Homeಮುಖಪುಟಫೇಸ್‌ಬುಕ್‌ನಲ್ಲಿ 'ಲಾಲ್ ಸಲಾಂ', 'ಕಾಮ್ರೇಡ್' ಪದ ಬಳಸಿದರೆ ಅಸ್ಸಾಂನಲ್ಲಿ ಜೈಲು ಶಿಕ್ಷೆ!

ಫೇಸ್‌ಬುಕ್‌ನಲ್ಲಿ ‘ಲಾಲ್ ಸಲಾಂ’, ‘ಕಾಮ್ರೇಡ್’ ಪದ ಬಳಸಿದರೆ ಅಸ್ಸಾಂನಲ್ಲಿ ಜೈಲು ಶಿಕ್ಷೆ!

ಈ ಹಿಂದೆ ಭೀಮಾ ಕೊರೇಂಗಾವ್‌ ಪ್ರಕರಣದಲ್ಲಿ ಬಂಧಿಸಲ್ಪಟ್ಟ ವ್ಯಕ್ತಿಯ ಮನೆಯಲ್ಲಿ ವಾರ್‌ ಅಂಡ್‌ ಪೀಸ್ ಪುಸ್ತಕ ಇದ್ದುದನ್ನು ಗಮನಿಸಿದ ನ್ಯಾಯಾಧೀಶರು "ಇನ್ಯಾವುದೋ ದೇಶದ ಗಡಿಯಲ್ಲಿ ನಡೆದ ಯುದ್ದದ ಬಗೆಗಿನ ಪುಸ್ತಕವನ್ನು ನೀವು ಏಕೆ ಇಟ್ಟುಕೊಂಡಿದ್ದೀರಿ" ಎಂದು ಪ್ರಶ್ನಿಸಿದ್ದರು.

- Advertisement -
- Advertisement -

‘ಲಾಲ್ ಸಲಾಂ’, ‘ಕಾಮ್ರೇಡ್’ ಎಂಬ ಪದಗಳನ್ನು ಬಳಸುವುದು ಅಥವಾ ಲೆನಿನ್ ಅವರ ಫೋಟೋವನ್ನು ಸಾಮಾಜಿಕ ಮಾಧ್ಯಮದಲ್ಲಿ ಅಪ್‌ಲೋಡ್ ಮಾಡಿದರೆ ನಿಮ್ಮನ್ನು ಅಸ್ಸಾಂನಲ್ಲಿ ಕಾನೂನುಬಾಹಿರ ಚಟುವಟಿಕೆಗಳ ತಡೆಗಟ್ಟುವಿಕೆ ಕಾಯ್ದೆ (ಯುಎಪಿಎ) ಅಡಿಯಲ್ಲಿ ಬಂಧಿಸಬಹುದಾಗಿದೆ.

ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ)ಯು ರೈತ ಮುಖಂಡ ಅಖಿಲ್ ಗೊಗೊಯ್ ಅವರ ಆಪ್ತ ಸಹಾಯಕ ಬಿಟ್ಟು ಸೋನೊವಾಲ್ ವಿರುದ್ಧದ ಚಾರ್ಜ್‌ಶೀಟ್‌ನಲ್ಲಿ, ಅವರು ತಮ್ಮ ಕೆಲವು ಸ್ನೇಹಿತರನ್ನು ‘ಕಾಮ್ರೇಡ್’ ಎಂದು ಉಲ್ಲೇಖಿಸಿದ್ದಾರೆ ಮತ್ತು ಇತರೆಡೆಗಳಲ್ಲಿ ‘ಲಾಲ್ ಸಲಾಮ್’ ನಂತಹ ಪದಗಳನ್ನು ಬಳಸಿದ್ದಾರೆ ಎಂದು ಆರೋಪಿಸಿದ್ದಾರೆ ಎಂದು ಔಟ್‌ಲುಕ್‌ ವರದಿ ಮಾಡಿದೆ.

