Homeಮುಖಪುಟ’ಜೈ ಶ್ರೀರಾಮ್‌’ ಹೇಳುವಂತೆ ಒತ್ತಾಯಿಸಿ ಮಣಿಪುರದ ಪಾದ್ರಿ ಮೇಲೆ ಹಲ್ಲೆ; ವಿಡಿಯೊ ವೈರಲ್‌

’ಜೈ ಶ್ರೀರಾಮ್‌’ ಹೇಳುವಂತೆ ಒತ್ತಾಯಿಸಿ ಮಣಿಪುರದ ಪಾದ್ರಿ ಮೇಲೆ ಹಲ್ಲೆ; ವಿಡಿಯೊ ವೈರಲ್‌

"ಹಲ್ಲೆ ನಡೆಸಿದವರನ್ನು ಠಾಣೆಗೆ ಕರೆದೊಯ್ಯದೇ ಹಲ್ಲೆಗೊಳಗಾದ ನನ್ನನ್ನು ಬಂಧಿಸಿ ಪೊಲೀಸರು ಕಿರುಕುಳ ನೀಡಿದ್ದಾರೆ" ಎಂದು ಪಾದ್ರಿ ಆರೋಪಿಸಿದ್ದಾರೆ

- Advertisement -
- Advertisement -

‘ಜೈ ಶ್ರೀರಾಮ್‌’ ಹೇಳುವಂತೆ ಒತ್ತಾಯಿಸಿ ಮಣಿಪುರದ ಪಾದ್ರಿಯೊಬ್ಬರಿಗೆ ಹಿಂದುತ್ವದ ಗುಂಪೊಂದು ಕಿರುಕುಳ ನೀಡಿರುವ ಘಟನೆ ಜಮ್ಮು ಮತ್ತು ಕಾಶ್ಮೀರದ ಕಥುವಾ ಜಿಲ್ಲೆಯಲ್ಲಿ ಕ್ರಿಸ್ಮಸ್‌‌ ಹಬ್ಬದಂದು ನಡೆದಿದ್ದು, ವಿಡಿಯೊ ವೈರಲ್ ಆಗಿದೆ.

‘ಜೈ ಶ್ರೀರಾಮ್‌’ ಹೇಳು ಎಂದು ಒತ್ತಾಯಿಸಿರುವ ಅಪರಿಚಿತ ಗುಂಪು, ತಮ್ಮ ಒತ್ತಾಯಕ್ಕೆ ಮಣಿಯದ ಪಾದ್ರಿಯ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದ್ದು ಡಿಸೆಂಬರ್‌ 30ರಂದು ವಿಡಿಯೊ ವ್ಯಾಪಕವಾಗಿ ವೈರಲ್‌ ಆಗಿದೆ. ಬಲಪಂಥೀಯ ಗುಂಪಿನ ಈ ದಬ್ಬಾಳಿಕೆಯ ವಿರುದ್ಧ ಪ್ರಜ್ಞಾವಂತ ನಾಗರಿಕರು ಬೇಸರ ವ್ಯಕ್ತಪಡಿಸಿದ್ದಾರೆ.

ವಾಟ್ಸಾಪ್ ಗ್ರೂಪ್‌ಗಳು ಹಾಗೂ ಟ್ವಿಟ್ಟರ್‌ ಖಾತೆಗಳಲ್ಲಿ ಹಂಚಿಕೊಳ್ಳಲಾಗಿರುವ ವಿಡಿಯೊ ಕ್ಲಿಪ್‌ನಲ್ಲಿ ಇಬ್ಬರು ವ್ಯಕ್ತಿಗಳು ಪಾದ್ರಿಯನ್ನು ‘ಜೈ ಶ್ರೀ ರಾಮ್’ ಎಂದು ಹೇಳುವಂತೆ ಕೇಳಿಕೊಳ್ಳುತ್ತಿದ್ದಾರೆ. ಪಾದ್ರಿಯು ಸದರಿ ಪ್ರದೇಶದಲ್ಲಿ ಜನರನ್ನು ಮತಾಂತರ ಮಾಡಲು ಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಆದರೆ ಮತಾಂತರ ಆರೋಪವನ್ನು ಪಾದ್ರಿ ನಿರಾಕರಿಸಿದ್ದಾರೆ. “ನೀವು ಎಲ್ಲಿಂದ ಬಂದಿದ್ದೀರಿ? ನಿನ್ನನ್ನು ಇಲ್ಲಿಗೆ ಕರೆತಂದವರು ಯಾರು?” ಎಂದು ಹಿಂದುತ್ವ ಗುಂಪು ಪದೇಪದೇ ವಿಚಾರಿಸಿದೆ.

