌ ಭರೋ ಚಳವಳಿ

- Advertisement -
- Advertisement -

ವಿಶಾಖಪಟ್ಟಣಂ ಉಕ್ಕು ಕಾರ್ಖಾನೆಯನ್ನು ಖಾಸಗೀಕರಣಗೊಳಿಸುವ ಒಕ್ಕೂಟ ಸರ್ಕಾರದ ನಿರ್ಧಾರಗಳ ವಿರುದ್ಧ ಕಳೆದ ಒಂದು ವರ್ಷದಿಂದ ಪ್ರತಿಭಟನೆಗಳು ನಡೆಯುತ್ತಿವೆ. ಆದರೆ, ಜಗನ್‌ಮೋಹನ್ ರೆಡ್ಡಿಯವರ ವೈಎಸ್‌ಆರ್ ಕಾಂಗ್ರೆಸ್ ಸರ್ಕಾರ ಈ ನಿರ್ಧಾರವನ್ನು ವಿರೋಧಿಸಿ, ಪ್ರತಿಭಟನಾಕಾರರಿಗೆ ಬೆಂಬಲಿಸಿದ್ದಾರೆ. ಈ ಹೋರಾಟವು ಭಾನುವಾರಕ್ಕೆ (ಫೆ.13) ಒಂದು ವರ್ಷವನ್ನು ಪೂರೈಸಲಿದ್ದು, ಅದರ ಭಾಗವಾಗಿ ಶನಿವಾರ ಬೃಹತ್ ಪ್ರತಿಭಟನೆಗಳು ಮತ್ತು ಭಾನುವಾರ ಜೈಲ್ ಭರೋ ಹೋರಾಟವನ್ನು ನಡೆಸಲು ನಿರ್ಧರಿಸಲಾಗಿದೆ.

ವೈಎಸ್ಆರ್ ಕಾಂಗ್ರೆಸ್ ಪಕ್ಷದ ನಾಯಕ, ವಿಶಾಖಪಟ್ಟಣಂ ಸಂಸದ ಎಂವಿವಿ ಸತ್ಯನಾರಾಯಣ ಅವರು ಸೋಮವಾರ ಲೋಕಸಭೆಯಲ್ಲಿ ವಿಶಾಖಪಟ್ಟಣಂ ಸ್ಟೀಲ್ ಪ್ಲಾಂಟ್ ಖಾಸಗೀಕರಣದ ವಿಷಯವನ್ನು ಪ್ರಸ್ತಾಪಿಸಿದ್ದು, “ವೈಜಾಗ್‌ ಸ್ಟೀಲ್ ಪ್ಲಾಂಟ್ ತೆಲುಗು ಜನರ ಸ್ವಾಭಿಮಾನವಾಗಿದೆ. ವಿಶಾಖ ಉಕ್ಕು-ಆಂಧ್ರ ಹಕ್ಕು ಎಂಬ ಘೋಷಣೆಯೊಂದಿಗೆ ಆಂಧ್ರ ಜನರ ಬಹುಕಾಲದ ಕನಸು 1982ರಲ್ಲಿ ವಿಶಾಖ ಉಕ್ಕು ಉದ್ಯಮದ ಸ್ಥಾಪನೆಯಿಂದ ನನಸಾಗಿದೆ. ಆ ಕಾರ್ಖಾನೆಯನ್ನು ಖಾಸಗೀಕರಣಗೊಳಿಸುವ ನಿರ್ಧಾರವನ್ನು ಒಕ್ಕೂಟ ಸರ್ಕಾರ ಹಿಂಪಡೆಯಬೇಕು” ಎಂದು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಕೋವಿಡ್‌ ಅವಧಿಯಲ್ಲಿ ಮೋದಿಯ ವಾರಣಾಸಿ ಕಂಡ ಸಾವು ನೋವು: ಬೆಚ್ಚಿಬೀಳಿಸುವ ವರದಿ ಬಹಿರಂಗ

