Homeಮುಖಪುಟ’ಜೈ ಶ್ರೀರಾಮ್‌’ ಹೇಳುವಂತೆ ಒತ್ತಾಯಿಸಿ ಮಣಿಪುರದ ಪಾದ್ರಿ ಮೇಲೆ ಹಲ್ಲೆ; ವಿಡಿಯೊ ವೈರಲ್‌

’ಜೈ ಶ್ರೀರಾಮ್‌’ ಹೇಳುವಂತೆ ಒತ್ತಾಯಿಸಿ ಮಣಿಪುರದ ಪಾದ್ರಿ ಮೇಲೆ ಹಲ್ಲೆ; ವಿಡಿಯೊ ವೈರಲ್‌

"ಹಲ್ಲೆ ನಡೆಸಿದವರನ್ನು ಠಾಣೆಗೆ ಕರೆದೊಯ್ಯದೇ ಹಲ್ಲೆಗೊಳಗಾದ ನನ್ನನ್ನು ಬಂಧಿಸಿ ಪೊಲೀಸರು ಕಿರುಕುಳ ನೀಡಿದ್ದಾರೆ" ಎಂದು ಪಾದ್ರಿ ಆರೋಪಿಸಿದ್ದಾರೆ

- Advertisement -
- Advertisement -

‘ಜೈ ಶ್ರೀರಾಮ್‌’ ಹೇಳುವಂತೆ ಒತ್ತಾಯಿಸಿ ಮಣಿಪುರದ ಪಾದ್ರಿಯೊಬ್ಬರಿಗೆ ಹಿಂದುತ್ವದ ಗುಂಪೊಂದು ಕಿರುಕುಳ ನೀಡಿರುವ ಘಟನೆ ಜಮ್ಮು ಮತ್ತು ಕಾಶ್ಮೀರದ ಕಥುವಾ ಜಿಲ್ಲೆಯಲ್ಲಿ ಕ್ರಿಸ್ಮಸ್‌‌ ಹಬ್ಬದಂದು ನಡೆದಿದ್ದು, ವಿಡಿಯೊ ವೈರಲ್ ಆಗಿದೆ.

‘ಜೈ ಶ್ರೀರಾಮ್‌’ ಹೇಳು ಎಂದು ಒತ್ತಾಯಿಸಿರುವ ಅಪರಿಚಿತ ಗುಂಪು, ತಮ್ಮ ಒತ್ತಾಯಕ್ಕೆ ಮಣಿಯದ ಪಾದ್ರಿಯ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದ್ದು ಡಿಸೆಂಬರ್‌ 30ರಂದು ವಿಡಿಯೊ ವ್ಯಾಪಕವಾಗಿ ವೈರಲ್‌ ಆಗಿದೆ. ಬಲಪಂಥೀಯ ಗುಂಪಿನ ಈ ದಬ್ಬಾಳಿಕೆಯ ವಿರುದ್ಧ ಪ್ರಜ್ಞಾವಂತ ನಾಗರಿಕರು ಬೇಸರ ವ್ಯಕ್ತಪಡಿಸಿದ್ದಾರೆ.

ವಾಟ್ಸಾಪ್ ಗ್ರೂಪ್‌ಗಳು ಹಾಗೂ ಟ್ವಿಟ್ಟರ್‌ ಖಾತೆಗಳಲ್ಲಿ ಹಂಚಿಕೊಳ್ಳಲಾಗಿರುವ ವಿಡಿಯೊ ಕ್ಲಿಪ್‌ನಲ್ಲಿ ಇಬ್ಬರು ವ್ಯಕ್ತಿಗಳು ಪಾದ್ರಿಯನ್ನು ‘ಜೈ ಶ್ರೀ ರಾಮ್’ ಎಂದು ಹೇಳುವಂತೆ ಕೇಳಿಕೊಳ್ಳುತ್ತಿದ್ದಾರೆ. ಪಾದ್ರಿಯು ಸದರಿ ಪ್ರದೇಶದಲ್ಲಿ ಜನರನ್ನು ಮತಾಂತರ ಮಾಡಲು ಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಆದರೆ ಮತಾಂತರ ಆರೋಪವನ್ನು ಪಾದ್ರಿ ನಿರಾಕರಿಸಿದ್ದಾರೆ. “ನೀವು ಎಲ್ಲಿಂದ ಬಂದಿದ್ದೀರಿ? ನಿನ್ನನ್ನು ಇಲ್ಲಿಗೆ ಕರೆತಂದವರು ಯಾರು?” ಎಂದು ಹಿಂದುತ್ವ ಗುಂಪು ಪದೇಪದೇ ವಿಚಾರಿಸಿದೆ.

