Homeಮುಖಪುಟ’ಜೈ ಶ್ರೀರಾಮ್‌’ ಹೇಳುವಂತೆ ಒತ್ತಾಯಿಸಿ ಮಣಿಪುರದ ಪಾದ್ರಿ ಮೇಲೆ ಹಲ್ಲೆ; ವಿಡಿಯೊ ವೈರಲ್‌

’ಜೈ ಶ್ರೀರಾಮ್‌’ ಹೇಳುವಂತೆ ಒತ್ತಾಯಿಸಿ ಮಣಿಪುರದ ಪಾದ್ರಿ ಮೇಲೆ ಹಲ್ಲೆ; ವಿಡಿಯೊ ವೈರಲ್‌

"ಹಲ್ಲೆ ನಡೆಸಿದವರನ್ನು ಠಾಣೆಗೆ ಕರೆದೊಯ್ಯದೇ ಹಲ್ಲೆಗೊಳಗಾದ ನನ್ನನ್ನು ಬಂಧಿಸಿ ಪೊಲೀಸರು ಕಿರುಕುಳ ನೀಡಿದ್ದಾರೆ" ಎಂದು ಪಾದ್ರಿ ಆರೋಪಿಸಿದ್ದಾರೆ

- Advertisement -
- Advertisement -

‘ಜೈ ಶ್ರೀರಾಮ್‌’ ಹೇಳುವಂತೆ ಒತ್ತಾಯಿಸಿ ಮಣಿಪುರದ ಪಾದ್ರಿಯೊಬ್ಬರಿಗೆ ಹಿಂದುತ್ವದ ಗುಂಪೊಂದು ಕಿರುಕುಳ ನೀಡಿರುವ ಘಟನೆ ಜಮ್ಮು ಮತ್ತು ಕಾಶ್ಮೀರದ ಕಥುವಾ ಜಿಲ್ಲೆಯಲ್ಲಿ ಕ್ರಿಸ್ಮಸ್‌‌ ಹಬ್ಬದಂದು ನಡೆದಿದ್ದು, ವಿಡಿಯೊ ವೈರಲ್ ಆಗಿದೆ.

‘ಜೈ ಶ್ರೀರಾಮ್‌’ ಹೇಳು ಎಂದು ಒತ್ತಾಯಿಸಿರುವ ಅಪರಿಚಿತ ಗುಂಪು, ತಮ್ಮ ಒತ್ತಾಯಕ್ಕೆ ಮಣಿಯದ ಪಾದ್ರಿಯ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದ್ದು ಡಿಸೆಂಬರ್‌ 30ರಂದು ವಿಡಿಯೊ ವ್ಯಾಪಕವಾಗಿ ವೈರಲ್‌ ಆಗಿದೆ. ಬಲಪಂಥೀಯ ಗುಂಪಿನ ಈ ದಬ್ಬಾಳಿಕೆಯ ವಿರುದ್ಧ ಪ್ರಜ್ಞಾವಂತ ನಾಗರಿಕರು ಬೇಸರ ವ್ಯಕ್ತಪಡಿಸಿದ್ದಾರೆ.

ವಾಟ್ಸಾಪ್ ಗ್ರೂಪ್‌ಗಳು ಹಾಗೂ ಟ್ವಿಟ್ಟರ್‌ ಖಾತೆಗಳಲ್ಲಿ ಹಂಚಿಕೊಳ್ಳಲಾಗಿರುವ ವಿಡಿಯೊ ಕ್ಲಿಪ್‌ನಲ್ಲಿ ಇಬ್ಬರು ವ್ಯಕ್ತಿಗಳು ಪಾದ್ರಿಯನ್ನು ‘ಜೈ ಶ್ರೀ ರಾಮ್’ ಎಂದು ಹೇಳುವಂತೆ ಕೇಳಿಕೊಳ್ಳುತ್ತಿದ್ದಾರೆ. ಪಾದ್ರಿಯು ಸದರಿ ಪ್ರದೇಶದಲ್ಲಿ ಜನರನ್ನು ಮತಾಂತರ ಮಾಡಲು ಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಆದರೆ ಮತಾಂತರ ಆರೋಪವನ್ನು ಪಾದ್ರಿ ನಿರಾಕರಿಸಿದ್ದಾರೆ. “ನೀವು ಎಲ್ಲಿಂದ ಬಂದಿದ್ದೀರಿ? ನಿನ್ನನ್ನು ಇಲ್ಲಿಗೆ ಕರೆತಂದವರು ಯಾರು?” ಎಂದು ಹಿಂದುತ್ವ ಗುಂಪು ಪದೇಪದೇ ವಿಚಾರಿಸಿದೆ.

