Homeಮುಖಪುಟ’ಜೈ ಶ್ರೀರಾಮ್‌’ ಹೇಳುವಂತೆ ಒತ್ತಾಯಿಸಿ ಮಣಿಪುರದ ಪಾದ್ರಿ ಮೇಲೆ ಹಲ್ಲೆ; ವಿಡಿಯೊ ವೈರಲ್‌

’ಜೈ ಶ್ರೀರಾಮ್‌’ ಹೇಳುವಂತೆ ಒತ್ತಾಯಿಸಿ ಮಣಿಪುರದ ಪಾದ್ರಿ ಮೇಲೆ ಹಲ್ಲೆ; ವಿಡಿಯೊ ವೈರಲ್‌

"ಹಲ್ಲೆ ನಡೆಸಿದವರನ್ನು ಠಾಣೆಗೆ ಕರೆದೊಯ್ಯದೇ ಹಲ್ಲೆಗೊಳಗಾದ ನನ್ನನ್ನು ಬಂಧಿಸಿ ಪೊಲೀಸರು ಕಿರುಕುಳ ನೀಡಿದ್ದಾರೆ" ಎಂದು ಪಾದ್ರಿ ಆರೋಪಿಸಿದ್ದಾರೆ

- Advertisement -
- Advertisement -

‘ಜೈ ಶ್ರೀರಾಮ್‌’ ಹೇಳುವಂತೆ ಒತ್ತಾಯಿಸಿ ಮಣಿಪುರದ ಪಾದ್ರಿಯೊಬ್ಬರಿಗೆ ಹಿಂದುತ್ವದ ಗುಂಪೊಂದು ಕಿರುಕುಳ ನೀಡಿರುವ ಘಟನೆ ಜಮ್ಮು ಮತ್ತು ಕಾಶ್ಮೀರದ ಕಥುವಾ ಜಿಲ್ಲೆಯಲ್ಲಿ ಕ್ರಿಸ್ಮಸ್‌‌ ಹಬ್ಬದಂದು ನಡೆದಿದ್ದು, ವಿಡಿಯೊ ವೈರಲ್ ಆಗಿದೆ.

‘ಜೈ ಶ್ರೀರಾಮ್‌’ ಹೇಳು ಎಂದು ಒತ್ತಾಯಿಸಿರುವ ಅಪರಿಚಿತ ಗುಂಪು, ತಮ್ಮ ಒತ್ತಾಯಕ್ಕೆ ಮಣಿಯದ ಪಾದ್ರಿಯ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದ್ದು ಡಿಸೆಂಬರ್‌ 30ರಂದು ವಿಡಿಯೊ ವ್ಯಾಪಕವಾಗಿ ವೈರಲ್‌ ಆಗಿದೆ. ಬಲಪಂಥೀಯ ಗುಂಪಿನ ಈ ದಬ್ಬಾಳಿಕೆಯ ವಿರುದ್ಧ ಪ್ರಜ್ಞಾವಂತ ನಾಗರಿಕರು ಬೇಸರ ವ್ಯಕ್ತಪಡಿಸಿದ್ದಾರೆ.

ವಾಟ್ಸಾಪ್ ಗ್ರೂಪ್‌ಗಳು ಹಾಗೂ ಟ್ವಿಟ್ಟರ್‌ ಖಾತೆಗಳಲ್ಲಿ ಹಂಚಿಕೊಳ್ಳಲಾಗಿರುವ ವಿಡಿಯೊ ಕ್ಲಿಪ್‌ನಲ್ಲಿ ಇಬ್ಬರು ವ್ಯಕ್ತಿಗಳು ಪಾದ್ರಿಯನ್ನು ‘ಜೈ ಶ್ರೀ ರಾಮ್’ ಎಂದು ಹೇಳುವಂತೆ ಕೇಳಿಕೊಳ್ಳುತ್ತಿದ್ದಾರೆ. ಪಾದ್ರಿಯು ಸದರಿ ಪ್ರದೇಶದಲ್ಲಿ ಜನರನ್ನು ಮತಾಂತರ ಮಾಡಲು ಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಆದರೆ ಮತಾಂತರ ಆರೋಪವನ್ನು ಪಾದ್ರಿ ನಿರಾಕರಿಸಿದ್ದಾರೆ. “ನೀವು ಎಲ್ಲಿಂದ ಬಂದಿದ್ದೀರಿ? ನಿನ್ನನ್ನು ಇಲ್ಲಿಗೆ ಕರೆತಂದವರು ಯಾರು?” ಎಂದು ಹಿಂದುತ್ವ ಗುಂಪು ಪದೇಪದೇ ವಿಚಾರಿಸಿದೆ.