ಭಯಭೀತರಾದ ಪಾದ್ರಿ, “ನಾನು ಭೇಟಿ ಮಾಡಲು ಬಂದಿದ್ದ ಕುಟುಂಬವು ಮೊದಲೇ ಕ್ರಿಶ್ಚಿಯನ್ನರಾಗಿದ್ದರು” ಎಂದು ಹೇಳಲು ಯತ್ನಿಸಿದರು. ಆದರೆ ಹಿಂದುತ್ವ ಗುಂಪು ‘ಜೈ ಶ್ರೀ ರಾಮ್’ ಎಂದು ಹೇಳುವಂತೆ ಹೆದರಿಸುವುದನ್ನು ಮುಂದುವರಿಸಿದರು. “ಜೈ ಶ್ರೀರಾಮ್‌” ಎಂದು ನೀವು ಯಾಕೆ ಹೇಳುವುದಿಲ್ಲ ಎಂದು ಅವರು ಕೇಳುತ್ತಲೇ ಇದ್ದರು. ಅಲ್ಲಿ ಸೇರಿದ್ದ ಜನಸಮೂಹವೂ ‘ಜೈ ಶ್ರೀ ರಾಮ್’ ಎಂದು ಕೂಗುವಂತೆ ಒತ್ತಾಯಿಸಿತು ಎನ್ನಲಾಗಿದೆ.

ಕುಕಿ ಬುಡಕಟ್ಟು ಜನಾಂಗಕ್ಕೆ ಸೇರಿದ ಪಾದ್ರಿ ಚುಂಗ್ಲೆನ್‌ಲಾಲ್ ಸಿಂಗ್ಸಿಟ್ ಅವರು ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯವರಾಗಿದ್ದಾರೆ. ಹಲ್ಲೆಗೊಳಗಾದ ಅವರನ್ನು ‘ದಿ ವೈರ್‌’ ಜಾಲತಾಣ ಸಂಪರ್ಕಿಸಿದ್ದು, “ಈ ಘಟನೆಯು ಕ್ರಿಸ್‌ಮಸ್‌ ದಿನದಂದು ಮಧ್ಯಾಹ್ನ 3 ಗಂಟೆ ವೇಳೆ ನಡೆಯಿತು. ನಾನು ಪ್ರಾರ್ಥನೆ ಮಾಡಲು ಕಥುವಾದಲ್ಲಿನ ಭಕ್ತರ ಮನೆಗೆ ಹೋಗಿದ್ದೆ. ನಾನು ಮನೆಗೆ ಹಿಂತಿರುಗಿ ನನ್ನ ಮೂರು ಮಕ್ಕಳಿಗೆ ಕೆಲವು ಉಡುಗೊರೆಗಳನ್ನು ಖರೀದಿಸಲು ಮಾರುಕಟ್ಟೆಗೆ ಹೋದೆ. ಆಗ ಇಬ್ಬರು ವ್ಯಕ್ತಿಗಳು ನನ್ನನ್ನು ತಡೆದು, ಆ ದಿನ ನಾನು ಭೇಟಿ ನೀಡಿದ ಕುಟುಂಬವನ್ನು ಮತಾಂತರ ಮಾಡಿದ್ದೀಯ ಎಂದು ಆರೋಪಿಸಲಾರಂಭಿಸಿದರು. ಜೈ ಶ್ರೀ ರಾಮ್ ಎಂದು ಹೇಳಲು ನನ್ನನ್ನು ಒತ್ತಾಯಿಸಿದರು” ಎಂದು ಪಾದ್ರಿ ತಿಳಿಸಿದ್ದಾರೆ.

