Homeಮುಖಪುಟಫೇಸ್‌ಬುಕ್‌ನಲ್ಲಿ 'ಲಾಲ್ ಸಲಾಂ', 'ಕಾಮ್ರೇಡ್' ಪದ ಬಳಸಿದರೆ ಅಸ್ಸಾಂನಲ್ಲಿ ಜೈಲು ಶಿಕ್ಷೆ!

ಫೇಸ್‌ಬುಕ್‌ನಲ್ಲಿ ‘ಲಾಲ್ ಸಲಾಂ’, ‘ಕಾಮ್ರೇಡ್’ ಪದ ಬಳಸಿದರೆ ಅಸ್ಸಾಂನಲ್ಲಿ ಜೈಲು ಶಿಕ್ಷೆ!

ಈ ಹಿಂದೆ ಭೀಮಾ ಕೊರೇಂಗಾವ್‌ ಪ್ರಕರಣದಲ್ಲಿ ಬಂಧಿಸಲ್ಪಟ್ಟ ವ್ಯಕ್ತಿಯ ಮನೆಯಲ್ಲಿ ವಾರ್‌ ಅಂಡ್‌ ಪೀಸ್ ಪುಸ್ತಕ ಇದ್ದುದನ್ನು ಗಮನಿಸಿದ ನ್ಯಾಯಾಧೀಶರು "ಇನ್ಯಾವುದೋ ದೇಶದ ಗಡಿಯಲ್ಲಿ ನಡೆದ ಯುದ್ದದ ಬಗೆಗಿನ ಪುಸ್ತಕವನ್ನು ನೀವು ಏಕೆ ಇಟ್ಟುಕೊಂಡಿದ್ದೀರಿ" ಎಂದು ಪ್ರಶ್ನಿಸಿದ್ದರು.

- Advertisement -
- Advertisement -

‘ಲಾಲ್ ಸಲಾಂ’, ‘ಕಾಮ್ರೇಡ್’ ಎಂಬ ಪದಗಳನ್ನು ಬಳಸುವುದು ಅಥವಾ ಲೆನಿನ್ ಅವರ ಫೋಟೋವನ್ನು ಸಾಮಾಜಿಕ ಮಾಧ್ಯಮದಲ್ಲಿ ಅಪ್‌ಲೋಡ್ ಮಾಡಿದರೆ ನಿಮ್ಮನ್ನು ಅಸ್ಸಾಂನಲ್ಲಿ ಕಾನೂನುಬಾಹಿರ ಚಟುವಟಿಕೆಗಳ ತಡೆಗಟ್ಟುವಿಕೆ ಕಾಯ್ದೆ (ಯುಎಪಿಎ) ಅಡಿಯಲ್ಲಿ ಬಂಧಿಸಬಹುದಾಗಿದೆ.

ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ)ಯು ರೈತ ಮುಖಂಡ ಅಖಿಲ್ ಗೊಗೊಯ್ ಅವರ ಆಪ್ತ ಸಹಾಯಕ ಬಿಟ್ಟು ಸೋನೊವಾಲ್ ವಿರುದ್ಧದ ಚಾರ್ಜ್‌ಶೀಟ್‌ನಲ್ಲಿ, ಅವರು ತಮ್ಮ ಕೆಲವು ಸ್ನೇಹಿತರನ್ನು ‘ಕಾಮ್ರೇಡ್’ ಎಂದು ಉಲ್ಲೇಖಿಸಿದ್ದಾರೆ ಮತ್ತು ಇತರೆಡೆಗಳಲ್ಲಿ ‘ಲಾಲ್ ಸಲಾಮ್’ ನಂತಹ ಪದಗಳನ್ನು ಬಳಸಿದ್ದಾರೆ ಎಂದು ಆರೋಪಿಸಿದ್ದಾರೆ ಎಂದು ಔಟ್‌ಲುಕ್‌ ವರದಿ ಮಾಡಿದೆ.

ಕಾಮ್ರೇಡ್ ಎಂದರೆ ಸಂಗಾತಿ, ಒಡನಾಡಿ ಎಂಬರ್ಥ ಬರುತ್ತದೆ. ಹಾಗೆಯೇ ಲಾಲ್‌ ಸಲಾಂ ಎಂದರೆ ಕೆಂಪುವಂದನೆ ಎಂಬುದಾಗಿದೆ. (ಕಮ್ಯುನಿಸ್ಟ್‌ ಚಳವಳಿಯು ಕೆಂಪು ಬಣ್ಣವನ್ನು ತನ್ನ ಸಂಘಟನೆಯ ಬಣ್ಣವನ್ನಾಗಿಸಿಕೊಂಡಿದೆ.) ಈ ಪದಗಳನ್ನ ನೂರಾರು ವರ್ಷಗಳಿಂದ ಹಲವು ಚಳವಳಿಗಳಲ್ಲಿ ಬಳಕೆಯಲ್ಲಿವೆ. ಹಾಗಾಗಿ ಕೇವಲ ಈ ಪದಗಳನ್ನು ಬಳಸಿದ ಮಾತ್ರವೇ ಅವರ ಮೇಲೆ ಆರೋಪ ಹೊರಿಸುತ್ತಿರುವುದು ಪೊಲೀಸರಿಗೆ ಮತ್ತೇನು ಸಾಕ್ಷ್ಯ ಸಿಗದಿದ್ದುಕ್ಕೆ ತೇಪೆ ಸಾರಿಸುವ ಪ್ರಯತ್ನವಷ್ಟೇ ಎಂದು ಹಲವು ಹೋರಾಟಗಾರರು ಅಭಿಪ್ರಾಯಪಟ್ಟಿದ್ದಾರೆ.

 ಸೋನೊವಾಲ್ ಮತ್ತು ಗೊಗೊಯ್‌ನ ಇತರ ಇಬ್ಬರು ಸಹಾಯಕರನ್ನು ಈ ವರ್ಷದ ಆರಂಭದಲ್ಲಿ ಯುಎಪಿಎಯ ವಿವಿಧ ಆರೋಪದಡಿ ಎನ್‌ಐಎ ಬಂಧಿಸಿತ್ತು. ಕಳೆದ ವರ್ಷ ಡಿಸೆಂಬರ್‌ನಲ್ಲಿ ಅಸ್ಸಾಂ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರುದ್ಧ ಭಾರಿ ಪ್ರತಿಭಟನೆ ನಡೆಸಿದಾಗ ಗೊಗೊಯ್ ಅವರನ್ನು ಬಂಧಿಸಲಾಗಿತ್ತು.

ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 120 ಬಿ, 253 ಎ, 153 ಬಿ ಮತ್ತು ಯುಎಪಿಎ ಸೆಕ್ಷನ್ 18 ಮತ್ತು 39 ರ ಅಡಿಯಲ್ಲಿ ಎನ್ಐಎ ಪ್ರಕರಣಕ್ಕೆ (13/2019) ಸಂಬಂಧಿಸಿದಂತೆ ಗೊಗೊಯ್ ಅವರು ಡಿಸೆಂಬರ್ 16, 2019 ರಿಂದ ಬಂಧನದಲ್ಲಿದ್ದಾರೆ.

ಮೇ 29 ರಂದು ಸಲ್ಲಿಸಲಾದ ಚಾರ್ಜ್‌ಶೀಟ್‌ನಲ್ಲಿ, “ಬಂಡವಾಳಶಾಹಿಗಳು ನಮಗೆ ಹಗ್ಗವನ್ನು ಮಾರಾಟ ಮಾಡುತ್ತಾರೆ ಮತ್ತು ನಾವು ಅದರಲ್ಲಿ ಅವರನ್ನೆ ನೇತು ಹಾಕುತ್ತೇವೆ” ಎಂಬ ವಾಕ್ಯದೊಂದಿಗೆ ಸೋನೊವಾಲ್ ಲೆನಿನ್‌ರ ಒಂದು ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್‌ಲೋಡ್ ಮಾಡಿದ್ದಾರೆ ಎಂದು ಉಲ್ಲೇಖಿಸಲಾಗಿದೆ.