ಭಯಭೀತರಾದ ಪಾದ್ರಿ, “ನಾನು ಭೇಟಿ ಮಾಡಲು ಬಂದಿದ್ದ ಕುಟುಂಬವು ಮೊದಲೇ ಕ್ರಿಶ್ಚಿಯನ್ನರಾಗಿದ್ದರು” ಎಂದು ಹೇಳಲು ಯತ್ನಿಸಿದರು. ಆದರೆ ಹಿಂದುತ್ವ ಗುಂಪು ‘ಜೈ ಶ್ರೀ ರಾಮ್’ ಎಂದು ಹೇಳುವಂತೆ ಹೆದರಿಸುವುದನ್ನು ಮುಂದುವರಿಸಿದರು. “ಜೈ ಶ್ರೀರಾಮ್‌” ಎಂದು ನೀವು ಯಾಕೆ ಹೇಳುವುದಿಲ್ಲ ಎಂದು ಅವರು ಕೇಳುತ್ತಲೇ ಇದ್ದರು. ಅಲ್ಲಿ ಸೇರಿದ್ದ ಜನಸಮೂಹವೂ ‘ಜೈ ಶ್ರೀ ರಾಮ್’ ಎಂದು ಕೂಗುವಂತೆ ಒತ್ತಾಯಿಸಿತು ಎನ್ನಲಾಗಿದೆ.

ಕುಕಿ ಬುಡಕಟ್ಟು ಜನಾಂಗಕ್ಕೆ ಸೇರಿದ ಪಾದ್ರಿ ಚುಂಗ್ಲೆನ್‌ಲಾಲ್ ಸಿಂಗ್ಸಿಟ್ ಅವರು ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯವರಾಗಿದ್ದಾರೆ. ಹಲ್ಲೆಗೊಳಗಾದ ಅವರನ್ನು ‘ದಿ ವೈರ್‌’ ಜಾಲತಾಣ ಸಂಪರ್ಕಿಸಿದ್ದು, “ಈ ಘಟನೆಯು ಕ್ರಿಸ್‌ಮಸ್‌ ದಿನದಂದು ಮಧ್ಯಾಹ್ನ 3 ಗಂಟೆ ವೇಳೆ ನಡೆಯಿತು. ನಾನು ಪ್ರಾರ್ಥನೆ ಮಾಡಲು ಕಥುವಾದಲ್ಲಿನ ಭಕ್ತರ ಮನೆಗೆ ಹೋಗಿದ್ದೆ. ನಾನು ಮನೆಗೆ ಹಿಂತಿರುಗಿ ನನ್ನ ಮೂರು ಮಕ್ಕಳಿಗೆ ಕೆಲವು ಉಡುಗೊರೆಗಳನ್ನು ಖರೀದಿಸಲು ಮಾರುಕಟ್ಟೆಗೆ ಹೋದೆ. ಆಗ ಇಬ್ಬರು ವ್ಯಕ್ತಿಗಳು ನನ್ನನ್ನು ತಡೆದು, ಆ ದಿನ ನಾನು ಭೇಟಿ ನೀಡಿದ ಕುಟುಂಬವನ್ನು ಮತಾಂತರ ಮಾಡಿದ್ದೀಯ ಎಂದು ಆರೋಪಿಸಲಾರಂಭಿಸಿದರು. ಜೈ ಶ್ರೀ ರಾಮ್ ಎಂದು ಹೇಳಲು ನನ್ನನ್ನು ಒತ್ತಾಯಿಸಿದರು” ಎಂದು ಪಾದ್ರಿ ತಿಳಿಸಿದ್ದಾರೆ.

