Homeಮುಖಪುಟ’ಜೈ ಶ್ರೀರಾಮ್‌’ ಹೇಳುವಂತೆ ಒತ್ತಾಯಿಸಿ ಮಣಿಪುರದ ಪಾದ್ರಿ ಮೇಲೆ ಹಲ್ಲೆ; ವಿಡಿಯೊ ವೈರಲ್‌

’ಜೈ ಶ್ರೀರಾಮ್‌’ ಹೇಳುವಂತೆ ಒತ್ತಾಯಿಸಿ ಮಣಿಪುರದ ಪಾದ್ರಿ ಮೇಲೆ ಹಲ್ಲೆ; ವಿಡಿಯೊ ವೈರಲ್‌

"ಹಲ್ಲೆ ನಡೆಸಿದವರನ್ನು ಠಾಣೆಗೆ ಕರೆದೊಯ್ಯದೇ ಹಲ್ಲೆಗೊಳಗಾದ ನನ್ನನ್ನು ಬಂಧಿಸಿ ಪೊಲೀಸರು ಕಿರುಕುಳ ನೀಡಿದ್ದಾರೆ" ಎಂದು ಪಾದ್ರಿ ಆರೋಪಿಸಿದ್ದಾರೆ

- Advertisement -
- Advertisement -

‘ಜೈ ಶ್ರೀರಾಮ್‌’ ಹೇಳುವಂತೆ ಒತ್ತಾಯಿಸಿ ಮಣಿಪುರದ ಪಾದ್ರಿಯೊಬ್ಬರಿಗೆ ಹಿಂದುತ್ವದ ಗುಂಪೊಂದು ಕಿರುಕುಳ ನೀಡಿರುವ ಘಟನೆ ಜಮ್ಮು ಮತ್ತು ಕಾಶ್ಮೀರದ ಕಥುವಾ ಜಿಲ್ಲೆಯಲ್ಲಿ ಕ್ರಿಸ್ಮಸ್‌‌ ಹಬ್ಬದಂದು ನಡೆದಿದ್ದು, ವಿಡಿಯೊ ವೈರಲ್ ಆಗಿದೆ.

‘ಜೈ ಶ್ರೀರಾಮ್‌’ ಹೇಳು ಎಂದು ಒತ್ತಾಯಿಸಿರುವ ಅಪರಿಚಿತ ಗುಂಪು, ತಮ್ಮ ಒತ್ತಾಯಕ್ಕೆ ಮಣಿಯದ ಪಾದ್ರಿಯ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದ್ದು ಡಿಸೆಂಬರ್‌ 30ರಂದು ವಿಡಿಯೊ ವ್ಯಾಪಕವಾಗಿ ವೈರಲ್‌ ಆಗಿದೆ. ಬಲಪಂಥೀಯ ಗುಂಪಿನ ಈ ದಬ್ಬಾಳಿಕೆಯ ವಿರುದ್ಧ ಪ್ರಜ್ಞಾವಂತ ನಾಗರಿಕರು ಬೇಸರ ವ್ಯಕ್ತಪಡಿಸಿದ್ದಾರೆ.

ವಾಟ್ಸಾಪ್ ಗ್ರೂಪ್‌ಗಳು ಹಾಗೂ ಟ್ವಿಟ್ಟರ್‌ ಖಾತೆಗಳಲ್ಲಿ ಹಂಚಿಕೊಳ್ಳಲಾಗಿರುವ ವಿಡಿಯೊ ಕ್ಲಿಪ್‌ನಲ್ಲಿ ಇಬ್ಬರು ವ್ಯಕ್ತಿಗಳು ಪಾದ್ರಿಯನ್ನು ‘ಜೈ ಶ್ರೀ ರಾಮ್’ ಎಂದು ಹೇಳುವಂತೆ ಕೇಳಿಕೊಳ್ಳುತ್ತಿದ್ದಾರೆ. ಪಾದ್ರಿಯು ಸದರಿ ಪ್ರದೇಶದಲ್ಲಿ ಜನರನ್ನು ಮತಾಂತರ ಮಾಡಲು ಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಆದರೆ ಮತಾಂತರ ಆರೋಪವನ್ನು ಪಾದ್ರಿ ನಿರಾಕರಿಸಿದ್ದಾರೆ. “ನೀವು ಎಲ್ಲಿಂದ ಬಂದಿದ್ದೀರಿ? ನಿನ್ನನ್ನು ಇಲ್ಲಿಗೆ ಕರೆತಂದವರು ಯಾರು?” ಎಂದು ಹಿಂದುತ್ವ ಗುಂಪು ಪದೇಪದೇ ವಿಚಾರಿಸಿದೆ.

