Homeಚಳವಳಿವಿಶಾಖಪಟ್ಟಣಂ ಉಕ್ಕು ಕಾರ್ಖಾನೆ ಖಾಸಗೀಕರಣದ ವಿರುದ್ದ ಜೈಲ್‌ ಭರೋ ಚಳವಳಿ

ವಿಶಾಖಪಟ್ಟಣಂ ಉಕ್ಕು ಕಾರ್ಖಾನೆ ಖಾಸಗೀಕರಣದ ವಿರುದ್ದ ಜೈಲ್‌ ಭರೋ ಚಳವಳಿ

- Advertisement -
- Advertisement -

ವಿಶಾಖಪಟ್ಟಣಂ ಉಕ್ಕು ಕಾರ್ಖಾನೆಯನ್ನು ಖಾಸಗೀಕರಣಗೊಳಿಸುವ ಒಕ್ಕೂಟ ಸರ್ಕಾರದ ನಿರ್ಧಾರಗಳ ವಿರುದ್ಧ ಕಳೆದ ಒಂದು ವರ್ಷದಿಂದ ಪ್ರತಿಭಟನೆಗಳು ನಡೆಯುತ್ತಿವೆ. ಆದರೆ, ಜಗನ್‌ಮೋಹನ್ ರೆಡ್ಡಿಯವರ ವೈಎಸ್‌ಆರ್ ಕಾಂಗ್ರೆಸ್ ಸರ್ಕಾರ ಈ ನಿರ್ಧಾರವನ್ನು ವಿರೋಧಿಸಿ, ಪ್ರತಿಭಟನಾಕಾರರಿಗೆ ಬೆಂಬಲಿಸಿದ್ದಾರೆ. ಈ ಹೋರಾಟವು ಭಾನುವಾರಕ್ಕೆ (ಫೆ.13) ಒಂದು ವರ್ಷವನ್ನು ಪೂರೈಸಲಿದ್ದು, ಅದರ ಭಾಗವಾಗಿ ಶನಿವಾರ ಬೃಹತ್ ಪ್ರತಿಭಟನೆಗಳು ಮತ್ತು ಭಾನುವಾರ ಜೈಲ್ ಭರೋ ಹೋರಾಟವನ್ನು ನಡೆಸಲು ನಿರ್ಧರಿಸಲಾಗಿದೆ.

ವೈಎಸ್ಆರ್ ಕಾಂಗ್ರೆಸ್ ಪಕ್ಷದ ನಾಯಕ, ವಿಶಾಖಪಟ್ಟಣಂ ಸಂಸದ ಎಂವಿವಿ ಸತ್ಯನಾರಾಯಣ ಅವರು ಸೋಮವಾರ ಲೋಕಸಭೆಯಲ್ಲಿ ವಿಶಾಖಪಟ್ಟಣಂ ಸ್ಟೀಲ್ ಪ್ಲಾಂಟ್ ಖಾಸಗೀಕರಣದ ವಿಷಯವನ್ನು ಪ್ರಸ್ತಾಪಿಸಿದ್ದು, “ವೈಜಾಗ್‌ ಸ್ಟೀಲ್ ಪ್ಲಾಂಟ್ ತೆಲುಗು ಜನರ ಸ್ವಾಭಿಮಾನವಾಗಿದೆ. ವಿಶಾಖ ಉಕ್ಕು-ಆಂಧ್ರ ಹಕ್ಕು ಎಂಬ ಘೋಷಣೆಯೊಂದಿಗೆ ಆಂಧ್ರ ಜನರ ಬಹುಕಾಲದ ಕನಸು 1982ರಲ್ಲಿ ವಿಶಾಖ ಉಕ್ಕು ಉದ್ಯಮದ ಸ್ಥಾಪನೆಯಿಂದ ನನಸಾಗಿದೆ. ಆ ಕಾರ್ಖಾನೆಯನ್ನು ಖಾಸಗೀಕರಣಗೊಳಿಸುವ ನಿರ್ಧಾರವನ್ನು ಒಕ್ಕೂಟ ಸರ್ಕಾರ ಹಿಂಪಡೆಯಬೇಕು” ಎಂದು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಕೋವಿಡ್‌ ಅವಧಿಯಲ್ಲಿ ಮೋದಿಯ ವಾರಣಾಸಿ ಕಂಡ ಸಾವು ನೋವು: ಬೆಚ್ಚಿಬೀಳಿಸುವ ವರದಿ ಬಹಿರಂಗ