“ಸ್ವಲ್ಪ ಸಮಯದ ನಂತರ ಅವರು ಯಾರಿಗೋ ಫೋನ್ ಮಾಡಿದರು. ಅವರ ಜೊತೆಗೆ ಇನ್ನೊಬ್ಬರು ಸೇರಿಕೊಂಡರು. ಅಷ್ಟರಲ್ಲಾಗಲೇ 100 ಜನರ ಗುಂಪು ಜಮಾಯಿಸಿತ್ತು. ಅವರಲ್ಲಿ ಕೆಲವರು ಧಾರ್ಮಿಕ ಮತಾಂತರ ಮಾಡಲಾಗಿದೆ ಎಂದು ಆರೋಪಿಸಿ ನನ್ನನ್ನು ಹೊಡೆಯುವುದಾಗಿ ಬೆದರಿಕೆ ಹಾಕಿದರು. ಮೂವರು ನನಗೆ ಕೆಲವು ಬಾರಿ ಕಪಾಳಕ್ಕೆ ಹೊಡೆದರು. ನನ್ನ ತುಟಿಗಳನ್ನು ಪದೇ ಪದೇ ಒದ್ದೆ ಮಾಡುತ್ತಿರುವುದನ್ನು ನೀವು ವಿಡಿಯೊದಲ್ಲಿ ನೋಡುತ್ತೀರಿ. ಅವರ ದಾಳಿಯಿಂದ ಹೆದರಿ ನನ್ನ ಬಾಯಿ ಮತ್ತು ಗಂಟಲು ಒಣಗಿ ಹೋಗಿತ್ತು. ನಾನು ಭಯದಲ್ಲಿದ್ದೆ. ಹೀಗಾಗಿ ಮಾತನಾಡಲು ಸಾಧ್ಯವಾಗಲಿಲ್ಲ” ಎಂದಿದ್ದಾರೆ.

ಹಲ್ಲೆ ನಡೆಸಿದ ಗುಂಪು ಸ್ಥಳೀಯ ಪೊಲೀಸರನ್ನು ಕರೆಸಿ, ‘ಈ ಪ್ರದೇಶದಲ್ಲಿ ಧಾರ್ಮಿಕ ಮತಾಂತರವನ್ನು ಪಾದ್ರಿ ನಡೆಸುತ್ತಿದ್ದಾರೆ’ ಎಂದು ಆರೋಪಿಸಿದರು. ನಾನು ಪೊಲೀಸರಿಗೆ ನಿಜವಾಗಿ ಏನಾಯಿತು ಎಂದು ಹೇಳಿದೆ. ಮತಾಂತರದ ಆರೋಪವನ್ನು ನಿರಾಕರಿಸಿದೆ. ಹಲ್ಲೆ ನಡೆಸಿದವರ ಬದಲು ನನ್ನನ್ನು ಪೊಲೀಸರು ಠಾಣೆಗೆ ಕರೆದೊಯ್ದು 24 ಗಂಟೆಗಳ ಕಾಲ ಲಾಕಪ್‌ನಲ್ಲಿ ಇರಿಸಿದರು. ನನ್ನನ್ನು ನಿಂದಿಸಿದರು. ಬಂಧನದ ವೇಳೆ ಥಳಿಸಿದರು. ಐದು ದಿನಗಳಲ್ಲಿ ನಾನು ಮಣಿಪುರಕ್ಕೆ ತೆರಳದಿದ್ದರೆ ನನ್ನ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಕಥುವಾ ಎಸ್‌ಎಸ್‌ಪಿ ಎಚ್ಚರಿಸಿದರು ಎಂದು ಪಾದ್ರಿ ದೂರಿದ್ದಾರೆ.

