Homeಮುಖಪುಟಫೇಸ್‌ಬುಕ್‌ನಲ್ಲಿ 'ಲಾಲ್ ಸಲಾಂ', 'ಕಾಮ್ರೇಡ್' ಪದ ಬಳಸಿದರೆ ಅಸ್ಸಾಂನಲ್ಲಿ ಜೈಲು ಶಿಕ್ಷೆ!

ಫೇಸ್‌ಬುಕ್‌ನಲ್ಲಿ ‘ಲಾಲ್ ಸಲಾಂ’, ‘ಕಾಮ್ರೇಡ್’ ಪದ ಬಳಸಿದರೆ ಅಸ್ಸಾಂನಲ್ಲಿ ಜೈಲು ಶಿಕ್ಷೆ!

ಈ ಹಿಂದೆ ಭೀಮಾ ಕೊರೇಂಗಾವ್‌ ಪ್ರಕರಣದಲ್ಲಿ ಬಂಧಿಸಲ್ಪಟ್ಟ ವ್ಯಕ್ತಿಯ ಮನೆಯಲ್ಲಿ ವಾರ್‌ ಅಂಡ್‌ ಪೀಸ್ ಪುಸ್ತಕ ಇದ್ದುದನ್ನು ಗಮನಿಸಿದ ನ್ಯಾಯಾಧೀಶರು "ಇನ್ಯಾವುದೋ ದೇಶದ ಗಡಿಯಲ್ಲಿ ನಡೆದ ಯುದ್ದದ ಬಗೆಗಿನ ಪುಸ್ತಕವನ್ನು ನೀವು ಏಕೆ ಇಟ್ಟುಕೊಂಡಿದ್ದೀರಿ" ಎಂದು ಪ್ರಶ್ನಿಸಿದ್ದರು.

- Advertisement -
- Advertisement -

‘ಲಾಲ್ ಸಲಾಂ’, ‘ಕಾಮ್ರೇಡ್’ ಎಂಬ ಪದಗಳನ್ನು ಬಳಸುವುದು ಅಥವಾ ಲೆನಿನ್ ಅವರ ಫೋಟೋವನ್ನು ಸಾಮಾಜಿಕ ಮಾಧ್ಯಮದಲ್ಲಿ ಅಪ್‌ಲೋಡ್ ಮಾಡಿದರೆ ನಿಮ್ಮನ್ನು ಅಸ್ಸಾಂನಲ್ಲಿ ಕಾನೂನುಬಾಹಿರ ಚಟುವಟಿಕೆಗಳ ತಡೆಗಟ್ಟುವಿಕೆ ಕಾಯ್ದೆ (ಯುಎಪಿಎ) ಅಡಿಯಲ್ಲಿ ಬಂಧಿಸಬಹುದಾಗಿದೆ.

ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ)ಯು ರೈತ ಮುಖಂಡ ಅಖಿಲ್ ಗೊಗೊಯ್ ಅವರ ಆಪ್ತ ಸಹಾಯಕ ಬಿಟ್ಟು ಸೋನೊವಾಲ್ ವಿರುದ್ಧದ ಚಾರ್ಜ್‌ಶೀಟ್‌ನಲ್ಲಿ, ಅವರು ತಮ್ಮ ಕೆಲವು ಸ್ನೇಹಿತರನ್ನು ‘ಕಾಮ್ರೇಡ್’ ಎಂದು ಉಲ್ಲೇಖಿಸಿದ್ದಾರೆ ಮತ್ತು ಇತರೆಡೆಗಳಲ್ಲಿ ‘ಲಾಲ್ ಸಲಾಮ್’ ನಂತಹ ಪದಗಳನ್ನು ಬಳಸಿದ್ದಾರೆ ಎಂದು ಆರೋಪಿಸಿದ್ದಾರೆ ಎಂದು ಔಟ್‌ಲುಕ್‌ ವರದಿ ಮಾಡಿದೆ.

