Homeಮುಖಪುಟಫೇಸ್‌ಬುಕ್‌ನಲ್ಲಿ 'ಲಾಲ್ ಸಲಾಂ', 'ಕಾಮ್ರೇಡ್' ಪದ ಬಳಸಿದರೆ ಅಸ್ಸಾಂನಲ್ಲಿ ಜೈಲು ಶಿಕ್ಷೆ!

ಫೇಸ್‌ಬುಕ್‌ನಲ್ಲಿ ‘ಲಾಲ್ ಸಲಾಂ’, ‘ಕಾಮ್ರೇಡ್’ ಪದ ಬಳಸಿದರೆ ಅಸ್ಸಾಂನಲ್ಲಿ ಜೈಲು ಶಿಕ್ಷೆ!

ಈ ಹಿಂದೆ ಭೀಮಾ ಕೊರೇಂಗಾವ್‌ ಪ್ರಕರಣದಲ್ಲಿ ಬಂಧಿಸಲ್ಪಟ್ಟ ವ್ಯಕ್ತಿಯ ಮನೆಯಲ್ಲಿ ವಾರ್‌ ಅಂಡ್‌ ಪೀಸ್ ಪುಸ್ತಕ ಇದ್ದುದನ್ನು ಗಮನಿಸಿದ ನ್ಯಾಯಾಧೀಶರು "ಇನ್ಯಾವುದೋ ದೇಶದ ಗಡಿಯಲ್ಲಿ ನಡೆದ ಯುದ್ದದ ಬಗೆಗಿನ ಪುಸ್ತಕವನ್ನು ನೀವು ಏಕೆ ಇಟ್ಟುಕೊಂಡಿದ್ದೀರಿ" ಎಂದು ಪ್ರಶ್ನಿಸಿದ್ದರು.

- Advertisement -
- Advertisement -

‘ಲಾಲ್ ಸಲಾಂ’, ‘ಕಾಮ್ರೇಡ್’ ಎಂಬ ಪದಗಳನ್ನು ಬಳಸುವುದು ಅಥವಾ ಲೆನಿನ್ ಅವರ ಫೋಟೋವನ್ನು ಸಾಮಾಜಿಕ ಮಾಧ್ಯಮದಲ್ಲಿ ಅಪ್‌ಲೋಡ್ ಮಾಡಿದರೆ ನಿಮ್ಮನ್ನು ಅಸ್ಸಾಂನಲ್ಲಿ ಕಾನೂನುಬಾಹಿರ ಚಟುವಟಿಕೆಗಳ ತಡೆಗಟ್ಟುವಿಕೆ ಕಾಯ್ದೆ (ಯುಎಪಿಎ) ಅಡಿಯಲ್ಲಿ ಬಂಧಿಸಬಹುದಾಗಿದೆ.

ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ)ಯು ರೈತ ಮುಖಂಡ ಅಖಿಲ್ ಗೊಗೊಯ್ ಅವರ ಆಪ್ತ ಸಹಾಯಕ ಬಿಟ್ಟು ಸೋನೊವಾಲ್ ವಿರುದ್ಧದ ಚಾರ್ಜ್‌ಶೀಟ್‌ನಲ್ಲಿ, ಅವರು ತಮ್ಮ ಕೆಲವು ಸ್ನೇಹಿತರನ್ನು ‘ಕಾಮ್ರೇಡ್’ ಎಂದು ಉಲ್ಲೇಖಿಸಿದ್ದಾರೆ ಮತ್ತು ಇತರೆಡೆಗಳಲ್ಲಿ ‘ಲಾಲ್ ಸಲಾಮ್’ ನಂತಹ ಪದಗಳನ್ನು ಬಳಸಿದ್ದಾರೆ ಎಂದು ಆರೋಪಿಸಿದ್ದಾರೆ ಎಂದು ಔಟ್‌ಲುಕ್‌ ವರದಿ ಮಾಡಿದೆ.