ಭಯಭೀತರಾದ ಪಾದ್ರಿ, “ನಾನು ಭೇಟಿ ಮಾಡಲು ಬಂದಿದ್ದ ಕುಟುಂಬವು ಮೊದಲೇ ಕ್ರಿಶ್ಚಿಯನ್ನರಾಗಿದ್ದರು” ಎಂದು ಹೇಳಲು ಯತ್ನಿಸಿದರು. ಆದರೆ ಹಿಂದುತ್ವ ಗುಂಪು ‘ಜೈ ಶ್ರೀ ರಾಮ್’ ಎಂದು ಹೇಳುವಂತೆ ಹೆದರಿಸುವುದನ್ನು ಮುಂದುವರಿಸಿದರು. “ಜೈ ಶ್ರೀರಾಮ್‌” ಎಂದು ನೀವು ಯಾಕೆ ಹೇಳುವುದಿಲ್ಲ ಎಂದು ಅವರು ಕೇಳುತ್ತಲೇ ಇದ್ದರು. ಅಲ್ಲಿ ಸೇರಿದ್ದ ಜನಸಮೂಹವೂ ‘ಜೈ ಶ್ರೀ ರಾಮ್’ ಎಂದು ಕೂಗುವಂತೆ ಒತ್ತಾಯಿಸಿತು ಎನ್ನಲಾಗಿದೆ.

ಕುಕಿ ಬುಡಕಟ್ಟು ಜನಾಂಗಕ್ಕೆ ಸೇರಿದ ಪಾದ್ರಿ ಚುಂಗ್ಲೆನ್‌ಲಾಲ್ ಸಿಂಗ್ಸಿಟ್ ಅವರು ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯವರಾಗಿದ್ದಾರೆ. ಹಲ್ಲೆಗೊಳಗಾದ ಅವರನ್ನು ‘ದಿ ವೈರ್‌’ ಜಾಲತಾಣ ಸಂಪರ್ಕಿಸಿದ್ದು, “ಈ ಘಟನೆಯು ಕ್ರಿಸ್‌ಮಸ್‌ ದಿನದಂದು ಮಧ್ಯಾಹ್ನ 3 ಗಂಟೆ ವೇಳೆ ನಡೆಯಿತು. ನಾನು ಪ್ರಾರ್ಥನೆ ಮಾಡಲು ಕಥುವಾದಲ್ಲಿನ ಭಕ್ತರ ಮನೆಗೆ ಹೋಗಿದ್ದೆ. ನಾನು ಮನೆಗೆ ಹಿಂತಿರುಗಿ ನನ್ನ ಮೂರು ಮಕ್ಕಳಿಗೆ ಕೆಲವು ಉಡುಗೊರೆಗಳನ್ನು ಖರೀದಿಸಲು ಮಾರುಕಟ್ಟೆಗೆ ಹೋದೆ. ಆಗ ಇಬ್ಬರು ವ್ಯಕ್ತಿಗಳು ನನ್ನನ್ನು ತಡೆದು, ಆ ದಿನ ನಾನು ಭೇಟಿ ನೀಡಿದ ಕುಟುಂಬವನ್ನು ಮತಾಂತರ ಮಾಡಿದ್ದೀಯ ಎಂದು ಆರೋಪಿಸಲಾರಂಭಿಸಿದರು. ಜೈ ಶ್ರೀ ರಾಮ್ ಎಂದು ಹೇಳಲು ನನ್ನನ್ನು ಒತ್ತಾಯಿಸಿದರು” ಎಂದು ಪಾದ್ರಿ ತಿಳಿಸಿದ್ದಾರೆ.

“ಸ್ವಲ್ಪ ಸಮಯದ ನಂತರ ಅವರು ಯಾರಿಗೋ ಫೋನ್ ಮಾಡಿದರು. ಅವರ ಜೊತೆಗೆ ಇನ್ನೊಬ್ಬರು ಸೇರಿಕೊಂಡರು. ಅಷ್ಟರಲ್ಲಾಗಲೇ 100 ಜನರ ಗುಂಪು ಜಮಾಯಿಸಿತ್ತು. ಅವರಲ್ಲಿ ಕೆಲವರು ಧಾರ್ಮಿಕ ಮತಾಂತರ ಮಾಡಲಾಗಿದೆ ಎಂದು ಆರೋಪಿಸಿ ನನ್ನನ್ನು ಹೊಡೆಯುವುದಾಗಿ ಬೆದರಿಕೆ ಹಾಕಿದರು. ಮೂವರು ನನಗೆ ಕೆಲವು ಬಾರಿ ಕಪಾಳಕ್ಕೆ ಹೊಡೆದರು. ನನ್ನ ತುಟಿಗಳನ್ನು ಪದೇ ಪದೇ ಒದ್ದೆ ಮಾಡುತ್ತಿರುವುದನ್ನು ನೀವು ವಿಡಿಯೊದಲ್ಲಿ ನೋಡುತ್ತೀರಿ. ಅವರ ದಾಳಿಯಿಂದ ಹೆದರಿ ನನ್ನ ಬಾಯಿ ಮತ್ತು ಗಂಟಲು ಒಣಗಿ ಹೋಗಿತ್ತು. ನಾನು ಭಯದಲ್ಲಿದ್ದೆ. ಹೀಗಾಗಿ ಮಾತನಾಡಲು ಸಾಧ್ಯವಾಗಲಿಲ್ಲ” ಎಂದಿದ್ದಾರೆ.

