Homeಮುಖಪುಟಫೇಸ್‌ಬುಕ್‌ನಲ್ಲಿ 'ಲಾಲ್ ಸಲಾಂ', 'ಕಾಮ್ರೇಡ್' ಪದ ಬಳಸಿದರೆ ಅಸ್ಸಾಂನಲ್ಲಿ ಜೈಲು ಶಿಕ್ಷೆ!

ಫೇಸ್‌ಬುಕ್‌ನಲ್ಲಿ ‘ಲಾಲ್ ಸಲಾಂ’, ‘ಕಾಮ್ರೇಡ್’ ಪದ ಬಳಸಿದರೆ ಅಸ್ಸಾಂನಲ್ಲಿ ಜೈಲು ಶಿಕ್ಷೆ!

ಈ ಹಿಂದೆ ಭೀಮಾ ಕೊರೇಂಗಾವ್‌ ಪ್ರಕರಣದಲ್ಲಿ ಬಂಧಿಸಲ್ಪಟ್ಟ ವ್ಯಕ್ತಿಯ ಮನೆಯಲ್ಲಿ ವಾರ್‌ ಅಂಡ್‌ ಪೀಸ್ ಪುಸ್ತಕ ಇದ್ದುದನ್ನು ಗಮನಿಸಿದ ನ್ಯಾಯಾಧೀಶರು "ಇನ್ಯಾವುದೋ ದೇಶದ ಗಡಿಯಲ್ಲಿ ನಡೆದ ಯುದ್ದದ ಬಗೆಗಿನ ಪುಸ್ತಕವನ್ನು ನೀವು ಏಕೆ ಇಟ್ಟುಕೊಂಡಿದ್ದೀರಿ" ಎಂದು ಪ್ರಶ್ನಿಸಿದ್ದರು.

- Advertisement -
- Advertisement -

‘ಲಾಲ್ ಸಲಾಂ’, ‘ಕಾಮ್ರೇಡ್’ ಎಂಬ ಪದಗಳನ್ನು ಬಳಸುವುದು ಅಥವಾ ಲೆನಿನ್ ಅವರ ಫೋಟೋವನ್ನು ಸಾಮಾಜಿಕ ಮಾಧ್ಯಮದಲ್ಲಿ ಅಪ್‌ಲೋಡ್ ಮಾಡಿದರೆ ನಿಮ್ಮನ್ನು ಅಸ್ಸಾಂನಲ್ಲಿ ಕಾನೂನುಬಾಹಿರ ಚಟುವಟಿಕೆಗಳ ತಡೆಗಟ್ಟುವಿಕೆ ಕಾಯ್ದೆ (ಯುಎಪಿಎ) ಅಡಿಯಲ್ಲಿ ಬಂಧಿಸಬಹುದಾಗಿದೆ.

ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ)ಯು ರೈತ ಮುಖಂಡ ಅಖಿಲ್ ಗೊಗೊಯ್ ಅವರ ಆಪ್ತ ಸಹಾಯಕ ಬಿಟ್ಟು ಸೋನೊವಾಲ್ ವಿರುದ್ಧದ ಚಾರ್ಜ್‌ಶೀಟ್‌ನಲ್ಲಿ, ಅವರು ತಮ್ಮ ಕೆಲವು ಸ್ನೇಹಿತರನ್ನು ‘ಕಾಮ್ರೇಡ್’ ಎಂದು ಉಲ್ಲೇಖಿಸಿದ್ದಾರೆ ಮತ್ತು ಇತರೆಡೆಗಳಲ್ಲಿ ‘ಲಾಲ್ ಸಲಾಮ್’ ನಂತಹ ಪದಗಳನ್ನು ಬಳಸಿದ್ದಾರೆ ಎಂದು ಆರೋಪಿಸಿದ್ದಾರೆ ಎಂದು ಔಟ್‌ಲುಕ್‌ ವರದಿ ಮಾಡಿದೆ.