ಆದರೆ, ಆಂಧ್ರ ಜನರ ಪ್ರತಿಭಟನೆ ಮತ್ತು ಆಂಧ್ರ ಸರ್ಕಾರ ಹಾಗೂ ಸಂಸದರ ಒತ್ತಾಯದ ವಿಚಾರವಾಗಿ ಒಕ್ಕೂಟ ಸರ್ಕಾರ ಯಾವುದೇ ರೀತಿಯ ಸ್ಪಂದನೆಯನ್ನಾಗಿಲೀ, ಪ್ರತಿಕ್ರಿಯೆಯನ್ನಾಗಲೀ ನೀಡಿಲ್ಲ.

ಈ ಹಿನ್ನೆಲೆಯಲ್ಲಿ, ಎರಡು ದಿನಗಳ ತೀವ್ರ ಆಂದೋಲನ ನಡೆಸಲು ಆಂಧ್ರದ ಸಂಘಟನೆಗಳು ನಿರ್ಧರಿಸಿವೆ. ಈ ಆಂದೋಲನದಲ್ಲಿ ಸಾವಿರಾರು ಜನರು ಭಾಗವಹಿಸುವ ನಿರೀಕ್ಷೆಯಿದೆ. ಒಕ್ಕೂಟ ಸರ್ಕಾರವು ವೈಜಾಗ್‌ ಸ್ಟೀಲ್‌ ಪ್ಲಾಂಟ್‌ ಅನ್ನು ಮಾರಾಟ ಮಾಡುವ ನಿರ್ಧಾರವನ್ನು ಹಿಂಪಡೆಯುವವರೆಗೆ ನಮ್ಮ ಹೋರಾಟ ಮುಂದುವರಿಯುತ್ತದೆ ಎಂದು ಸಿಐಟಿಯು ರಾಜ್ಯ ಅಧ್ಯಕ್ಷ ಸಿ.ಎಚ್. ನರಸಿಂಗ ರಾವ್ ಹೇಳಿದ್ದಾರೆ.

“ಈ ಪ್ರಮುಖ ಉದ್ಯಮವನ್ನು ದಕ್ಷಿಣ ಕೊರಿಯಾದ ಪೋಸ್ಕೋ ಕಂಪನಿಗೆ ಮಾರಾಟ ಮಾಡಲು ಬಿಜೆಪಿ ಸರ್ಕಾರ ಪಿತೂರಿ ನಡೆಸುತ್ತಿದೆ. ಕೊರಿಯಾದ ಪ್ರಮುಖ ಖಾಸಗೀ ಕಂಪನಿಗಳು ರೋಬೋಟ್‌ಗಳನ್ನು ಬಳಸುತ್ತಿದ್ದಾರೆ. ಅವರು ಕಡಿಮೆ ಮಾನವಶಕ್ತಿಯನ್ನು ಬಳಸುತ್ತಿದ್ದಾರೆ” ಎಂದು ನರಸಿಂಗ ರಾವ್ ಆರೋಪಿಸಿದ್ದಾರೆ.