“ಸ್ವಲ್ಪ ಸಮಯದ ನಂತರ ಅವರು ಯಾರಿಗೋ ಫೋನ್ ಮಾಡಿದರು. ಅವರ ಜೊತೆಗೆ ಇನ್ನೊಬ್ಬರು ಸೇರಿಕೊಂಡರು. ಅಷ್ಟರಲ್ಲಾಗಲೇ 100 ಜನರ ಗುಂಪು ಜಮಾಯಿಸಿತ್ತು. ಅವರಲ್ಲಿ ಕೆಲವರು ಧಾರ್ಮಿಕ ಮತಾಂತರ ಮಾಡಲಾಗಿದೆ ಎಂದು ಆರೋಪಿಸಿ ನನ್ನನ್ನು ಹೊಡೆಯುವುದಾಗಿ ಬೆದರಿಕೆ ಹಾಕಿದರು. ಮೂವರು ನನಗೆ ಕೆಲವು ಬಾರಿ ಕಪಾಳಕ್ಕೆ ಹೊಡೆದರು. ನನ್ನ ತುಟಿಗಳನ್ನು ಪದೇ ಪದೇ ಒದ್ದೆ ಮಾಡುತ್ತಿರುವುದನ್ನು ನೀವು ವಿಡಿಯೊದಲ್ಲಿ ನೋಡುತ್ತೀರಿ. ಅವರ ದಾಳಿಯಿಂದ ಹೆದರಿ ನನ್ನ ಬಾಯಿ ಮತ್ತು ಗಂಟಲು ಒಣಗಿ ಹೋಗಿತ್ತು. ನಾನು ಭಯದಲ್ಲಿದ್ದೆ. ಹೀಗಾಗಿ ಮಾತನಾಡಲು ಸಾಧ್ಯವಾಗಲಿಲ್ಲ” ಎಂದಿದ್ದಾರೆ.

ಹಲ್ಲೆ ನಡೆಸಿದ ಗುಂಪು ಸ್ಥಳೀಯ ಪೊಲೀಸರನ್ನು ಕರೆಸಿ, ‘ಈ ಪ್ರದೇಶದಲ್ಲಿ ಧಾರ್ಮಿಕ ಮತಾಂತರವನ್ನು ಪಾದ್ರಿ ನಡೆಸುತ್ತಿದ್ದಾರೆ’ ಎಂದು ಆರೋಪಿಸಿದರು. ನಾನು ಪೊಲೀಸರಿಗೆ ನಿಜವಾಗಿ ಏನಾಯಿತು ಎಂದು ಹೇಳಿದೆ. ಮತಾಂತರದ ಆರೋಪವನ್ನು ನಿರಾಕರಿಸಿದೆ. ಹಲ್ಲೆ ನಡೆಸಿದವರ ಬದಲು ನನ್ನನ್ನು ಪೊಲೀಸರು ಠಾಣೆಗೆ ಕರೆದೊಯ್ದು 24 ಗಂಟೆಗಳ ಕಾಲ ಲಾಕಪ್‌ನಲ್ಲಿ ಇರಿಸಿದರು. ನನ್ನನ್ನು ನಿಂದಿಸಿದರು. ಬಂಧನದ ವೇಳೆ ಥಳಿಸಿದರು. ಐದು ದಿನಗಳಲ್ಲಿ ನಾನು ಮಣಿಪುರಕ್ಕೆ ತೆರಳದಿದ್ದರೆ ನನ್ನ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಕಥುವಾ ಎಸ್‌ಎಸ್‌ಪಿ ಎಚ್ಚರಿಸಿದರು ಎಂದು ಪಾದ್ರಿ ದೂರಿದ್ದಾರೆ.

ಚುಂಗ್ಲೆನ್‌ಲಾಲ್ ಅವರು ಕಳೆದ ಮೂರು ವರ್ಷಗಳಿಂದ ಕಥುವಾದಲ್ಲಿ ನೆಲೆಸಿದ್ದಾರೆ ಮತ್ತು ಫ್ರೆಂಡ್ಸ್ ಆಫ್ ಮಿಷನರಿ ಪ್ರೇಯರ್ ಬ್ಯಾಂಡ್ ಎಂಬ ಕ್ರಿಶ್ಚಿಯನ್ ಸಂಘಟನೆಯಲ್ಲಿ ಪಾದ್ರಿಯಾಗಿ ಕೆಲಸ ಮಾಡುತ್ತಿದ್ದಾರೆ. “ನನ್ನ ಸಂಘಟನೆಯ ಸದಸ್ಯರು ನನ್ನನ್ನು ಬಂಧಿಸಲಾಗಿದೆಯೇ ಎಂದು ಕೇಳಿದರು. ನನ್ನ ಜಾಮೀನು ಪಡೆಯಲು ಎಫ್‌ಐಆರ್‌ ಪ್ರತಿಯನ್ನು ಕೇಳಿದ್ದರಿಂದ 24 ಗಂಟೆಗಳ ನಂತರ ನನ್ನನ್ನು ಬಿಡುಗಡೆ ಮಾಡಲಾಯಿತು” ಎಂದು ಪಾದ್ರಿ ತಿಳಿಸಿದ್ದಾರೆ.

