Homeಮುಖಪುಟದಲಿತ ಸಮುದಾಯದ ಮೆರವಣಿಗೆಯಲ್ಲಿ ಭಾಗವಹಿಸಿದ್ದಕ್ಕೆ ಅಗ್ನಿಪರೀಕ್ಷೆ ಎದುರಿಸಿದ ಫ್ರೆಂಚ್‌ ನಿರ್ದೇಶಕ

ದಲಿತ ಸಮುದಾಯದ ಮೆರವಣಿಗೆಯಲ್ಲಿ ಭಾಗವಹಿಸಿದ್ದಕ್ಕೆ ಅಗ್ನಿಪರೀಕ್ಷೆ ಎದುರಿಸಿದ ಫ್ರೆಂಚ್‌ ನಿರ್ದೇಶಕ

- Advertisement -
- Advertisement -

ಉತ್ತರಪ್ರದೇಶದ ಗೋರಖ್‌ಪುರದಲ್ಲಿ ದಲಿತ ಸಮುದಾಯದ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದಕ್ಕೆ ಫ್ರೆಂಚ್‌ ಚಲನಚಿತ್ರ ನಿರ್ದೇಶಕ ವ್ಯಾಲೆಂಟಿನ್‌ ಹೆನಾಲ್ಟ್‌ ಅವರನ್ನು ಕಳೆದ ಅಕ್ಟೋಬರ್‌ನಲ್ಲಿ ಬಂಧಿಸಲಾಗಿತ್ತು. ಅವರು ನಂತರ ಜಾಮೀನಿನ ಮೇಲೆ ಬಿಡುಗಡೆಯಾದರು ಆದರೆ ಬಿಡುಗಡೆಯಾದ ಆರು ತಿಂಗಳ ನಂತರವೂ ಅವರಿಗೆ ತಮ್ಮ ತವರಿಗೆ ಹೋಗಲು ಸಾಧ್ಯವಾಗಿರಲಿಲ್ಲ, ಇದೀಗ ದೀರ್ಘ ಕಾನೂನು ಹೋರಾಟದ ಬಳಿಕ ವ್ಯಾಲೆಂಟಿನ್‌ ಹೆನಾಲ್ಟ್‌  ಪ್ರಾನ್ಸ್‌ಗೆ ತೆರಳಿದ್ದಾರೆ ಎಂದು ‘ಲೆ ಮಾಂಡೆ’ ವೆಬ್‌ಸೈಟ್ ವರದಿ ಮಾಡಿದೆ.

ದಲಿತ ಮಹಿಳೆಯರ ಮೇಲಿನ ದೌರ್ಜನ್ಯವನ್ನು ಕೇಂದ್ರೀಕರಿಸುವ ಚಲನಚಿತ್ರದಲ್ಲಿ ಕೆಲಸ ಮಾಡಲು ಹೆನಾಲ್ಟ್ ಆಗಸ್ಟ್ 10, 2023ರಂದು ಭಾರತಕ್ಕೆ ಆಗಮಿಸಿದ್ದರು. ಅವರು ಉತ್ತರಪ್ರದೇಶಕ್ಕಿಂತ ಮೊದಲು ಬಿಹಾರ ಮತ್ತು ಜಾರ್ಖಂಡ್‌ಗಳಲ್ಲಿ ಪ್ರಯಾಣಿಸಿದ್ದರು. ಅಕ್ಟೋಬರ್ 10, 2023ರಂದು ಉತ್ತರಪ್ರದೇಶದಲ್ಲಿ ದಲಿತರಿಗೆ ಭೂಮಿಯ ಹಕ್ಕುಗಳಿಗೆ ಒತ್ತಾಯಿಸಿ ರೈತ ಮಹಿಳೆಯರ ನೇತೃತ್ವದಲ್ಲಿ ನಡೆದ “ಅಂಬೇಡ್ಕರ್ ಜನರ ಮೆರವಣಿಗೆ”ಯಲ್ಲಿ ಹೆನಾಲ್ಟ್  ಭಾಗವಹಿಸಿದ್ದರು. ವೇದಿಕೆಯಲ್ಲಿದ್ದ ಭಾಷಣಕಾರರೊಬ್ಬರಿಗೆ ಹೆನಾಲ್ಟ್  ಬಗ್ಗೆ ಮೊದಲೇ ಪರಿಚಯವಿದ್ದ ಕಾರಣ ಅವರು ಭಾಷಣದಲ್ಲಿ ವಿದೇಶಿ ವ್ಯಕ್ತಿಯೋರ್ವರು ಪ್ರತಿಭಟನೆಯಲ್ಲಿ ಉಪಸ್ಥಿತರಿದ್ದಾರೆ ಎಂದು ಹೇಳಿದ್ದರು. ಇದರ ಬೆನ್ನಲ್ಲಿ ಹೆನಾಲ್ಟ್ ಅವರನ್ನು ಸ್ಥಳೀಯ ಗುಪ್ತಚರ ಇಲಾಖೆ ಏಜೆಂಟರು ಸುತ್ತುವರಿದಿದ್ದರು. ಪೊಲೀಸರು ಸ್ಥಳದಲ್ಲೇ  ಹೆನಾಲ್ಟ್ ಅವರನ್ನು ಪ್ರಶ್ನಿಸಿದ್ದಾರೆ. ಈ ವೇಳೆ ಅವರಿಗೆ ತೆರಳಲು ಅನುಮತಿ ನೀಡಿದ್ದರೂ, ಅದೇ ದಿನ ಅವರು ತಂಗಿದ್ದ ಹೋಟೆಲ್ ಕೊಠಡಿಯಿಂದ ಪೊಲೀಸ್ ಠಾಣೆಗೆ ಅವರನ್ನು ಕರೆದೊಯ್ಯಲಾಗಿದೆ. ವಿದೇಶಿ ಕಾಯಿದೆಯ ಕಲಂ 14ಬಿ ಅಡಿಯಲ್ಲಿ “ವೀಸಾ ಷರತ್ತುಗಳನ್ನು ಉಲ್ಲಂಘಿಸಿದ್ದಾರೆ” ಎಂದು ಆರೋಪಿಸಿ ಪೊಲೀಸರು ಅವರನ್ನು ಬಂಧಿಸಿದ್ದರು.