ಕಾಮ್ರೇಡ್ ಎಂದರೆ ಸಂಗಾತಿ, ಒಡನಾಡಿ ಎಂಬರ್ಥ ಬರುತ್ತದೆ. ಹಾಗೆಯೇ ಲಾಲ್‌ ಸಲಾಂ ಎಂದರೆ ಕೆಂಪುವಂದನೆ ಎಂಬುದಾಗಿದೆ. (ಕಮ್ಯುನಿಸ್ಟ್‌ ಚಳವಳಿಯು ಕೆಂಪು ಬಣ್ಣವನ್ನು ತನ್ನ ಸಂಘಟನೆಯ ಬಣ್ಣವನ್ನಾಗಿಸಿಕೊಂಡಿದೆ.) ಈ ಪದಗಳನ್ನ ನೂರಾರು ವರ್ಷಗಳಿಂದ ಹಲವು ಚಳವಳಿಗಳಲ್ಲಿ ಬಳಕೆಯಲ್ಲಿವೆ. ಹಾಗಾಗಿ ಕೇವಲ ಈ ಪದಗಳನ್ನು ಬಳಸಿದ ಮಾತ್ರವೇ ಅವರ ಮೇಲೆ ಆರೋಪ ಹೊರಿಸುತ್ತಿರುವುದು ಪೊಲೀಸರಿಗೆ ಮತ್ತೇನು ಸಾಕ್ಷ್ಯ ಸಿಗದಿದ್ದುಕ್ಕೆ ತೇಪೆ ಸಾರಿಸುವ ಪ್ರಯತ್ನವಷ್ಟೇ ಎಂದು ಹಲವು ಹೋರಾಟಗಾರರು ಅಭಿಪ್ರಾಯಪಟ್ಟಿದ್ದಾರೆ.

 ಸೋನೊವಾಲ್ ಮತ್ತು ಗೊಗೊಯ್‌ನ ಇತರ ಇಬ್ಬರು ಸಹಾಯಕರನ್ನು ಈ ವರ್ಷದ ಆರಂಭದಲ್ಲಿ ಯುಎಪಿಎಯ ವಿವಿಧ ಆರೋಪದಡಿ ಎನ್‌ಐಎ ಬಂಧಿಸಿತ್ತು. ಕಳೆದ ವರ್ಷ ಡಿಸೆಂಬರ್‌ನಲ್ಲಿ ಅಸ್ಸಾಂ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರುದ್ಧ ಭಾರಿ ಪ್ರತಿಭಟನೆ ನಡೆಸಿದಾಗ ಗೊಗೊಯ್ ಅವರನ್ನು ಬಂಧಿಸಲಾಗಿತ್ತು.

ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 120 ಬಿ, 253 ಎ, 153 ಬಿ ಮತ್ತು ಯುಎಪಿಎ ಸೆಕ್ಷನ್ 18 ಮತ್ತು 39 ರ ಅಡಿಯಲ್ಲಿ ಎನ್ಐಎ ಪ್ರಕರಣಕ್ಕೆ (13/2019) ಸಂಬಂಧಿಸಿದಂತೆ ಗೊಗೊಯ್ ಅವರು ಡಿಸೆಂಬರ್ 16, 2019 ರಿಂದ ಬಂಧನದಲ್ಲಿದ್ದಾರೆ.

ಮೇ 29 ರಂದು ಸಲ್ಲಿಸಲಾದ ಚಾರ್ಜ್‌ಶೀಟ್‌ನಲ್ಲಿ, “ಬಂಡವಾಳಶಾಹಿಗಳು ನಮಗೆ ಹಗ್ಗವನ್ನು ಮಾರಾಟ ಮಾಡುತ್ತಾರೆ ಮತ್ತು ನಾವು ಅದರಲ್ಲಿ ಅವರನ್ನೆ ನೇತು ಹಾಕುತ್ತೇವೆ” ಎಂಬ ವಾಕ್ಯದೊಂದಿಗೆ ಸೋನೊವಾಲ್ ಲೆನಿನ್‌ರ ಒಂದು ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್‌ಲೋಡ್ ಮಾಡಿದ್ದಾರೆ ಎಂದು ಉಲ್ಲೇಖಿಸಲಾಗಿದೆ.

ಎನ್‌ಐಎ ಸಲ್ಲಿಸಿದ 40 ಪುಟಗಳ ಚಾರ್ಜ್‌ಶೀಟ್‌ನಲ್ಲಿ ತಮ್ಮ ನಾಯಕರ ವಿರುದ್ಧದ ಯಾವುದೇ ಆರೋಪಗಳನ್ನು ಸಾಬೀತುಪಡಿಸಲು ಯಾವುದೇ ದೃಢವಾದ ಪುರಾವೆಗಳಿಲ್ಲ ಎಂದು ಗೊಗೊಯ್ ಸಲಹೆಗಾರರಾಗಿರುವ ರೈತರ ಸಂಘಟನೆಯಾದ ಕೃಷಿಕ್‌ ಮುಕ್ತಿ ಸಂಗ್ರಾಮ್ ಸಮಿತಿ (ಕೆಎಂಎಸ್ಎಸ್) ಆರೋಪಿಸಿದೆ.

