Homeಚಳವಳಿವಿಶಾಖಪಟ್ಟಣಂ ಉಕ್ಕು ಕಾರ್ಖಾನೆ ಖಾಸಗೀಕರಣದ ವಿರುದ್ದ ಜೈಲ್‌ ಭರೋ ಚಳವಳಿ

ವಿಶಾಖಪಟ್ಟಣಂ ಉಕ್ಕು ಕಾರ್ಖಾನೆ ಖಾಸಗೀಕರಣದ ವಿರುದ್ದ ಜೈಲ್‌ ಭರೋ ಚಳವಳಿ

- Advertisement -
- Advertisement -

ವಿಶಾಖಪಟ್ಟಣಂ ಉಕ್ಕು ಕಾರ್ಖಾನೆಯನ್ನು ಖಾಸಗೀಕರಣಗೊಳಿಸುವ ಒಕ್ಕೂಟ ಸರ್ಕಾರದ ನಿರ್ಧಾರಗಳ ವಿರುದ್ಧ ಕಳೆದ ಒಂದು ವರ್ಷದಿಂದ ಪ್ರತಿಭಟನೆಗಳು ನಡೆಯುತ್ತಿವೆ. ಆದರೆ, ಜಗನ್‌ಮೋಹನ್ ರೆಡ್ಡಿಯವರ ವೈಎಸ್‌ಆರ್ ಕಾಂಗ್ರೆಸ್ ಸರ್ಕಾರ ಈ ನಿರ್ಧಾರವನ್ನು ವಿರೋಧಿಸಿ, ಪ್ರತಿಭಟನಾಕಾರರಿಗೆ ಬೆಂಬಲಿಸಿದ್ದಾರೆ. ಈ ಹೋರಾಟವು ಭಾನುವಾರಕ್ಕೆ (ಫೆ.13) ಒಂದು ವರ್ಷವನ್ನು ಪೂರೈಸಲಿದ್ದು, ಅದರ ಭಾಗವಾಗಿ ಶನಿವಾರ ಬೃಹತ್ ಪ್ರತಿಭಟನೆಗಳು ಮತ್ತು ಭಾನುವಾರ ಜೈಲ್ ಭರೋ ಹೋರಾಟವನ್ನು ನಡೆಸಲು ನಿರ್ಧರಿಸಲಾಗಿದೆ.

ವೈಎಸ್ಆರ್ ಕಾಂಗ್ರೆಸ್ ಪಕ್ಷದ ನಾಯಕ, ವಿಶಾಖಪಟ್ಟಣಂ ಸಂಸದ ಎಂವಿವಿ ಸತ್ಯನಾರಾಯಣ ಅವರು ಸೋಮವಾರ ಲೋಕಸಭೆಯಲ್ಲಿ ವಿಶಾಖಪಟ್ಟಣಂ ಸ್ಟೀಲ್ ಪ್ಲಾಂಟ್ ಖಾಸಗೀಕರಣದ ವಿಷಯವನ್ನು ಪ್ರಸ್ತಾಪಿಸಿದ್ದು, “ವೈಜಾಗ್‌ ಸ್ಟೀಲ್ ಪ್ಲಾಂಟ್ ತೆಲುಗು ಜನರ ಸ್ವಾಭಿಮಾನವಾಗಿದೆ. ವಿಶಾಖ ಉಕ್ಕು-ಆಂಧ್ರ ಹಕ್ಕು ಎಂಬ ಘೋಷಣೆಯೊಂದಿಗೆ ಆಂಧ್ರ ಜನರ ಬಹುಕಾಲದ ಕನಸು 1982ರಲ್ಲಿ ವಿಶಾಖ ಉಕ್ಕು ಉದ್ಯಮದ ಸ್ಥಾಪನೆಯಿಂದ ನನಸಾಗಿದೆ. ಆ ಕಾರ್ಖಾನೆಯನ್ನು ಖಾಸಗೀಕರಣಗೊಳಿಸುವ ನಿರ್ಧಾರವನ್ನು ಒಕ್ಕೂಟ ಸರ್ಕಾರ ಹಿಂಪಡೆಯಬೇಕು” ಎಂದು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಕೋವಿಡ್‌ ಅವಧಿಯಲ್ಲಿ ಮೋದಿಯ ವಾರಣಾಸಿ ಕಂಡ ಸಾವು ನೋವು: ಬೆಚ್ಚಿಬೀಳಿಸುವ ವರದಿ ಬಹಿರಂಗ