ಕಥುವಾ ಎಸ್‌ಎಸ್‌ಪಿ ಅವರ ಆಪ್ತ ಸಹಾಯಕ ದಿ ವೈರ್‌ಗೆ ಪ್ರತಿಕ್ರಿಯಿಸಿದ್ದು, “ಮತಾಂತರದ ಆರೋಪದ ಮೇಲೆ ಯಾವುದೇ ಪಾದ್ರಿಯನ್ನು ಬಂಧಿಸಿಲ್ಲ” ಎಂದಿದ್ದಾರೆ. “ಹಿರಿಯ ಅಧಿಕಾರಿ ಕಚೇರಿಯಲ್ಲಿಲ್ಲ” ಎಂದು ಹೇಳಿರುವ ಅವರು, “ಕಥುವಾದಲ್ಲಿ ಇಂತಹ ಯಾವುದೇ ಪ್ರಕರಣ ನಡೆದಿರುವ ಬಗ್ಗೆ ನಮಗೆ ಮಾಹಿತಿ ಇಲ್ಲ” ಎಂದಿದ್ದಾರೆ.


ಇದನ್ನೂ ಓದಿರಿ: ಹಂಸಲೇಖರ ಸಾಂಸ್ಕೃತಿಕ ಪ್ರತಿರೋಧಕ್ಕೆ ಸ್ವಾಗತಾರ್ಹ ಜನಸ್ಪಂದನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...

DUSU ಚುನಾವಣೆ: ಮತದಾನ ಆರಂಭ; ವಿಜಯೋತ್ಸವ ಮೆರವಣಿಗೆಗೆ ದೆಹಲಿ ಹೈಕೋರ್ಟ್ ತಡೆ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (DUSU) 2026-27ನೇ ಸಾಲಿನ ಚುನಾವಣೆಗೆ ಶುಕ್ರವಾರ (ಸೆ.18) ಮತದಾನ ಆರಂಭವಾಗಿದೆ. ಬೆಳಗಿನ ಅವಧಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಸಂಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ...

ಕರಾವಳಿ ಇತಿಹಾಸದಲ್ಲೇ ಪ್ರಥಮ: ಮಂಗಳೂರಿನಲ್ಲಿ ಸಿಎಂ ‘ಡಿ.ಕೆ ಶಿವಕುಮಾರ್’ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ

ಕರಾವಳಿ ಕರ್ನಾಟಕದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ (Cabinet) ಸಭೆಯು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪಡೀಲ್‌ನಲ್ಲಿರುವ ನೂತನ 'ಪ್ರಜಾ ಸೌಧ'ದಲ್ಲಿ (ಜಿಲ್ಲಾಡಳಿತ ಸೌಧ) ಶುಕ್ರವಾರ ವಿಜೃಂಭಣೆಯಿಂದ ಆರಂಭವಾಗಿದೆ....

ಟಿಎಂಸಿ ಹೆಸರು, ಚಿಹ್ನೆ ಬಳಕೆಗೆ ತಡೆ: ಚುನಾವಣಾ ಆಯೋಗದ ಆದೇಶ ‘ಕಾನೂನಿಗೆ ವಿರುದ್ಧ’ ಎಂದ ಮಮತಾ ಬಣ, ಆದೇಶ ಸ್ವಾಗತಿಸಿದ ಬಂಡಾಯ ಪಾಳಯ 

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತ ರಾಜಕಾರಣದಲ್ಲಿ ಪ್ರಮುಖ ಶಕ್ತಿಯಾಗಿರುವ ತೃಣಮೂಲ ಕಾಂಗ್ರೆಸ್‌ (ಟಿಎಂಸಿ)ಯ ಆಂತರಿಕ ಬಿಕ್ಕಟ್ಟು ಇದೀಗ ಪಕ್ಷದ ಹೆಸರು ಮತ್ತು ಚುನಾವಣಾ ಚಿಹ್ನೆಯ ಮೇಲಿನ ಹಕ್ಕಿನ ಸಂಘರ್ಷವಾಗಿ ತೀವ್ರಗೊಂಡಿದೆ. ಟಿಎಂಸಿಯ ಎರಡು...