ಕಾಮ್ರೇಡ್ ಎಂದರೆ ಸಂಗಾತಿ, ಒಡನಾಡಿ ಎಂಬರ್ಥ ಬರುತ್ತದೆ. ಹಾಗೆಯೇ ಲಾಲ್‌ ಸಲಾಂ ಎಂದರೆ ಕೆಂಪುವಂದನೆ ಎಂಬುದಾಗಿದೆ. (ಕಮ್ಯುನಿಸ್ಟ್‌ ಚಳವಳಿಯು ಕೆಂಪು ಬಣ್ಣವನ್ನು ತನ್ನ ಸಂಘಟನೆಯ ಬಣ್ಣವನ್ನಾಗಿಸಿಕೊಂಡಿದೆ.) ಈ ಪದಗಳನ್ನ ನೂರಾರು ವರ್ಷಗಳಿಂದ ಹಲವು ಚಳವಳಿಗಳಲ್ಲಿ ಬಳಕೆಯಲ್ಲಿವೆ. ಹಾಗಾಗಿ ಕೇವಲ ಈ ಪದಗಳನ್ನು ಬಳಸಿದ ಮಾತ್ರವೇ ಅವರ ಮೇಲೆ ಆರೋಪ ಹೊರಿಸುತ್ತಿರುವುದು ಪೊಲೀಸರಿಗೆ ಮತ್ತೇನು ಸಾಕ್ಷ್ಯ ಸಿಗದಿದ್ದುಕ್ಕೆ ತೇಪೆ ಸಾರಿಸುವ ಪ್ರಯತ್ನವಷ್ಟೇ ಎಂದು ಹಲವು ಹೋರಾಟಗಾರರು ಅಭಿಪ್ರಾಯಪಟ್ಟಿದ್ದಾರೆ.

 ಸೋನೊವಾಲ್ ಮತ್ತು ಗೊಗೊಯ್‌ನ ಇತರ ಇಬ್ಬರು ಸಹಾಯಕರನ್ನು ಈ ವರ್ಷದ ಆರಂಭದಲ್ಲಿ ಯುಎಪಿಎಯ ವಿವಿಧ ಆರೋಪದಡಿ ಎನ್‌ಐಎ ಬಂಧಿಸಿತ್ತು. ಕಳೆದ ವರ್ಷ ಡಿಸೆಂಬರ್‌ನಲ್ಲಿ ಅಸ್ಸಾಂ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರುದ್ಧ ಭಾರಿ ಪ್ರತಿಭಟನೆ ನಡೆಸಿದಾಗ ಗೊಗೊಯ್ ಅವರನ್ನು ಬಂಧಿಸಲಾಗಿತ್ತು.

ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 120 ಬಿ, 253 ಎ, 153 ಬಿ ಮತ್ತು ಯುಎಪಿಎ ಸೆಕ್ಷನ್ 18 ಮತ್ತು 39 ರ ಅಡಿಯಲ್ಲಿ ಎನ್ಐಎ ಪ್ರಕರಣಕ್ಕೆ (13/2019) ಸಂಬಂಧಿಸಿದಂತೆ ಗೊಗೊಯ್ ಅವರು ಡಿಸೆಂಬರ್ 16, 2019 ರಿಂದ ಬಂಧನದಲ್ಲಿದ್ದಾರೆ.

ಮೇ 29 ರಂದು ಸಲ್ಲಿಸಲಾದ ಚಾರ್ಜ್‌ಶೀಟ್‌ನಲ್ಲಿ, “ಬಂಡವಾಳಶಾಹಿಗಳು ನಮಗೆ ಹಗ್ಗವನ್ನು ಮಾರಾಟ ಮಾಡುತ್ತಾರೆ ಮತ್ತು ನಾವು ಅದರಲ್ಲಿ ಅವರನ್ನೆ ನೇತು ಹಾಕುತ್ತೇವೆ” ಎಂಬ ವಾಕ್ಯದೊಂದಿಗೆ ಸೋನೊವಾಲ್ ಲೆನಿನ್‌ರ ಒಂದು ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್‌ಲೋಡ್ ಮಾಡಿದ್ದಾರೆ ಎಂದು ಉಲ್ಲೇಖಿಸಲಾಗಿದೆ.