ಚುಂಗ್ಲೆನ್‌ಲಾಲ್ ಅವರು ಕಳೆದ ಮೂರು ವರ್ಷಗಳಿಂದ ಕಥುವಾದಲ್ಲಿ ನೆಲೆಸಿದ್ದಾರೆ ಮತ್ತು ಫ್ರೆಂಡ್ಸ್ ಆಫ್ ಮಿಷನರಿ ಪ್ರೇಯರ್ ಬ್ಯಾಂಡ್ ಎಂಬ ಕ್ರಿಶ್ಚಿಯನ್ ಸಂಘಟನೆಯಲ್ಲಿ ಪಾದ್ರಿಯಾಗಿ ಕೆಲಸ ಮಾಡುತ್ತಿದ್ದಾರೆ. “ನನ್ನ ಸಂಘಟನೆಯ ಸದಸ್ಯರು ನನ್ನನ್ನು ಬಂಧಿಸಲಾಗಿದೆಯೇ ಎಂದು ಕೇಳಿದರು. ನನ್ನ ಜಾಮೀನು ಪಡೆಯಲು ಎಫ್‌ಐಆರ್‌ ಪ್ರತಿಯನ್ನು ಕೇಳಿದ್ದರಿಂದ 24 ಗಂಟೆಗಳ ನಂತರ ನನ್ನನ್ನು ಬಿಡುಗಡೆ ಮಾಡಲಾಯಿತು” ಎಂದು ಪಾದ್ರಿ ತಿಳಿಸಿದ್ದಾರೆ.

ಕಥುವಾ ಎಸ್‌ಎಸ್‌ಪಿ ಅವರ ಆಪ್ತ ಸಹಾಯಕ ದಿ ವೈರ್‌ಗೆ ಪ್ರತಿಕ್ರಿಯಿಸಿದ್ದು, “ಮತಾಂತರದ ಆರೋಪದ ಮೇಲೆ ಯಾವುದೇ ಪಾದ್ರಿಯನ್ನು ಬಂಧಿಸಿಲ್ಲ” ಎಂದಿದ್ದಾರೆ. “ಹಿರಿಯ ಅಧಿಕಾರಿ ಕಚೇರಿಯಲ್ಲಿಲ್ಲ” ಎಂದು ಹೇಳಿರುವ ಅವರು, “ಕಥುವಾದಲ್ಲಿ ಇಂತಹ ಯಾವುದೇ ಪ್ರಕರಣ ನಡೆದಿರುವ ಬಗ್ಗೆ ನಮಗೆ ಮಾಹಿತಿ ಇಲ್ಲ” ಎಂದಿದ್ದಾರೆ.


ಇದನ್ನೂ ಓದಿರಿ: ಹಂಸಲೇಖರ ಸಾಂಸ್ಕೃತಿಕ ಪ್ರತಿರೋಧಕ್ಕೆ ಸ್ವಾಗತಾರ್ಹ ಜನಸ್ಪಂದನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...

ಮಾನವೀಯತೆ ಮರೆತ ಪಂಚಾಯಿತಿ: 3 ವರ್ಷದ ಮಗುವಿನ ಮೇಲಿನ ಅತ್ಯಾಚಾರ ಪ್ರಕರಣ ಮುಚ್ಚಿಹಾಕಲು 1 ಲಕ್ಷ ರೂ.ದಂಡ, ಆ ಹಣದಲ್ಲೇ ಮದ್ಯದ ಪಾರ್ಟಿ!

ರಾಂಚಿ: ಜಾರ್ಖಂಡ್‌ನ ಗುಮ್ಲಾ ಜಿಲ್ಲೆಯ ಘಾಗ್ರಾ ಪೊಲೀಸ್ ಠಾಣಾ ವ್ಯಾಪ್ತಿಯ ಪಾಲ್ಮಾ ಗ್ರಾಮದಲ್ಲಿ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ವಿಕೃತ ಘಟನೆಯೊಂದು ಬೆಳಕಿಗೆ ಬಂದಿದೆ. ಮೂರು ವರ್ಷದ ಮಗುವಿನ ಮೇಲೆ ನಡೆದ ಭೀಕರ...

