Homeಕರ್ನಾಟಕಮೈಸೂರಿನ ‘ಹದಿನಾರು’ ಗ್ರಾಮದಲ್ಲಿ ವೈಷ್ಣವ ದೇವಾಲಯದ ಗೋಡೆ ಕೆಡವಿದಾಗ ಸಿಕ್ಕಿತ್ತು ಜೈನ ವಿಗ್ರಹ!

ಮೈಸೂರಿನ ‘ಹದಿನಾರು’ ಗ್ರಾಮದಲ್ಲಿ ವೈಷ್ಣವ ದೇವಾಲಯದ ಗೋಡೆ ಕೆಡವಿದಾಗ ಸಿಕ್ಕಿತ್ತು ಜೈನ ವಿಗ್ರಹ!

- Advertisement -
- Advertisement -

ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ಹದಿನಾರು ಗ್ರಾಮದಲ್ಲಿ ನಾಲ್ಕು ವರ್ಷಗಳ ಹಿಂದೆ ವೈಷ್ಣವ ದೇವಾಲಯ (ಚೆನ್ನಕೇಶವ ದೇವಾಲಯ) ಕೆಡವಿದಾಗ ಜೈನ ವಿಗ್ರಹ ಪತ್ತೆಯಾಗಿತ್ತು ಎಂಬುದು ಚರ್ಚೆಯ ಮುನ್ನೆಲೆಗೆ ಬಂದಿದೆ.

ಟಿಪ್ಪು ಸುಲ್ತಾನ್‌ ಆಳ್ವಿಕೆಯ ಅವಧಿಯಲ್ಲಿ ದೇವಾಲಯವನ್ನು ಕೆಡವಿ ಶ್ರೀರಂಗಪಟ್ಟಣದ ಜಾಮಿಯಾ ಮಸೀದಿ ಕಟ್ಟಲಾಗಿದೆ ಎಂಬ ಚರ್ಚೆ ನಡೆಯುತ್ತಿದ್ದು, ಜೈನ ಹಾಗೂ ಬೌದ್ಧ ಧಾರ್ಮಿಕ ಕೇಂದ್ರಗಳ ಮೇಲೆ ವೈಷ್ಣವ ಹಾಗೂ ಶೈವ ದೇವಾಲಯಗಳನ್ನು ನಿರ್ಮಿಸಿರುವ ವಿಷಯಗಳೂ ಚರ್ಚೆಯಾಗುತ್ತಿವೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

‘ಟಿಪ್ಪು ಸುಲ್ತಾನ್’ ಹಾಗೂ ‘ಮೈಸೂರು ಇತಿಹಾಸ’ದ ಕುರಿತು ಆಳವಾಗಿ ಅಧ್ಯಯನ ಮಾಡಿದವರಾದ ಪ್ರೊ.ಪಿ.ವಿ.ನಂಜರಾಜ ಅರಸು ರವರು, ‘ನಾನುಗೌರಿ.ಕಾಂ’ ಜೊತೆ ಮಾತನಾಡಿ, ಜಾಮೀಯ ಮಸೀದಿ ಇತಿಹಾಸದ ಜೊತೆಗೆ ಹದಿನಾರು ಗ್ರಾಮದ ಚೆನ್ನಕೇಶವ ದೇವಾಲಯದ ಕುತಿತೂ ವಿವರಿಸಿದ್ದಾರೆ.

