Homeಮುಖಪುಟ’ಜೈ ಶ್ರೀರಾಮ್‌’ ಹೇಳುವಂತೆ ಒತ್ತಾಯಿಸಿ ಮಣಿಪುರದ ಪಾದ್ರಿ ಮೇಲೆ ಹಲ್ಲೆ; ವಿಡಿಯೊ ವೈರಲ್‌

’ಜೈ ಶ್ರೀರಾಮ್‌’ ಹೇಳುವಂತೆ ಒತ್ತಾಯಿಸಿ ಮಣಿಪುರದ ಪಾದ್ರಿ ಮೇಲೆ ಹಲ್ಲೆ; ವಿಡಿಯೊ ವೈರಲ್‌

"ಹಲ್ಲೆ ನಡೆಸಿದವರನ್ನು ಠಾಣೆಗೆ ಕರೆದೊಯ್ಯದೇ ಹಲ್ಲೆಗೊಳಗಾದ ನನ್ನನ್ನು ಬಂಧಿಸಿ ಪೊಲೀಸರು ಕಿರುಕುಳ ನೀಡಿದ್ದಾರೆ" ಎಂದು ಪಾದ್ರಿ ಆರೋಪಿಸಿದ್ದಾರೆ

- Advertisement -
- Advertisement -

‘ಜೈ ಶ್ರೀರಾಮ್‌’ ಹೇಳುವಂತೆ ಒತ್ತಾಯಿಸಿ ಮಣಿಪುರದ ಪಾದ್ರಿಯೊಬ್ಬರಿಗೆ ಹಿಂದುತ್ವದ ಗುಂಪೊಂದು ಕಿರುಕುಳ ನೀಡಿರುವ ಘಟನೆ ಜಮ್ಮು ಮತ್ತು ಕಾಶ್ಮೀರದ ಕಥುವಾ ಜಿಲ್ಲೆಯಲ್ಲಿ ಕ್ರಿಸ್ಮಸ್‌‌ ಹಬ್ಬದಂದು ನಡೆದಿದ್ದು, ವಿಡಿಯೊ ವೈರಲ್ ಆಗಿದೆ.

‘ಜೈ ಶ್ರೀರಾಮ್‌’ ಹೇಳು ಎಂದು ಒತ್ತಾಯಿಸಿರುವ ಅಪರಿಚಿತ ಗುಂಪು, ತಮ್ಮ ಒತ್ತಾಯಕ್ಕೆ ಮಣಿಯದ ಪಾದ್ರಿಯ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದ್ದು ಡಿಸೆಂಬರ್‌ 30ರಂದು ವಿಡಿಯೊ ವ್ಯಾಪಕವಾಗಿ ವೈರಲ್‌ ಆಗಿದೆ. ಬಲಪಂಥೀಯ ಗುಂಪಿನ ಈ ದಬ್ಬಾಳಿಕೆಯ ವಿರುದ್ಧ ಪ್ರಜ್ಞಾವಂತ ನಾಗರಿಕರು ಬೇಸರ ವ್ಯಕ್ತಪಡಿಸಿದ್ದಾರೆ.

ವಾಟ್ಸಾಪ್ ಗ್ರೂಪ್‌ಗಳು ಹಾಗೂ ಟ್ವಿಟ್ಟರ್‌ ಖಾತೆಗಳಲ್ಲಿ ಹಂಚಿಕೊಳ್ಳಲಾಗಿರುವ ವಿಡಿಯೊ ಕ್ಲಿಪ್‌ನಲ್ಲಿ ಇಬ್ಬರು ವ್ಯಕ್ತಿಗಳು ಪಾದ್ರಿಯನ್ನು ‘ಜೈ ಶ್ರೀ ರಾಮ್’ ಎಂದು ಹೇಳುವಂತೆ ಕೇಳಿಕೊಳ್ಳುತ್ತಿದ್ದಾರೆ. ಪಾದ್ರಿಯು ಸದರಿ ಪ್ರದೇಶದಲ್ಲಿ ಜನರನ್ನು ಮತಾಂತರ ಮಾಡಲು ಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಆದರೆ ಮತಾಂತರ ಆರೋಪವನ್ನು ಪಾದ್ರಿ ನಿರಾಕರಿಸಿದ್ದಾರೆ. “ನೀವು ಎಲ್ಲಿಂದ ಬಂದಿದ್ದೀರಿ? ನಿನ್ನನ್ನು ಇಲ್ಲಿಗೆ ಕರೆತಂದವರು ಯಾರು?” ಎಂದು ಹಿಂದುತ್ವ ಗುಂಪು ಪದೇಪದೇ ವಿಚಾರಿಸಿದೆ.