ಪೆಟ್ರೋಲ್ – ಎಥೆನಾಲ್ ಕುರಿತ ಮಾಹಿತಿ ಒದಗಿಸುವಂತೆ ತೈಲ ಸಚಿವಾಲಯಕ್ಕೆ ಕೇಂದ್ರ ಮಾಹಿತಿ ಆಯೋಗ ಆದೇಶ

ಪೆಟ್ರೋಲ್ ಉತ್ಪಾದನೆ ಮತ್ತು ಆಮದು, ಎಥೆನಾಲ್ ಸಂಗ್ರಹಣೆ, ಮಿಶ್ರಣ ಮತ್ತು ಪೆಟ್ರೋಲಿಯಂ ವಲಯದ ಲಾಭದ ಕುರಿತ ಹಿಂದಿನ ಡೇಟಾವನ್ನು ಬಹಿರಂಗಪಡಿಸುವಂತೆ ತೈಲ ಸಚಿವಾಲಯದ ಯೋಜನಾ ವಿಭಾಗವಾದ ಪೆಟ್ರೋಲಿಯಂ ಯೋಜನೆ ಮತ್ತು ವಿಶ್ಲೇಷಣಾ ಕೋಶ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣ : ಮುಸ್ಲಿಮರ ಮೇಲ್ಮನವಿ ವಿಚಾರಣೆಗೆ ಸುಪ್ರೀಂ ಸಮ್ಮತಿ; ಮಧ್ಯಂತರ ನಮಾಝ್‌ಗೆ ನಿರಾಕರಣೆ

ಮಧ್ಯಪ್ರದೇಶದ ಧಾರ್‌ನಲ್ಲಿರುವ ಐತಿಹಾಸಿಕ ಭೋಜ್‌ಶಾಲಾ-ಕಮಲ್ ಮೌಲಾ ಸಂಕೀರ್ಣವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು ಘೋಷಿಸಿ, ಅಲ್ಲಿ ನಮಾಝ್ ಮಾಡುವುದನ್ನು ನಿಷೇಧಿಸಿರುವ ಮಧ್ಯಪ್ರದೇಶ ಹೈಕೋರ್ಟ್‌ನ ತೀರ್ಪನ್ನು ಪ್ರಶ್ನಿಸಿ, ವಿವಿಧ ಮುಸ್ಲಿಂ ಸಂಘಟನೆಗಳು ಸಲ್ಲಿಸಿರುವ...

ತೀವ್ರ ಹದಗೆಟ್ಟ ಸೋನಮ್ ವಾಂಗ್ಚುಕ್ ಆರೋಗ್ಯ : ಉಪವಾಸ ಕೈ ಬಿಡುವಂತೆ ವಿಪಕ್ಷ ನಾಯಕರಿಂದ ಮನವಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಶಿಕ್ಷಣ ತಜ್ಞ ಹಾಗೂ ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರಿಗೆ ತಮ್ಮ ಪ್ರತಿಭಟನೆಯನ್ನು ಕೊನೆಗೊಳಿಸುವಂತೆ ವಿರೋಧ ಪಕ್ಷಗಳ ನಾಯಕರು ಮಂಗಳವಾರ (ಜು.14) ಮನವಿ...

ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇ ಸಮೀಪವೇ ರಸ್ತೆಯಿಲ್ಲ; ಬಟ್ಟೆ ಜೋಲಿಯಲ್ಲಿ ಗರ್ಭಿಣಿಯನ್ನು ಆಸ್ಪತ್ರೆಗೆ ಸಾಗಿಸಿದ ಉಂಬರಾನೆ ವಾಡಿಯ ಜನ

ಖಲಾಪುರ (ರಾಯಗಢ): ಗರ್ಭಿಣಿಯನ್ನು ಯೋಗ್ಯವಾದ ರಸ್ತೆ, ಆಂಬ್ಯುಲೆನ್ಸ್ ಇಲ್ಲದ ಕಾರಣ ಬಟ್ಟೆಯ ಜೋಳಿಗೆಯಲ್ಲಿ ಆಸ್ಪತ್ರೆಗೆ ಸಾಗಿಸಿದ ಹೃದಯ ವಿದ್ರಾವಕ ಘಟನೆ ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಖಲಾಪುರ ತಾಲ್ಲೂಕಿಗೆ ಸೇರಿದ ಉಂಬರಾನೆ ವಾಡಿಯಲ್ಲಿ ನಡೆದಿದೆ.  ದೇಶದಲ್ಲೇ...

