Homeಮುಖಪುಟಫೇಸ್‌ಬುಕ್‌ನಲ್ಲಿ 'ಲಾಲ್ ಸಲಾಂ', 'ಕಾಮ್ರೇಡ್' ಪದ ಬಳಸಿದರೆ ಅಸ್ಸಾಂನಲ್ಲಿ ಜೈಲು ಶಿಕ್ಷೆ!

ಫೇಸ್‌ಬುಕ್‌ನಲ್ಲಿ ‘ಲಾಲ್ ಸಲಾಂ’, ‘ಕಾಮ್ರೇಡ್’ ಪದ ಬಳಸಿದರೆ ಅಸ್ಸಾಂನಲ್ಲಿ ಜೈಲು ಶಿಕ್ಷೆ!

ಈ ಹಿಂದೆ ಭೀಮಾ ಕೊರೇಂಗಾವ್‌ ಪ್ರಕರಣದಲ್ಲಿ ಬಂಧಿಸಲ್ಪಟ್ಟ ವ್ಯಕ್ತಿಯ ಮನೆಯಲ್ಲಿ ವಾರ್‌ ಅಂಡ್‌ ಪೀಸ್ ಪುಸ್ತಕ ಇದ್ದುದನ್ನು ಗಮನಿಸಿದ ನ್ಯಾಯಾಧೀಶರು "ಇನ್ಯಾವುದೋ ದೇಶದ ಗಡಿಯಲ್ಲಿ ನಡೆದ ಯುದ್ದದ ಬಗೆಗಿನ ಪುಸ್ತಕವನ್ನು ನೀವು ಏಕೆ ಇಟ್ಟುಕೊಂಡಿದ್ದೀರಿ" ಎಂದು ಪ್ರಶ್ನಿಸಿದ್ದರು.

- Advertisement -
- Advertisement -

‘ಲಾಲ್ ಸಲಾಂ’, ‘ಕಾಮ್ರೇಡ್’ ಎಂಬ ಪದಗಳನ್ನು ಬಳಸುವುದು ಅಥವಾ ಲೆನಿನ್ ಅವರ ಫೋಟೋವನ್ನು ಸಾಮಾಜಿಕ ಮಾಧ್ಯಮದಲ್ಲಿ ಅಪ್‌ಲೋಡ್ ಮಾಡಿದರೆ ನಿಮ್ಮನ್ನು ಅಸ್ಸಾಂನಲ್ಲಿ ಕಾನೂನುಬಾಹಿರ ಚಟುವಟಿಕೆಗಳ ತಡೆಗಟ್ಟುವಿಕೆ ಕಾಯ್ದೆ (ಯುಎಪಿಎ) ಅಡಿಯಲ್ಲಿ ಬಂಧಿಸಬಹುದಾಗಿದೆ.

ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ)ಯು ರೈತ ಮುಖಂಡ ಅಖಿಲ್ ಗೊಗೊಯ್ ಅವರ ಆಪ್ತ ಸಹಾಯಕ ಬಿಟ್ಟು ಸೋನೊವಾಲ್ ವಿರುದ್ಧದ ಚಾರ್ಜ್‌ಶೀಟ್‌ನಲ್ಲಿ, ಅವರು ತಮ್ಮ ಕೆಲವು ಸ್ನೇಹಿತರನ್ನು ‘ಕಾಮ್ರೇಡ್’ ಎಂದು ಉಲ್ಲೇಖಿಸಿದ್ದಾರೆ ಮತ್ತು ಇತರೆಡೆಗಳಲ್ಲಿ ‘ಲಾಲ್ ಸಲಾಮ್’ ನಂತಹ ಪದಗಳನ್ನು ಬಳಸಿದ್ದಾರೆ ಎಂದು ಆರೋಪಿಸಿದ್ದಾರೆ ಎಂದು ಔಟ್‌ಲುಕ್‌ ವರದಿ ಮಾಡಿದೆ.

