Homeಮುಖಪುಟದಲಿತ ಸಮುದಾಯದ ಮೆರವಣಿಗೆಯಲ್ಲಿ ಭಾಗವಹಿಸಿದ್ದಕ್ಕೆ ಅಗ್ನಿಪರೀಕ್ಷೆ ಎದುರಿಸಿದ ಫ್ರೆಂಚ್‌ ನಿರ್ದೇಶಕ

ದಲಿತ ಸಮುದಾಯದ ಮೆರವಣಿಗೆಯಲ್ಲಿ ಭಾಗವಹಿಸಿದ್ದಕ್ಕೆ ಅಗ್ನಿಪರೀಕ್ಷೆ ಎದುರಿಸಿದ ಫ್ರೆಂಚ್‌ ನಿರ್ದೇಶಕ

- Advertisement -
- Advertisement -

ಉತ್ತರಪ್ರದೇಶದ ಗೋರಖ್‌ಪುರದಲ್ಲಿ ದಲಿತ ಸಮುದಾಯದ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದಕ್ಕೆ ಫ್ರೆಂಚ್‌ ಚಲನಚಿತ್ರ ನಿರ್ದೇಶಕ ವ್ಯಾಲೆಂಟಿನ್‌ ಹೆನಾಲ್ಟ್‌ ಅವರನ್ನು ಕಳೆದ ಅಕ್ಟೋಬರ್‌ನಲ್ಲಿ ಬಂಧಿಸಲಾಗಿತ್ತು. ಅವರು ನಂತರ ಜಾಮೀನಿನ ಮೇಲೆ ಬಿಡುಗಡೆಯಾದರು ಆದರೆ ಬಿಡುಗಡೆಯಾದ ಆರು ತಿಂಗಳ ನಂತರವೂ ಅವರಿಗೆ ತಮ್ಮ ತವರಿಗೆ ಹೋಗಲು ಸಾಧ್ಯವಾಗಿರಲಿಲ್ಲ, ಇದೀಗ ದೀರ್ಘ ಕಾನೂನು ಹೋರಾಟದ ಬಳಿಕ ವ್ಯಾಲೆಂಟಿನ್‌ ಹೆನಾಲ್ಟ್‌  ಪ್ರಾನ್ಸ್‌ಗೆ ತೆರಳಿದ್ದಾರೆ ಎಂದು ‘ಲೆ ಮಾಂಡೆ’ ವೆಬ್‌ಸೈಟ್ ವರದಿ ಮಾಡಿದೆ.

ದಲಿತ ಮಹಿಳೆಯರ ಮೇಲಿನ ದೌರ್ಜನ್ಯವನ್ನು ಕೇಂದ್ರೀಕರಿಸುವ ಚಲನಚಿತ್ರದಲ್ಲಿ ಕೆಲಸ ಮಾಡಲು ಹೆನಾಲ್ಟ್ ಆಗಸ್ಟ್ 10, 2023ರಂದು ಭಾರತಕ್ಕೆ ಆಗಮಿಸಿದ್ದರು. ಅವರು ಉತ್ತರಪ್ರದೇಶಕ್ಕಿಂತ ಮೊದಲು ಬಿಹಾರ ಮತ್ತು ಜಾರ್ಖಂಡ್‌ಗಳಲ್ಲಿ ಪ್ರಯಾಣಿಸಿದ್ದರು. ಅಕ್ಟೋಬರ್ 10, 2023ರಂದು ಉತ್ತರಪ್ರದೇಶದಲ್ಲಿ ದಲಿತರಿಗೆ ಭೂಮಿಯ ಹಕ್ಕುಗಳಿಗೆ ಒತ್ತಾಯಿಸಿ ರೈತ ಮಹಿಳೆಯರ ನೇತೃತ್ವದಲ್ಲಿ ನಡೆದ “ಅಂಬೇಡ್ಕರ್ ಜನರ ಮೆರವಣಿಗೆ”ಯಲ್ಲಿ ಹೆನಾಲ್ಟ್  ಭಾಗವಹಿಸಿದ್ದರು. ವೇದಿಕೆಯಲ್ಲಿದ್ದ ಭಾಷಣಕಾರರೊಬ್ಬರಿಗೆ ಹೆನಾಲ್ಟ್  ಬಗ್ಗೆ ಮೊದಲೇ ಪರಿಚಯವಿದ್ದ ಕಾರಣ ಅವರು ಭಾಷಣದಲ್ಲಿ ವಿದೇಶಿ ವ್ಯಕ್ತಿಯೋರ್ವರು ಪ್ರತಿಭಟನೆಯಲ್ಲಿ ಉಪಸ್ಥಿತರಿದ್ದಾರೆ ಎಂದು ಹೇಳಿದ್ದರು. ಇದರ ಬೆನ್ನಲ್ಲಿ ಹೆನಾಲ್ಟ್ ಅವರನ್ನು ಸ್ಥಳೀಯ ಗುಪ್ತಚರ ಇಲಾಖೆ ಏಜೆಂಟರು ಸುತ್ತುವರಿದಿದ್ದರು. ಪೊಲೀಸರು ಸ್ಥಳದಲ್ಲೇ  ಹೆನಾಲ್ಟ್ ಅವರನ್ನು ಪ್ರಶ್ನಿಸಿದ್ದಾರೆ. ಈ ವೇಳೆ ಅವರಿಗೆ ತೆರಳಲು ಅನುಮತಿ ನೀಡಿದ್ದರೂ, ಅದೇ ದಿನ ಅವರು ತಂಗಿದ್ದ ಹೋಟೆಲ್ ಕೊಠಡಿಯಿಂದ ಪೊಲೀಸ್ ಠಾಣೆಗೆ ಅವರನ್ನು ಕರೆದೊಯ್ಯಲಾಗಿದೆ. ವಿದೇಶಿ ಕಾಯಿದೆಯ ಕಲಂ 14ಬಿ ಅಡಿಯಲ್ಲಿ “ವೀಸಾ ಷರತ್ತುಗಳನ್ನು ಉಲ್ಲಂಘಿಸಿದ್ದಾರೆ” ಎಂದು ಆರೋಪಿಸಿ ಪೊಲೀಸರು ಅವರನ್ನು ಬಂಧಿಸಿದ್ದರು.