ಎನ್‌ಐಎ ಸಲ್ಲಿಸಿದ 40 ಪುಟಗಳ ಚಾರ್ಜ್‌ಶೀಟ್‌ನಲ್ಲಿ ತಮ್ಮ ನಾಯಕರ ವಿರುದ್ಧದ ಯಾವುದೇ ಆರೋಪಗಳನ್ನು ಸಾಬೀತುಪಡಿಸಲು ಯಾವುದೇ ದೃಢವಾದ ಪುರಾವೆಗಳಿಲ್ಲ ಎಂದು ಗೊಗೊಯ್ ಸಲಹೆಗಾರರಾಗಿರುವ ರೈತರ ಸಂಘಟನೆಯಾದ ಕೃಷಿಕ್‌ ಮುಕ್ತಿ ಸಂಗ್ರಾಮ್ ಸಮಿತಿ (ಕೆಎಂಎಸ್ಎಸ್) ಆರೋಪಿಸಿದೆ.

ಚಾರ್ಜ್‌ಶೀಟ್ ಅನ್ನು ಉಲ್ಲೇಖಿಸಿದ ಕೆಎಂಎಸ್ಎಸ್ ಅಧ್ಯಕ್ಷ ಭಾಸ್ಕೊ ಸೈಕಿಯಾ, ತನಿಖಾ ಸಂಸ್ಥೆ ಕೆಎಂಎಸ್ಎಸ್ ನಾಯಕರನ್ನು ಮಾವೋವಾದಿಗಳೆಂದು ಬ್ರಾಂಡ್ ಮಾಡಲು ಪ್ರಯತ್ನಿಸುತ್ತಿದೆ. ಮಾರುಕಟ್ಟೆಯಲ್ಲಿ ಮುಕ್ತವಾಗಿ ಲಭ್ಯವಿರುವ ಪುಸ್ತಕಗಳನ್ನು ಓದುವುದು ಮಾವೋವಾದಿ ಎಂಬುದಕ್ಕೆ ಸಾಕ್ಷಿಯಾಗಲು ಸಾಧ್ಯವಿಲ್ಲ ಎಂದು ಅವರು ಹೇಳಿದ್ದಾರೆ.

“ಅಖಿಲ್ ಗೊಗೊಯ್ ಮಾವೋವಾದಿ ಎಂದು ನಂಬಿಸಲು ಎನ್ಐಎ ಬಯಸಿದೆ. ಆದರೆ ಅವರು ಯಾವುದೇ ದೃಢವಾದ ಸಾಕ್ಷ್ಯವನ್ನು ನೀಡಲು ಸಾಧ್ಯವಾಗಲಿಲ್ಲ. ಅವರು ಮಾವೋವಾದದ ಕುರಿತ ಪುಸ್ತಕಗಳ ಬಗ್ಗೆಯೂ ಪ್ರಸ್ತಾಪಿಸಿದ್ದಾರೆ. ಎನ್ಐಎ ‘ಸಮಾಜವಾದಕ್ಕೆ ಒಂದು ಪರಿಚಯ’ ಮತ್ತು ‘ಕಮ್ಯುನಿಸ್ಟ್ ಪ್ರಣಾಳಿಕೆ’ ಮುಂತಾದ ಪುಸ್ತಕಗಳನ್ನು ವಶಪಡಿಸಿಕೊಂಡಿದೆ. ಈ ಪುಸ್ತಕಗಳನ್ನು ಮುಕ್ತ ಮಾರುಕಟ್ಟೆಯಿಂದ ಖರೀದಿಸಲಾಗಿದೆ. ಇದು ಹಾಸ್ಯಾಸ್ಪದವಾಗಿದೆ” ಸೈಕಿಯಾ ಹೇಳಿದರು.