ಕಾಮ್ರೇಡ್ ಎಂದರೆ ಸಂಗಾತಿ, ಒಡನಾಡಿ ಎಂಬರ್ಥ ಬರುತ್ತದೆ. ಹಾಗೆಯೇ ಲಾಲ್‌ ಸಲಾಂ ಎಂದರೆ ಕೆಂಪುವಂದನೆ ಎಂಬುದಾಗಿದೆ. (ಕಮ್ಯುನಿಸ್ಟ್‌ ಚಳವಳಿಯು ಕೆಂಪು ಬಣ್ಣವನ್ನು ತನ್ನ ಸಂಘಟನೆಯ ಬಣ್ಣವನ್ನಾಗಿಸಿಕೊಂಡಿದೆ.) ಈ ಪದಗಳನ್ನ ನೂರಾರು ವರ್ಷಗಳಿಂದ ಹಲವು ಚಳವಳಿಗಳಲ್ಲಿ ಬಳಕೆಯಲ್ಲಿವೆ. ಹಾಗಾಗಿ ಕೇವಲ ಈ ಪದಗಳನ್ನು ಬಳಸಿದ ಮಾತ್ರವೇ ಅವರ ಮೇಲೆ ಆರೋಪ ಹೊರಿಸುತ್ತಿರುವುದು ಪೊಲೀಸರಿಗೆ ಮತ್ತೇನು ಸಾಕ್ಷ್ಯ ಸಿಗದಿದ್ದುಕ್ಕೆ ತೇಪೆ ಸಾರಿಸುವ ಪ್ರಯತ್ನವಷ್ಟೇ ಎಂದು ಹಲವು ಹೋರಾಟಗಾರರು ಅಭಿಪ್ರಾಯಪಟ್ಟಿದ್ದಾರೆ.

 ಸೋನೊವಾಲ್ ಮತ್ತು ಗೊಗೊಯ್‌ನ ಇತರ ಇಬ್ಬರು ಸಹಾಯಕರನ್ನು ಈ ವರ್ಷದ ಆರಂಭದಲ್ಲಿ ಯುಎಪಿಎಯ ವಿವಿಧ ಆರೋಪದಡಿ ಎನ್‌ಐಎ ಬಂಧಿಸಿತ್ತು. ಕಳೆದ ವರ್ಷ ಡಿಸೆಂಬರ್‌ನಲ್ಲಿ ಅಸ್ಸಾಂ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರುದ್ಧ ಭಾರಿ ಪ್ರತಿಭಟನೆ ನಡೆಸಿದಾಗ ಗೊಗೊಯ್ ಅವರನ್ನು ಬಂಧಿಸಲಾಗಿತ್ತು.

ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 120 ಬಿ, 253 ಎ, 153 ಬಿ ಮತ್ತು ಯುಎಪಿಎ ಸೆಕ್ಷನ್ 18 ಮತ್ತು 39 ರ ಅಡಿಯಲ್ಲಿ ಎನ್ಐಎ ಪ್ರಕರಣಕ್ಕೆ (13/2019) ಸಂಬಂಧಿಸಿದಂತೆ ಗೊಗೊಯ್ ಅವರು ಡಿಸೆಂಬರ್ 16, 2019 ರಿಂದ ಬಂಧನದಲ್ಲಿದ್ದಾರೆ.

ಮೇ 29 ರಂದು ಸಲ್ಲಿಸಲಾದ ಚಾರ್ಜ್‌ಶೀಟ್‌ನಲ್ಲಿ, “ಬಂಡವಾಳಶಾಹಿಗಳು ನಮಗೆ ಹಗ್ಗವನ್ನು ಮಾರಾಟ ಮಾಡುತ್ತಾರೆ ಮತ್ತು ನಾವು ಅದರಲ್ಲಿ ಅವರನ್ನೆ ನೇತು ಹಾಕುತ್ತೇವೆ” ಎಂಬ ವಾಕ್ಯದೊಂದಿಗೆ ಸೋನೊವಾಲ್ ಲೆನಿನ್‌ರ ಒಂದು ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್‌ಲೋಡ್ ಮಾಡಿದ್ದಾರೆ ಎಂದು ಉಲ್ಲೇಖಿಸಲಾಗಿದೆ.

