Homeಚಳವಳಿವಿಶಾಖಪಟ್ಟಣಂ ಉಕ್ಕು ಕಾರ್ಖಾನೆ ಖಾಸಗೀಕರಣದ ವಿರುದ್ದ ಜೈಲ್‌ ಭರೋ ಚಳವಳಿ

ವಿಶಾಖಪಟ್ಟಣಂ ಉಕ್ಕು ಕಾರ್ಖಾನೆ ಖಾಸಗೀಕರಣದ ವಿರುದ್ದ ಜೈಲ್‌ ಭರೋ ಚಳವಳಿ

- Advertisement -
- Advertisement -

ವಿಶಾಖಪಟ್ಟಣಂ ಉಕ್ಕು ಕಾರ್ಖಾನೆಯನ್ನು ಖಾಸಗೀಕರಣಗೊಳಿಸುವ ಒಕ್ಕೂಟ ಸರ್ಕಾರದ ನಿರ್ಧಾರಗಳ ವಿರುದ್ಧ ಕಳೆದ ಒಂದು ವರ್ಷದಿಂದ ಪ್ರತಿಭಟನೆಗಳು ನಡೆಯುತ್ತಿವೆ. ಆದರೆ, ಜಗನ್‌ಮೋಹನ್ ರೆಡ್ಡಿಯವರ ವೈಎಸ್‌ಆರ್ ಕಾಂಗ್ರೆಸ್ ಸರ್ಕಾರ ಈ ನಿರ್ಧಾರವನ್ನು ವಿರೋಧಿಸಿ, ಪ್ರತಿಭಟನಾಕಾರರಿಗೆ ಬೆಂಬಲಿಸಿದ್ದಾರೆ. ಈ ಹೋರಾಟವು ಭಾನುವಾರಕ್ಕೆ (ಫೆ.13) ಒಂದು ವರ್ಷವನ್ನು ಪೂರೈಸಲಿದ್ದು, ಅದರ ಭಾಗವಾಗಿ ಶನಿವಾರ ಬೃಹತ್ ಪ್ರತಿಭಟನೆಗಳು ಮತ್ತು ಭಾನುವಾರ ಜೈಲ್ ಭರೋ ಹೋರಾಟವನ್ನು ನಡೆಸಲು ನಿರ್ಧರಿಸಲಾಗಿದೆ.

ವೈಎಸ್ಆರ್ ಕಾಂಗ್ರೆಸ್ ಪಕ್ಷದ ನಾಯಕ, ವಿಶಾಖಪಟ್ಟಣಂ ಸಂಸದ ಎಂವಿವಿ ಸತ್ಯನಾರಾಯಣ ಅವರು ಸೋಮವಾರ ಲೋಕಸಭೆಯಲ್ಲಿ ವಿಶಾಖಪಟ್ಟಣಂ ಸ್ಟೀಲ್ ಪ್ಲಾಂಟ್ ಖಾಸಗೀಕರಣದ ವಿಷಯವನ್ನು ಪ್ರಸ್ತಾಪಿಸಿದ್ದು, “ವೈಜಾಗ್‌ ಸ್ಟೀಲ್ ಪ್ಲಾಂಟ್ ತೆಲುಗು ಜನರ ಸ್ವಾಭಿಮಾನವಾಗಿದೆ. ವಿಶಾಖ ಉಕ್ಕು-ಆಂಧ್ರ ಹಕ್ಕು ಎಂಬ ಘೋಷಣೆಯೊಂದಿಗೆ ಆಂಧ್ರ ಜನರ ಬಹುಕಾಲದ ಕನಸು 1982ರಲ್ಲಿ ವಿಶಾಖ ಉಕ್ಕು ಉದ್ಯಮದ ಸ್ಥಾಪನೆಯಿಂದ ನನಸಾಗಿದೆ. ಆ ಕಾರ್ಖಾನೆಯನ್ನು ಖಾಸಗೀಕರಣಗೊಳಿಸುವ ನಿರ್ಧಾರವನ್ನು ಒಕ್ಕೂಟ ಸರ್ಕಾರ ಹಿಂಪಡೆಯಬೇಕು” ಎಂದು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಕೋವಿಡ್‌ ಅವಧಿಯಲ್ಲಿ ಮೋದಿಯ ವಾರಣಾಸಿ ಕಂಡ ಸಾವು ನೋವು: ಬೆಚ್ಚಿಬೀಳಿಸುವ ವರದಿ ಬಹಿರಂಗ