ಭಯಭೀತರಾದ ಪಾದ್ರಿ, “ನಾನು ಭೇಟಿ ಮಾಡಲು ಬಂದಿದ್ದ ಕುಟುಂಬವು ಮೊದಲೇ ಕ್ರಿಶ್ಚಿಯನ್ನರಾಗಿದ್ದರು” ಎಂದು ಹೇಳಲು ಯತ್ನಿಸಿದರು. ಆದರೆ ಹಿಂದುತ್ವ ಗುಂಪು ‘ಜೈ ಶ್ರೀ ರಾಮ್’ ಎಂದು ಹೇಳುವಂತೆ ಹೆದರಿಸುವುದನ್ನು ಮುಂದುವರಿಸಿದರು. “ಜೈ ಶ್ರೀರಾಮ್‌” ಎಂದು ನೀವು ಯಾಕೆ ಹೇಳುವುದಿಲ್ಲ ಎಂದು ಅವರು ಕೇಳುತ್ತಲೇ ಇದ್ದರು. ಅಲ್ಲಿ ಸೇರಿದ್ದ ಜನಸಮೂಹವೂ ‘ಜೈ ಶ್ರೀ ರಾಮ್’ ಎಂದು ಕೂಗುವಂತೆ ಒತ್ತಾಯಿಸಿತು ಎನ್ನಲಾಗಿದೆ.

ಕುಕಿ ಬುಡಕಟ್ಟು ಜನಾಂಗಕ್ಕೆ ಸೇರಿದ ಪಾದ್ರಿ ಚುಂಗ್ಲೆನ್‌ಲಾಲ್ ಸಿಂಗ್ಸಿಟ್ ಅವರು ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯವರಾಗಿದ್ದಾರೆ. ಹಲ್ಲೆಗೊಳಗಾದ ಅವರನ್ನು ‘ದಿ ವೈರ್‌’ ಜಾಲತಾಣ ಸಂಪರ್ಕಿಸಿದ್ದು, “ಈ ಘಟನೆಯು ಕ್ರಿಸ್‌ಮಸ್‌ ದಿನದಂದು ಮಧ್ಯಾಹ್ನ 3 ಗಂಟೆ ವೇಳೆ ನಡೆಯಿತು. ನಾನು ಪ್ರಾರ್ಥನೆ ಮಾಡಲು ಕಥುವಾದಲ್ಲಿನ ಭಕ್ತರ ಮನೆಗೆ ಹೋಗಿದ್ದೆ. ನಾನು ಮನೆಗೆ ಹಿಂತಿರುಗಿ ನನ್ನ ಮೂರು ಮಕ್ಕಳಿಗೆ ಕೆಲವು ಉಡುಗೊರೆಗಳನ್ನು ಖರೀದಿಸಲು ಮಾರುಕಟ್ಟೆಗೆ ಹೋದೆ. ಆಗ ಇಬ್ಬರು ವ್ಯಕ್ತಿಗಳು ನನ್ನನ್ನು ತಡೆದು, ಆ ದಿನ ನಾನು ಭೇಟಿ ನೀಡಿದ ಕುಟುಂಬವನ್ನು ಮತಾಂತರ ಮಾಡಿದ್ದೀಯ ಎಂದು ಆರೋಪಿಸಲಾರಂಭಿಸಿದರು. ಜೈ ಶ್ರೀ ರಾಮ್ ಎಂದು ಹೇಳಲು ನನ್ನನ್ನು ಒತ್ತಾಯಿಸಿದರು” ಎಂದು ಪಾದ್ರಿ ತಿಳಿಸಿದ್ದಾರೆ.

“ಸ್ವಲ್ಪ ಸಮಯದ ನಂತರ ಅವರು ಯಾರಿಗೋ ಫೋನ್ ಮಾಡಿದರು. ಅವರ ಜೊತೆಗೆ ಇನ್ನೊಬ್ಬರು ಸೇರಿಕೊಂಡರು. ಅಷ್ಟರಲ್ಲಾಗಲೇ 100 ಜನರ ಗುಂಪು ಜಮಾಯಿಸಿತ್ತು. ಅವರಲ್ಲಿ ಕೆಲವರು ಧಾರ್ಮಿಕ ಮತಾಂತರ ಮಾಡಲಾಗಿದೆ ಎಂದು ಆರೋಪಿಸಿ ನನ್ನನ್ನು ಹೊಡೆಯುವುದಾಗಿ ಬೆದರಿಕೆ ಹಾಕಿದರು. ಮೂವರು ನನಗೆ ಕೆಲವು ಬಾರಿ ಕಪಾಳಕ್ಕೆ ಹೊಡೆದರು. ನನ್ನ ತುಟಿಗಳನ್ನು ಪದೇ ಪದೇ ಒದ್ದೆ ಮಾಡುತ್ತಿರುವುದನ್ನು ನೀವು ವಿಡಿಯೊದಲ್ಲಿ ನೋಡುತ್ತೀರಿ. ಅವರ ದಾಳಿಯಿಂದ ಹೆದರಿ ನನ್ನ ಬಾಯಿ ಮತ್ತು ಗಂಟಲು ಒಣಗಿ ಹೋಗಿತ್ತು. ನಾನು ಭಯದಲ್ಲಿದ್ದೆ. ಹೀಗಾಗಿ ಮಾತನಾಡಲು ಸಾಧ್ಯವಾಗಲಿಲ್ಲ” ಎಂದಿದ್ದಾರೆ.