ಹಲ್ಲೆ ನಡೆಸಿದ ಗುಂಪು ಸ್ಥಳೀಯ ಪೊಲೀಸರನ್ನು ಕರೆಸಿ, ‘ಈ ಪ್ರದೇಶದಲ್ಲಿ ಧಾರ್ಮಿಕ ಮತಾಂತರವನ್ನು ಪಾದ್ರಿ ನಡೆಸುತ್ತಿದ್ದಾರೆ’ ಎಂದು ಆರೋಪಿಸಿದರು. ನಾನು ಪೊಲೀಸರಿಗೆ ನಿಜವಾಗಿ ಏನಾಯಿತು ಎಂದು ಹೇಳಿದೆ. ಮತಾಂತರದ ಆರೋಪವನ್ನು ನಿರಾಕರಿಸಿದೆ. ಹಲ್ಲೆ ನಡೆಸಿದವರ ಬದಲು ನನ್ನನ್ನು ಪೊಲೀಸರು ಠಾಣೆಗೆ ಕರೆದೊಯ್ದು 24 ಗಂಟೆಗಳ ಕಾಲ ಲಾಕಪ್‌ನಲ್ಲಿ ಇರಿಸಿದರು. ನನ್ನನ್ನು ನಿಂದಿಸಿದರು. ಬಂಧನದ ವೇಳೆ ಥಳಿಸಿದರು. ಐದು ದಿನಗಳಲ್ಲಿ ನಾನು ಮಣಿಪುರಕ್ಕೆ ತೆರಳದಿದ್ದರೆ ನನ್ನ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಕಥುವಾ ಎಸ್‌ಎಸ್‌ಪಿ ಎಚ್ಚರಿಸಿದರು ಎಂದು ಪಾದ್ರಿ ದೂರಿದ್ದಾರೆ.

ಚುಂಗ್ಲೆನ್‌ಲಾಲ್ ಅವರು ಕಳೆದ ಮೂರು ವರ್ಷಗಳಿಂದ ಕಥುವಾದಲ್ಲಿ ನೆಲೆಸಿದ್ದಾರೆ ಮತ್ತು ಫ್ರೆಂಡ್ಸ್ ಆಫ್ ಮಿಷನರಿ ಪ್ರೇಯರ್ ಬ್ಯಾಂಡ್ ಎಂಬ ಕ್ರಿಶ್ಚಿಯನ್ ಸಂಘಟನೆಯಲ್ಲಿ ಪಾದ್ರಿಯಾಗಿ ಕೆಲಸ ಮಾಡುತ್ತಿದ್ದಾರೆ. “ನನ್ನ ಸಂಘಟನೆಯ ಸದಸ್ಯರು ನನ್ನನ್ನು ಬಂಧಿಸಲಾಗಿದೆಯೇ ಎಂದು ಕೇಳಿದರು. ನನ್ನ ಜಾಮೀನು ಪಡೆಯಲು ಎಫ್‌ಐಆರ್‌ ಪ್ರತಿಯನ್ನು ಕೇಳಿದ್ದರಿಂದ 24 ಗಂಟೆಗಳ ನಂತರ ನನ್ನನ್ನು ಬಿಡುಗಡೆ ಮಾಡಲಾಯಿತು” ಎಂದು ಪಾದ್ರಿ ತಿಳಿಸಿದ್ದಾರೆ.

ಕಥುವಾ ಎಸ್‌ಎಸ್‌ಪಿ ಅವರ ಆಪ್ತ ಸಹಾಯಕ ದಿ ವೈರ್‌ಗೆ ಪ್ರತಿಕ್ರಿಯಿಸಿದ್ದು, “ಮತಾಂತರದ ಆರೋಪದ ಮೇಲೆ ಯಾವುದೇ ಪಾದ್ರಿಯನ್ನು ಬಂಧಿಸಿಲ್ಲ” ಎಂದಿದ್ದಾರೆ. “ಹಿರಿಯ ಅಧಿಕಾರಿ ಕಚೇರಿಯಲ್ಲಿಲ್ಲ” ಎಂದು ಹೇಳಿರುವ ಅವರು, “ಕಥುವಾದಲ್ಲಿ ಇಂತಹ ಯಾವುದೇ ಪ್ರಕರಣ ನಡೆದಿರುವ ಬಗ್ಗೆ ನಮಗೆ ಮಾಹಿತಿ ಇಲ್ಲ” ಎಂದಿದ್ದಾರೆ.


ಇದನ್ನೂ ಓದಿರಿ: ಹಂಸಲೇಖರ ಸಾಂಸ್ಕೃತಿಕ ಪ್ರತಿರೋಧಕ್ಕೆ ಸ್ವಾಗತಾರ್ಹ ಜನಸ್ಪಂದನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...