ಭಯಭೀತರಾದ ಪಾದ್ರಿ, “ನಾನು ಭೇಟಿ ಮಾಡಲು ಬಂದಿದ್ದ ಕುಟುಂಬವು ಮೊದಲೇ ಕ್ರಿಶ್ಚಿಯನ್ನರಾಗಿದ್ದರು” ಎಂದು ಹೇಳಲು ಯತ್ನಿಸಿದರು. ಆದರೆ ಹಿಂದುತ್ವ ಗುಂಪು ‘ಜೈ ಶ್ರೀ ರಾಮ್’ ಎಂದು ಹೇಳುವಂತೆ ಹೆದರಿಸುವುದನ್ನು ಮುಂದುವರಿಸಿದರು. “ಜೈ ಶ್ರೀರಾಮ್‌” ಎಂದು ನೀವು ಯಾಕೆ ಹೇಳುವುದಿಲ್ಲ ಎಂದು ಅವರು ಕೇಳುತ್ತಲೇ ಇದ್ದರು. ಅಲ್ಲಿ ಸೇರಿದ್ದ ಜನಸಮೂಹವೂ ‘ಜೈ ಶ್ರೀ ರಾಮ್’ ಎಂದು ಕೂಗುವಂತೆ ಒತ್ತಾಯಿಸಿತು ಎನ್ನಲಾಗಿದೆ.

ಕುಕಿ ಬುಡಕಟ್ಟು ಜನಾಂಗಕ್ಕೆ ಸೇರಿದ ಪಾದ್ರಿ ಚುಂಗ್ಲೆನ್‌ಲಾಲ್ ಸಿಂಗ್ಸಿಟ್ ಅವರು ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯವರಾಗಿದ್ದಾರೆ. ಹಲ್ಲೆಗೊಳಗಾದ ಅವರನ್ನು ‘ದಿ ವೈರ್‌’ ಜಾಲತಾಣ ಸಂಪರ್ಕಿಸಿದ್ದು, “ಈ ಘಟನೆಯು ಕ್ರಿಸ್‌ಮಸ್‌ ದಿನದಂದು ಮಧ್ಯಾಹ್ನ 3 ಗಂಟೆ ವೇಳೆ ನಡೆಯಿತು. ನಾನು ಪ್ರಾರ್ಥನೆ ಮಾಡಲು ಕಥುವಾದಲ್ಲಿನ ಭಕ್ತರ ಮನೆಗೆ ಹೋಗಿದ್ದೆ. ನಾನು ಮನೆಗೆ ಹಿಂತಿರುಗಿ ನನ್ನ ಮೂರು ಮಕ್ಕಳಿಗೆ ಕೆಲವು ಉಡುಗೊರೆಗಳನ್ನು ಖರೀದಿಸಲು ಮಾರುಕಟ್ಟೆಗೆ ಹೋದೆ. ಆಗ ಇಬ್ಬರು ವ್ಯಕ್ತಿಗಳು ನನ್ನನ್ನು ತಡೆದು, ಆ ದಿನ ನಾನು ಭೇಟಿ ನೀಡಿದ ಕುಟುಂಬವನ್ನು ಮತಾಂತರ ಮಾಡಿದ್ದೀಯ ಎಂದು ಆರೋಪಿಸಲಾರಂಭಿಸಿದರು. ಜೈ ಶ್ರೀ ರಾಮ್ ಎಂದು ಹೇಳಲು ನನ್ನನ್ನು ಒತ್ತಾಯಿಸಿದರು” ಎಂದು ಪಾದ್ರಿ ತಿಳಿಸಿದ್ದಾರೆ.