“ಖಾಸಗಿ ಕಂಪನಿಗಳಲ್ಲಿ ಯಾವುದೇ ಸಾಮಾಜಿಕ ನ್ಯಾಯ ಇರುವುದಿಲ್ಲ. ಇದರಿಂದ ಈ ಭಾಗದ ಅಭಿವೃದ್ಧಿ ಕುಂಠಿತವಾಗಲಿದೆ. ಭೂಮಿ ಕಳೆದುಕೊಂಡ ಜನರು ತುಂಬಾ ತೊಂದರೆ ಅನುಭವಿಸುತ್ತಾರೆ. ಇಲ್ಲಿನ ಜನರಿಗೆ ಖಾಸಗೀಕರಣದ ವಿರುದ್ಧ ಹೋರಾಟ ಮಾಡದೆ ಬೇರೆ ದಾರಿ ಇಲ್ಲ. ಕಾಯಂ ನೌಕರರೊಂದಿಗೆ ಅಧಿಕಾರಿಗಳ ಸಂಘಗಳು, ಗುತ್ತಿಗೆ ಕಾರ್ಮಿಕ ಸಂಘಟನೆಗಳನ್ನು ಒಗ್ಗೂಡಿಸಿ ‘ವಿಶಾಖ ಉಕ್ಕು ಪರಿರಕ್ಷಣಾ ಹೋರಾಟ ಸಮಿತಿ’ ರಚಿಸಲಾಗಿದೆ. ಈ ಸಮಿತಿಯಲ್ಲಿ ಬಿಜೆಪಿಯ ಅಂಗಸಂಸ್ಥೆಯಾದ ಬಿಎಂಎಸ್ ಕೂಡ ಇದೆ. ವೈಜಾಗ್ ಸ್ಟೀಲ್ ಪ್ಲಾಂಟ್ ಅನ್ನು ಮಾರಾಟ ಮಾಡಲು ನಾವು ಬಿಡುವುದಿಲ್ಲ ಎಂಬುದು ನಮ್ಮ ಏಕೈಕ ಅಜೆಂಡಾವಾಗಿದೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ:ಮಮತಾ ಬ್ಯಾನರ್ಜಿ-ಅಭಿಷೇಕ್ ಬ್ಯಾನರ್ಜಿ ನಡುವೆ ಬಿರುಕು : ಮಧ್ಯದಲ್ಲಿ ಸಿಕ್ಕಿಕೊಂಡ ಪ್ರಶಾಂತ್ ಕಿಶೋರ್! 

ವೈಜಾಗ್ ಸ್ಟೀಲ್ ಪ್ಲಾಂಟ್‌ನಲ್ಲಿ ಸರ್ಕಾರಿ ಷೇರುಗಳನ್ನು 100% ಖಾಸಗೀಕರಣಗೊಳಿಸಲು ಬಿಜೆಪಿ ಸರ್ಕಾರ ನಿರ್ಧರಿಸಿದ್ದು, ಅಂದಿನಿಂದ ಜನರು ಪ್ರತಿಭಟನೆ ನಡೆಸುತ್ತಿದ್ದಾರೆ. ಬಿಜೆಪಿ ಸರ್ಕಾರ 2ನೇ ಬಾರಿಗೆ ಆಡಳಿತಕ್ಕೆ ಬಂದ ನಂತರ ಪ್ರಮುಖ ಖಾಸಗೀ ಕೈಗಾರಿಕೆಗಳಿಗೆ ಆದ್ಯತೆ ನೀಡಲು ಆಕ್ರಮಣಕಾರಿಯಾಗಿ ಮುಂದುವರಿಯುತ್ತಿದೆ. ಆದರೆ, ವೈಜಾಗ್ ಸ್ಟೀಲ್ ಪ್ಲಾಂಟ್‌ನ ಖಾಸಗೀಕರಣದ ವಿರುದ್ಧ ಬೃಹತ್‌ ಹೋರಾಟ ನಡೆಯುತ್ತಿದೆ” ಎಂದು ಅವರು ತಿಳಿಸಿದ್ದಾರೆ.

