Homeಮುಖಪುಟ’ಜೈ ಶ್ರೀರಾಮ್‌’ ಹೇಳುವಂತೆ ಒತ್ತಾಯಿಸಿ ಮಣಿಪುರದ ಪಾದ್ರಿ ಮೇಲೆ ಹಲ್ಲೆ; ವಿಡಿಯೊ ವೈರಲ್‌

’ಜೈ ಶ್ರೀರಾಮ್‌’ ಹೇಳುವಂತೆ ಒತ್ತಾಯಿಸಿ ಮಣಿಪುರದ ಪಾದ್ರಿ ಮೇಲೆ ಹಲ್ಲೆ; ವಿಡಿಯೊ ವೈರಲ್‌

"ಹಲ್ಲೆ ನಡೆಸಿದವರನ್ನು ಠಾಣೆಗೆ ಕರೆದೊಯ್ಯದೇ ಹಲ್ಲೆಗೊಳಗಾದ ನನ್ನನ್ನು ಬಂಧಿಸಿ ಪೊಲೀಸರು ಕಿರುಕುಳ ನೀಡಿದ್ದಾರೆ" ಎಂದು ಪಾದ್ರಿ ಆರೋಪಿಸಿದ್ದಾರೆ

- Advertisement -
- Advertisement -

‘ಜೈ ಶ್ರೀರಾಮ್‌’ ಹೇಳುವಂತೆ ಒತ್ತಾಯಿಸಿ ಮಣಿಪುರದ ಪಾದ್ರಿಯೊಬ್ಬರಿಗೆ ಹಿಂದುತ್ವದ ಗುಂಪೊಂದು ಕಿರುಕುಳ ನೀಡಿರುವ ಘಟನೆ ಜಮ್ಮು ಮತ್ತು ಕಾಶ್ಮೀರದ ಕಥುವಾ ಜಿಲ್ಲೆಯಲ್ಲಿ ಕ್ರಿಸ್ಮಸ್‌‌ ಹಬ್ಬದಂದು ನಡೆದಿದ್ದು, ವಿಡಿಯೊ ವೈರಲ್ ಆಗಿದೆ.

‘ಜೈ ಶ್ರೀರಾಮ್‌’ ಹೇಳು ಎಂದು ಒತ್ತಾಯಿಸಿರುವ ಅಪರಿಚಿತ ಗುಂಪು, ತಮ್ಮ ಒತ್ತಾಯಕ್ಕೆ ಮಣಿಯದ ಪಾದ್ರಿಯ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದ್ದು ಡಿಸೆಂಬರ್‌ 30ರಂದು ವಿಡಿಯೊ ವ್ಯಾಪಕವಾಗಿ ವೈರಲ್‌ ಆಗಿದೆ. ಬಲಪಂಥೀಯ ಗುಂಪಿನ ಈ ದಬ್ಬಾಳಿಕೆಯ ವಿರುದ್ಧ ಪ್ರಜ್ಞಾವಂತ ನಾಗರಿಕರು ಬೇಸರ ವ್ಯಕ್ತಪಡಿಸಿದ್ದಾರೆ.

ವಾಟ್ಸಾಪ್ ಗ್ರೂಪ್‌ಗಳು ಹಾಗೂ ಟ್ವಿಟ್ಟರ್‌ ಖಾತೆಗಳಲ್ಲಿ ಹಂಚಿಕೊಳ್ಳಲಾಗಿರುವ ವಿಡಿಯೊ ಕ್ಲಿಪ್‌ನಲ್ಲಿ ಇಬ್ಬರು ವ್ಯಕ್ತಿಗಳು ಪಾದ್ರಿಯನ್ನು ‘ಜೈ ಶ್ರೀ ರಾಮ್’ ಎಂದು ಹೇಳುವಂತೆ ಕೇಳಿಕೊಳ್ಳುತ್ತಿದ್ದಾರೆ. ಪಾದ್ರಿಯು ಸದರಿ ಪ್ರದೇಶದಲ್ಲಿ ಜನರನ್ನು ಮತಾಂತರ ಮಾಡಲು ಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಆದರೆ ಮತಾಂತರ ಆರೋಪವನ್ನು ಪಾದ್ರಿ ನಿರಾಕರಿಸಿದ್ದಾರೆ. “ನೀವು ಎಲ್ಲಿಂದ ಬಂದಿದ್ದೀರಿ? ನಿನ್ನನ್ನು ಇಲ್ಲಿಗೆ ಕರೆತಂದವರು ಯಾರು?” ಎಂದು ಹಿಂದುತ್ವ ಗುಂಪು ಪದೇಪದೇ ವಿಚಾರಿಸಿದೆ.