ಭಯಭೀತರಾದ ಪಾದ್ರಿ, “ನಾನು ಭೇಟಿ ಮಾಡಲು ಬಂದಿದ್ದ ಕುಟುಂಬವು ಮೊದಲೇ ಕ್ರಿಶ್ಚಿಯನ್ನರಾಗಿದ್ದರು” ಎಂದು ಹೇಳಲು ಯತ್ನಿಸಿದರು. ಆದರೆ ಹಿಂದುತ್ವ ಗುಂಪು ‘ಜೈ ಶ್ರೀ ರಾಮ್’ ಎಂದು ಹೇಳುವಂತೆ ಹೆದರಿಸುವುದನ್ನು ಮುಂದುವರಿಸಿದರು. “ಜೈ ಶ್ರೀರಾಮ್‌” ಎಂದು ನೀವು ಯಾಕೆ ಹೇಳುವುದಿಲ್ಲ ಎಂದು ಅವರು ಕೇಳುತ್ತಲೇ ಇದ್ದರು. ಅಲ್ಲಿ ಸೇರಿದ್ದ ಜನಸಮೂಹವೂ ‘ಜೈ ಶ್ರೀ ರಾಮ್’ ಎಂದು ಕೂಗುವಂತೆ ಒತ್ತಾಯಿಸಿತು ಎನ್ನಲಾಗಿದೆ.

ಕುಕಿ ಬುಡಕಟ್ಟು ಜನಾಂಗಕ್ಕೆ ಸೇರಿದ ಪಾದ್ರಿ ಚುಂಗ್ಲೆನ್‌ಲಾಲ್ ಸಿಂಗ್ಸಿಟ್ ಅವರು ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯವರಾಗಿದ್ದಾರೆ. ಹಲ್ಲೆಗೊಳಗಾದ ಅವರನ್ನು ‘ದಿ ವೈರ್‌’ ಜಾಲತಾಣ ಸಂಪರ್ಕಿಸಿದ್ದು, “ಈ ಘಟನೆಯು ಕ್ರಿಸ್‌ಮಸ್‌ ದಿನದಂದು ಮಧ್ಯಾಹ್ನ 3 ಗಂಟೆ ವೇಳೆ ನಡೆಯಿತು. ನಾನು ಪ್ರಾರ್ಥನೆ ಮಾಡಲು ಕಥುವಾದಲ್ಲಿನ ಭಕ್ತರ ಮನೆಗೆ ಹೋಗಿದ್ದೆ. ನಾನು ಮನೆಗೆ ಹಿಂತಿರುಗಿ ನನ್ನ ಮೂರು ಮಕ್ಕಳಿಗೆ ಕೆಲವು ಉಡುಗೊರೆಗಳನ್ನು ಖರೀದಿಸಲು ಮಾರುಕಟ್ಟೆಗೆ ಹೋದೆ. ಆಗ ಇಬ್ಬರು ವ್ಯಕ್ತಿಗಳು ನನ್ನನ್ನು ತಡೆದು, ಆ ದಿನ ನಾನು ಭೇಟಿ ನೀಡಿದ ಕುಟುಂಬವನ್ನು ಮತಾಂತರ ಮಾಡಿದ್ದೀಯ ಎಂದು ಆರೋಪಿಸಲಾರಂಭಿಸಿದರು. ಜೈ ಶ್ರೀ ರಾಮ್ ಎಂದು ಹೇಳಲು ನನ್ನನ್ನು ಒತ್ತಾಯಿಸಿದರು” ಎಂದು ಪಾದ್ರಿ ತಿಳಿಸಿದ್ದಾರೆ.

“ಸ್ವಲ್ಪ ಸಮಯದ ನಂತರ ಅವರು ಯಾರಿಗೋ ಫೋನ್ ಮಾಡಿದರು. ಅವರ ಜೊತೆಗೆ ಇನ್ನೊಬ್ಬರು ಸೇರಿಕೊಂಡರು. ಅಷ್ಟರಲ್ಲಾಗಲೇ 100 ಜನರ ಗುಂಪು ಜಮಾಯಿಸಿತ್ತು. ಅವರಲ್ಲಿ ಕೆಲವರು ಧಾರ್ಮಿಕ ಮತಾಂತರ ಮಾಡಲಾಗಿದೆ ಎಂದು ಆರೋಪಿಸಿ ನನ್ನನ್ನು ಹೊಡೆಯುವುದಾಗಿ ಬೆದರಿಕೆ ಹಾಕಿದರು. ಮೂವರು ನನಗೆ ಕೆಲವು ಬಾರಿ ಕಪಾಳಕ್ಕೆ ಹೊಡೆದರು. ನನ್ನ ತುಟಿಗಳನ್ನು ಪದೇ ಪದೇ ಒದ್ದೆ ಮಾಡುತ್ತಿರುವುದನ್ನು ನೀವು ವಿಡಿಯೊದಲ್ಲಿ ನೋಡುತ್ತೀರಿ. ಅವರ ದಾಳಿಯಿಂದ ಹೆದರಿ ನನ್ನ ಬಾಯಿ ಮತ್ತು ಗಂಟಲು ಒಣಗಿ ಹೋಗಿತ್ತು. ನಾನು ಭಯದಲ್ಲಿದ್ದೆ. ಹೀಗಾಗಿ ಮಾತನಾಡಲು ಸಾಧ್ಯವಾಗಲಿಲ್ಲ” ಎಂದಿದ್ದಾರೆ.