ಆದರೆ, ಆಂಧ್ರ ಜನರ ಪ್ರತಿಭಟನೆ ಮತ್ತು ಆಂಧ್ರ ಸರ್ಕಾರ ಹಾಗೂ ಸಂಸದರ ಒತ್ತಾಯದ ವಿಚಾರವಾಗಿ ಒಕ್ಕೂಟ ಸರ್ಕಾರ ಯಾವುದೇ ರೀತಿಯ ಸ್ಪಂದನೆಯನ್ನಾಗಿಲೀ, ಪ್ರತಿಕ್ರಿಯೆಯನ್ನಾಗಲೀ ನೀಡಿಲ್ಲ.

ಈ ಹಿನ್ನೆಲೆಯಲ್ಲಿ, ಎರಡು ದಿನಗಳ ತೀವ್ರ ಆಂದೋಲನ ನಡೆಸಲು ಆಂಧ್ರದ ಸಂಘಟನೆಗಳು ನಿರ್ಧರಿಸಿವೆ. ಈ ಆಂದೋಲನದಲ್ಲಿ ಸಾವಿರಾರು ಜನರು ಭಾಗವಹಿಸುವ ನಿರೀಕ್ಷೆಯಿದೆ. ಒಕ್ಕೂಟ ಸರ್ಕಾರವು ವೈಜಾಗ್‌ ಸ್ಟೀಲ್‌ ಪ್ಲಾಂಟ್‌ ಅನ್ನು ಮಾರಾಟ ಮಾಡುವ ನಿರ್ಧಾರವನ್ನು ಹಿಂಪಡೆಯುವವರೆಗೆ ನಮ್ಮ ಹೋರಾಟ ಮುಂದುವರಿಯುತ್ತದೆ ಎಂದು ಸಿಐಟಿಯು ರಾಜ್ಯ ಅಧ್ಯಕ್ಷ ಸಿ.ಎಚ್. ನರಸಿಂಗ ರಾವ್ ಹೇಳಿದ್ದಾರೆ.

“ಈ ಪ್ರಮುಖ ಉದ್ಯಮವನ್ನು ದಕ್ಷಿಣ ಕೊರಿಯಾದ ಪೋಸ್ಕೋ ಕಂಪನಿಗೆ ಮಾರಾಟ ಮಾಡಲು ಬಿಜೆಪಿ ಸರ್ಕಾರ ಪಿತೂರಿ ನಡೆಸುತ್ತಿದೆ. ಕೊರಿಯಾದ ಪ್ರಮುಖ ಖಾಸಗೀ ಕಂಪನಿಗಳು ರೋಬೋಟ್‌ಗಳನ್ನು ಬಳಸುತ್ತಿದ್ದಾರೆ. ಅವರು ಕಡಿಮೆ ಮಾನವಶಕ್ತಿಯನ್ನು ಬಳಸುತ್ತಿದ್ದಾರೆ” ಎಂದು ನರಸಿಂಗ ರಾವ್ ಆರೋಪಿಸಿದ್ದಾರೆ.