ಎನ್‌ಐಎ ಸಲ್ಲಿಸಿದ 40 ಪುಟಗಳ ಚಾರ್ಜ್‌ಶೀಟ್‌ನಲ್ಲಿ ತಮ್ಮ ನಾಯಕರ ವಿರುದ್ಧದ ಯಾವುದೇ ಆರೋಪಗಳನ್ನು ಸಾಬೀತುಪಡಿಸಲು ಯಾವುದೇ ದೃಢವಾದ ಪುರಾವೆಗಳಿಲ್ಲ ಎಂದು ಗೊಗೊಯ್ ಸಲಹೆಗಾರರಾಗಿರುವ ರೈತರ ಸಂಘಟನೆಯಾದ ಕೃಷಿಕ್‌ ಮುಕ್ತಿ ಸಂಗ್ರಾಮ್ ಸಮಿತಿ (ಕೆಎಂಎಸ್ಎಸ್) ಆರೋಪಿಸಿದೆ.

ಚಾರ್ಜ್‌ಶೀಟ್ ಅನ್ನು ಉಲ್ಲೇಖಿಸಿದ ಕೆಎಂಎಸ್ಎಸ್ ಅಧ್ಯಕ್ಷ ಭಾಸ್ಕೊ ಸೈಕಿಯಾ, ತನಿಖಾ ಸಂಸ್ಥೆ ಕೆಎಂಎಸ್ಎಸ್ ನಾಯಕರನ್ನು ಮಾವೋವಾದಿಗಳೆಂದು ಬ್ರಾಂಡ್ ಮಾಡಲು ಪ್ರಯತ್ನಿಸುತ್ತಿದೆ. ಮಾರುಕಟ್ಟೆಯಲ್ಲಿ ಮುಕ್ತವಾಗಿ ಲಭ್ಯವಿರುವ ಪುಸ್ತಕಗಳನ್ನು ಓದುವುದು ಮಾವೋವಾದಿ ಎಂಬುದಕ್ಕೆ ಸಾಕ್ಷಿಯಾಗಲು ಸಾಧ್ಯವಿಲ್ಲ ಎಂದು ಅವರು ಹೇಳಿದ್ದಾರೆ.

“ಅಖಿಲ್ ಗೊಗೊಯ್ ಮಾವೋವಾದಿ ಎಂದು ನಂಬಿಸಲು ಎನ್ಐಎ ಬಯಸಿದೆ. ಆದರೆ ಅವರು ಯಾವುದೇ ದೃಢವಾದ ಸಾಕ್ಷ್ಯವನ್ನು ನೀಡಲು ಸಾಧ್ಯವಾಗಲಿಲ್ಲ. ಅವರು ಮಾವೋವಾದದ ಕುರಿತ ಪುಸ್ತಕಗಳ ಬಗ್ಗೆಯೂ ಪ್ರಸ್ತಾಪಿಸಿದ್ದಾರೆ. ಎನ್ಐಎ ‘ಸಮಾಜವಾದಕ್ಕೆ ಒಂದು ಪರಿಚಯ’ ಮತ್ತು ‘ಕಮ್ಯುನಿಸ್ಟ್ ಪ್ರಣಾಳಿಕೆ’ ಮುಂತಾದ ಪುಸ್ತಕಗಳನ್ನು ವಶಪಡಿಸಿಕೊಂಡಿದೆ. ಈ ಪುಸ್ತಕಗಳನ್ನು ಮುಕ್ತ ಮಾರುಕಟ್ಟೆಯಿಂದ ಖರೀದಿಸಲಾಗಿದೆ. ಇದು ಹಾಸ್ಯಾಸ್ಪದವಾಗಿದೆ” ಸೈಕಿಯಾ ಹೇಳಿದರು.