ಚಾರ್ಜ್‌ಶೀಟ್ ಅನ್ನು ಉಲ್ಲೇಖಿಸಿದ ಕೆಎಂಎಸ್ಎಸ್ ಅಧ್ಯಕ್ಷ ಭಾಸ್ಕೊ ಸೈಕಿಯಾ, ತನಿಖಾ ಸಂಸ್ಥೆ ಕೆಎಂಎಸ್ಎಸ್ ನಾಯಕರನ್ನು ಮಾವೋವಾದಿಗಳೆಂದು ಬ್ರಾಂಡ್ ಮಾಡಲು ಪ್ರಯತ್ನಿಸುತ್ತಿದೆ. ಮಾರುಕಟ್ಟೆಯಲ್ಲಿ ಮುಕ್ತವಾಗಿ ಲಭ್ಯವಿರುವ ಪುಸ್ತಕಗಳನ್ನು ಓದುವುದು ಮಾವೋವಾದಿ ಎಂಬುದಕ್ಕೆ ಸಾಕ್ಷಿಯಾಗಲು ಸಾಧ್ಯವಿಲ್ಲ ಎಂದು ಅವರು ಹೇಳಿದ್ದಾರೆ.

“ಅಖಿಲ್ ಗೊಗೊಯ್ ಮಾವೋವಾದಿ ಎಂದು ನಂಬಿಸಲು ಎನ್ಐಎ ಬಯಸಿದೆ. ಆದರೆ ಅವರು ಯಾವುದೇ ದೃಢವಾದ ಸಾಕ್ಷ್ಯವನ್ನು ನೀಡಲು ಸಾಧ್ಯವಾಗಲಿಲ್ಲ. ಅವರು ಮಾವೋವಾದದ ಕುರಿತ ಪುಸ್ತಕಗಳ ಬಗ್ಗೆಯೂ ಪ್ರಸ್ತಾಪಿಸಿದ್ದಾರೆ. ಎನ್ಐಎ ‘ಸಮಾಜವಾದಕ್ಕೆ ಒಂದು ಪರಿಚಯ’ ಮತ್ತು ‘ಕಮ್ಯುನಿಸ್ಟ್ ಪ್ರಣಾಳಿಕೆ’ ಮುಂತಾದ ಪುಸ್ತಕಗಳನ್ನು ವಶಪಡಿಸಿಕೊಂಡಿದೆ. ಈ ಪುಸ್ತಕಗಳನ್ನು ಮುಕ್ತ ಮಾರುಕಟ್ಟೆಯಿಂದ ಖರೀದಿಸಲಾಗಿದೆ. ಇದು ಹಾಸ್ಯಾಸ್ಪದವಾಗಿದೆ” ಸೈಕಿಯಾ ಹೇಳಿದರು.

ಸಿಎಎ ವಿರೋಧಿ ಆಂದೋಲನದಲ್ಲಿ, ಸೈಕಿಯಾ ಈ ಚಳುವಳಿ ಜನರ ಚಳುವಳಿ ಎಂದು ಹೇಳಿದರು. “ಜನರು ತಮ್ಮ ಗುರುತು ಮತ್ತು ಸಂಸ್ಕೃತಿಯ ಬಗ್ಗೆ ಭಯಪಡುತ್ತಿರುವುದರಿಂದ ಪ್ರತಿಭಟಿಸುತ್ತಿದ್ದಾರೆ. ಸಿಎಎ ವಿರೋಧಿ ಪ್ರತಿಭಟನೆಯ ಸಮಯದಲ್ಲಿ ಹಿಂಸಾಚಾರದಲ್ಲಿ ಕೆಎಂಎಸ್ಎಸ್ ನಾಯಕರ ಪಾತ್ರವಿದೆ ಮತ್ತು ಅದು ಮಾವೋವಾದಿ ದಾಳಿಯನ್ನು ಹೋಲುತ್ತದೆ ಎಂದು ಎನ್ಐಎ ಹೇಳುತ್ತಿದೆ. ಆದರೆ ನಾವು ಹಿಂಸಾಚಾರವನ್ನು ನಂಬುವುದಿಲ್ಲ” ಎಂದು ಸೈಕಿಯಾ ಹೇಳಿದ್ದಾರೆ.