ವೀಸಾದಲ್ಲಿ ಜಾರ್ಖಂಡ್‌ನಿಂದ ಹೊರಹೋಗಲು ಅನುಮತಿಸಲಾಗಿಲ್ಲ ಎಂದು ಅಧಿಕಾರಿಗಳು ಹೇಳಿದ್ದರು. ಆದರೆ ವರದಿಯ ಪ್ರಕಾರ, ಇದು ಸುಳ್ಳು ಆರೋಪವಾಗಿದ್ದು, ಅವರು ಬ್ಯುಸಿನೆಸ್‌ ವೀಸಾದಲ್ಲಿ ಬಂದಿದ್ದಾರೆ, ಈ ವೀಸಾ ಒಂದು ವರ್ಷದವರೆಗೆ ಮಾನ್ಯತೆ ಹೊಂದಿದೆ ಮತ್ತು ಯಾವುದೇ ಭೌಗೋಳಿಕ ನಿರ್ಬಂಧಗಳನ್ನು ಒಳಗೊಂಡಿಲ್ಲ ಎಂದು ಹೇಳಲಾಗಿದೆ.

ಬಂಧನಕ್ಕೊಳಗಾದ ಒಂದು ದಿನದ ನಂತರ ನ್ಯಾಯಾಧೀಶರು ಅವರ ಬಂಧನಕ್ಕೆ ಸಂಬಂಧಿಸಿದ ದಾಖಲೆಗಳಿಗೆ ಸಹಿ ಹಾಕಿದರು, ನಂತರ ಅವರನ್ನು ಗೋರಖ್‌ಪುರ ಜೈಲಿಗೆ ಕಳುಹಿಸಲಾಯಿತು. ನಾನು ನೆಲದ ಮೇಲೆ ಮಲಗಿದೆ, ರಾತ್ರಿಯಲ್ಲಿ ತಿರುಗಲು ಕೂಡ ಅಸಾಧ್ಯವಾದ ಕಡಿಮೆ ಸ್ಥಳಾವಕಾಶ ನೀಡಲಾಗಿತ್ತು ಎಂದು ಫ್ರೆಂಚ್ ದೈನಿಕದ ಜೊತೆ ತನ್ನ ಜೈಲು ಶಿಕ್ಷೆಯ ಬಗ್ಗೆ ಮಾತನಾಡುವಾಗ ಹೆನಾಲ್ಟ್ ಹೇಳಿರುವುದಾಗಿ ಉಲ್ಲೇಖಿಸಿದೆ. ವರದಿಯ ಪ್ರಕಾರ, ಮಾನಸಿಕ ಅಸ್ವಸ್ಥ ವ್ಯಕ್ತಿಗಳಿಗೆ ಮೀಸಲಾದ ಸೆಲ್‌ನಲ್ಲಿ ಅವರನ್ನು ಇರಿಸಲಾಗಿತ್ತು.