ವೀಸಾದಲ್ಲಿ ಜಾರ್ಖಂಡ್‌ನಿಂದ ಹೊರಹೋಗಲು ಅನುಮತಿಸಲಾಗಿಲ್ಲ ಎಂದು ಅಧಿಕಾರಿಗಳು ಹೇಳಿದ್ದರು. ಆದರೆ ವರದಿಯ ಪ್ರಕಾರ, ಇದು ಸುಳ್ಳು ಆರೋಪವಾಗಿದ್ದು, ಅವರು ಬ್ಯುಸಿನೆಸ್‌ ವೀಸಾದಲ್ಲಿ ಬಂದಿದ್ದಾರೆ, ಈ ವೀಸಾ ಒಂದು ವರ್ಷದವರೆಗೆ ಮಾನ್ಯತೆ ಹೊಂದಿದೆ ಮತ್ತು ಯಾವುದೇ ಭೌಗೋಳಿಕ ನಿರ್ಬಂಧಗಳನ್ನು ಒಳಗೊಂಡಿಲ್ಲ ಎಂದು ಹೇಳಲಾಗಿದೆ.

ಬಂಧನಕ್ಕೊಳಗಾದ ಒಂದು ದಿನದ ನಂತರ ನ್ಯಾಯಾಧೀಶರು ಅವರ ಬಂಧನಕ್ಕೆ ಸಂಬಂಧಿಸಿದ ದಾಖಲೆಗಳಿಗೆ ಸಹಿ ಹಾಕಿದರು, ನಂತರ ಅವರನ್ನು ಗೋರಖ್‌ಪುರ ಜೈಲಿಗೆ ಕಳುಹಿಸಲಾಯಿತು. ನಾನು ನೆಲದ ಮೇಲೆ ಮಲಗಿದೆ, ರಾತ್ರಿಯಲ್ಲಿ ತಿರುಗಲು ಕೂಡ ಅಸಾಧ್ಯವಾದ ಕಡಿಮೆ ಸ್ಥಳಾವಕಾಶ ನೀಡಲಾಗಿತ್ತು ಎಂದು ಫ್ರೆಂಚ್ ದೈನಿಕದ ಜೊತೆ ತನ್ನ ಜೈಲು ಶಿಕ್ಷೆಯ ಬಗ್ಗೆ ಮಾತನಾಡುವಾಗ ಹೆನಾಲ್ಟ್ ಹೇಳಿರುವುದಾಗಿ ಉಲ್ಲೇಖಿಸಿದೆ. ವರದಿಯ ಪ್ರಕಾರ, ಮಾನಸಿಕ ಅಸ್ವಸ್ಥ ವ್ಯಕ್ತಿಗಳಿಗೆ ಮೀಸಲಾದ ಸೆಲ್‌ನಲ್ಲಿ ಅವರನ್ನು ಇರಿಸಲಾಗಿತ್ತು.