ಕಾಮ್ರೇಡ್ ಎಂದರೆ ಸಂಗಾತಿ, ಒಡನಾಡಿ ಎಂಬರ್ಥ ಬರುತ್ತದೆ. ಹಾಗೆಯೇ ಲಾಲ್‌ ಸಲಾಂ ಎಂದರೆ ಕೆಂಪುವಂದನೆ ಎಂಬುದಾಗಿದೆ. (ಕಮ್ಯುನಿಸ್ಟ್‌ ಚಳವಳಿಯು ಕೆಂಪು ಬಣ್ಣವನ್ನು ತನ್ನ ಸಂಘಟನೆಯ ಬಣ್ಣವನ್ನಾಗಿಸಿಕೊಂಡಿದೆ.) ಈ ಪದಗಳನ್ನ ನೂರಾರು ವರ್ಷಗಳಿಂದ ಹಲವು ಚಳವಳಿಗಳಲ್ಲಿ ಬಳಕೆಯಲ್ಲಿವೆ. ಹಾಗಾಗಿ ಕೇವಲ ಈ ಪದಗಳನ್ನು ಬಳಸಿದ ಮಾತ್ರವೇ ಅವರ ಮೇಲೆ ಆರೋಪ ಹೊರಿಸುತ್ತಿರುವುದು ಪೊಲೀಸರಿಗೆ ಮತ್ತೇನು ಸಾಕ್ಷ್ಯ ಸಿಗದಿದ್ದುಕ್ಕೆ ತೇಪೆ ಸಾರಿಸುವ ಪ್ರಯತ್ನವಷ್ಟೇ ಎಂದು ಹಲವು ಹೋರಾಟಗಾರರು ಅಭಿಪ್ರಾಯಪಟ್ಟಿದ್ದಾರೆ.

 ಸೋನೊವಾಲ್ ಮತ್ತು ಗೊಗೊಯ್‌ನ ಇತರ ಇಬ್ಬರು ಸಹಾಯಕರನ್ನು ಈ ವರ್ಷದ ಆರಂಭದಲ್ಲಿ ಯುಎಪಿಎಯ ವಿವಿಧ ಆರೋಪದಡಿ ಎನ್‌ಐಎ ಬಂಧಿಸಿತ್ತು. ಕಳೆದ ವರ್ಷ ಡಿಸೆಂಬರ್‌ನಲ್ಲಿ ಅಸ್ಸಾಂ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರುದ್ಧ ಭಾರಿ ಪ್ರತಿಭಟನೆ ನಡೆಸಿದಾಗ ಗೊಗೊಯ್ ಅವರನ್ನು ಬಂಧಿಸಲಾಗಿತ್ತು.

ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 120 ಬಿ, 253 ಎ, 153 ಬಿ ಮತ್ತು ಯುಎಪಿಎ ಸೆಕ್ಷನ್ 18 ಮತ್ತು 39 ರ ಅಡಿಯಲ್ಲಿ ಎನ್ಐಎ ಪ್ರಕರಣಕ್ಕೆ (13/2019) ಸಂಬಂಧಿಸಿದಂತೆ ಗೊಗೊಯ್ ಅವರು ಡಿಸೆಂಬರ್ 16, 2019 ರಿಂದ ಬಂಧನದಲ್ಲಿದ್ದಾರೆ.

ಮೇ 29 ರಂದು ಸಲ್ಲಿಸಲಾದ ಚಾರ್ಜ್‌ಶೀಟ್‌ನಲ್ಲಿ, “ಬಂಡವಾಳಶಾಹಿಗಳು ನಮಗೆ ಹಗ್ಗವನ್ನು ಮಾರಾಟ ಮಾಡುತ್ತಾರೆ ಮತ್ತು ನಾವು ಅದರಲ್ಲಿ ಅವರನ್ನೆ ನೇತು ಹಾಕುತ್ತೇವೆ” ಎಂಬ ವಾಕ್ಯದೊಂದಿಗೆ ಸೋನೊವಾಲ್ ಲೆನಿನ್‌ರ ಒಂದು ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್‌ಲೋಡ್ ಮಾಡಿದ್ದಾರೆ ಎಂದು ಉಲ್ಲೇಖಿಸಲಾಗಿದೆ.