ಅಖಿಲ್ ಗೊಗೊಯ್

ಸಿಎಎ ವಿರೋಧಿ ಪ್ರತಿಭಟನೆಗಳು ಗುವಾಹಟಿಯಲ್ಲಿ ಹಿಂಸಾತ್ಮಕವಾಗಿತ್ತು. ಇದು ಸಾರ್ವಜನಿಕ ಆಸ್ತಿಗಳಿಗೆ ವ್ಯಾಪಕ ಹಾನಿಯನ್ನುಂಟುಮಾಡಿತು. ಡಿಸೆಂಬರ್ 12 ರಂದು ಪೊಲೀಸರು ಜೋರ್ಹಾಟ್‌ನಿಂದ ಗೊಗೊಯ್ ಅವರನ್ನು ಬಂಧಿಸಿದರು. ಅಂದಿನಿಂದ, ನ್ಯಾಯಾಲಯದಿಂದ ಜಾಮೀನು ಪಡೆದಿದ್ದರೂ ಸಹ ಆತನನ್ನು ಬಿಡುಗಡೆ ಮಾಡಲಾಗಿಲ್ಲ, ಏಕೆಂದರೆ ಆತನ ವಿರುದ್ಧ ಹೊಸ ಪ್ರಕರಣಗಳನ್ನು ಪೊಲೀಸರು ದಾಖಲಿಸುತ್ತಿದ್ದಾರೆ ಎಂದು ಅವರು ದೂರಿದ್ದಾರೆ.

ಈ ಹಿಂದೆ ಭೀಮಾ ಕೊರೇಂಗಾವ್‌ ಪ್ರಕರಣದಲ್ಲಿ ಬಂಧಿಸಲ್ಪಟ್ಟ ವ್ಯಕ್ತಿಯ ಮನೆಯಲ್ಲಿ ವಾರ್‌ ಅಂಡ್‌ ಪೀಸ್ ಪುಸ್ತಕ ಇದ್ದುದನ್ನು ಗಮನಿಸಿದ ನ್ಯಾಯಾಧೀಶರು “ಇನ್ಯಾವುದೋ ದೇಶದ ಗಡಿಯಲ್ಲಿ ನಡೆದ ಯುದ್ದದ ಬಗೆಗಿನ ಪುಸ್ತಕವನ್ನು ನೀವು ಏಕೆ ಇಟ್ಟುಕೊಂಡಿದ್ದೀರಿ” ಎಂದು ಪ್ರಶ್ನಿಸಿದ್ದರು. ಈಗ ಕೇವಲ ಕಾಮ್ರೇಡ್ ಮತ್ತು ಲಾಲ್ ಸಲಾಂ ಪದ ಬಳಸಿದ್ದಕ್ಕೆ ಯುಎಪಿಎ ಕಾಯ್ದೆ ಬಳಸಿದ್ದಾರೆ. ಇದು ಎಲ್ಲಿಗೆ ಹೋಗಿ ಮುಟ್ಟುವುದೋ ಗೊತ್ತಿಲ್ಲ…


ಇದನ್ನೂ ಓದಿ: ವಾರ್ ಅಂಡ್ ಪೀಸ್ ಓದುವವರೆ ಗಮನಿಸಿ ಪ್ಲೀಸ್, ಗದಗಿಗೂ ಬಂತು ಎಚ್ಚರವಿರಲಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಟಿಎಂಸಿ ಬೆಂಬಲ

ಮಾರ್ಚ್ 9 ರ ಸೋಮವಾರ ಸಂಸತ್ತಿನ ಬಜೆಟ್ ಅಧಿವೇಶನ ಪುನರಾರಂಭವಾದಾಗ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ಮಂಡಿಸಲಾಗುವ ಅವಿಶ್ವಾಸ ನಿರ್ಣಯಕ್ಕೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಬೆಂಬಲ ನೀಡಲಿದೆ ಎಂದು ಪಕ್ಷದ ನಾಯಕರು...

ಹೊಸ ರಾಜ್ಯಪಾಲ ರವಿ ಬಿಜೆಪಿ ಕೇಡರ್, ಆದರೆ ಬಂಗಾಳ ಟಫ್ ಟರ್ಫ್ : ಮಮತಾ ಬ್ಯಾನರ್ಜಿ

ನೂತನ ರಾಜ್ಯಪಾಲ ಆರ್.ಎನ್ ರವಿ ಅವರನ್ನು 'ಬಿಜೆಪಿ ಕೇಡರ್' ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಶನಿವಾರ ಲೇವಡಿ ಮಾಡಿದ್ದು, ಮುಂಬರುವ ದಿನಗಳಲ್ಲಿ ರಾಜ್ಯ ಸಚಿವಾಲಯ 'ನಬನ್ನಾ' ಮತ್ತು ರಾಜ್ಯಪಾಲರ ನಿವಾಸ...