“ಸ್ವಲ್ಪ ಸಮಯದ ನಂತರ ಅವರು ಯಾರಿಗೋ ಫೋನ್ ಮಾಡಿದರು. ಅವರ ಜೊತೆಗೆ ಇನ್ನೊಬ್ಬರು ಸೇರಿಕೊಂಡರು. ಅಷ್ಟರಲ್ಲಾಗಲೇ 100 ಜನರ ಗುಂಪು ಜಮಾಯಿಸಿತ್ತು. ಅವರಲ್ಲಿ ಕೆಲವರು ಧಾರ್ಮಿಕ ಮತಾಂತರ ಮಾಡಲಾಗಿದೆ ಎಂದು ಆರೋಪಿಸಿ ನನ್ನನ್ನು ಹೊಡೆಯುವುದಾಗಿ ಬೆದರಿಕೆ ಹಾಕಿದರು. ಮೂವರು ನನಗೆ ಕೆಲವು ಬಾರಿ ಕಪಾಳಕ್ಕೆ ಹೊಡೆದರು. ನನ್ನ ತುಟಿಗಳನ್ನು ಪದೇ ಪದೇ ಒದ್ದೆ ಮಾಡುತ್ತಿರುವುದನ್ನು ನೀವು ವಿಡಿಯೊದಲ್ಲಿ ನೋಡುತ್ತೀರಿ. ಅವರ ದಾಳಿಯಿಂದ ಹೆದರಿ ನನ್ನ ಬಾಯಿ ಮತ್ತು ಗಂಟಲು ಒಣಗಿ ಹೋಗಿತ್ತು. ನಾನು ಭಯದಲ್ಲಿದ್ದೆ. ಹೀಗಾಗಿ ಮಾತನಾಡಲು ಸಾಧ್ಯವಾಗಲಿಲ್ಲ” ಎಂದಿದ್ದಾರೆ.

ಹಲ್ಲೆ ನಡೆಸಿದ ಗುಂಪು ಸ್ಥಳೀಯ ಪೊಲೀಸರನ್ನು ಕರೆಸಿ, ‘ಈ ಪ್ರದೇಶದಲ್ಲಿ ಧಾರ್ಮಿಕ ಮತಾಂತರವನ್ನು ಪಾದ್ರಿ ನಡೆಸುತ್ತಿದ್ದಾರೆ’ ಎಂದು ಆರೋಪಿಸಿದರು. ನಾನು ಪೊಲೀಸರಿಗೆ ನಿಜವಾಗಿ ಏನಾಯಿತು ಎಂದು ಹೇಳಿದೆ. ಮತಾಂತರದ ಆರೋಪವನ್ನು ನಿರಾಕರಿಸಿದೆ. ಹಲ್ಲೆ ನಡೆಸಿದವರ ಬದಲು ನನ್ನನ್ನು ಪೊಲೀಸರು ಠಾಣೆಗೆ ಕರೆದೊಯ್ದು 24 ಗಂಟೆಗಳ ಕಾಲ ಲಾಕಪ್‌ನಲ್ಲಿ ಇರಿಸಿದರು. ನನ್ನನ್ನು ನಿಂದಿಸಿದರು. ಬಂಧನದ ವೇಳೆ ಥಳಿಸಿದರು. ಐದು ದಿನಗಳಲ್ಲಿ ನಾನು ಮಣಿಪುರಕ್ಕೆ ತೆರಳದಿದ್ದರೆ ನನ್ನ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಕಥುವಾ ಎಸ್‌ಎಸ್‌ಪಿ ಎಚ್ಚರಿಸಿದರು ಎಂದು ಪಾದ್ರಿ ದೂರಿದ್ದಾರೆ.

