Homeಮುಖಪುಟದಲಿತ ಸಮುದಾಯದ ಮೆರವಣಿಗೆಯಲ್ಲಿ ಭಾಗವಹಿಸಿದ್ದಕ್ಕೆ ಅಗ್ನಿಪರೀಕ್ಷೆ ಎದುರಿಸಿದ ಫ್ರೆಂಚ್‌ ನಿರ್ದೇಶಕ

ದಲಿತ ಸಮುದಾಯದ ಮೆರವಣಿಗೆಯಲ್ಲಿ ಭಾಗವಹಿಸಿದ್ದಕ್ಕೆ ಅಗ್ನಿಪರೀಕ್ಷೆ ಎದುರಿಸಿದ ಫ್ರೆಂಚ್‌ ನಿರ್ದೇಶಕ

- Advertisement -
- Advertisement -

ಉತ್ತರಪ್ರದೇಶದ ಗೋರಖ್‌ಪುರದಲ್ಲಿ ದಲಿತ ಸಮುದಾಯದ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದಕ್ಕೆ ಫ್ರೆಂಚ್‌ ಚಲನಚಿತ್ರ ನಿರ್ದೇಶಕ ವ್ಯಾಲೆಂಟಿನ್‌ ಹೆನಾಲ್ಟ್‌ ಅವರನ್ನು ಕಳೆದ ಅಕ್ಟೋಬರ್‌ನಲ್ಲಿ ಬಂಧಿಸಲಾಗಿತ್ತು. ಅವರು ನಂತರ ಜಾಮೀನಿನ ಮೇಲೆ ಬಿಡುಗಡೆಯಾದರು ಆದರೆ ಬಿಡುಗಡೆಯಾದ ಆರು ತಿಂಗಳ ನಂತರವೂ ಅವರಿಗೆ ತಮ್ಮ ತವರಿಗೆ ಹೋಗಲು ಸಾಧ್ಯವಾಗಿರಲಿಲ್ಲ, ಇದೀಗ ದೀರ್ಘ ಕಾನೂನು ಹೋರಾಟದ ಬಳಿಕ ವ್ಯಾಲೆಂಟಿನ್‌ ಹೆನಾಲ್ಟ್‌  ಪ್ರಾನ್ಸ್‌ಗೆ ತೆರಳಿದ್ದಾರೆ ಎಂದು ‘ಲೆ ಮಾಂಡೆ’ ವೆಬ್‌ಸೈಟ್ ವರದಿ ಮಾಡಿದೆ.

ದಲಿತ ಮಹಿಳೆಯರ ಮೇಲಿನ ದೌರ್ಜನ್ಯವನ್ನು ಕೇಂದ್ರೀಕರಿಸುವ ಚಲನಚಿತ್ರದಲ್ಲಿ ಕೆಲಸ ಮಾಡಲು ಹೆನಾಲ್ಟ್ ಆಗಸ್ಟ್ 10, 2023ರಂದು ಭಾರತಕ್ಕೆ ಆಗಮಿಸಿದ್ದರು. ಅವರು ಉತ್ತರಪ್ರದೇಶಕ್ಕಿಂತ ಮೊದಲು ಬಿಹಾರ ಮತ್ತು ಜಾರ್ಖಂಡ್‌ಗಳಲ್ಲಿ ಪ್ರಯಾಣಿಸಿದ್ದರು. ಅಕ್ಟೋಬರ್ 10, 2023ರಂದು ಉತ್ತರಪ್ರದೇಶದಲ್ಲಿ ದಲಿತರಿಗೆ ಭೂಮಿಯ ಹಕ್ಕುಗಳಿಗೆ ಒತ್ತಾಯಿಸಿ ರೈತ ಮಹಿಳೆಯರ ನೇತೃತ್ವದಲ್ಲಿ ನಡೆದ “ಅಂಬೇಡ್ಕರ್ ಜನರ ಮೆರವಣಿಗೆ”ಯಲ್ಲಿ ಹೆನಾಲ್ಟ್  ಭಾಗವಹಿಸಿದ್ದರು. ವೇದಿಕೆಯಲ್ಲಿದ್ದ ಭಾಷಣಕಾರರೊಬ್ಬರಿಗೆ ಹೆನಾಲ್ಟ್  ಬಗ್ಗೆ ಮೊದಲೇ ಪರಿಚಯವಿದ್ದ ಕಾರಣ ಅವರು ಭಾಷಣದಲ್ಲಿ ವಿದೇಶಿ ವ್ಯಕ್ತಿಯೋರ್ವರು ಪ್ರತಿಭಟನೆಯಲ್ಲಿ ಉಪಸ್ಥಿತರಿದ್ದಾರೆ ಎಂದು ಹೇಳಿದ್ದರು. ಇದರ ಬೆನ್ನಲ್ಲಿ ಹೆನಾಲ್ಟ್ ಅವರನ್ನು ಸ್ಥಳೀಯ ಗುಪ್ತಚರ ಇಲಾಖೆ ಏಜೆಂಟರು ಸುತ್ತುವರಿದಿದ್ದರು. ಪೊಲೀಸರು ಸ್ಥಳದಲ್ಲೇ  ಹೆನಾಲ್ಟ್ ಅವರನ್ನು ಪ್ರಶ್ನಿಸಿದ್ದಾರೆ. ಈ ವೇಳೆ ಅವರಿಗೆ ತೆರಳಲು ಅನುಮತಿ ನೀಡಿದ್ದರೂ, ಅದೇ ದಿನ ಅವರು ತಂಗಿದ್ದ ಹೋಟೆಲ್ ಕೊಠಡಿಯಿಂದ ಪೊಲೀಸ್ ಠಾಣೆಗೆ ಅವರನ್ನು ಕರೆದೊಯ್ಯಲಾಗಿದೆ. ವಿದೇಶಿ ಕಾಯಿದೆಯ ಕಲಂ 14ಬಿ ಅಡಿಯಲ್ಲಿ “ವೀಸಾ ಷರತ್ತುಗಳನ್ನು ಉಲ್ಲಂಘಿಸಿದ್ದಾರೆ” ಎಂದು ಆರೋಪಿಸಿ ಪೊಲೀಸರು ಅವರನ್ನು ಬಂಧಿಸಿದ್ದರು.