ಆದರೆ, ಆಂಧ್ರ ಜನರ ಪ್ರತಿಭಟನೆ ಮತ್ತು ಆಂಧ್ರ ಸರ್ಕಾರ ಹಾಗೂ ಸಂಸದರ ಒತ್ತಾಯದ ವಿಚಾರವಾಗಿ ಒಕ್ಕೂಟ ಸರ್ಕಾರ ಯಾವುದೇ ರೀತಿಯ ಸ್ಪಂದನೆಯನ್ನಾಗಿಲೀ, ಪ್ರತಿಕ್ರಿಯೆಯನ್ನಾಗಲೀ ನೀಡಿಲ್ಲ.

ಈ ಹಿನ್ನೆಲೆಯಲ್ಲಿ, ಎರಡು ದಿನಗಳ ತೀವ್ರ ಆಂದೋಲನ ನಡೆಸಲು ಆಂಧ್ರದ ಸಂಘಟನೆಗಳು ನಿರ್ಧರಿಸಿವೆ. ಈ ಆಂದೋಲನದಲ್ಲಿ ಸಾವಿರಾರು ಜನರು ಭಾಗವಹಿಸುವ ನಿರೀಕ್ಷೆಯಿದೆ. ಒಕ್ಕೂಟ ಸರ್ಕಾರವು ವೈಜಾಗ್‌ ಸ್ಟೀಲ್‌ ಪ್ಲಾಂಟ್‌ ಅನ್ನು ಮಾರಾಟ ಮಾಡುವ ನಿರ್ಧಾರವನ್ನು ಹಿಂಪಡೆಯುವವರೆಗೆ ನಮ್ಮ ಹೋರಾಟ ಮುಂದುವರಿಯುತ್ತದೆ ಎಂದು ಸಿಐಟಿಯು ರಾಜ್ಯ ಅಧ್ಯಕ್ಷ ಸಿ.ಎಚ್. ನರಸಿಂಗ ರಾವ್ ಹೇಳಿದ್ದಾರೆ.

“ಈ ಪ್ರಮುಖ ಉದ್ಯಮವನ್ನು ದಕ್ಷಿಣ ಕೊರಿಯಾದ ಪೋಸ್ಕೋ ಕಂಪನಿಗೆ ಮಾರಾಟ ಮಾಡಲು ಬಿಜೆಪಿ ಸರ್ಕಾರ ಪಿತೂರಿ ನಡೆಸುತ್ತಿದೆ. ಕೊರಿಯಾದ ಪ್ರಮುಖ ಖಾಸಗೀ ಕಂಪನಿಗಳು ರೋಬೋಟ್‌ಗಳನ್ನು ಬಳಸುತ್ತಿದ್ದಾರೆ. ಅವರು ಕಡಿಮೆ ಮಾನವಶಕ್ತಿಯನ್ನು ಬಳಸುತ್ತಿದ್ದಾರೆ” ಎಂದು ನರಸಿಂಗ ರಾವ್ ಆರೋಪಿಸಿದ್ದಾರೆ.