ಬಂಧನದ ಬಳಿಕ ಹೆನಾಲ್ಟ್ ಜೈಲಿನಿಂದ ಫ್ರೆಂಚ್ ರಾಯಭಾರ ಕಚೇರಿಯನ್ನು ಸಂಪರ್ಕಿಸಿದ್ದು, ರಾಯಭಾರ ಕಚೇರಿಯು ವಕೀಲರ ಸಂಪರ್ಕವನ್ನು ಒದಗಿಸಿದೆ. ಅವರ ಬಂಧನದ ನಂತರ ಮೂರನೇ ವಾರದಲ್ಲಿ, ರಾಯಭಾರ ಕಚೇರಿಯ ಅಧಿಕಾರಿಯೊಬ್ಬರು ಜೈಲಿನಲ್ಲಿ ಅವರನ್ನು ಭೇಟಿಯಾದರು. ಆ ಬಳಿಕ ಅವರ ತಂದೆ ಅವರನ್ನು ಭೇಟಿ ಮಾಡಲು ಭಾರತಕ್ಕೆ ಬಂದರು ಮತ್ತು ವಕೀಲರನ್ನು ಬದಲಾಯಿಸಿದರು, ಬಳಿಕ ಜಾಮೀನು ಪಡೆಯುವಲ್ಲಿ ಅವರು ಯಶಸ್ವಿಯಾಗಿದ್ದರು. ಆದರೆ ಅವರು ತವರಿಗೆ ತೆರಳಲು ಸಾಧ್ಯವಾಗಿರಲಿಲ್ಲ. ಹೆನಾಲ್ಟ್  ಅವರ ಪಾಸ್‌ಪೋರ್ಟ್ ಮೇ ತಿಂಗಳವರೆಗೆ ಪೊಲೀಸರ ಬಳಿ ಇತ್ತು. ಸತತ ಕಾನೂನು ಹೊರಾಟದ ಬಳಿಕ ಅವರು ಕೊನೆಗೆ ಇದೇ ಮೇ.4ರಂದು ಭಾರತವನ್ನು ತೊರೆದು ಪ್ರಾನ್ಸ್‌ಗೆ ವಾಪಾಸ್ಸಾಗಿದ್ದಾರೆ.

ಇದನ್ನು ಓದಿ: ಮೋದಿ ಕುರಿತ ಧ್ರುವ್‌ ರಾಥಿ ವಿಡಿಯೋ ಹಂಚಿಕೊಂಡ ವಕೀಲನ ವಿರುದ್ಧ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡ ಪೊಲೀಸರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ಯಾಲೆಸ್ತೀನ್ ಜನರೊಂದಿಗೆ ಒಗ್ಗಟ್ಟು ಪ್ರದರ್ಶನ: ದೆಹಲಿಯ ಮೆಕ್‌ಡೊನಾಲ್ಡ್ಸ್ ಹೊರಗೆ ಪ್ರತಿಭಟನೆ

ಪ್ಯಾಲೆಸ್ಟೈನ್ ಜೊತೆ ಒಗ್ಗಟ್ಟಿನ ಭಾರತೀಯ ಜನರು (ಐಪಿಎಸ್‌ಪಿ) ಗುಂಪಿನ ಸದಸ್ಯರು (ಏ.3) ಜನಪಥ್ ಪ್ರದೇಶದ ಮೆಕ್‌ಡೊನಾಲ್ಡ್ಸ್ ಔಟ್‌ಲೆಟ್‌ನ ಹೊರಗೆ ದಿಢೀರ್ ಪ್ರತಿಭಟನೆಯನ್ನು ಆಯೋಜಿಸಿದ್ದರು. ಪ್ಯಾಲೆಸ್ತೀನಿಯನ್ನರನ್ನು ಒಳಗೊಂಡ ನಡೆಯುತ್ತಿರುವ ಸಂಘರ್ಷದಲ್ಲಿ ಮೆಕ್‌ಡೊನಾಲ್ಡ್ಸ್ ಮತ್ತು ಕೋಕಾ-ಕೋಲಾದಂತಹ ಬಹುರಾಷ್ಟ್ರೀಯ...