ವೀಸಾದಲ್ಲಿ ಜಾರ್ಖಂಡ್‌ನಿಂದ ಹೊರಹೋಗಲು ಅನುಮತಿಸಲಾಗಿಲ್ಲ ಎಂದು ಅಧಿಕಾರಿಗಳು ಹೇಳಿದ್ದರು. ಆದರೆ ವರದಿಯ ಪ್ರಕಾರ, ಇದು ಸುಳ್ಳು ಆರೋಪವಾಗಿದ್ದು, ಅವರು ಬ್ಯುಸಿನೆಸ್‌ ವೀಸಾದಲ್ಲಿ ಬಂದಿದ್ದಾರೆ, ಈ ವೀಸಾ ಒಂದು ವರ್ಷದವರೆಗೆ ಮಾನ್ಯತೆ ಹೊಂದಿದೆ ಮತ್ತು ಯಾವುದೇ ಭೌಗೋಳಿಕ ನಿರ್ಬಂಧಗಳನ್ನು ಒಳಗೊಂಡಿಲ್ಲ ಎಂದು ಹೇಳಲಾಗಿದೆ.

ಬಂಧನಕ್ಕೊಳಗಾದ ಒಂದು ದಿನದ ನಂತರ ನ್ಯಾಯಾಧೀಶರು ಅವರ ಬಂಧನಕ್ಕೆ ಸಂಬಂಧಿಸಿದ ದಾಖಲೆಗಳಿಗೆ ಸಹಿ ಹಾಕಿದರು, ನಂತರ ಅವರನ್ನು ಗೋರಖ್‌ಪುರ ಜೈಲಿಗೆ ಕಳುಹಿಸಲಾಯಿತು. ನಾನು ನೆಲದ ಮೇಲೆ ಮಲಗಿದೆ, ರಾತ್ರಿಯಲ್ಲಿ ತಿರುಗಲು ಕೂಡ ಅಸಾಧ್ಯವಾದ ಕಡಿಮೆ ಸ್ಥಳಾವಕಾಶ ನೀಡಲಾಗಿತ್ತು ಎಂದು ಫ್ರೆಂಚ್ ದೈನಿಕದ ಜೊತೆ ತನ್ನ ಜೈಲು ಶಿಕ್ಷೆಯ ಬಗ್ಗೆ ಮಾತನಾಡುವಾಗ ಹೆನಾಲ್ಟ್ ಹೇಳಿರುವುದಾಗಿ ಉಲ್ಲೇಖಿಸಿದೆ. ವರದಿಯ ಪ್ರಕಾರ, ಮಾನಸಿಕ ಅಸ್ವಸ್ಥ ವ್ಯಕ್ತಿಗಳಿಗೆ ಮೀಸಲಾದ ಸೆಲ್‌ನಲ್ಲಿ ಅವರನ್ನು ಇರಿಸಲಾಗಿತ್ತು.