ಆದರೆ, ಆಂಧ್ರ ಜನರ ಪ್ರತಿಭಟನೆ ಮತ್ತು ಆಂಧ್ರ ಸರ್ಕಾರ ಹಾಗೂ ಸಂಸದರ ಒತ್ತಾಯದ ವಿಚಾರವಾಗಿ ಒಕ್ಕೂಟ ಸರ್ಕಾರ ಯಾವುದೇ ರೀತಿಯ ಸ್ಪಂದನೆಯನ್ನಾಗಿಲೀ, ಪ್ರತಿಕ್ರಿಯೆಯನ್ನಾಗಲೀ ನೀಡಿಲ್ಲ.

ಈ ಹಿನ್ನೆಲೆಯಲ್ಲಿ, ಎರಡು ದಿನಗಳ ತೀವ್ರ ಆಂದೋಲನ ನಡೆಸಲು ಆಂಧ್ರದ ಸಂಘಟನೆಗಳು ನಿರ್ಧರಿಸಿವೆ. ಈ ಆಂದೋಲನದಲ್ಲಿ ಸಾವಿರಾರು ಜನರು ಭಾಗವಹಿಸುವ ನಿರೀಕ್ಷೆಯಿದೆ. ಒಕ್ಕೂಟ ಸರ್ಕಾರವು ವೈಜಾಗ್‌ ಸ್ಟೀಲ್‌ ಪ್ಲಾಂಟ್‌ ಅನ್ನು ಮಾರಾಟ ಮಾಡುವ ನಿರ್ಧಾರವನ್ನು ಹಿಂಪಡೆಯುವವರೆಗೆ ನಮ್ಮ ಹೋರಾಟ ಮುಂದುವರಿಯುತ್ತದೆ ಎಂದು ಸಿಐಟಿಯು ರಾಜ್ಯ ಅಧ್ಯಕ್ಷ ಸಿ.ಎಚ್. ನರಸಿಂಗ ರಾವ್ ಹೇಳಿದ್ದಾರೆ.

“ಈ ಪ್ರಮುಖ ಉದ್ಯಮವನ್ನು ದಕ್ಷಿಣ ಕೊರಿಯಾದ ಪೋಸ್ಕೋ ಕಂಪನಿಗೆ ಮಾರಾಟ ಮಾಡಲು ಬಿಜೆಪಿ ಸರ್ಕಾರ ಪಿತೂರಿ ನಡೆಸುತ್ತಿದೆ. ಕೊರಿಯಾದ ಪ್ರಮುಖ ಖಾಸಗೀ ಕಂಪನಿಗಳು ರೋಬೋಟ್‌ಗಳನ್ನು ಬಳಸುತ್ತಿದ್ದಾರೆ. ಅವರು ಕಡಿಮೆ ಮಾನವಶಕ್ತಿಯನ್ನು ಬಳಸುತ್ತಿದ್ದಾರೆ” ಎಂದು ನರಸಿಂಗ ರಾವ್ ಆರೋಪಿಸಿದ್ದಾರೆ.

“ಖಾಸಗಿ ಕಂಪನಿಗಳಲ್ಲಿ ಯಾವುದೇ ಸಾಮಾಜಿಕ ನ್ಯಾಯ ಇರುವುದಿಲ್ಲ. ಇದರಿಂದ ಈ ಭಾಗದ ಅಭಿವೃದ್ಧಿ ಕುಂಠಿತವಾಗಲಿದೆ. ಭೂಮಿ ಕಳೆದುಕೊಂಡ ಜನರು ತುಂಬಾ ತೊಂದರೆ ಅನುಭವಿಸುತ್ತಾರೆ. ಇಲ್ಲಿನ ಜನರಿಗೆ ಖಾಸಗೀಕರಣದ ವಿರುದ್ಧ ಹೋರಾಟ ಮಾಡದೆ ಬೇರೆ ದಾರಿ ಇಲ್ಲ. ಕಾಯಂ ನೌಕರರೊಂದಿಗೆ ಅಧಿಕಾರಿಗಳ ಸಂಘಗಳು, ಗುತ್ತಿಗೆ ಕಾರ್ಮಿಕ ಸಂಘಟನೆಗಳನ್ನು ಒಗ್ಗೂಡಿಸಿ ‘ವಿಶಾಖ ಉಕ್ಕು ಪರಿರಕ್ಷಣಾ ಹೋರಾಟ ಸಮಿತಿ’ ರಚಿಸಲಾಗಿದೆ. ಈ ಸಮಿತಿಯಲ್ಲಿ ಬಿಜೆಪಿಯ ಅಂಗಸಂಸ್ಥೆಯಾದ ಬಿಎಂಎಸ್ ಕೂಡ ಇದೆ. ವೈಜಾಗ್ ಸ್ಟೀಲ್ ಪ್ಲಾಂಟ್ ಅನ್ನು ಮಾರಾಟ ಮಾಡಲು ನಾವು ಬಿಡುವುದಿಲ್ಲ ಎಂಬುದು ನಮ್ಮ ಏಕೈಕ ಅಜೆಂಡಾವಾಗಿದೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ:ಮಮತಾ ಬ್ಯಾನರ್ಜಿ-ಅಭಿಷೇಕ್ ಬ್ಯಾನರ್ಜಿ ನಡುವೆ ಬಿರುಕು : ಮಧ್ಯದಲ್ಲಿ ಸಿಕ್ಕಿಕೊಂಡ ಪ್ರಶಾಂತ್ ಕಿಶೋರ್! 

ವೈಜಾಗ್ ಸ್ಟೀಲ್ ಪ್ಲಾಂಟ್‌ನಲ್ಲಿ ಸರ್ಕಾರಿ ಷೇರುಗಳನ್ನು 100% ಖಾಸಗೀಕರಣಗೊಳಿಸಲು ಬಿಜೆಪಿ ಸರ್ಕಾರ ನಿರ್ಧರಿಸಿದ್ದು, ಅಂದಿನಿಂದ ಜನರು ಪ್ರತಿಭಟನೆ ನಡೆಸುತ್ತಿದ್ದಾರೆ. ಬಿಜೆಪಿ ಸರ್ಕಾರ 2ನೇ ಬಾರಿಗೆ ಆಡಳಿತಕ್ಕೆ ಬಂದ ನಂತರ ಪ್ರಮುಖ ಖಾಸಗೀ ಕೈಗಾರಿಕೆಗಳಿಗೆ ಆದ್ಯತೆ ನೀಡಲು ಆಕ್ರಮಣಕಾರಿಯಾಗಿ ಮುಂದುವರಿಯುತ್ತಿದೆ. ಆದರೆ, ವೈಜಾಗ್ ಸ್ಟೀಲ್ ಪ್ಲಾಂಟ್‌ನ ಖಾಸಗೀಕರಣದ ವಿರುದ್ಧ ಬೃಹತ್‌ ಹೋರಾಟ ನಡೆಯುತ್ತಿದೆ” ಎಂದು ಅವರು ತಿಳಿಸಿದ್ದಾರೆ.