“ಖಾಸಗಿ ಕಂಪನಿಗಳಲ್ಲಿ ಯಾವುದೇ ಸಾಮಾಜಿಕ ನ್ಯಾಯ ಇರುವುದಿಲ್ಲ. ಇದರಿಂದ ಈ ಭಾಗದ ಅಭಿವೃದ್ಧಿ ಕುಂಠಿತವಾಗಲಿದೆ. ಭೂಮಿ ಕಳೆದುಕೊಂಡ ಜನರು ತುಂಬಾ ತೊಂದರೆ ಅನುಭವಿಸುತ್ತಾರೆ. ಇಲ್ಲಿನ ಜನರಿಗೆ ಖಾಸಗೀಕರಣದ ವಿರುದ್ಧ ಹೋರಾಟ ಮಾಡದೆ ಬೇರೆ ದಾರಿ ಇಲ್ಲ. ಕಾಯಂ ನೌಕರರೊಂದಿಗೆ ಅಧಿಕಾರಿಗಳ ಸಂಘಗಳು, ಗುತ್ತಿಗೆ ಕಾರ್ಮಿಕ ಸಂಘಟನೆಗಳನ್ನು ಒಗ್ಗೂಡಿಸಿ ‘ವಿಶಾಖ ಉಕ್ಕು ಪರಿರಕ್ಷಣಾ ಹೋರಾಟ ಸಮಿತಿ’ ರಚಿಸಲಾಗಿದೆ. ಈ ಸಮಿತಿಯಲ್ಲಿ ಬಿಜೆಪಿಯ ಅಂಗಸಂಸ್ಥೆಯಾದ ಬಿಎಂಎಸ್ ಕೂಡ ಇದೆ. ವೈಜಾಗ್ ಸ್ಟೀಲ್ ಪ್ಲಾಂಟ್ ಅನ್ನು ಮಾರಾಟ ಮಾಡಲು ನಾವು ಬಿಡುವುದಿಲ್ಲ ಎಂಬುದು ನಮ್ಮ ಏಕೈಕ ಅಜೆಂಡಾವಾಗಿದೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ:ಮಮತಾ ಬ್ಯಾನರ್ಜಿ-ಅಭಿಷೇಕ್ ಬ್ಯಾನರ್ಜಿ ನಡುವೆ ಬಿರುಕು : ಮಧ್ಯದಲ್ಲಿ ಸಿಕ್ಕಿಕೊಂಡ ಪ್ರಶಾಂತ್ ಕಿಶೋರ್! 

ವೈಜಾಗ್ ಸ್ಟೀಲ್ ಪ್ಲಾಂಟ್‌ನಲ್ಲಿ ಸರ್ಕಾರಿ ಷೇರುಗಳನ್ನು 100% ಖಾಸಗೀಕರಣಗೊಳಿಸಲು ಬಿಜೆಪಿ ಸರ್ಕಾರ ನಿರ್ಧರಿಸಿದ್ದು, ಅಂದಿನಿಂದ ಜನರು ಪ್ರತಿಭಟನೆ ನಡೆಸುತ್ತಿದ್ದಾರೆ. ಬಿಜೆಪಿ ಸರ್ಕಾರ 2ನೇ ಬಾರಿಗೆ ಆಡಳಿತಕ್ಕೆ ಬಂದ ನಂತರ ಪ್ರಮುಖ ಖಾಸಗೀ ಕೈಗಾರಿಕೆಗಳಿಗೆ ಆದ್ಯತೆ ನೀಡಲು ಆಕ್ರಮಣಕಾರಿಯಾಗಿ ಮುಂದುವರಿಯುತ್ತಿದೆ. ಆದರೆ, ವೈಜಾಗ್ ಸ್ಟೀಲ್ ಪ್ಲಾಂಟ್‌ನ ಖಾಸಗೀಕರಣದ ವಿರುದ್ಧ ಬೃಹತ್‌ ಹೋರಾಟ ನಡೆಯುತ್ತಿದೆ” ಎಂದು ಅವರು ತಿಳಿಸಿದ್ದಾರೆ.