“ಶ್ರೀರಂಗಪಟ್ಟಣದಲ್ಲಿ ದೇವಸ್ಥಾನ ಇದ್ದದ್ದು ನಿಜ. ಒಂದು ರಾಜ್ಯದ ರಾಜಧಾನಿ ಅಂದಾಗ ಶತ್ರುಗಳ ದಾಳಿಯನ್ನು ಗಮನಿಸುತ್ತಿರಬೇಕಾಗುತ್ತದೆ. ಅದಕ್ಕಾಗಿ ಕಾವಲು ಗೋಪುರಗಳು ಬೇಕಾಗಿರುತ್ತವೆ. ಬ್ರಿಟಿಷರ ನಡುವೆ ಟಿಪ್ಪು ನಡೆಸಿದ ನಾಲ್ಕು ಆಂಗ್ಲೋ ಮೈಸೂರು ಯುದ್ಧದಲ್ಲೂ ಬ್ರಿಟಿಷರು ದಾಳಿ ಮಾಡಿದ್ದು ಮಳವಳ್ಳಿ ಕಡೆಯಿಂದ. ಮದ್ದೂರು, ಮಂಡ್ಯ ಕಡೆಯಿಂದ ಬರಲು ಸಾಧ್ಯವಾಗುತ್ತಿರಲಿಲ್ಲ. ಯಾಕೆಂದರೆ ನದಿ ದಾಟುವುದು ಕಷ್ಟವಿತ್ತು. ಹೀಗಾಗಿ ಮಳವಳ್ಳಿ ಮಾರ್ಗವನ್ನು ಬ್ರಿಟಿಷರು ಆಯ್ದುಕೊಂಡರು. ಹೀಗಾಗಿ ಕಾವಲು ಗೋಪುರಗಳನ್ನು ನಿರ್ಮಿಸಲಾಯಿತು. ಈ ಮಸೀದಿಯಲ್ಲಿನ ಕಾವಲು ಗೋಪುರದ ಒಳಗೆ 200 ಮೆಟ್ಟಿಲುಗಳಿವೆ. ಈಗ ಬೀಗ ಹಾಕಿದ್ದಾರೆ. ನೀವು ಬೀಗ ತೆಗೆಸಿ ಹೋಗಿ ನೋಡಿ. ಸುಮಾರು ನಲವತ್ತು ಮೈಲಿ ದೂರದ ಮಳವಳ್ಳಿವರೆಗೂ ನೋಡಬಹುದು. ಮತ್ತೆ ಈ ಕಡೆ ತಿರುಗಿ ನೋಡಿದರೆ ಮದ್ದೂರುವರೆಗೂ ನೋಡಬಹುದು. ಇದಕ್ಕಾಗಿ ದೇವಾಲಯವನ್ನು ಮಸೀದಿಯಾಗಿ ರೂಪಾಂತರಿಸುತ್ತಾನೆ. ಅಲ್ಲಿನ ಆಂಜನೇಯ ದೇವರನ್ನು ಕೋಟೆಗೆ ಸ್ಥಳಾಂತರಿಸುತ್ತಾನೆ” ಎಂದು ವಿವರಿಸಿದ ಅವರು, “ಹದಿನಾರು ಗ್ರಾಮದಲ್ಲಿ ವೈಷ್ಣವ ದೇವಾಲಯದ ಗೋಡೆಯನ್ನು ಒಡೆದಾಗ ಜೈನ ತೀರ್ಥಂಕರರ ವಿಗ್ರಹ ಪತ್ತೆಯಾಗಿದೆ. ಇಲ್ಲಿನ ಚೆನ್ನಕೇಶವ ದೇವಾಲಯ ಕೆಡವಿ ಬಸದಿಯನ್ನು ಮುತಾಲಿಕ್‌ ನಿರ್ಮಿಸುತ್ತಾರೆಯೇ?” ಎಂದು ಪ್ರಶ್ನಿಸಿದರು.

ಇದನ್ನೂ ಓದಿರಿ: ಟಿಪ್ಪು ಮತ್ತು ಮೈಸೂರು ಚರಿತ್ರೆ ಕುರಿತ ಎರಡು ಅಮೂಲ್ಯ ಬರಹಗಳು

ಇತಿಹಾಸವನ್ನು ಕೆದಕುತ್ತಾ ಹೋದರೆ ದೇವಾಲಯಗಳ ಅಡಿಯಲ್ಲಿ ಜೈನ ಹಾಗೂ ಬೌದ್ಧ ಧರ್ಮದ ಕುರುಹುಗಳು ಸಿಗುತ್ತವೆ ಎಂಬುದಕ್ಕೆ ಸಾಕಷ್ಟು ಉದಾಹರಣೆಗಳಿವೆ. ಇದಕ್ಕೆ ಪೂರಕವಾಗಿ ಹದಿನಾರು ಗ್ರಾಮದ ಇತಿಹಾಸವನ್ನು ಪ್ರೊ.ನಂಜರಾಜ ಅರಸು ಉಲ್ಲೇಖಿಸುತ್ತಾರೆ.