ವಿಶಾಖಪಟ್ಟಣಂ ಸ್ಟೀಲ್ ಪ್ಲಾಂಟ್ ಕಾರ್ಖಾನೆಯು ಆಂಧ್ರಪ್ರದೇಶದ ಕೈಗಾರಿಕಾ ಕಿರೀಟದಲ್ಲಿರುವ ರತ್ನವಾಗಿದೆ. 32 ಜನರ ಜೀವ ತ್ಯಾಗದಿಂದ ಇದನ್ನು ಸ್ಥಾಪಿಸಲಾಗಿದೆ. ಭಾರತದ ಸಮುದ್ರ ತೀರದಲ್ಲಿರುವ ಏಕೈಕ ಸ್ಟೀಲ್ ಪ್ಲಾಂಟ್ ಇದು. ರೈತರ ತ್ಯಾಗದಿಂದ 22,000 ಎಕರೆ ಭೂಮಿಯಲ್ಲಿ ಸ್ಥಾಪನೆಯಾಗಿದೆ. ಈ ಕಾರ್ಖಾನೆ ವರ್ಷಕ್ಕೆ ಉತ್ತಮ ಗುಣಮಟ್ಟದ 60 ಲಕ್ಷ ಟನ್ ಉಕ್ಕನ್ನು ಉತ್ಪಾದಿಸುತ್ತದೆ. ಕಳೆದ ಒಂಬತ್ತು ತಿಂಗಳ ಅವಧಿಯಲ್ಲಿ 20,000 ಕೋಟಿ ರೂ. ವಹಿವಾಟು ನಡೆಸಿ 700 ಕೋಟಿ ರೂ. ಲಾಭ ಗಳಿಸಿದೆ. ಇಲ್ಲಿ ಸುಮಾರು 32,000 ಮಂದಿ ಕೆಲಸ ಮಾಡುತ್ತಿದ್ದಾರೆ ಎಂದು ಅವರು ವಿವರಿಸಿದ್ದಾರೆ.

ವೈಜಾಗ್ ಸ್ಟೀಲ್ ಪ್ಲಾಂಟ್‌ನ ಏಕೈಕ ಸಮಸ್ಯೆ ಎಂದರೆ ಅದು ಯಾವುದೇ ಕಬ್ಬಿಣದ ಗಣಿಗಳನ್ನು ಹೊಂದಿರದ ಕಾರಣ ಕಬ್ಬಿಣದ ಅದಿರಿನ ಮೇಲೆ ವರ್ಷಕ್ಕೆ ಸುಮಾರು 3,000 ಕೋಟಿ ರೂಪಾಯಿ ಹೆಚ್ಚುವರಿ ವೆಚ್ಚವಾಗುತ್ತಿದೆ ಎಂದು ಹೇಳಿರುವ ಸಿಐಟಿಯು ನಾಯಕ, “ಒಕ್ಕೂಟ ಸರ್ಕಾರವು ಎಲ್ಲಾ ಖಾಸಗಿ ಮತ್ತು ಸಾರ್ವಜನಿಕ ಉಕ್ಕಿನ ಕಾರ್ಖಾನೆಗಳಿಗೆ ಸ್ವಂತ ಗಣಿಗಳನ್ನು ನೀಡಿದೆ. ಅಲ್ಲದೆ, ಯಾವುದೇ ಉದ್ಯಮವನ್ನು ಹೊಂದಿರದ ಗಾಲಿ ಜನಾರ್ದನ ರೆಡ್ಡಿಗೆ ಮತ್ತು ಪೋಸ್ಕೋ ಕಂಪನಿಗೂ ಸಹ ಗಣಿಗಳನ್ನು ಮಂಜೂರು ಮಾಡಿದೆ. ಆದರೆ, ವೈಜಾಗ್ ಸ್ಟೀಲ್ ಪ್ಲಾಂಟ್‌ಗೆ ಮಾತ್ರ ಯಾವುದೇ ಗಣಿಗಳನ್ನು ನೀಡಲಿಲ್ಲ. ಏಕೆಂದರೆ, ಇದನ್ನು ಖಾಸಗಿ ಕಾರ್ಪೊರೇಟ್‌ಗಳಿಗೆ ಮಾರಾಟ ಮಾಡುವ ಹುನ್ನಾರವನ್ನು ಸರ್ಕಾರ ಹೊಂದಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಹಿಜಾಬ್‌ಗೆ ಬೆಂಬಲ; ರಾಜ್ಯ ಸರ್ಕಾರವನ್ನು ‘ಸರ್ವಾಧಿಕಾರಿ’ ಎಂದ ಎನ್‌ಸಿಪಿ ಸಂಸದೆ ಸುಪ್ರಿಯಾ ಸುಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....