ವಿಶಾಖಪಟ್ಟಣಂ ಸ್ಟೀಲ್ ಪ್ಲಾಂಟ್ ಕಾರ್ಖಾನೆಯು ಆಂಧ್ರಪ್ರದೇಶದ ಕೈಗಾರಿಕಾ ಕಿರೀಟದಲ್ಲಿರುವ ರತ್ನವಾಗಿದೆ. 32 ಜನರ ಜೀವ ತ್ಯಾಗದಿಂದ ಇದನ್ನು ಸ್ಥಾಪಿಸಲಾಗಿದೆ. ಭಾರತದ ಸಮುದ್ರ ತೀರದಲ್ಲಿರುವ ಏಕೈಕ ಸ್ಟೀಲ್ ಪ್ಲಾಂಟ್ ಇದು. ರೈತರ ತ್ಯಾಗದಿಂದ 22,000 ಎಕರೆ ಭೂಮಿಯಲ್ಲಿ ಸ್ಥಾಪನೆಯಾಗಿದೆ. ಈ ಕಾರ್ಖಾನೆ ವರ್ಷಕ್ಕೆ ಉತ್ತಮ ಗುಣಮಟ್ಟದ 60 ಲಕ್ಷ ಟನ್ ಉಕ್ಕನ್ನು ಉತ್ಪಾದಿಸುತ್ತದೆ. ಕಳೆದ ಒಂಬತ್ತು ತಿಂಗಳ ಅವಧಿಯಲ್ಲಿ 20,000 ಕೋಟಿ ರೂ. ವಹಿವಾಟು ನಡೆಸಿ 700 ಕೋಟಿ ರೂ. ಲಾಭ ಗಳಿಸಿದೆ. ಇಲ್ಲಿ ಸುಮಾರು 32,000 ಮಂದಿ ಕೆಲಸ ಮಾಡುತ್ತಿದ್ದಾರೆ ಎಂದು ಅವರು ವಿವರಿಸಿದ್ದಾರೆ.

ವೈಜಾಗ್ ಸ್ಟೀಲ್ ಪ್ಲಾಂಟ್‌ನ ಏಕೈಕ ಸಮಸ್ಯೆ ಎಂದರೆ ಅದು ಯಾವುದೇ ಕಬ್ಬಿಣದ ಗಣಿಗಳನ್ನು ಹೊಂದಿರದ ಕಾರಣ ಕಬ್ಬಿಣದ ಅದಿರಿನ ಮೇಲೆ ವರ್ಷಕ್ಕೆ ಸುಮಾರು 3,000 ಕೋಟಿ ರೂಪಾಯಿ ಹೆಚ್ಚುವರಿ ವೆಚ್ಚವಾಗುತ್ತಿದೆ ಎಂದು ಹೇಳಿರುವ ಸಿಐಟಿಯು ನಾಯಕ, “ಒಕ್ಕೂಟ ಸರ್ಕಾರವು ಎಲ್ಲಾ ಖಾಸಗಿ ಮತ್ತು ಸಾರ್ವಜನಿಕ ಉಕ್ಕಿನ ಕಾರ್ಖಾನೆಗಳಿಗೆ ಸ್ವಂತ ಗಣಿಗಳನ್ನು ನೀಡಿದೆ. ಅಲ್ಲದೆ, ಯಾವುದೇ ಉದ್ಯಮವನ್ನು ಹೊಂದಿರದ ಗಾಲಿ ಜನಾರ್ದನ ರೆಡ್ಡಿಗೆ ಮತ್ತು ಪೋಸ್ಕೋ ಕಂಪನಿಗೂ ಸಹ ಗಣಿಗಳನ್ನು ಮಂಜೂರು ಮಾಡಿದೆ. ಆದರೆ, ವೈಜಾಗ್ ಸ್ಟೀಲ್ ಪ್ಲಾಂಟ್‌ಗೆ ಮಾತ್ರ ಯಾವುದೇ ಗಣಿಗಳನ್ನು ನೀಡಲಿಲ್ಲ. ಏಕೆಂದರೆ, ಇದನ್ನು ಖಾಸಗಿ ಕಾರ್ಪೊರೇಟ್‌ಗಳಿಗೆ ಮಾರಾಟ ಮಾಡುವ ಹುನ್ನಾರವನ್ನು ಸರ್ಕಾರ ಹೊಂದಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಹಿಜಾಬ್‌ಗೆ ಬೆಂಬಲ; ರಾಜ್ಯ ಸರ್ಕಾರವನ್ನು ‘ಸರ್ವಾಧಿಕಾರಿ’ ಎಂದ ಎನ್‌ಸಿಪಿ ಸಂಸದೆ ಸುಪ್ರಿಯಾ ಸುಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...