ಕಾಮ್ರೇಡ್ ಎಂದರೆ ಸಂಗಾತಿ, ಒಡನಾಡಿ ಎಂಬರ್ಥ ಬರುತ್ತದೆ. ಹಾಗೆಯೇ ಲಾಲ್‌ ಸಲಾಂ ಎಂದರೆ ಕೆಂಪುವಂದನೆ ಎಂಬುದಾಗಿದೆ. (ಕಮ್ಯುನಿಸ್ಟ್‌ ಚಳವಳಿಯು ಕೆಂಪು ಬಣ್ಣವನ್ನು ತನ್ನ ಸಂಘಟನೆಯ ಬಣ್ಣವನ್ನಾಗಿಸಿಕೊಂಡಿದೆ.) ಈ ಪದಗಳನ್ನ ನೂರಾರು ವರ್ಷಗಳಿಂದ ಹಲವು ಚಳವಳಿಗಳಲ್ಲಿ ಬಳಕೆಯಲ್ಲಿವೆ. ಹಾಗಾಗಿ ಕೇವಲ ಈ ಪದಗಳನ್ನು ಬಳಸಿದ ಮಾತ್ರವೇ ಅವರ ಮೇಲೆ ಆರೋಪ ಹೊರಿಸುತ್ತಿರುವುದು ಪೊಲೀಸರಿಗೆ ಮತ್ತೇನು ಸಾಕ್ಷ್ಯ ಸಿಗದಿದ್ದುಕ್ಕೆ ತೇಪೆ ಸಾರಿಸುವ ಪ್ರಯತ್ನವಷ್ಟೇ ಎಂದು ಹಲವು ಹೋರಾಟಗಾರರು ಅಭಿಪ್ರಾಯಪಟ್ಟಿದ್ದಾರೆ.

 ಸೋನೊವಾಲ್ ಮತ್ತು ಗೊಗೊಯ್‌ನ ಇತರ ಇಬ್ಬರು ಸಹಾಯಕರನ್ನು ಈ ವರ್ಷದ ಆರಂಭದಲ್ಲಿ ಯುಎಪಿಎಯ ವಿವಿಧ ಆರೋಪದಡಿ ಎನ್‌ಐಎ ಬಂಧಿಸಿತ್ತು. ಕಳೆದ ವರ್ಷ ಡಿಸೆಂಬರ್‌ನಲ್ಲಿ ಅಸ್ಸಾಂ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರುದ್ಧ ಭಾರಿ ಪ್ರತಿಭಟನೆ ನಡೆಸಿದಾಗ ಗೊಗೊಯ್ ಅವರನ್ನು ಬಂಧಿಸಲಾಗಿತ್ತು.

ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 120 ಬಿ, 253 ಎ, 153 ಬಿ ಮತ್ತು ಯುಎಪಿಎ ಸೆಕ್ಷನ್ 18 ಮತ್ತು 39 ರ ಅಡಿಯಲ್ಲಿ ಎನ್ಐಎ ಪ್ರಕರಣಕ್ಕೆ (13/2019) ಸಂಬಂಧಿಸಿದಂತೆ ಗೊಗೊಯ್ ಅವರು ಡಿಸೆಂಬರ್ 16, 2019 ರಿಂದ ಬಂಧನದಲ್ಲಿದ್ದಾರೆ.

ಮೇ 29 ರಂದು ಸಲ್ಲಿಸಲಾದ ಚಾರ್ಜ್‌ಶೀಟ್‌ನಲ್ಲಿ, “ಬಂಡವಾಳಶಾಹಿಗಳು ನಮಗೆ ಹಗ್ಗವನ್ನು ಮಾರಾಟ ಮಾಡುತ್ತಾರೆ ಮತ್ತು ನಾವು ಅದರಲ್ಲಿ ಅವರನ್ನೆ ನೇತು ಹಾಕುತ್ತೇವೆ” ಎಂಬ ವಾಕ್ಯದೊಂದಿಗೆ ಸೋನೊವಾಲ್ ಲೆನಿನ್‌ರ ಒಂದು ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್‌ಲೋಡ್ ಮಾಡಿದ್ದಾರೆ ಎಂದು ಉಲ್ಲೇಖಿಸಲಾಗಿದೆ.

ಎನ್‌ಐಎ ಸಲ್ಲಿಸಿದ 40 ಪುಟಗಳ ಚಾರ್ಜ್‌ಶೀಟ್‌ನಲ್ಲಿ ತಮ್ಮ ನಾಯಕರ ವಿರುದ್ಧದ ಯಾವುದೇ ಆರೋಪಗಳನ್ನು ಸಾಬೀತುಪಡಿಸಲು ಯಾವುದೇ ದೃಢವಾದ ಪುರಾವೆಗಳಿಲ್ಲ ಎಂದು ಗೊಗೊಯ್ ಸಲಹೆಗಾರರಾಗಿರುವ ರೈತರ ಸಂಘಟನೆಯಾದ ಕೃಷಿಕ್‌ ಮುಕ್ತಿ ಸಂಗ್ರಾಮ್ ಸಮಿತಿ (ಕೆಎಂಎಸ್ಎಸ್) ಆರೋಪಿಸಿದೆ.