ಹಲ್ಲೆ ನಡೆಸಿದ ಗುಂಪು ಸ್ಥಳೀಯ ಪೊಲೀಸರನ್ನು ಕರೆಸಿ, ‘ಈ ಪ್ರದೇಶದಲ್ಲಿ ಧಾರ್ಮಿಕ ಮತಾಂತರವನ್ನು ಪಾದ್ರಿ ನಡೆಸುತ್ತಿದ್ದಾರೆ’ ಎಂದು ಆರೋಪಿಸಿದರು. ನಾನು ಪೊಲೀಸರಿಗೆ ನಿಜವಾಗಿ ಏನಾಯಿತು ಎಂದು ಹೇಳಿದೆ. ಮತಾಂತರದ ಆರೋಪವನ್ನು ನಿರಾಕರಿಸಿದೆ. ಹಲ್ಲೆ ನಡೆಸಿದವರ ಬದಲು ನನ್ನನ್ನು ಪೊಲೀಸರು ಠಾಣೆಗೆ ಕರೆದೊಯ್ದು 24 ಗಂಟೆಗಳ ಕಾಲ ಲಾಕಪ್‌ನಲ್ಲಿ ಇರಿಸಿದರು. ನನ್ನನ್ನು ನಿಂದಿಸಿದರು. ಬಂಧನದ ವೇಳೆ ಥಳಿಸಿದರು. ಐದು ದಿನಗಳಲ್ಲಿ ನಾನು ಮಣಿಪುರಕ್ಕೆ ತೆರಳದಿದ್ದರೆ ನನ್ನ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಕಥುವಾ ಎಸ್‌ಎಸ್‌ಪಿ ಎಚ್ಚರಿಸಿದರು ಎಂದು ಪಾದ್ರಿ ದೂರಿದ್ದಾರೆ.

ಚುಂಗ್ಲೆನ್‌ಲಾಲ್ ಅವರು ಕಳೆದ ಮೂರು ವರ್ಷಗಳಿಂದ ಕಥುವಾದಲ್ಲಿ ನೆಲೆಸಿದ್ದಾರೆ ಮತ್ತು ಫ್ರೆಂಡ್ಸ್ ಆಫ್ ಮಿಷನರಿ ಪ್ರೇಯರ್ ಬ್ಯಾಂಡ್ ಎಂಬ ಕ್ರಿಶ್ಚಿಯನ್ ಸಂಘಟನೆಯಲ್ಲಿ ಪಾದ್ರಿಯಾಗಿ ಕೆಲಸ ಮಾಡುತ್ತಿದ್ದಾರೆ. “ನನ್ನ ಸಂಘಟನೆಯ ಸದಸ್ಯರು ನನ್ನನ್ನು ಬಂಧಿಸಲಾಗಿದೆಯೇ ಎಂದು ಕೇಳಿದರು. ನನ್ನ ಜಾಮೀನು ಪಡೆಯಲು ಎಫ್‌ಐಆರ್‌ ಪ್ರತಿಯನ್ನು ಕೇಳಿದ್ದರಿಂದ 24 ಗಂಟೆಗಳ ನಂತರ ನನ್ನನ್ನು ಬಿಡುಗಡೆ ಮಾಡಲಾಯಿತು” ಎಂದು ಪಾದ್ರಿ ತಿಳಿಸಿದ್ದಾರೆ.

ಕಥುವಾ ಎಸ್‌ಎಸ್‌ಪಿ ಅವರ ಆಪ್ತ ಸಹಾಯಕ ದಿ ವೈರ್‌ಗೆ ಪ್ರತಿಕ್ರಿಯಿಸಿದ್ದು, “ಮತಾಂತರದ ಆರೋಪದ ಮೇಲೆ ಯಾವುದೇ ಪಾದ್ರಿಯನ್ನು ಬಂಧಿಸಿಲ್ಲ” ಎಂದಿದ್ದಾರೆ. “ಹಿರಿಯ ಅಧಿಕಾರಿ ಕಚೇರಿಯಲ್ಲಿಲ್ಲ” ಎಂದು ಹೇಳಿರುವ ಅವರು, “ಕಥುವಾದಲ್ಲಿ ಇಂತಹ ಯಾವುದೇ ಪ್ರಕರಣ ನಡೆದಿರುವ ಬಗ್ಗೆ ನಮಗೆ ಮಾಹಿತಿ ಇಲ್ಲ” ಎಂದಿದ್ದಾರೆ.


ಇದನ್ನೂ ಓದಿರಿ: ಹಂಸಲೇಖರ ಸಾಂಸ್ಕೃತಿಕ ಪ್ರತಿರೋಧಕ್ಕೆ ಸ್ವಾಗತಾರ್ಹ ಜನಸ್ಪಂದನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...