ಎನ್‌ಐಎ ಸಲ್ಲಿಸಿದ 40 ಪುಟಗಳ ಚಾರ್ಜ್‌ಶೀಟ್‌ನಲ್ಲಿ ತಮ್ಮ ನಾಯಕರ ವಿರುದ್ಧದ ಯಾವುದೇ ಆರೋಪಗಳನ್ನು ಸಾಬೀತುಪಡಿಸಲು ಯಾವುದೇ ದೃಢವಾದ ಪುರಾವೆಗಳಿಲ್ಲ ಎಂದು ಗೊಗೊಯ್ ಸಲಹೆಗಾರರಾಗಿರುವ ರೈತರ ಸಂಘಟನೆಯಾದ ಕೃಷಿಕ್‌ ಮುಕ್ತಿ ಸಂಗ್ರಾಮ್ ಸಮಿತಿ (ಕೆಎಂಎಸ್ಎಸ್) ಆರೋಪಿಸಿದೆ.

ಚಾರ್ಜ್‌ಶೀಟ್ ಅನ್ನು ಉಲ್ಲೇಖಿಸಿದ ಕೆಎಂಎಸ್ಎಸ್ ಅಧ್ಯಕ್ಷ ಭಾಸ್ಕೊ ಸೈಕಿಯಾ, ತನಿಖಾ ಸಂಸ್ಥೆ ಕೆಎಂಎಸ್ಎಸ್ ನಾಯಕರನ್ನು ಮಾವೋವಾದಿಗಳೆಂದು ಬ್ರಾಂಡ್ ಮಾಡಲು ಪ್ರಯತ್ನಿಸುತ್ತಿದೆ. ಮಾರುಕಟ್ಟೆಯಲ್ಲಿ ಮುಕ್ತವಾಗಿ ಲಭ್ಯವಿರುವ ಪುಸ್ತಕಗಳನ್ನು ಓದುವುದು ಮಾವೋವಾದಿ ಎಂಬುದಕ್ಕೆ ಸಾಕ್ಷಿಯಾಗಲು ಸಾಧ್ಯವಿಲ್ಲ ಎಂದು ಅವರು ಹೇಳಿದ್ದಾರೆ.

“ಅಖಿಲ್ ಗೊಗೊಯ್ ಮಾವೋವಾದಿ ಎಂದು ನಂಬಿಸಲು ಎನ್ಐಎ ಬಯಸಿದೆ. ಆದರೆ ಅವರು ಯಾವುದೇ ದೃಢವಾದ ಸಾಕ್ಷ್ಯವನ್ನು ನೀಡಲು ಸಾಧ್ಯವಾಗಲಿಲ್ಲ. ಅವರು ಮಾವೋವಾದದ ಕುರಿತ ಪುಸ್ತಕಗಳ ಬಗ್ಗೆಯೂ ಪ್ರಸ್ತಾಪಿಸಿದ್ದಾರೆ. ಎನ್ಐಎ ‘ಸಮಾಜವಾದಕ್ಕೆ ಒಂದು ಪರಿಚಯ’ ಮತ್ತು ‘ಕಮ್ಯುನಿಸ್ಟ್ ಪ್ರಣಾಳಿಕೆ’ ಮುಂತಾದ ಪುಸ್ತಕಗಳನ್ನು ವಶಪಡಿಸಿಕೊಂಡಿದೆ. ಈ ಪುಸ್ತಕಗಳನ್ನು ಮುಕ್ತ ಮಾರುಕಟ್ಟೆಯಿಂದ ಖರೀದಿಸಲಾಗಿದೆ. ಇದು ಹಾಸ್ಯಾಸ್ಪದವಾಗಿದೆ” ಸೈಕಿಯಾ ಹೇಳಿದರು.