ಚಾರ್ಜ್‌ಶೀಟ್ ಅನ್ನು ಉಲ್ಲೇಖಿಸಿದ ಕೆಎಂಎಸ್ಎಸ್ ಅಧ್ಯಕ್ಷ ಭಾಸ್ಕೊ ಸೈಕಿಯಾ, ತನಿಖಾ ಸಂಸ್ಥೆ ಕೆಎಂಎಸ್ಎಸ್ ನಾಯಕರನ್ನು ಮಾವೋವಾದಿಗಳೆಂದು ಬ್ರಾಂಡ್ ಮಾಡಲು ಪ್ರಯತ್ನಿಸುತ್ತಿದೆ. ಮಾರುಕಟ್ಟೆಯಲ್ಲಿ ಮುಕ್ತವಾಗಿ ಲಭ್ಯವಿರುವ ಪುಸ್ತಕಗಳನ್ನು ಓದುವುದು ಮಾವೋವಾದಿ ಎಂಬುದಕ್ಕೆ ಸಾಕ್ಷಿಯಾಗಲು ಸಾಧ್ಯವಿಲ್ಲ ಎಂದು ಅವರು ಹೇಳಿದ್ದಾರೆ.

“ಅಖಿಲ್ ಗೊಗೊಯ್ ಮಾವೋವಾದಿ ಎಂದು ನಂಬಿಸಲು ಎನ್ಐಎ ಬಯಸಿದೆ. ಆದರೆ ಅವರು ಯಾವುದೇ ದೃಢವಾದ ಸಾಕ್ಷ್ಯವನ್ನು ನೀಡಲು ಸಾಧ್ಯವಾಗಲಿಲ್ಲ. ಅವರು ಮಾವೋವಾದದ ಕುರಿತ ಪುಸ್ತಕಗಳ ಬಗ್ಗೆಯೂ ಪ್ರಸ್ತಾಪಿಸಿದ್ದಾರೆ. ಎನ್ಐಎ ‘ಸಮಾಜವಾದಕ್ಕೆ ಒಂದು ಪರಿಚಯ’ ಮತ್ತು ‘ಕಮ್ಯುನಿಸ್ಟ್ ಪ್ರಣಾಳಿಕೆ’ ಮುಂತಾದ ಪುಸ್ತಕಗಳನ್ನು ವಶಪಡಿಸಿಕೊಂಡಿದೆ. ಈ ಪುಸ್ತಕಗಳನ್ನು ಮುಕ್ತ ಮಾರುಕಟ್ಟೆಯಿಂದ ಖರೀದಿಸಲಾಗಿದೆ. ಇದು ಹಾಸ್ಯಾಸ್ಪದವಾಗಿದೆ” ಸೈಕಿಯಾ ಹೇಳಿದರು.

ಸಿಎಎ ವಿರೋಧಿ ಆಂದೋಲನದಲ್ಲಿ, ಸೈಕಿಯಾ ಈ ಚಳುವಳಿ ಜನರ ಚಳುವಳಿ ಎಂದು ಹೇಳಿದರು. “ಜನರು ತಮ್ಮ ಗುರುತು ಮತ್ತು ಸಂಸ್ಕೃತಿಯ ಬಗ್ಗೆ ಭಯಪಡುತ್ತಿರುವುದರಿಂದ ಪ್ರತಿಭಟಿಸುತ್ತಿದ್ದಾರೆ. ಸಿಎಎ ವಿರೋಧಿ ಪ್ರತಿಭಟನೆಯ ಸಮಯದಲ್ಲಿ ಹಿಂಸಾಚಾರದಲ್ಲಿ ಕೆಎಂಎಸ್ಎಸ್ ನಾಯಕರ ಪಾತ್ರವಿದೆ ಮತ್ತು ಅದು ಮಾವೋವಾದಿ ದಾಳಿಯನ್ನು ಹೋಲುತ್ತದೆ ಎಂದು ಎನ್ಐಎ ಹೇಳುತ್ತಿದೆ. ಆದರೆ ನಾವು ಹಿಂಸಾಚಾರವನ್ನು ನಂಬುವುದಿಲ್ಲ” ಎಂದು ಸೈಕಿಯಾ ಹೇಳಿದ್ದಾರೆ.