“ಖಾಸಗಿ ಕಂಪನಿಗಳಲ್ಲಿ ಯಾವುದೇ ಸಾಮಾಜಿಕ ನ್ಯಾಯ ಇರುವುದಿಲ್ಲ. ಇದರಿಂದ ಈ ಭಾಗದ ಅಭಿವೃದ್ಧಿ ಕುಂಠಿತವಾಗಲಿದೆ. ಭೂಮಿ ಕಳೆದುಕೊಂಡ ಜನರು ತುಂಬಾ ತೊಂದರೆ ಅನುಭವಿಸುತ್ತಾರೆ. ಇಲ್ಲಿನ ಜನರಿಗೆ ಖಾಸಗೀಕರಣದ ವಿರುದ್ಧ ಹೋರಾಟ ಮಾಡದೆ ಬೇರೆ ದಾರಿ ಇಲ್ಲ. ಕಾಯಂ ನೌಕರರೊಂದಿಗೆ ಅಧಿಕಾರಿಗಳ ಸಂಘಗಳು, ಗುತ್ತಿಗೆ ಕಾರ್ಮಿಕ ಸಂಘಟನೆಗಳನ್ನು ಒಗ್ಗೂಡಿಸಿ ‘ವಿಶಾಖ ಉಕ್ಕು ಪರಿರಕ್ಷಣಾ ಹೋರಾಟ ಸಮಿತಿ’ ರಚಿಸಲಾಗಿದೆ. ಈ ಸಮಿತಿಯಲ್ಲಿ ಬಿಜೆಪಿಯ ಅಂಗಸಂಸ್ಥೆಯಾದ ಬಿಎಂಎಸ್ ಕೂಡ ಇದೆ. ವೈಜಾಗ್ ಸ್ಟೀಲ್ ಪ್ಲಾಂಟ್ ಅನ್ನು ಮಾರಾಟ ಮಾಡಲು ನಾವು ಬಿಡುವುದಿಲ್ಲ ಎಂಬುದು ನಮ್ಮ ಏಕೈಕ ಅಜೆಂಡಾವಾಗಿದೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ:ಮಮತಾ ಬ್ಯಾನರ್ಜಿ-ಅಭಿಷೇಕ್ ಬ್ಯಾನರ್ಜಿ ನಡುವೆ ಬಿರುಕು : ಮಧ್ಯದಲ್ಲಿ ಸಿಕ್ಕಿಕೊಂಡ ಪ್ರಶಾಂತ್ ಕಿಶೋರ್! 

ವೈಜಾಗ್ ಸ್ಟೀಲ್ ಪ್ಲಾಂಟ್‌ನಲ್ಲಿ ಸರ್ಕಾರಿ ಷೇರುಗಳನ್ನು 100% ಖಾಸಗೀಕರಣಗೊಳಿಸಲು ಬಿಜೆಪಿ ಸರ್ಕಾರ ನಿರ್ಧರಿಸಿದ್ದು, ಅಂದಿನಿಂದ ಜನರು ಪ್ರತಿಭಟನೆ ನಡೆಸುತ್ತಿದ್ದಾರೆ. ಬಿಜೆಪಿ ಸರ್ಕಾರ 2ನೇ ಬಾರಿಗೆ ಆಡಳಿತಕ್ಕೆ ಬಂದ ನಂತರ ಪ್ರಮುಖ ಖಾಸಗೀ ಕೈಗಾರಿಕೆಗಳಿಗೆ ಆದ್ಯತೆ ನೀಡಲು ಆಕ್ರಮಣಕಾರಿಯಾಗಿ ಮುಂದುವರಿಯುತ್ತಿದೆ. ಆದರೆ, ವೈಜಾಗ್ ಸ್ಟೀಲ್ ಪ್ಲಾಂಟ್‌ನ ಖಾಸಗೀಕರಣದ ವಿರುದ್ಧ ಬೃಹತ್‌ ಹೋರಾಟ ನಡೆಯುತ್ತಿದೆ” ಎಂದು ಅವರು ತಿಳಿಸಿದ್ದಾರೆ.