ಕರ್ನಾಟಕ ಬಜೆಟ್ 2026| ಶಿಕ್ಷಣ ಕ್ಷೇತ್ರಕ್ಕೆ ಅನುದಾನ ಹಂಚಿಕೆ ನಿರಾಶದಾಯಕ

ಶಿಕ್ಷಣಕ್ಕೆ 47,224 ಕೋಟಿ (ಶೇ.10) ಹಂಚಿಕೆ ಮಾಡಿದ್ದಾರೆ. ಇದು ತುಂಬಾ ಕಡಿಮೆ ಅನುದಾನವಾಗಿದೆ. ವಾಸ್ತವದಲ್ಲಿ ಬಜೆಟ್ ವೆಚ್ಚದ ಶೇ.20-24ರಷ್ಟು ಹಣವನ್ನು ಶಿಕ್ಷಣಕ್ಕೆ ಮೀಸಲಿಡಬೇಕು. ಆದರೆ ಇದು ಸಾಧ್ಯವಾಗುತ್ತಿಲ್ಲ. ಶಿಕ್ಷಣವನ್ನು ಅನುತ್ಪಾದಕ ವಲಯ ಎಂದು...

ಕೇರಳ : ಪ್ರಧಾನಿ ಮೋದಿ ‘ದೇಶದ್ರೋಹಿ’ ಎಂದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲು

ಪ್ರಧಾನಿ ನರೇಂದ್ರ ಮೋದಿ 'ದೇಶದ್ರೋಹಿ' ಎಂದು ಸಾಮಾಜಿಕ ಮಾಧ್ಯಮದಲ್ಲಿ ಕಾಮೆಂಟ್ ಹಾಕಿದ ಆರೋಪದ ಮೇಲೆ ಕೇರಳದ ಕಣ್ಣೂರಿನ ಶ್ರೀಕಂಡಪುರಂ ಪೊಲೀಸರು ವ್ಯಕ್ತಿಯೊಬ್ಬರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ ಎಂದು ಹಿಂದೂ ಶನಿವಾರ (ಮಾ.7) ವರದಿ...

ಕೋಲ್ಕತ್ತಾ| ಮತದಾರರ ಪಟ್ಟಿಯಿಂದ ಹೆಸರು ಅಳಿಸುವಿಕೆ ವಿರೋಧಿಸಿ ಅಹೋರಾತ್ರಿ ಧರಣಿ ಮುಂದುವರೆಸಿದ ಮಮತಾ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಶನಿವಾರ ಸತತ ಎರಡನೇ ದಿನವಾದ ಶನಿವಾರವೂ ತಮ್ಮ ಪ್ರತಿಭಟನೆಯನ್ನು ಮುಂದುವರೆಸಿದ್ದಾರೆ, ಅವರು ಅಹೋರಾತ್ರಿ ಧರಣಿ ಸ್ಥಳದಲ್ಲಿ ರಾತ್ರಿ ಕಳೆದರು. ಮುಂಬರುವ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ "ಬಂಗಾಳದ ಮತದಾರರ...

ಇಂಡೋನೇಷ್ಯಾ | ನಾಲ್ವರು ಪ್ರಮುಖ ಹೋರಾಟಗಾರರು ಖುಲಾಸೆ : ಪ್ರತಿಭಟನೆಯ ಹಕ್ಕಿಗೆ ಹೊಸ ಭರವಸೆ ಎಂದ ಆಮ್ನೆಸ್ಟಿ

2025ರ ಆಗಸ್ಟ್ ಮತ್ತು ಸೆಪ್ಟೆಂಬರ್‌ನಲ್ಲಿ ನಡೆದ ಹಿಂಸಾತ್ಮಕ ವಿದ್ಯಾರ್ಥಿ ಪ್ರತಿಭಟನೆಗಳಿಗೆ ಪ್ರಚೋದನೆ ನೀಡಿದ ಆರೋಪ ಎದುರಿಸುತ್ತಿದ್ದ ನಾಲ್ವರು ಪ್ರಮುಖ ಹೋರಾಟಗಾರರನ್ನು ಇಂಡೋನೇಷ್ಯಾದ ಕೇಂದ್ರ ಜಕಾರ್ತಾ ಜಿಲ್ಲಾ ನ್ಯಾಯಾಲಯವು ಶುಕ್ರವಾರ (ಮಾ.6) ಖುಲಾಸೆಗೊಳಿಸಿದೆ. ದೇಶದಲ್ಲಿ ನಾಗರಿಕ ಸ್ವಾತಂತ್ರ್ಯಕ್ಕೆ...