ಎನ್‌ಐಎ ಸಲ್ಲಿಸಿದ 40 ಪುಟಗಳ ಚಾರ್ಜ್‌ಶೀಟ್‌ನಲ್ಲಿ ತಮ್ಮ ನಾಯಕರ ವಿರುದ್ಧದ ಯಾವುದೇ ಆರೋಪಗಳನ್ನು ಸಾಬೀತುಪಡಿಸಲು ಯಾವುದೇ ದೃಢವಾದ ಪುರಾವೆಗಳಿಲ್ಲ ಎಂದು ಗೊಗೊಯ್ ಸಲಹೆಗಾರರಾಗಿರುವ ರೈತರ ಸಂಘಟನೆಯಾದ ಕೃಷಿಕ್‌ ಮುಕ್ತಿ ಸಂಗ್ರಾಮ್ ಸಮಿತಿ (ಕೆಎಂಎಸ್ಎಸ್) ಆರೋಪಿಸಿದೆ.

ಚಾರ್ಜ್‌ಶೀಟ್ ಅನ್ನು ಉಲ್ಲೇಖಿಸಿದ ಕೆಎಂಎಸ್ಎಸ್ ಅಧ್ಯಕ್ಷ ಭಾಸ್ಕೊ ಸೈಕಿಯಾ, ತನಿಖಾ ಸಂಸ್ಥೆ ಕೆಎಂಎಸ್ಎಸ್ ನಾಯಕರನ್ನು ಮಾವೋವಾದಿಗಳೆಂದು ಬ್ರಾಂಡ್ ಮಾಡಲು ಪ್ರಯತ್ನಿಸುತ್ತಿದೆ. ಮಾರುಕಟ್ಟೆಯಲ್ಲಿ ಮುಕ್ತವಾಗಿ ಲಭ್ಯವಿರುವ ಪುಸ್ತಕಗಳನ್ನು ಓದುವುದು ಮಾವೋವಾದಿ ಎಂಬುದಕ್ಕೆ ಸಾಕ್ಷಿಯಾಗಲು ಸಾಧ್ಯವಿಲ್ಲ ಎಂದು ಅವರು ಹೇಳಿದ್ದಾರೆ.

“ಅಖಿಲ್ ಗೊಗೊಯ್ ಮಾವೋವಾದಿ ಎಂದು ನಂಬಿಸಲು ಎನ್ಐಎ ಬಯಸಿದೆ. ಆದರೆ ಅವರು ಯಾವುದೇ ದೃಢವಾದ ಸಾಕ್ಷ್ಯವನ್ನು ನೀಡಲು ಸಾಧ್ಯವಾಗಲಿಲ್ಲ. ಅವರು ಮಾವೋವಾದದ ಕುರಿತ ಪುಸ್ತಕಗಳ ಬಗ್ಗೆಯೂ ಪ್ರಸ್ತಾಪಿಸಿದ್ದಾರೆ. ಎನ್ಐಎ ‘ಸಮಾಜವಾದಕ್ಕೆ ಒಂದು ಪರಿಚಯ’ ಮತ್ತು ‘ಕಮ್ಯುನಿಸ್ಟ್ ಪ್ರಣಾಳಿಕೆ’ ಮುಂತಾದ ಪುಸ್ತಕಗಳನ್ನು ವಶಪಡಿಸಿಕೊಂಡಿದೆ. ಈ ಪುಸ್ತಕಗಳನ್ನು ಮುಕ್ತ ಮಾರುಕಟ್ಟೆಯಿಂದ ಖರೀದಿಸಲಾಗಿದೆ. ಇದು ಹಾಸ್ಯಾಸ್ಪದವಾಗಿದೆ” ಸೈಕಿಯಾ ಹೇಳಿದರು.