ಇದನ್ನೂ ಓದಿರಿ: ಫ್ಯಾಕ್ಟ್‌ಚೆಕ್: ಕರ್ನಾಟಕ ಹೈಕೋರ್ಟ್ ಟಿಪ್ಪು ಸುಲ್ತಾನ್‌ರನ್ನು ಜಿಹಾದಿ, ಅತ್ಯಾಚಾರಿ ಎಂದು ಕರೆದಿಲ್ಲ

“ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಹದಿನಾರು ಗ್ರಾಮದ ಇತಿಹಾಸವನ್ನು ಬರೆಯಲು ಹೊರಟಾಗ ಹಲವಾರು ಸಂಗತಿಗಳು ತೆರೆದುಕೊಂಡವು. ಯದುವಂಶರು ಹುಟ್ಟಿದ್ದು ಇದೇ ಗ್ರಾಮದಲ್ಲಿ ಎನ್ನುತ್ತಾರೆ. ಈ ಹಿಂದೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ, ಹದಿನಾರು ಗ್ರಾಮದ ನಿವಾಸಿ ಡಾ.ಎಚ್.ಸಿ.ಮಹದೇವಪ್ಪ ಅವರು ತಮ್ಮ ಅಧಿಕಾರವಧಿಯಲ್ಲಿ ಹದಿನಾರು ಗ್ರಾಮದ ಅಭಿವೃದ್ಧಿಗೆ, ದೇವಾಲಯಗಳ ಜೀರ್ಣೋದ್ಧಾರಕ್ಕೆ ಕ್ರಮ ವಹಿಸಿದರು. ಆಗ ಜೈನ ತೀರ್ಥಂಕರರ ವಿಗ್ರಹ ಪತ್ತೆಯಾಗಿತ್ತು” ಎಂದು ಹೇಳುತ್ತಾರೆ ನಂಜರಾಜ ಅರಸು.

“ಹದಿನಾರು ಗ್ರಾಮದಲ್ಲಿ ಚೆನ್ನಕೇಶವ ದೇವಾಲಯವಿದೆ. ಅದು ವೈಷ್ಣವ ದೇವರು. ವಿಜಯನಗರ ಕಾಲದ ವಾಸ್ತುಶಿಲ್ಪ ಶೈಲಿಯಲ್ಲಿ ದೇವಾಲಯವನ್ನು ಕಾಣಬಹುದು. ದೇವಾಲಯದ ಗೋಡೆಗಳು ಶಿಥಿಲವಾಗಿದ್ದರಿಂದ ಹೊಸದಾಗಿಯೇ ಕಟ್ಟಲು ಅಂದಿನ ಸಚಿವ ಮಹದೇವಪ್ಪ ಸೂಚಿಸಿದರು. ಗರ್ಭಗುಡಿಯಲ್ಲಿನ ದೇವರನ್ನು ಗೋಣಿಚೀಲ, ಟಾರ್ಪಲ್‌ ಇತ್ಯಾದಿಗಳಿಂದ ಮುಚ್ಚಿ ಸುರಕ್ಷಿತವಾಗಿಟ್ಟು ಗೋಡೆಗಳನ್ನು ಒಡೆಯಲಾಯಿತು. ಹೊಸದಾಗಿ ಗೋಡೆ ನಿರ್ಮಿಸಲು ಒಂದು ಬದಿಯ ಗೋಡೆಯ ಬಳಿ ಆರು ಅಡಿ ಅಗೆದಾಗ ತೀರ್ಥಂಕರರ ಅರ್ಧಭಾಗ (ಸೊಂಟದ ಮೇಲಿನ ಭಾಗ) ಸಿಕ್ಕಿತು. ಇನ್ನೊಂದು ಗೋಡೆ ಒಡೆದಾಗ ಸೊಂಟದಿಂದ ಕೆಳಭಾಗ ಸಿಕ್ಕಿತು. ಅಂದರೆ ಇಲ್ಲಿ ಮೊದಲು ಜೈನರ ಬಸದಿ ಇತ್ತು. ಅದನ್ನು ವೈಷ್ಣವರು ಒಡೆದುಹಾಕಿದ್ದಾರೆ. ತೀರ್ಥಂಕರರ ವಿಗ್ರಹವನ್ನು ಅಲ್ಲಿಯೇ ಮುಚ್ಚಿಹಾಕಿ ವಿಷ್ಣು ದೇವಾಲಯ ಕಟ್ಟಿದ್ದಾರೆ ಎಂದಾಯಿತಲ್ಲ. ಮುತಾಲಿಕ್ ಹಾಗೂ ಕೆಲವು ಸ್ವಾಮೀಜಿಗಳು ಚೆನ್ನಕೇಶವನ ವಿಗ್ರಹ ತೆರವು ಮಾಡಿ, ಪಾರ್ಶ್ವನಾಥರ ವಿಗ್ರಹವನ್ನು ಪ್ರತಿಷ್ಠಾಪಿಸಬೇಕಲ್ಲವೇ?” ಎಂದು ಪ್ರಶ್ನಿಸಿದರು.