ಹಲ್ಲೆ ನಡೆಸಿದ ಗುಂಪು ಸ್ಥಳೀಯ ಪೊಲೀಸರನ್ನು ಕರೆಸಿ, ‘ಈ ಪ್ರದೇಶದಲ್ಲಿ ಧಾರ್ಮಿಕ ಮತಾಂತರವನ್ನು ಪಾದ್ರಿ ನಡೆಸುತ್ತಿದ್ದಾರೆ’ ಎಂದು ಆರೋಪಿಸಿದರು. ನಾನು ಪೊಲೀಸರಿಗೆ ನಿಜವಾಗಿ ಏನಾಯಿತು ಎಂದು ಹೇಳಿದೆ. ಮತಾಂತರದ ಆರೋಪವನ್ನು ನಿರಾಕರಿಸಿದೆ. ಹಲ್ಲೆ ನಡೆಸಿದವರ ಬದಲು ನನ್ನನ್ನು ಪೊಲೀಸರು ಠಾಣೆಗೆ ಕರೆದೊಯ್ದು 24 ಗಂಟೆಗಳ ಕಾಲ ಲಾಕಪ್‌ನಲ್ಲಿ ಇರಿಸಿದರು. ನನ್ನನ್ನು ನಿಂದಿಸಿದರು. ಬಂಧನದ ವೇಳೆ ಥಳಿಸಿದರು. ಐದು ದಿನಗಳಲ್ಲಿ ನಾನು ಮಣಿಪುರಕ್ಕೆ ತೆರಳದಿದ್ದರೆ ನನ್ನ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಕಥುವಾ ಎಸ್‌ಎಸ್‌ಪಿ ಎಚ್ಚರಿಸಿದರು ಎಂದು ಪಾದ್ರಿ ದೂರಿದ್ದಾರೆ.

ಚುಂಗ್ಲೆನ್‌ಲಾಲ್ ಅವರು ಕಳೆದ ಮೂರು ವರ್ಷಗಳಿಂದ ಕಥುವಾದಲ್ಲಿ ನೆಲೆಸಿದ್ದಾರೆ ಮತ್ತು ಫ್ರೆಂಡ್ಸ್ ಆಫ್ ಮಿಷನರಿ ಪ್ರೇಯರ್ ಬ್ಯಾಂಡ್ ಎಂಬ ಕ್ರಿಶ್ಚಿಯನ್ ಸಂಘಟನೆಯಲ್ಲಿ ಪಾದ್ರಿಯಾಗಿ ಕೆಲಸ ಮಾಡುತ್ತಿದ್ದಾರೆ. “ನನ್ನ ಸಂಘಟನೆಯ ಸದಸ್ಯರು ನನ್ನನ್ನು ಬಂಧಿಸಲಾಗಿದೆಯೇ ಎಂದು ಕೇಳಿದರು. ನನ್ನ ಜಾಮೀನು ಪಡೆಯಲು ಎಫ್‌ಐಆರ್‌ ಪ್ರತಿಯನ್ನು ಕೇಳಿದ್ದರಿಂದ 24 ಗಂಟೆಗಳ ನಂತರ ನನ್ನನ್ನು ಬಿಡುಗಡೆ ಮಾಡಲಾಯಿತು” ಎಂದು ಪಾದ್ರಿ ತಿಳಿಸಿದ್ದಾರೆ.

ಕಥುವಾ ಎಸ್‌ಎಸ್‌ಪಿ ಅವರ ಆಪ್ತ ಸಹಾಯಕ ದಿ ವೈರ್‌ಗೆ ಪ್ರತಿಕ್ರಿಯಿಸಿದ್ದು, “ಮತಾಂತರದ ಆರೋಪದ ಮೇಲೆ ಯಾವುದೇ ಪಾದ್ರಿಯನ್ನು ಬಂಧಿಸಿಲ್ಲ” ಎಂದಿದ್ದಾರೆ. “ಹಿರಿಯ ಅಧಿಕಾರಿ ಕಚೇರಿಯಲ್ಲಿಲ್ಲ” ಎಂದು ಹೇಳಿರುವ ಅವರು, “ಕಥುವಾದಲ್ಲಿ ಇಂತಹ ಯಾವುದೇ ಪ್ರಕರಣ ನಡೆದಿರುವ ಬಗ್ಗೆ ನಮಗೆ ಮಾಹಿತಿ ಇಲ್ಲ” ಎಂದಿದ್ದಾರೆ.


ಇದನ್ನೂ ಓದಿರಿ: ಹಂಸಲೇಖರ ಸಾಂಸ್ಕೃತಿಕ ಪ್ರತಿರೋಧಕ್ಕೆ ಸ್ವಾಗತಾರ್ಹ ಜನಸ್ಪಂದನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...