ಸಿಎಎ ವಿರೋಧಿ ಆಂದೋಲನದಲ್ಲಿ, ಸೈಕಿಯಾ ಈ ಚಳುವಳಿ ಜನರ ಚಳುವಳಿ ಎಂದು ಹೇಳಿದರು. “ಜನರು ತಮ್ಮ ಗುರುತು ಮತ್ತು ಸಂಸ್ಕೃತಿಯ ಬಗ್ಗೆ ಭಯಪಡುತ್ತಿರುವುದರಿಂದ ಪ್ರತಿಭಟಿಸುತ್ತಿದ್ದಾರೆ. ಸಿಎಎ ವಿರೋಧಿ ಪ್ರತಿಭಟನೆಯ ಸಮಯದಲ್ಲಿ ಹಿಂಸಾಚಾರದಲ್ಲಿ ಕೆಎಂಎಸ್ಎಸ್ ನಾಯಕರ ಪಾತ್ರವಿದೆ ಮತ್ತು ಅದು ಮಾವೋವಾದಿ ದಾಳಿಯನ್ನು ಹೋಲುತ್ತದೆ ಎಂದು ಎನ್ಐಎ ಹೇಳುತ್ತಿದೆ. ಆದರೆ ನಾವು ಹಿಂಸಾಚಾರವನ್ನು ನಂಬುವುದಿಲ್ಲ” ಎಂದು ಸೈಕಿಯಾ ಹೇಳಿದ್ದಾರೆ.

ಅಖಿಲ್ ಗೊಗೊಯ್

ಸಿಎಎ ವಿರೋಧಿ ಪ್ರತಿಭಟನೆಗಳು ಗುವಾಹಟಿಯಲ್ಲಿ ಹಿಂಸಾತ್ಮಕವಾಗಿತ್ತು. ಇದು ಸಾರ್ವಜನಿಕ ಆಸ್ತಿಗಳಿಗೆ ವ್ಯಾಪಕ ಹಾನಿಯನ್ನುಂಟುಮಾಡಿತು. ಡಿಸೆಂಬರ್ 12 ರಂದು ಪೊಲೀಸರು ಜೋರ್ಹಾಟ್‌ನಿಂದ ಗೊಗೊಯ್ ಅವರನ್ನು ಬಂಧಿಸಿದರು. ಅಂದಿನಿಂದ, ನ್ಯಾಯಾಲಯದಿಂದ ಜಾಮೀನು ಪಡೆದಿದ್ದರೂ ಸಹ ಆತನನ್ನು ಬಿಡುಗಡೆ ಮಾಡಲಾಗಿಲ್ಲ, ಏಕೆಂದರೆ ಆತನ ವಿರುದ್ಧ ಹೊಸ ಪ್ರಕರಣಗಳನ್ನು ಪೊಲೀಸರು ದಾಖಲಿಸುತ್ತಿದ್ದಾರೆ ಎಂದು ಅವರು ದೂರಿದ್ದಾರೆ.

ಈ ಹಿಂದೆ ಭೀಮಾ ಕೊರೇಂಗಾವ್‌ ಪ್ರಕರಣದಲ್ಲಿ ಬಂಧಿಸಲ್ಪಟ್ಟ ವ್ಯಕ್ತಿಯ ಮನೆಯಲ್ಲಿ ವಾರ್‌ ಅಂಡ್‌ ಪೀಸ್ ಪುಸ್ತಕ ಇದ್ದುದನ್ನು ಗಮನಿಸಿದ ನ್ಯಾಯಾಧೀಶರು “ಇನ್ಯಾವುದೋ ದೇಶದ ಗಡಿಯಲ್ಲಿ ನಡೆದ ಯುದ್ದದ ಬಗೆಗಿನ ಪುಸ್ತಕವನ್ನು ನೀವು ಏಕೆ ಇಟ್ಟುಕೊಂಡಿದ್ದೀರಿ” ಎಂದು ಪ್ರಶ್ನಿಸಿದ್ದರು. ಈಗ ಕೇವಲ ಕಾಮ್ರೇಡ್ ಮತ್ತು ಲಾಲ್ ಸಲಾಂ ಪದ ಬಳಸಿದ್ದಕ್ಕೆ ಯುಎಪಿಎ ಕಾಯ್ದೆ ಬಳಸಿದ್ದಾರೆ. ಇದು ಎಲ್ಲಿಗೆ ಹೋಗಿ ಮುಟ್ಟುವುದೋ ಗೊತ್ತಿಲ್ಲ…


ಇದನ್ನೂ ಓದಿ: ವಾರ್ ಅಂಡ್ ಪೀಸ್ ಓದುವವರೆ ಗಮನಿಸಿ ಪ್ಲೀಸ್, ಗದಗಿಗೂ ಬಂತು ಎಚ್ಚರವಿರಲಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...