ವಿಶಾಖಪಟ್ಟಣಂ ಸ್ಟೀಲ್ ಪ್ಲಾಂಟ್ ಕಾರ್ಖಾನೆಯು ಆಂಧ್ರಪ್ರದೇಶದ ಕೈಗಾರಿಕಾ ಕಿರೀಟದಲ್ಲಿರುವ ರತ್ನವಾಗಿದೆ. 32 ಜನರ ಜೀವ ತ್ಯಾಗದಿಂದ ಇದನ್ನು ಸ್ಥಾಪಿಸಲಾಗಿದೆ. ಭಾರತದ ಸಮುದ್ರ ತೀರದಲ್ಲಿರುವ ಏಕೈಕ ಸ್ಟೀಲ್ ಪ್ಲಾಂಟ್ ಇದು. ರೈತರ ತ್ಯಾಗದಿಂದ 22,000 ಎಕರೆ ಭೂಮಿಯಲ್ಲಿ ಸ್ಥಾಪನೆಯಾಗಿದೆ. ಈ ಕಾರ್ಖಾನೆ ವರ್ಷಕ್ಕೆ ಉತ್ತಮ ಗುಣಮಟ್ಟದ 60 ಲಕ್ಷ ಟನ್ ಉಕ್ಕನ್ನು ಉತ್ಪಾದಿಸುತ್ತದೆ. ಕಳೆದ ಒಂಬತ್ತು ತಿಂಗಳ ಅವಧಿಯಲ್ಲಿ 20,000 ಕೋಟಿ ರೂ. ವಹಿವಾಟು ನಡೆಸಿ 700 ಕೋಟಿ ರೂ. ಲಾಭ ಗಳಿಸಿದೆ. ಇಲ್ಲಿ ಸುಮಾರು 32,000 ಮಂದಿ ಕೆಲಸ ಮಾಡುತ್ತಿದ್ದಾರೆ ಎಂದು ಅವರು ವಿವರಿಸಿದ್ದಾರೆ.

ವೈಜಾಗ್ ಸ್ಟೀಲ್ ಪ್ಲಾಂಟ್‌ನ ಏಕೈಕ ಸಮಸ್ಯೆ ಎಂದರೆ ಅದು ಯಾವುದೇ ಕಬ್ಬಿಣದ ಗಣಿಗಳನ್ನು ಹೊಂದಿರದ ಕಾರಣ ಕಬ್ಬಿಣದ ಅದಿರಿನ ಮೇಲೆ ವರ್ಷಕ್ಕೆ ಸುಮಾರು 3,000 ಕೋಟಿ ರೂಪಾಯಿ ಹೆಚ್ಚುವರಿ ವೆಚ್ಚವಾಗುತ್ತಿದೆ ಎಂದು ಹೇಳಿರುವ ಸಿಐಟಿಯು ನಾಯಕ, “ಒಕ್ಕೂಟ ಸರ್ಕಾರವು ಎಲ್ಲಾ ಖಾಸಗಿ ಮತ್ತು ಸಾರ್ವಜನಿಕ ಉಕ್ಕಿನ ಕಾರ್ಖಾನೆಗಳಿಗೆ ಸ್ವಂತ ಗಣಿಗಳನ್ನು ನೀಡಿದೆ. ಅಲ್ಲದೆ, ಯಾವುದೇ ಉದ್ಯಮವನ್ನು ಹೊಂದಿರದ ಗಾಲಿ ಜನಾರ್ದನ ರೆಡ್ಡಿಗೆ ಮತ್ತು ಪೋಸ್ಕೋ ಕಂಪನಿಗೂ ಸಹ ಗಣಿಗಳನ್ನು ಮಂಜೂರು ಮಾಡಿದೆ. ಆದರೆ, ವೈಜಾಗ್ ಸ್ಟೀಲ್ ಪ್ಲಾಂಟ್‌ಗೆ ಮಾತ್ರ ಯಾವುದೇ ಗಣಿಗಳನ್ನು ನೀಡಲಿಲ್ಲ. ಏಕೆಂದರೆ, ಇದನ್ನು ಖಾಸಗಿ ಕಾರ್ಪೊರೇಟ್‌ಗಳಿಗೆ ಮಾರಾಟ ಮಾಡುವ ಹುನ್ನಾರವನ್ನು ಸರ್ಕಾರ ಹೊಂದಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಹಿಜಾಬ್‌ಗೆ ಬೆಂಬಲ; ರಾಜ್ಯ ಸರ್ಕಾರವನ್ನು ‘ಸರ್ವಾಧಿಕಾರಿ’ ಎಂದ ಎನ್‌ಸಿಪಿ ಸಂಸದೆ ಸುಪ್ರಿಯಾ ಸುಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...