ಭಯಭೀತರಾದ ಪಾದ್ರಿ, “ನಾನು ಭೇಟಿ ಮಾಡಲು ಬಂದಿದ್ದ ಕುಟುಂಬವು ಮೊದಲೇ ಕ್ರಿಶ್ಚಿಯನ್ನರಾಗಿದ್ದರು” ಎಂದು ಹೇಳಲು ಯತ್ನಿಸಿದರು. ಆದರೆ ಹಿಂದುತ್ವ ಗುಂಪು ‘ಜೈ ಶ್ರೀ ರಾಮ್’ ಎಂದು ಹೇಳುವಂತೆ ಹೆದರಿಸುವುದನ್ನು ಮುಂದುವರಿಸಿದರು. “ಜೈ ಶ್ರೀರಾಮ್‌” ಎಂದು ನೀವು ಯಾಕೆ ಹೇಳುವುದಿಲ್ಲ ಎಂದು ಅವರು ಕೇಳುತ್ತಲೇ ಇದ್ದರು. ಅಲ್ಲಿ ಸೇರಿದ್ದ ಜನಸಮೂಹವೂ ‘ಜೈ ಶ್ರೀ ರಾಮ್’ ಎಂದು ಕೂಗುವಂತೆ ಒತ್ತಾಯಿಸಿತು ಎನ್ನಲಾಗಿದೆ.

ಕುಕಿ ಬುಡಕಟ್ಟು ಜನಾಂಗಕ್ಕೆ ಸೇರಿದ ಪಾದ್ರಿ ಚುಂಗ್ಲೆನ್‌ಲಾಲ್ ಸಿಂಗ್ಸಿಟ್ ಅವರು ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯವರಾಗಿದ್ದಾರೆ. ಹಲ್ಲೆಗೊಳಗಾದ ಅವರನ್ನು ‘ದಿ ವೈರ್‌’ ಜಾಲತಾಣ ಸಂಪರ್ಕಿಸಿದ್ದು, “ಈ ಘಟನೆಯು ಕ್ರಿಸ್‌ಮಸ್‌ ದಿನದಂದು ಮಧ್ಯಾಹ್ನ 3 ಗಂಟೆ ವೇಳೆ ನಡೆಯಿತು. ನಾನು ಪ್ರಾರ್ಥನೆ ಮಾಡಲು ಕಥುವಾದಲ್ಲಿನ ಭಕ್ತರ ಮನೆಗೆ ಹೋಗಿದ್ದೆ. ನಾನು ಮನೆಗೆ ಹಿಂತಿರುಗಿ ನನ್ನ ಮೂರು ಮಕ್ಕಳಿಗೆ ಕೆಲವು ಉಡುಗೊರೆಗಳನ್ನು ಖರೀದಿಸಲು ಮಾರುಕಟ್ಟೆಗೆ ಹೋದೆ. ಆಗ ಇಬ್ಬರು ವ್ಯಕ್ತಿಗಳು ನನ್ನನ್ನು ತಡೆದು, ಆ ದಿನ ನಾನು ಭೇಟಿ ನೀಡಿದ ಕುಟುಂಬವನ್ನು ಮತಾಂತರ ಮಾಡಿದ್ದೀಯ ಎಂದು ಆರೋಪಿಸಲಾರಂಭಿಸಿದರು. ಜೈ ಶ್ರೀ ರಾಮ್ ಎಂದು ಹೇಳಲು ನನ್ನನ್ನು ಒತ್ತಾಯಿಸಿದರು” ಎಂದು ಪಾದ್ರಿ ತಿಳಿಸಿದ್ದಾರೆ.

“ಸ್ವಲ್ಪ ಸಮಯದ ನಂತರ ಅವರು ಯಾರಿಗೋ ಫೋನ್ ಮಾಡಿದರು. ಅವರ ಜೊತೆಗೆ ಇನ್ನೊಬ್ಬರು ಸೇರಿಕೊಂಡರು. ಅಷ್ಟರಲ್ಲಾಗಲೇ 100 ಜನರ ಗುಂಪು ಜಮಾಯಿಸಿತ್ತು. ಅವರಲ್ಲಿ ಕೆಲವರು ಧಾರ್ಮಿಕ ಮತಾಂತರ ಮಾಡಲಾಗಿದೆ ಎಂದು ಆರೋಪಿಸಿ ನನ್ನನ್ನು ಹೊಡೆಯುವುದಾಗಿ ಬೆದರಿಕೆ ಹಾಕಿದರು. ಮೂವರು ನನಗೆ ಕೆಲವು ಬಾರಿ ಕಪಾಳಕ್ಕೆ ಹೊಡೆದರು. ನನ್ನ ತುಟಿಗಳನ್ನು ಪದೇ ಪದೇ ಒದ್ದೆ ಮಾಡುತ್ತಿರುವುದನ್ನು ನೀವು ವಿಡಿಯೊದಲ್ಲಿ ನೋಡುತ್ತೀರಿ. ಅವರ ದಾಳಿಯಿಂದ ಹೆದರಿ ನನ್ನ ಬಾಯಿ ಮತ್ತು ಗಂಟಲು ಒಣಗಿ ಹೋಗಿತ್ತು. ನಾನು ಭಯದಲ್ಲಿದ್ದೆ. ಹೀಗಾಗಿ ಮಾತನಾಡಲು ಸಾಧ್ಯವಾಗಲಿಲ್ಲ” ಎಂದಿದ್ದಾರೆ.