ಕಾಜಿರಂಗ ಹೋಟೆಲ್ ಯೋಜನೆ ವಿರುದ್ಧ ಪ್ರತಿಭಟನೆ: ಅಸ್ಸಾಂ ಹೋರಾಟಗಾರ ಪ್ರಣಬ್ ಡೋಲೆ ಅಕ್ರಮ ಬಂಧನ: ಜಿಕೆಎಲ್‌ಎಚ್‌ಆರ್‌ಪಿಸಿ ಗಂಭೀರ ಆರೋಪ

ಗುವಾಹಟಿ: ವಿಶ್ವಪ್ರಸಿದ್ಧ ಕಾಜಿರಂಗ ರಾಷ್ಟ್ರೀಯ ಉದ್ಯಾನವನದ ಸಮೀಪ ಪ್ರಸ್ತಾವಿತ ಐಷಾರಾಮಿ ಪಂಚತಾರಾ ಹೋಟೆಲ್ ಯೋಜನೆಗಾಗಿ ಆದಿವಾಸಿಗಳ ಕೃಷಿ ಹಾಗೂ ಗೋಮಾಳ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವುದನ್ನು ವಿರೋಧಿಸಿ ನಡೆದ ಪ್ರತಿಭಟನೆಗಳ ಹಿನ್ನೆಲೆಯಲ್ಲಿ, ಅಸ್ಸಾಂನ ಸಾಮಾಜಿಕ ಕಾರ್ಯಕರ್ತ...

ಬಿಡದಿ ಟೌನ್‌ಶಿಪ್: ಸರ್ಕಾರದ ಸರ್ವಾಧಿಕಾರಿ ಧೋರಣೆಗೆ ‘ಸಂಯುಕ್ತ ಹೋರಾಟ ಸಮಿತಿ’ ತೀವ್ರ ಖಂಡನೆ

"ಬಿಡದಿ ಟೌನ್‌ಶಿಪ್ ಯೋಜನೆಯು ತೀವ್ರ ವಿವಾದದಲ್ಲಿರುವಾಗಲೇ ರೈತರೊಂದಿಗೆ ಯಾವುದೇ ಮಾತುಕತೆ ನಡೆಸದೆ, ಪೊಲೀಸ್ ಬಲಪ್ರಯೋಗದ ಮೂಲಕ ಸರ್ವಾಧಿಕಾರಿ ರೀತಿಯಲ್ಲಿ ಜಂಟಿ ಸರ್ವೆ (JMC) ನಡೆಸಲು ಮುಂದಾಗಿರುವ ಸರ್ಕಾರದ ಕ್ರಮ ಅತ್ಯಂತ ಖಂಡನೀಯ" ಎಂದು...

ಜ್ಞಾನವಾಪಿ, ಮಥುರಾ, ಸಂಭಾಲ್ ದೇವಾಲಯ-ಮಸೀದಿಗಳ ವಿವಾದ : ಸುಪ್ರೀಂ ಕೋರ್ಟ್‌ನ ಮಧ್ಯಸ್ಥಿಕೆ ಪ್ರಸ್ತಾಪ ತಿರಸ್ಕರಿಸಿದ ಹಿಂದೂ-ಮುಸ್ಲಿಂ ಪಕ್ಷಗಳು

ಧಾರ್ಮಿಕ ಸ್ಥಳಗಳ ವಿವಾದಗಳಿಗೆ ಸೌಹಾರ್ದಯುತ ಪರಿಹಾರವನ್ನು ಕಂಡುಕೊಳ್ಳುವ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ಹೆಜ್ಜೆಯನ್ನಿಟ್ಟಿದೆ. ವಾರಣಾಸಿಯ ಜ್ಞಾನವಾಪಿ ಮಸೀದಿ ವಿವಾದ, ಮಥುರಾದ ಕೃಷ್ಣ ಜನ್ಮಭೂಮಿ-ಶಾಹಿ ಇದ್ಗಾ ವಿವಾದ ಮತ್ತು ಸಂಭಾಲ್ ಜಮಾ ಮಸೀದಿ...