‘ಆಕ್ರಮಣ ಮಾಡುವ ಉದ್ದೇಶವಿಲ್ಲ..’; ಗಲ್ಫ್ ರಾಷ್ಟ್ರಗಳ ಮೇಲಿನ ದಾಳಿಗೆ ಕ್ಷಮೆಯಾಚಿಸಿದ ಇರಾನ್ ಅಧ್ಯಕ್ಷರು

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ನೆರೆಯ ರಾಷ್ಟ್ರಗಳಿಗೆ ಶನಿವಾರ ಕ್ಷಮೆಯಾಚಿಸಿದ್ದಾರೆ. ಉಲ್ಬಣಗೊಳ್ಳುತ್ತಿರುವ ಪ್ರಾದೇಶಿಕ ಸಂಘರ್ಷಕ್ಕೆ ಸಂಬಂಧಿಸಿದ ಇತ್ತೀಚಿನ ದಾಳಿಗಳಿಗೆ ಟೆಹ್ರಾನ್ ಇತರ ರಾಷ್ಟ್ರಗಳನ್ನು ಆಕ್ರಮಿಸುವ ಉದ್ದೇಶವನ್ನು ಹೊಂದಿಲ್ಲ ಎಂದು ಹೇಳಿದ್ದಾರೆ. ಇರಾನ್ ಸಾರ್ವಜನಿಕರನ್ನು...

ತೈಲ ಆಮದು ವಿಚಾರದಲ್ಲಿ ಅಮೆರಿಕದ ಒಪ್ಪಿಗೆ ಪಡೆಯುವುದು ‘ಅತಿರೇಕದ’ ಸಂಗತಿ: ಪಿಣರಾಯಿ ವಿಜಯನ್

ತೈಲ ಆಮದುಗಳಂತಹ ನಿರ್ಧಾರಗಳಿಗೆ ಭಾರತವು ಅಮೆರಿಕದ ಅನುಮೋದನೆಯನ್ನು ಪಡೆಯುವಂತೆ ಬಿಂಬಿತವಾಗುತ್ತಿರುವುದು 'ಅತಿರೇಕದ' ಸಂಗತಿ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಶುಕ್ರವಾರ ಹೇಳಿದ್ದಾರೆ. ಭಾರತದ ಸಾರ್ವಭೌಮತ್ವವು ವಿದೇಶಿ ಅನುಮತಿಗೆ ಒಳಪಡುವುದಿಲ್ಲ ಎಂದು ವಿಜಯನ್ ಸಾಮಾಜಿಕ...

ಪತ್ರಕರ್ತನ ಹತ್ಯೆ ಪ್ರಕರಣ : ಡೇರಾ ಮುಖ್ಯಸ್ಥ ರಾಮ್ ರಹೀಂ ಸಿಂಗ್ ಖುಲಾಸೆ

ಪತ್ರಕರ್ತ ಛತ್ರಪತಿ ಹತ್ಯೆ ಪ್ರಕರಣದಲ್ಲಿ ಸಿರ್ಸಾದ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಂ ಸಿಂಗ್ ಅನ್ನು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಶನಿವಾರ (ಮಾ.7) ಖುಲಾಸೆಗೊಳಿಸಿರುವುದಾಗಿ livelaw.in ಎಂದು ವರದಿ...

ಗೃಹ ಬಳಕೆಯ ಎಲ್‌ಪಿಜಿ ದರ 60 ರೂ. ಹೆಚ್ಚಳ : 11 ತಿಂಗಳಲ್ಲಿ ಎರಡನೇ ಬಾರಿ ಬೆಲೆ ಏರಿಕೆ

ತೈಲ ಮಾರುಕಟ್ಟೆ ಕಂಪನಿಗಳು ಶನಿವಾರ (ಮಾ.7) ದೇಶದಲ್ಲಿ ಗೃಹ ಬಳಕೆಯ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ಕ್ರಮವಾಗಿ ರೂ. 60 ಮತ್ತು ರೂ. 115 ಹೆಚ್ಚಿಸಿವೆ. ಈ ಹೆಚ್ಚಳದ ನಂತರ ರಾಷ್ಟ್ರ ರಾಜಧಾನಿ...