“ನನಗೆ ಯಾವ ದೇವರ ಬಗ್ಗೆಯೂ ಆಸಕ್ತಿ ಇಲ್ಲ. ಆದರೆ ಮಸೀದಿ ಒಡೆದು ದೇವಸ್ಥಾನ ಮಾಡುತ್ತೇವೆ ಎನ್ನುತ್ತಾರಲ್ಲ. ಹದಿನಾರು ಗ್ರಾಮದಲ್ಲಿ ಯಾವುದನ್ನು ಒಡೆಯುತ್ತಾರೆ? ಮೈಸೂರಿನಿಂದ ಪಶ್ಚಿಮವಾಹಿನಿಗೆ ಹೊರಟರೆ ದಾರಿಯಲ್ಲಿ ಕಳಸ್ತವಾಡಿ ಎಂಬ ಗ್ರಾಮ ಸಿಗುತ್ತದೆ. ಮುತಾಲಿಕ್‌ ಉಲ್ಲೇಖಿಸುವ ಬ್ರಿಟಿಷರೇ ಬರೆದ ಪ್ರಕಾರ, 1484ರ ಅವಧಿಯಲ್ಲಿ ತಿಮ್ಮಣ್ಣನಾಯಕನಿಗೆ ವಿಜಯನಗರದ ಅರಸರು ಅನುಮತಿ ನೀಡಿ ಕಳಸ್ತವಾಡಿಯಲ್ಲಿದ್ದ 100 ಜೈನಬಸದಿಗಳನ್ನು ಒಡೆದುಹಾಕುತ್ತಾರೆ. ನಂತರ ಇಲ್ಲಿನ ಜೈನ ಬಸದಿಗಳಿಂದ ಕಲ್ಲು, ಮರದ ವಸ್ತುಗಳನ್ನು ತೆಗೆದುಕೊಂಡು ಹೋಗಿ ಶ್ರೀರಂಗಪಟ್ಟಣದಲ್ಲಿರುವ ರಂಗನಾಥಸ್ವಾಮಿ ದೇವಸ್ಥಾನವನ್ನು ವಿಸ್ತಾರಗೊಳಿಸಲಾಗುತ್ತದೆ. ಮುತಾಲಿಕ್‌ ಅವರೇ ಇದನ್ನು ನಿಮ್ಮ ಬ್ರಿಟಿಷರೇ ಬರೆದಿದ್ದಾರೆ. ನೂರೊಂದು ಜೈನ ಬಸದಿ ಇತ್ತೆಂದು ಇಲ್ಲಿನ ಜನರಿಗೇ ಗೊತ್ತೇ ಇಲ್ಲ. ಹೊಸದಾಗಿ ಪ್ರತಿಷ್ಠಾಪನೆ ಮಾಡುತ್ತೀರಾ?” ಎಂದು ಕೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಭಶೀರರ ಯೋಗ್ಯತೆಗಳ ಅನಾವರಣ ತಿಳಿತಿದೆ ,ಶಾಂತಿದೂತರ ಬಣ್ಣ ಬಯಲು ಆಗಲೇ ಬೇಕಿದೆ.

LEAVE A REPLY

Please enter your comment!
Please enter your name here

- Advertisment -

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...