‘ಇರಾನಿಯನ್ನರು ಸ್ಮಾರ್ಟ್ ಚೆಸ್ ಆಡುತ್ತಿದ್ದು, ಟ್ರಂಪ್ ಭ್ರಮಾಲೋಕದಲ್ಲಿದ್ದಾರೆ..’; ಮಾಜಿ ರಾಜತಾಂತ್ರಿಕ ಅಧಿಕಾರಿ ಕೆ.ಪಿ. ಫ್ಯಾಬಿಯನ್

ಪ್ರಸ್ತುತ ನಡೆಯುತ್ತಿರುವ ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಮಾತನಾಡಿದ ಭಾರತದ ಮಾಜಿ ರಾಯಭಾರಿ ಕೆ.ಪಿ. ಫ್ಯಾಬಿಯನ್, "ಇರಾನಿಯನ್ನರು ಸ್ಮಾರ್ಟ್ ಚೆಸ್ ಆಟವನ್ನು ಆಡುತ್ತಿದ್ದಾರೆ. ಆದರೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳು...

‘ನಾನು ಸಂಸತ್ತಿಗೆ ಹೋಗುವುದು ಗದ್ದಲ ಸೃಷ್ಟಿಸಲು ಅಲ್ಲ’ : ಎಎಪಿ ಆರೋಪಗಳನ್ನು ತಳ್ಳಿ ಹಾಕಿದ ರಾಘವ್ ಚಡ್ಡಾ

ತನ್ನ ವಿರುದ್ದ ಆಮ್‌ ಆದ್ಮಿ ಪಕ್ಷ (ಎಎಪಿ) ಮಾಡಿರುವ ಎಲ್ಲಾ ಆರೋಪಗಳನ್ನು ರಾಘವ್ ಚಡ್ಡಾ ಶನಿವಾರ (ಏ.4) ಅಲ್ಲಗಳೆದಿದ್ದು, "ಅವೆಲ್ಲವೂ ಸುಳ್ಳು ಮತ್ತು ಸಂಘಟಿತ ಅಭಿಯಾನದ ಭಾಗ" ಎಂದಿದ್ದಾರೆ. "ಸಂಸತ್ತಿನಲ್ಲಿ ನನ್ನ ಉದ್ದೇಶ...

ಎಡರಂಗದಲ್ಲಿ ಎಡಪಂಥೀಯರೇ ಇಲ್ಲ; ದ್ವೇಷ ಹರಡುವ ಜನರೊಂದಿಗೆ ಪಿಣರಾಯಿ ಪಾಲುದಾರಿಕೆ ಹೊಂದಿದ್ದಾರೆ: ರಾಹುಲ್ ಗಾಂಧಿ

ಕೇರಳ ವಿಧಾನಸಭಾ ಚುನಾವಣೆ ಪ್ರಚಾರವು ಅಂತಿಮ ಹಂತಕ್ಕೆ ತಲುಪುತ್ತಿದ್ದಂತೆ ತೀಕ್ಷ್ಣವಾದ ರಾಜಕೀಯ ದಾಳಿಯನ್ನು ಆರಂಭಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, "ಸಿಪಿಐ-ಎಂ ನೇತೃತ್ವದ ಎಡಪಕ್ಷವು ತನ್ನ ಸೈದ್ಧಾಂತಿಕ ತಿರುಳನ್ನು ಕಳೆದುಕೊಳ್ಳುತ್ತಿದೆ" ಎಂದು ಆರೋಪಿಸಿದ್ದಾರೆ. "ಎಲ್‌ಡಿಎಫ್...

ಬಿಜೆಪಿ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಅಂದಿದ್ದೆ : ಅಣ್ಣಾಮಲೈ

"ವಿಧಾನಸಭಾ ಚುನಾವಣೆಗೆ ಬಿಜೆಪಿ ನನಗೆ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಎಂದು ಮುಂಚಿತವಾಗಿ ಹೈಕಮಾಂಡ್‌ಗೆ ತಿಳಿಸಿದ್ದೆ" ಎಂದು ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಶನಿವಾರ...

ಸುರಕ್ಷಿತವಾಗಿ ಹಾರ್ಮುಜ್ ದಾಟಿದ 7ನೇ ಎಲ್‌ಪಿಜಿ ಹಡಗು; ಸರದಿಯಲ್ಲಿ ಕಾಯುತ್ತಿವೆ ಭಾರತದ 17 ಟ್ಯಾಂಕರ್‌ಗಳು

ಭಾರತದ ಧ್ವಜ ಹೊಂದಿದ್ದ ಮತ್ತೊಂದು ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಟ್ಯಾಂಕರ್, ಗ್ರೀನ್ ಸಾನ್ವಿ ಹೆಸರಿನ ಹಡಗು ಹಾರ್ಮುಜ್ ಜಲಸಂಧಿಯ ಪೂರ್ವಕ್ಕೆ ಯಶಸ್ವಿಯಾಗಿ ತಲುಪಿದೆ. ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ನಡೆಯುತ್ತಿರುವ ಪಶ್ಚಿಮ...

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...