ಸಿಎಎ ವಿರೋಧಿ ಆಂದೋಲನದಲ್ಲಿ, ಸೈಕಿಯಾ ಈ ಚಳುವಳಿ ಜನರ ಚಳುವಳಿ ಎಂದು ಹೇಳಿದರು. “ಜನರು ತಮ್ಮ ಗುರುತು ಮತ್ತು ಸಂಸ್ಕೃತಿಯ ಬಗ್ಗೆ ಭಯಪಡುತ್ತಿರುವುದರಿಂದ ಪ್ರತಿಭಟಿಸುತ್ತಿದ್ದಾರೆ. ಸಿಎಎ ವಿರೋಧಿ ಪ್ರತಿಭಟನೆಯ ಸಮಯದಲ್ಲಿ ಹಿಂಸಾಚಾರದಲ್ಲಿ ಕೆಎಂಎಸ್ಎಸ್ ನಾಯಕರ ಪಾತ್ರವಿದೆ ಮತ್ತು ಅದು ಮಾವೋವಾದಿ ದಾಳಿಯನ್ನು ಹೋಲುತ್ತದೆ ಎಂದು ಎನ್ಐಎ ಹೇಳುತ್ತಿದೆ. ಆದರೆ ನಾವು ಹಿಂಸಾಚಾರವನ್ನು ನಂಬುವುದಿಲ್ಲ” ಎಂದು ಸೈಕಿಯಾ ಹೇಳಿದ್ದಾರೆ.

ಅಖಿಲ್ ಗೊಗೊಯ್

ಸಿಎಎ ವಿರೋಧಿ ಪ್ರತಿಭಟನೆಗಳು ಗುವಾಹಟಿಯಲ್ಲಿ ಹಿಂಸಾತ್ಮಕವಾಗಿತ್ತು. ಇದು ಸಾರ್ವಜನಿಕ ಆಸ್ತಿಗಳಿಗೆ ವ್ಯಾಪಕ ಹಾನಿಯನ್ನುಂಟುಮಾಡಿತು. ಡಿಸೆಂಬರ್ 12 ರಂದು ಪೊಲೀಸರು ಜೋರ್ಹಾಟ್‌ನಿಂದ ಗೊಗೊಯ್ ಅವರನ್ನು ಬಂಧಿಸಿದರು. ಅಂದಿನಿಂದ, ನ್ಯಾಯಾಲಯದಿಂದ ಜಾಮೀನು ಪಡೆದಿದ್ದರೂ ಸಹ ಆತನನ್ನು ಬಿಡುಗಡೆ ಮಾಡಲಾಗಿಲ್ಲ, ಏಕೆಂದರೆ ಆತನ ವಿರುದ್ಧ ಹೊಸ ಪ್ರಕರಣಗಳನ್ನು ಪೊಲೀಸರು ದಾಖಲಿಸುತ್ತಿದ್ದಾರೆ ಎಂದು ಅವರು ದೂರಿದ್ದಾರೆ.

ಈ ಹಿಂದೆ ಭೀಮಾ ಕೊರೇಂಗಾವ್‌ ಪ್ರಕರಣದಲ್ಲಿ ಬಂಧಿಸಲ್ಪಟ್ಟ ವ್ಯಕ್ತಿಯ ಮನೆಯಲ್ಲಿ ವಾರ್‌ ಅಂಡ್‌ ಪೀಸ್ ಪುಸ್ತಕ ಇದ್ದುದನ್ನು ಗಮನಿಸಿದ ನ್ಯಾಯಾಧೀಶರು “ಇನ್ಯಾವುದೋ ದೇಶದ ಗಡಿಯಲ್ಲಿ ನಡೆದ ಯುದ್ದದ ಬಗೆಗಿನ ಪುಸ್ತಕವನ್ನು ನೀವು ಏಕೆ ಇಟ್ಟುಕೊಂಡಿದ್ದೀರಿ” ಎಂದು ಪ್ರಶ್ನಿಸಿದ್ದರು. ಈಗ ಕೇವಲ ಕಾಮ್ರೇಡ್ ಮತ್ತು ಲಾಲ್ ಸಲಾಂ ಪದ ಬಳಸಿದ್ದಕ್ಕೆ ಯುಎಪಿಎ ಕಾಯ್ದೆ ಬಳಸಿದ್ದಾರೆ. ಇದು ಎಲ್ಲಿಗೆ ಹೋಗಿ ಮುಟ್ಟುವುದೋ ಗೊತ್ತಿಲ್ಲ…


ಇದನ್ನೂ ಓದಿ: ವಾರ್ ಅಂಡ್ ಪೀಸ್ ಓದುವವರೆ ಗಮನಿಸಿ ಪ್ಲೀಸ್, ಗದಗಿಗೂ ಬಂತು ಎಚ್ಚರವಿರಲಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...