ಹಲ್ಲೆ ನಡೆಸಿದ ಗುಂಪು ಸ್ಥಳೀಯ ಪೊಲೀಸರನ್ನು ಕರೆಸಿ, ‘ಈ ಪ್ರದೇಶದಲ್ಲಿ ಧಾರ್ಮಿಕ ಮತಾಂತರವನ್ನು ಪಾದ್ರಿ ನಡೆಸುತ್ತಿದ್ದಾರೆ’ ಎಂದು ಆರೋಪಿಸಿದರು. ನಾನು ಪೊಲೀಸರಿಗೆ ನಿಜವಾಗಿ ಏನಾಯಿತು ಎಂದು ಹೇಳಿದೆ. ಮತಾಂತರದ ಆರೋಪವನ್ನು ನಿರಾಕರಿಸಿದೆ. ಹಲ್ಲೆ ನಡೆಸಿದವರ ಬದಲು ನನ್ನನ್ನು ಪೊಲೀಸರು ಠಾಣೆಗೆ ಕರೆದೊಯ್ದು 24 ಗಂಟೆಗಳ ಕಾಲ ಲಾಕಪ್‌ನಲ್ಲಿ ಇರಿಸಿದರು. ನನ್ನನ್ನು ನಿಂದಿಸಿದರು. ಬಂಧನದ ವೇಳೆ ಥಳಿಸಿದರು. ಐದು ದಿನಗಳಲ್ಲಿ ನಾನು ಮಣಿಪುರಕ್ಕೆ ತೆರಳದಿದ್ದರೆ ನನ್ನ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಕಥುವಾ ಎಸ್‌ಎಸ್‌ಪಿ ಎಚ್ಚರಿಸಿದರು ಎಂದು ಪಾದ್ರಿ ದೂರಿದ್ದಾರೆ.

ಚುಂಗ್ಲೆನ್‌ಲಾಲ್ ಅವರು ಕಳೆದ ಮೂರು ವರ್ಷಗಳಿಂದ ಕಥುವಾದಲ್ಲಿ ನೆಲೆಸಿದ್ದಾರೆ ಮತ್ತು ಫ್ರೆಂಡ್ಸ್ ಆಫ್ ಮಿಷನರಿ ಪ್ರೇಯರ್ ಬ್ಯಾಂಡ್ ಎಂಬ ಕ್ರಿಶ್ಚಿಯನ್ ಸಂಘಟನೆಯಲ್ಲಿ ಪಾದ್ರಿಯಾಗಿ ಕೆಲಸ ಮಾಡುತ್ತಿದ್ದಾರೆ. “ನನ್ನ ಸಂಘಟನೆಯ ಸದಸ್ಯರು ನನ್ನನ್ನು ಬಂಧಿಸಲಾಗಿದೆಯೇ ಎಂದು ಕೇಳಿದರು. ನನ್ನ ಜಾಮೀನು ಪಡೆಯಲು ಎಫ್‌ಐಆರ್‌ ಪ್ರತಿಯನ್ನು ಕೇಳಿದ್ದರಿಂದ 24 ಗಂಟೆಗಳ ನಂತರ ನನ್ನನ್ನು ಬಿಡುಗಡೆ ಮಾಡಲಾಯಿತು” ಎಂದು ಪಾದ್ರಿ ತಿಳಿಸಿದ್ದಾರೆ.

ಕಥುವಾ ಎಸ್‌ಎಸ್‌ಪಿ ಅವರ ಆಪ್ತ ಸಹಾಯಕ ದಿ ವೈರ್‌ಗೆ ಪ್ರತಿಕ್ರಿಯಿಸಿದ್ದು, “ಮತಾಂತರದ ಆರೋಪದ ಮೇಲೆ ಯಾವುದೇ ಪಾದ್ರಿಯನ್ನು ಬಂಧಿಸಿಲ್ಲ” ಎಂದಿದ್ದಾರೆ. “ಹಿರಿಯ ಅಧಿಕಾರಿ ಕಚೇರಿಯಲ್ಲಿಲ್ಲ” ಎಂದು ಹೇಳಿರುವ ಅವರು, “ಕಥುವಾದಲ್ಲಿ ಇಂತಹ ಯಾವುದೇ ಪ್ರಕರಣ ನಡೆದಿರುವ ಬಗ್ಗೆ ನಮಗೆ ಮಾಹಿತಿ ಇಲ್ಲ” ಎಂದಿದ್ದಾರೆ.


ಇದನ್ನೂ ಓದಿರಿ: ಹಂಸಲೇಖರ ಸಾಂಸ್ಕೃತಿಕ ಪ್ರತಿರೋಧಕ್ಕೆ ಸ್ವಾಗತಾರ್ಹ ಜನಸ್ಪಂದನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...