ಸಿಎಎ ವಿರೋಧಿ ಆಂದೋಲನದಲ್ಲಿ, ಸೈಕಿಯಾ ಈ ಚಳುವಳಿ ಜನರ ಚಳುವಳಿ ಎಂದು ಹೇಳಿದರು. “ಜನರು ತಮ್ಮ ಗುರುತು ಮತ್ತು ಸಂಸ್ಕೃತಿಯ ಬಗ್ಗೆ ಭಯಪಡುತ್ತಿರುವುದರಿಂದ ಪ್ರತಿಭಟಿಸುತ್ತಿದ್ದಾರೆ. ಸಿಎಎ ವಿರೋಧಿ ಪ್ರತಿಭಟನೆಯ ಸಮಯದಲ್ಲಿ ಹಿಂಸಾಚಾರದಲ್ಲಿ ಕೆಎಂಎಸ್ಎಸ್ ನಾಯಕರ ಪಾತ್ರವಿದೆ ಮತ್ತು ಅದು ಮಾವೋವಾದಿ ದಾಳಿಯನ್ನು ಹೋಲುತ್ತದೆ ಎಂದು ಎನ್ಐಎ ಹೇಳುತ್ತಿದೆ. ಆದರೆ ನಾವು ಹಿಂಸಾಚಾರವನ್ನು ನಂಬುವುದಿಲ್ಲ” ಎಂದು ಸೈಕಿಯಾ ಹೇಳಿದ್ದಾರೆ.

ಅಖಿಲ್ ಗೊಗೊಯ್

ಸಿಎಎ ವಿರೋಧಿ ಪ್ರತಿಭಟನೆಗಳು ಗುವಾಹಟಿಯಲ್ಲಿ ಹಿಂಸಾತ್ಮಕವಾಗಿತ್ತು. ಇದು ಸಾರ್ವಜನಿಕ ಆಸ್ತಿಗಳಿಗೆ ವ್ಯಾಪಕ ಹಾನಿಯನ್ನುಂಟುಮಾಡಿತು. ಡಿಸೆಂಬರ್ 12 ರಂದು ಪೊಲೀಸರು ಜೋರ್ಹಾಟ್‌ನಿಂದ ಗೊಗೊಯ್ ಅವರನ್ನು ಬಂಧಿಸಿದರು. ಅಂದಿನಿಂದ, ನ್ಯಾಯಾಲಯದಿಂದ ಜಾಮೀನು ಪಡೆದಿದ್ದರೂ ಸಹ ಆತನನ್ನು ಬಿಡುಗಡೆ ಮಾಡಲಾಗಿಲ್ಲ, ಏಕೆಂದರೆ ಆತನ ವಿರುದ್ಧ ಹೊಸ ಪ್ರಕರಣಗಳನ್ನು ಪೊಲೀಸರು ದಾಖಲಿಸುತ್ತಿದ್ದಾರೆ ಎಂದು ಅವರು ದೂರಿದ್ದಾರೆ.

ಈ ಹಿಂದೆ ಭೀಮಾ ಕೊರೇಂಗಾವ್‌ ಪ್ರಕರಣದಲ್ಲಿ ಬಂಧಿಸಲ್ಪಟ್ಟ ವ್ಯಕ್ತಿಯ ಮನೆಯಲ್ಲಿ ವಾರ್‌ ಅಂಡ್‌ ಪೀಸ್ ಪುಸ್ತಕ ಇದ್ದುದನ್ನು ಗಮನಿಸಿದ ನ್ಯಾಯಾಧೀಶರು “ಇನ್ಯಾವುದೋ ದೇಶದ ಗಡಿಯಲ್ಲಿ ನಡೆದ ಯುದ್ದದ ಬಗೆಗಿನ ಪುಸ್ತಕವನ್ನು ನೀವು ಏಕೆ ಇಟ್ಟುಕೊಂಡಿದ್ದೀರಿ” ಎಂದು ಪ್ರಶ್ನಿಸಿದ್ದರು. ಈಗ ಕೇವಲ ಕಾಮ್ರೇಡ್ ಮತ್ತು ಲಾಲ್ ಸಲಾಂ ಪದ ಬಳಸಿದ್ದಕ್ಕೆ ಯುಎಪಿಎ ಕಾಯ್ದೆ ಬಳಸಿದ್ದಾರೆ. ಇದು ಎಲ್ಲಿಗೆ ಹೋಗಿ ಮುಟ್ಟುವುದೋ ಗೊತ್ತಿಲ್ಲ…


ಇದನ್ನೂ ಓದಿ: ವಾರ್ ಅಂಡ್ ಪೀಸ್ ಓದುವವರೆ ಗಮನಿಸಿ ಪ್ಲೀಸ್, ಗದಗಿಗೂ ಬಂತು ಎಚ್ಚರವಿರಲಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...