ಚುಂಗ್ಲೆನ್‌ಲಾಲ್ ಅವರು ಕಳೆದ ಮೂರು ವರ್ಷಗಳಿಂದ ಕಥುವಾದಲ್ಲಿ ನೆಲೆಸಿದ್ದಾರೆ ಮತ್ತು ಫ್ರೆಂಡ್ಸ್ ಆಫ್ ಮಿಷನರಿ ಪ್ರೇಯರ್ ಬ್ಯಾಂಡ್ ಎಂಬ ಕ್ರಿಶ್ಚಿಯನ್ ಸಂಘಟನೆಯಲ್ಲಿ ಪಾದ್ರಿಯಾಗಿ ಕೆಲಸ ಮಾಡುತ್ತಿದ್ದಾರೆ. “ನನ್ನ ಸಂಘಟನೆಯ ಸದಸ್ಯರು ನನ್ನನ್ನು ಬಂಧಿಸಲಾಗಿದೆಯೇ ಎಂದು ಕೇಳಿದರು. ನನ್ನ ಜಾಮೀನು ಪಡೆಯಲು ಎಫ್‌ಐಆರ್‌ ಪ್ರತಿಯನ್ನು ಕೇಳಿದ್ದರಿಂದ 24 ಗಂಟೆಗಳ ನಂತರ ನನ್ನನ್ನು ಬಿಡುಗಡೆ ಮಾಡಲಾಯಿತು” ಎಂದು ಪಾದ್ರಿ ತಿಳಿಸಿದ್ದಾರೆ.

ಕಥುವಾ ಎಸ್‌ಎಸ್‌ಪಿ ಅವರ ಆಪ್ತ ಸಹಾಯಕ ದಿ ವೈರ್‌ಗೆ ಪ್ರತಿಕ್ರಿಯಿಸಿದ್ದು, “ಮತಾಂತರದ ಆರೋಪದ ಮೇಲೆ ಯಾವುದೇ ಪಾದ್ರಿಯನ್ನು ಬಂಧಿಸಿಲ್ಲ” ಎಂದಿದ್ದಾರೆ. “ಹಿರಿಯ ಅಧಿಕಾರಿ ಕಚೇರಿಯಲ್ಲಿಲ್ಲ” ಎಂದು ಹೇಳಿರುವ ಅವರು, “ಕಥುವಾದಲ್ಲಿ ಇಂತಹ ಯಾವುದೇ ಪ್ರಕರಣ ನಡೆದಿರುವ ಬಗ್ಗೆ ನಮಗೆ ಮಾಹಿತಿ ಇಲ್ಲ” ಎಂದಿದ್ದಾರೆ.


ಇದನ್ನೂ ಓದಿರಿ: ಹಂಸಲೇಖರ ಸಾಂಸ್ಕೃತಿಕ ಪ್ರತಿರೋಧಕ್ಕೆ ಸ್ವಾಗತಾರ್ಹ ಜನಸ್ಪಂದನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...

ಕಾವೇರಿ ಪ್ರತಿಭಟನೆ ವೇಳೆ ಆಕ್ಷೇಪಾರ್ಹ ಹೇಳಿಕೆ : ತಮಿಳುನಾಡಿನ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಬಂಧನ

ಸೋಮವಾರ (ಆ.3) ತಂಜಾವೂರಿನಲ್ಲಿ ನಡೆದ ಕಾವೇರಿ ಪ್ರತಿಭಟನೆ ಸಂದರ್ಭದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ ಆರೋಪದ ಮೇಲೆ ತಮಿಳುನಾಡಿನ ವಿರೋಧ ಪಕ್ಷದ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ. ಉದಯನಿಧಿ ಬಂಧನಕ್ಕೂ...

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...