ಬಂಧನದ ಬಳಿಕ ಹೆನಾಲ್ಟ್ ಜೈಲಿನಿಂದ ಫ್ರೆಂಚ್ ರಾಯಭಾರ ಕಚೇರಿಯನ್ನು ಸಂಪರ್ಕಿಸಿದ್ದು, ರಾಯಭಾರ ಕಚೇರಿಯು ವಕೀಲರ ಸಂಪರ್ಕವನ್ನು ಒದಗಿಸಿದೆ. ಅವರ ಬಂಧನದ ನಂತರ ಮೂರನೇ ವಾರದಲ್ಲಿ, ರಾಯಭಾರ ಕಚೇರಿಯ ಅಧಿಕಾರಿಯೊಬ್ಬರು ಜೈಲಿನಲ್ಲಿ ಅವರನ್ನು ಭೇಟಿಯಾದರು. ಆ ಬಳಿಕ ಅವರ ತಂದೆ ಅವರನ್ನು ಭೇಟಿ ಮಾಡಲು ಭಾರತಕ್ಕೆ ಬಂದರು ಮತ್ತು ವಕೀಲರನ್ನು ಬದಲಾಯಿಸಿದರು, ಬಳಿಕ ಜಾಮೀನು ಪಡೆಯುವಲ್ಲಿ ಅವರು ಯಶಸ್ವಿಯಾಗಿದ್ದರು. ಆದರೆ ಅವರು ತವರಿಗೆ ತೆರಳಲು ಸಾಧ್ಯವಾಗಿರಲಿಲ್ಲ. ಹೆನಾಲ್ಟ್  ಅವರ ಪಾಸ್‌ಪೋರ್ಟ್ ಮೇ ತಿಂಗಳವರೆಗೆ ಪೊಲೀಸರ ಬಳಿ ಇತ್ತು. ಸತತ ಕಾನೂನು ಹೊರಾಟದ ಬಳಿಕ ಅವರು ಕೊನೆಗೆ ಇದೇ ಮೇ.4ರಂದು ಭಾರತವನ್ನು ತೊರೆದು ಪ್ರಾನ್ಸ್‌ಗೆ ವಾಪಾಸ್ಸಾಗಿದ್ದಾರೆ.

ಇದನ್ನು ಓದಿ: ಮೋದಿ ಕುರಿತ ಧ್ರುವ್‌ ರಾಥಿ ವಿಡಿಯೋ ಹಂಚಿಕೊಂಡ ವಕೀಲನ ವಿರುದ್ಧ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡ ಪೊಲೀಸರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ತೆರೆಮರೆಯಲ್ಲಿ ಏನೋ ಅನುಮಾನಾಸ್ಪದ ಘಟನೆ ನಡೆದಿದೆ..’; ಅಜಿತ್ ವಿಮಾನ ಅಪಘಾತದ ಕುರಿತು ಅನುಮಾನ ವ್ಯಕ್ತಪಡಿಸಿದ ರಾವತ್

ಜನವರಿ 28, 2026 ರಂದು ಮಹಾರಾಷ್ಟ್ರದ ಬಾರಾಮತಿ ಬಳಿ ನಡೆದ ವಿಮಾನ ಅಪಘಾತದಲ್ಲಿ ಉಪಮುಖ್ಯಮಂತ್ರಿ ಮತ್ತು ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಹಠಾತ್ ಸಾವು ಸಾಕಷ್ಟು ಅನುಮಾನಗಳನ್ನು ಹುಟ್ಟುಹಾಕಿದೆ. ರಾಜಕೀಯ ವಲಯದಿಂದ...

ಸಿಜೆ ರಾಯ್ ಸಾವಿನ ನ್ಯಾಯಾಂಗ ತನಿಖೆ ಆಗ್ರಹಿಸಿದ ಕೇರಳ ಸಿಎಂ ಪಿಣರಾಯಿ ವಿಜಯನ್ : ಲೋಕಸಭೆಯಲ್ಲಿ ಚರ್ಚೆಗೆ ಕಾಂಗ್ರೆಸ್ ಆಗ್ರಹ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿ.ಜೆ ರಾಯ್ ಅವರ ಸಾವಿನ ಬಗ್ಗೆ ನ್ಯಾಯಾಂಗ ತನಿಖೆಗೆ ಆದೇಶಿಸುವಂತೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಭಾನುವಾರ...

ಮಹಾರಾಷ್ಟ್ರ ಉಪ ಮುಖ್ಯಮಂತ್ರಿಯಾಗಿ ಸುನೇತ್ರಾ ಪವಾರ್ ನೇಮಕದ ಹಿಂದೆ ಬಿಜೆಪಿ ನಾಯಕತ್ವದ ಮಾಸ್ಟರ್ ಮೈಂಡ್: ‘ಸಾಮ್ನಾ’

ಮಹಾರಾಷ್ಟ್ರದ ವಿರೋಧ ಪಕ್ಷವಾದ ಶಿವಸೇನೆ (ಯುಬಿಟಿ), ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ನಾಯಕಿ ಸುನೇತ್ರಾ ಪವಾರ್ ಅವರು ಪತಿ ಅಜಿತ್ ಪವಾರ್ ನಿಧನರಾದ ಕೆಲವೇ ದಿನಗಳಲ್ಲಿ ರಾಜ್ಯದ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ...

ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಹೆಸರು ಉಲ್ಲೇಖ : ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದ್ದೇನು?

ಜಗತ್ತಿನಾದ್ಯಂತ ಚರ್ಚೆಯ ವಿಷಯವಾಗಿರುವ ಜೆಫ್ರಿ ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಅವರ ಹೆಸರಿದೆ, ಪುರಿ ಮತ್ತು ಎಪ್‌ಸ್ಟೀನ್ ನಡುವೆ ಇ-ಮೇಲ್ ಸಂಭಾಷಣೆಗಳು ನಡೆದಿವೆ. ಈ ಇ-ಮೇಲ್‌ಗಳು ಕೇವಲ ವ್ಯವಹಾರಿಕ...

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...