ಬಂಧನದ ಬಳಿಕ ಹೆನಾಲ್ಟ್ ಜೈಲಿನಿಂದ ಫ್ರೆಂಚ್ ರಾಯಭಾರ ಕಚೇರಿಯನ್ನು ಸಂಪರ್ಕಿಸಿದ್ದು, ರಾಯಭಾರ ಕಚೇರಿಯು ವಕೀಲರ ಸಂಪರ್ಕವನ್ನು ಒದಗಿಸಿದೆ. ಅವರ ಬಂಧನದ ನಂತರ ಮೂರನೇ ವಾರದಲ್ಲಿ, ರಾಯಭಾರ ಕಚೇರಿಯ ಅಧಿಕಾರಿಯೊಬ್ಬರು ಜೈಲಿನಲ್ಲಿ ಅವರನ್ನು ಭೇಟಿಯಾದರು. ಆ ಬಳಿಕ ಅವರ ತಂದೆ ಅವರನ್ನು ಭೇಟಿ ಮಾಡಲು ಭಾರತಕ್ಕೆ ಬಂದರು ಮತ್ತು ವಕೀಲರನ್ನು ಬದಲಾಯಿಸಿದರು, ಬಳಿಕ ಜಾಮೀನು ಪಡೆಯುವಲ್ಲಿ ಅವರು ಯಶಸ್ವಿಯಾಗಿದ್ದರು. ಆದರೆ ಅವರು ತವರಿಗೆ ತೆರಳಲು ಸಾಧ್ಯವಾಗಿರಲಿಲ್ಲ. ಹೆನಾಲ್ಟ್  ಅವರ ಪಾಸ್‌ಪೋರ್ಟ್ ಮೇ ತಿಂಗಳವರೆಗೆ ಪೊಲೀಸರ ಬಳಿ ಇತ್ತು. ಸತತ ಕಾನೂನು ಹೊರಾಟದ ಬಳಿಕ ಅವರು ಕೊನೆಗೆ ಇದೇ ಮೇ.4ರಂದು ಭಾರತವನ್ನು ತೊರೆದು ಪ್ರಾನ್ಸ್‌ಗೆ ವಾಪಾಸ್ಸಾಗಿದ್ದಾರೆ.

ಇದನ್ನು ಓದಿ: ಮೋದಿ ಕುರಿತ ಧ್ರುವ್‌ ರಾಥಿ ವಿಡಿಯೋ ಹಂಚಿಕೊಂಡ ವಕೀಲನ ವಿರುದ್ಧ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡ ಪೊಲೀಸರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಬಹು ನಿರೀಕ್ಷಿತ ‘ಎಪ್‌ಸ್ಟೀನ್ ಫೈಲ್ಸ್’ ಬಿಡುಗಡೆ : ಬಿಲ್ ಕ್ಲಿಂಟನ್, ಮೈಕಲ್ ಜಾಕ್ಸನ್ ಸೇರಿದಂತೆ ಪ್ರಮುಖರ ಫೋಟೋಗಳು ಬಹಿರಂಗ

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ(ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಕೆಲ ದಾಖಲೆಗಳನ್ನು...

ಕೋಮು ಸಾಮರಸ್ಯಕ್ಕಾಗಿ ಭಾರತದ ಮುಸ್ಲಿಮರು ಸಾಮೂಹಿಕ ಪ್ರಯತ್ನಗಳೊಂದಿಗೆ ಮುಂದೆ ಬರಬೇಕು: ಜಮಾಅತ್ ಅಧ್ಯಕ್ಷ

'ಭಾರತದ ಮುಸ್ಲಿಮರು, ದೇಶದಲ್ಲಿ ಕೋಮು ಸಾಮರಸ್ಯಕ್ಕಾಗಿ ವೈಯಕ್ತಿಕ ಮತ್ತು ಸಾಮೂಹಿಕ ಪ್ರಯತ್ನಗಳೊಂದಿಗೆ ಮುಂದೆ ಬರಬೇಕು' ಎಂದು ಜಮಾಅತೆ-ಇ-ಇಸ್ಲಾಮಿ ಹಿಂದ್ ಅಧ್ಯಕ್ಷ ಸೈಯದ್ ಸಾದತುಲ್ಲಾ ಹುಸೈನಿ ಅವರು ಒತ್ತಾಯಿಸಿದರು. ಕೋಮು ಸಾಮರಸ್ಯ ಇಲಾಖೆಯು ಆಯೋಜಿಸಿದ್ದ 'ಅಖಿಲ...