ಸಿಎಎ ವಿರೋಧಿ ಆಂದೋಲನದಲ್ಲಿ, ಸೈಕಿಯಾ ಈ ಚಳುವಳಿ ಜನರ ಚಳುವಳಿ ಎಂದು ಹೇಳಿದರು. “ಜನರು ತಮ್ಮ ಗುರುತು ಮತ್ತು ಸಂಸ್ಕೃತಿಯ ಬಗ್ಗೆ ಭಯಪಡುತ್ತಿರುವುದರಿಂದ ಪ್ರತಿಭಟಿಸುತ್ತಿದ್ದಾರೆ. ಸಿಎಎ ವಿರೋಧಿ ಪ್ರತಿಭಟನೆಯ ಸಮಯದಲ್ಲಿ ಹಿಂಸಾಚಾರದಲ್ಲಿ ಕೆಎಂಎಸ್ಎಸ್ ನಾಯಕರ ಪಾತ್ರವಿದೆ ಮತ್ತು ಅದು ಮಾವೋವಾದಿ ದಾಳಿಯನ್ನು ಹೋಲುತ್ತದೆ ಎಂದು ಎನ್ಐಎ ಹೇಳುತ್ತಿದೆ. ಆದರೆ ನಾವು ಹಿಂಸಾಚಾರವನ್ನು ನಂಬುವುದಿಲ್ಲ” ಎಂದು ಸೈಕಿಯಾ ಹೇಳಿದ್ದಾರೆ.

ಅಖಿಲ್ ಗೊಗೊಯ್

ಸಿಎಎ ವಿರೋಧಿ ಪ್ರತಿಭಟನೆಗಳು ಗುವಾಹಟಿಯಲ್ಲಿ ಹಿಂಸಾತ್ಮಕವಾಗಿತ್ತು. ಇದು ಸಾರ್ವಜನಿಕ ಆಸ್ತಿಗಳಿಗೆ ವ್ಯಾಪಕ ಹಾನಿಯನ್ನುಂಟುಮಾಡಿತು. ಡಿಸೆಂಬರ್ 12 ರಂದು ಪೊಲೀಸರು ಜೋರ್ಹಾಟ್‌ನಿಂದ ಗೊಗೊಯ್ ಅವರನ್ನು ಬಂಧಿಸಿದರು. ಅಂದಿನಿಂದ, ನ್ಯಾಯಾಲಯದಿಂದ ಜಾಮೀನು ಪಡೆದಿದ್ದರೂ ಸಹ ಆತನನ್ನು ಬಿಡುಗಡೆ ಮಾಡಲಾಗಿಲ್ಲ, ಏಕೆಂದರೆ ಆತನ ವಿರುದ್ಧ ಹೊಸ ಪ್ರಕರಣಗಳನ್ನು ಪೊಲೀಸರು ದಾಖಲಿಸುತ್ತಿದ್ದಾರೆ ಎಂದು ಅವರು ದೂರಿದ್ದಾರೆ.

ಈ ಹಿಂದೆ ಭೀಮಾ ಕೊರೇಂಗಾವ್‌ ಪ್ರಕರಣದಲ್ಲಿ ಬಂಧಿಸಲ್ಪಟ್ಟ ವ್ಯಕ್ತಿಯ ಮನೆಯಲ್ಲಿ ವಾರ್‌ ಅಂಡ್‌ ಪೀಸ್ ಪುಸ್ತಕ ಇದ್ದುದನ್ನು ಗಮನಿಸಿದ ನ್ಯಾಯಾಧೀಶರು “ಇನ್ಯಾವುದೋ ದೇಶದ ಗಡಿಯಲ್ಲಿ ನಡೆದ ಯುದ್ದದ ಬಗೆಗಿನ ಪುಸ್ತಕವನ್ನು ನೀವು ಏಕೆ ಇಟ್ಟುಕೊಂಡಿದ್ದೀರಿ” ಎಂದು ಪ್ರಶ್ನಿಸಿದ್ದರು. ಈಗ ಕೇವಲ ಕಾಮ್ರೇಡ್ ಮತ್ತು ಲಾಲ್ ಸಲಾಂ ಪದ ಬಳಸಿದ್ದಕ್ಕೆ ಯುಎಪಿಎ ಕಾಯ್ದೆ ಬಳಸಿದ್ದಾರೆ. ಇದು ಎಲ್ಲಿಗೆ ಹೋಗಿ ಮುಟ್ಟುವುದೋ ಗೊತ್ತಿಲ್ಲ…


ಇದನ್ನೂ ಓದಿ: ವಾರ್ ಅಂಡ್ ಪೀಸ್ ಓದುವವರೆ ಗಮನಿಸಿ ಪ್ಲೀಸ್, ಗದಗಿಗೂ ಬಂತು ಎಚ್ಚರವಿರಲಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...