ವಿಶಾಖಪಟ್ಟಣಂ ಸ್ಟೀಲ್ ಪ್ಲಾಂಟ್ ಕಾರ್ಖಾನೆಯು ಆಂಧ್ರಪ್ರದೇಶದ ಕೈಗಾರಿಕಾ ಕಿರೀಟದಲ್ಲಿರುವ ರತ್ನವಾಗಿದೆ. 32 ಜನರ ಜೀವ ತ್ಯಾಗದಿಂದ ಇದನ್ನು ಸ್ಥಾಪಿಸಲಾಗಿದೆ. ಭಾರತದ ಸಮುದ್ರ ತೀರದಲ್ಲಿರುವ ಏಕೈಕ ಸ್ಟೀಲ್ ಪ್ಲಾಂಟ್ ಇದು. ರೈತರ ತ್ಯಾಗದಿಂದ 22,000 ಎಕರೆ ಭೂಮಿಯಲ್ಲಿ ಸ್ಥಾಪನೆಯಾಗಿದೆ. ಈ ಕಾರ್ಖಾನೆ ವರ್ಷಕ್ಕೆ ಉತ್ತಮ ಗುಣಮಟ್ಟದ 60 ಲಕ್ಷ ಟನ್ ಉಕ್ಕನ್ನು ಉತ್ಪಾದಿಸುತ್ತದೆ. ಕಳೆದ ಒಂಬತ್ತು ತಿಂಗಳ ಅವಧಿಯಲ್ಲಿ 20,000 ಕೋಟಿ ರೂ. ವಹಿವಾಟು ನಡೆಸಿ 700 ಕೋಟಿ ರೂ. ಲಾಭ ಗಳಿಸಿದೆ. ಇಲ್ಲಿ ಸುಮಾರು 32,000 ಮಂದಿ ಕೆಲಸ ಮಾಡುತ್ತಿದ್ದಾರೆ ಎಂದು ಅವರು ವಿವರಿಸಿದ್ದಾರೆ.

ವೈಜಾಗ್ ಸ್ಟೀಲ್ ಪ್ಲಾಂಟ್‌ನ ಏಕೈಕ ಸಮಸ್ಯೆ ಎಂದರೆ ಅದು ಯಾವುದೇ ಕಬ್ಬಿಣದ ಗಣಿಗಳನ್ನು ಹೊಂದಿರದ ಕಾರಣ ಕಬ್ಬಿಣದ ಅದಿರಿನ ಮೇಲೆ ವರ್ಷಕ್ಕೆ ಸುಮಾರು 3,000 ಕೋಟಿ ರೂಪಾಯಿ ಹೆಚ್ಚುವರಿ ವೆಚ್ಚವಾಗುತ್ತಿದೆ ಎಂದು ಹೇಳಿರುವ ಸಿಐಟಿಯು ನಾಯಕ, “ಒಕ್ಕೂಟ ಸರ್ಕಾರವು ಎಲ್ಲಾ ಖಾಸಗಿ ಮತ್ತು ಸಾರ್ವಜನಿಕ ಉಕ್ಕಿನ ಕಾರ್ಖಾನೆಗಳಿಗೆ ಸ್ವಂತ ಗಣಿಗಳನ್ನು ನೀಡಿದೆ. ಅಲ್ಲದೆ, ಯಾವುದೇ ಉದ್ಯಮವನ್ನು ಹೊಂದಿರದ ಗಾಲಿ ಜನಾರ್ದನ ರೆಡ್ಡಿಗೆ ಮತ್ತು ಪೋಸ್ಕೋ ಕಂಪನಿಗೂ ಸಹ ಗಣಿಗಳನ್ನು ಮಂಜೂರು ಮಾಡಿದೆ. ಆದರೆ, ವೈಜಾಗ್ ಸ್ಟೀಲ್ ಪ್ಲಾಂಟ್‌ಗೆ ಮಾತ್ರ ಯಾವುದೇ ಗಣಿಗಳನ್ನು ನೀಡಲಿಲ್ಲ. ಏಕೆಂದರೆ, ಇದನ್ನು ಖಾಸಗಿ ಕಾರ್ಪೊರೇಟ್‌ಗಳಿಗೆ ಮಾರಾಟ ಮಾಡುವ ಹುನ್ನಾರವನ್ನು ಸರ್ಕಾರ ಹೊಂದಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಹಿಜಾಬ್‌ಗೆ ಬೆಂಬಲ; ರಾಜ್ಯ ಸರ್ಕಾರವನ್ನು ‘ಸರ್ವಾಧಿಕಾರಿ’ ಎಂದ ಎನ್‌ಸಿಪಿ ಸಂಸದೆ ಸುಪ್ರಿಯಾ ಸುಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...