3 ವರ್ಷಗಳಲ್ಲಿ ರಷ್ಯಾ ಸೇನೆ ಸೇರಿದ 200 ಕ್ಕೂ ಹೆಚ್ಚು ಭಾರತೀಯರು; 26 ಮಂದಿ ಸಾವು: ವಿದೇಶಾಂಗ ಸಚಿವಾಲಯ

2022 ರಿಂದ ಕನಿಷ್ಠ 202 ಭಾರತೀಯ ಪ್ರಜೆಗಳು ರಷ್ಯಾದ ಸಶಸ್ತ್ರ ಪಡೆಗಳಿಗೆ ಸೇರಿದ್ದಾರೆ ಎಂದು ವರದಿಯಾಗಿದೆ. ಇದರಲ್ಲಿ 26 ಮಂದಿ ಸಾವನ್ನಪ್ಪಿದ್ದು, ಇಬ್ಬರನ್ನು ರಷ್ಯಾದಲ್ಲಿ ಅಂತ್ಯಕ್ರಿಯೆ ಮಾಡಲಾಗಿದೆ ಎಂದು ವಿದೇಶಾಂಗ ಸಚಿವಾಲಯ (ಎಂಇಎ)...

ಎಸ್‌ಐಆರ್‌ ಬಳಿಕ ಕರಡು ಮತದಾರರ ಪಟ್ಟಿ ಪ್ರಕಟ : ತಮಿಳುನಾಡಿನಲ್ಲಿ 97 ಲಕ್ಷ, ಗುಜರಾತ್‌ನಲ್ಲಿ 73 ಲಕ್ಷ ಹೆಸರು ಡಿಲೀಟ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ ತಮಿಳುನಾಡು ಮತ್ತು ಗುಜರಾತ್‌ನ ಕರಡು ಮತದಾರರ ಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಪ್ರಕಟಿಸಿದ್ದು, ಕ್ರಮವಾಗಿ 97.3 ಮತ್ತು 73.7 ಲಕ್ಷ ಮತದಾರರ...

ಅಸ್ಸಾಂ | ರಾಜಧಾನಿ ಎಕ್ಸ್ ಪ್ರೆಸ್ ರೈಲು ಢಿಕ್ಕಿ : 8 ಆನೆಗಳು ಸಾವು

ಶನಿವಾರ (ಡಿಸೆಂಬರ್ 20, 2025) ಬೆಳಗಿನ ಜಾವ ಅಸ್ಸಾಂನ ಹೊಜೈ ಜಿಲ್ಲೆಯಲ್ಲಿ ಸಾಯಿರಂಗ್-ನವದೆಹಲಿ ರಾಜಧಾನಿ ಎಕ್ಸ್‌ಪ್ರೆಸ್‌ ರೈಲು ಡಿಕ್ಕಿ ಹೊಡೆದ ಪರಿಣಾಮ ಎಂಟು ಆನೆಗಳು ಸಾವನ್ನಪ್ಪಿದ್ದು, ಒಂದು ಗಾಯಗೊಂಡಿದೆ ಎಂದು ವರದಿಯಾಗಿದೆ. ಘಟನೆಯಲ್ಲಿ ಐದು...

ಮಲಯಾಳಂ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಶ್ರೀನಿವಾಸನ್ ನಿಧನ

ಮಲಯಾಳಂ ಚಿತ್ರರಂಗದ ಹಿರಿಯ ನಟ, ಚಿತ್ರಕಥೆಗಾರ, ನಿರ್ದೇಶಕ ಹಾಗೂ ನಿರ್ಮಾಪಕ ಶ್ರೀನಿವಾಸನ್ ಶನಿವಾರ (ಡಿ.20) ನಿಧನರಾದರು. ಅವರಿಗೆ 69 ವರ್ಷ ವಯಸ್ಸಾಗಿತ್ತು. ದೀರ್ಘ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀನಿವಾಸನ್ ಅವರು, ಚಿಕಿತ್ಸೆ...

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...