ಅಖಿಲ್ ಗೊಗೊಯ್

ಸಿಎಎ ವಿರೋಧಿ ಪ್ರತಿಭಟನೆಗಳು ಗುವಾಹಟಿಯಲ್ಲಿ ಹಿಂಸಾತ್ಮಕವಾಗಿತ್ತು. ಇದು ಸಾರ್ವಜನಿಕ ಆಸ್ತಿಗಳಿಗೆ ವ್ಯಾಪಕ ಹಾನಿಯನ್ನುಂಟುಮಾಡಿತು. ಡಿಸೆಂಬರ್ 12 ರಂದು ಪೊಲೀಸರು ಜೋರ್ಹಾಟ್‌ನಿಂದ ಗೊಗೊಯ್ ಅವರನ್ನು ಬಂಧಿಸಿದರು. ಅಂದಿನಿಂದ, ನ್ಯಾಯಾಲಯದಿಂದ ಜಾಮೀನು ಪಡೆದಿದ್ದರೂ ಸಹ ಆತನನ್ನು ಬಿಡುಗಡೆ ಮಾಡಲಾಗಿಲ್ಲ, ಏಕೆಂದರೆ ಆತನ ವಿರುದ್ಧ ಹೊಸ ಪ್ರಕರಣಗಳನ್ನು ಪೊಲೀಸರು ದಾಖಲಿಸುತ್ತಿದ್ದಾರೆ ಎಂದು ಅವರು ದೂರಿದ್ದಾರೆ.

ಈ ಹಿಂದೆ ಭೀಮಾ ಕೊರೇಂಗಾವ್‌ ಪ್ರಕರಣದಲ್ಲಿ ಬಂಧಿಸಲ್ಪಟ್ಟ ವ್ಯಕ್ತಿಯ ಮನೆಯಲ್ಲಿ ವಾರ್‌ ಅಂಡ್‌ ಪೀಸ್ ಪುಸ್ತಕ ಇದ್ದುದನ್ನು ಗಮನಿಸಿದ ನ್ಯಾಯಾಧೀಶರು “ಇನ್ಯಾವುದೋ ದೇಶದ ಗಡಿಯಲ್ಲಿ ನಡೆದ ಯುದ್ದದ ಬಗೆಗಿನ ಪುಸ್ತಕವನ್ನು ನೀವು ಏಕೆ ಇಟ್ಟುಕೊಂಡಿದ್ದೀರಿ” ಎಂದು ಪ್ರಶ್ನಿಸಿದ್ದರು. ಈಗ ಕೇವಲ ಕಾಮ್ರೇಡ್ ಮತ್ತು ಲಾಲ್ ಸಲಾಂ ಪದ ಬಳಸಿದ್ದಕ್ಕೆ ಯುಎಪಿಎ ಕಾಯ್ದೆ ಬಳಸಿದ್ದಾರೆ. ಇದು ಎಲ್ಲಿಗೆ ಹೋಗಿ ಮುಟ್ಟುವುದೋ ಗೊತ್ತಿಲ್ಲ…


ಇದನ್ನೂ ಓದಿ: ವಾರ್ ಅಂಡ್ ಪೀಸ್ ಓದುವವರೆ ಗಮನಿಸಿ ಪ್ಲೀಸ್, ಗದಗಿಗೂ ಬಂತು ಎಚ್ಚರವಿರಲಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...

ಗಾಜಿಯಾಬಾದ್‌| ಗೋಮಾಂಸ ಸಾಗಾಣಿಕೆ ಆರೋಪ; ವ್ಯಕ್ತಿ ಮೇಲೆ ಗುಂಪಿನಿಂದ ಹಲ್ಲೆ

ಉತ್ತರ ಪ್ರದೇಶದ ಗಾಜಿಯಾಬಾದ್‌ ನಗರದ ಶಾಸ್ತ್ರಿ ನಗರದಲ್ಲಿ ಗೋಮಾಂಸ ಸಾಗಿಸುತ್ತಿದ್ದಾರೆ ಎಂಬ ಅನುಮಾನದ ಮೇಲೆ ಸಲೀಂ ಎಂದು ಗುರುತಿಸಲಾದ ವ್ಯಕ್ತಿಯ ಮೇಲೆ ನಕಲಿ ಗೋರಕ್ಷಕರ ಗುಂಪೊಂದು ಹಲ್ಲೆ ನಡೆಸಿದೆ. ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ...