Homeಕರ್ನಾಟಕಮೈಸೂರಿನ ‘ಹದಿನಾರು’ ಗ್ರಾಮದಲ್ಲಿ ವೈಷ್ಣವ ದೇವಾಲಯದ ಗೋಡೆ ಕೆಡವಿದಾಗ ಸಿಕ್ಕಿತ್ತು ಜೈನ ವಿಗ್ರಹ!

ಮೈಸೂರಿನ ‘ಹದಿನಾರು’ ಗ್ರಾಮದಲ್ಲಿ ವೈಷ್ಣವ ದೇವಾಲಯದ ಗೋಡೆ ಕೆಡವಿದಾಗ ಸಿಕ್ಕಿತ್ತು ಜೈನ ವಿಗ್ರಹ!

- Advertisement -
- Advertisement -

ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ಹದಿನಾರು ಗ್ರಾಮದಲ್ಲಿ ನಾಲ್ಕು ವರ್ಷಗಳ ಹಿಂದೆ ವೈಷ್ಣವ ದೇವಾಲಯ (ಚೆನ್ನಕೇಶವ ದೇವಾಲಯ) ಕೆಡವಿದಾಗ ಜೈನ ವಿಗ್ರಹ ಪತ್ತೆಯಾಗಿತ್ತು ಎಂಬುದು ಚರ್ಚೆಯ ಮುನ್ನೆಲೆಗೆ ಬಂದಿದೆ.

ಟಿಪ್ಪು ಸುಲ್ತಾನ್‌ ಆಳ್ವಿಕೆಯ ಅವಧಿಯಲ್ಲಿ ದೇವಾಲಯವನ್ನು ಕೆಡವಿ ಶ್ರೀರಂಗಪಟ್ಟಣದ ಜಾಮಿಯಾ ಮಸೀದಿ ಕಟ್ಟಲಾಗಿದೆ ಎಂಬ ಚರ್ಚೆ ನಡೆಯುತ್ತಿದ್ದು, ಜೈನ ಹಾಗೂ ಬೌದ್ಧ ಧಾರ್ಮಿಕ ಕೇಂದ್ರಗಳ ಮೇಲೆ ವೈಷ್ಣವ ಹಾಗೂ ಶೈವ ದೇವಾಲಯಗಳನ್ನು ನಿರ್ಮಿಸಿರುವ ವಿಷಯಗಳೂ ಚರ್ಚೆಯಾಗುತ್ತಿವೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

‘ಟಿಪ್ಪು ಸುಲ್ತಾನ್’ ಹಾಗೂ ‘ಮೈಸೂರು ಇತಿಹಾಸ’ದ ಕುರಿತು ಆಳವಾಗಿ ಅಧ್ಯಯನ ಮಾಡಿದವರಾದ ಪ್ರೊ.ಪಿ.ವಿ.ನಂಜರಾಜ ಅರಸು ರವರು, ‘ನಾನುಗೌರಿ.ಕಾಂ’ ಜೊತೆ ಮಾತನಾಡಿ, ಜಾಮೀಯ ಮಸೀದಿ ಇತಿಹಾಸದ ಜೊತೆಗೆ ಹದಿನಾರು ಗ್ರಾಮದ ಚೆನ್ನಕೇಶವ ದೇವಾಲಯದ ಕುತಿತೂ ವಿವರಿಸಿದ್ದಾರೆ.

“ಶ್ರೀರಂಗಪಟ್ಟಣದಲ್ಲಿ ದೇವಸ್ಥಾನ ಇದ್ದದ್ದು ನಿಜ. ಒಂದು ರಾಜ್ಯದ ರಾಜಧಾನಿ ಅಂದಾಗ ಶತ್ರುಗಳ ದಾಳಿಯನ್ನು ಗಮನಿಸುತ್ತಿರಬೇಕಾಗುತ್ತದೆ. ಅದಕ್ಕಾಗಿ ಕಾವಲು ಗೋಪುರಗಳು ಬೇಕಾಗಿರುತ್ತವೆ. ಬ್ರಿಟಿಷರ ನಡುವೆ ಟಿಪ್ಪು ನಡೆಸಿದ ನಾಲ್ಕು ಆಂಗ್ಲೋ ಮೈಸೂರು ಯುದ್ಧದಲ್ಲೂ ಬ್ರಿಟಿಷರು ದಾಳಿ ಮಾಡಿದ್ದು ಮಳವಳ್ಳಿ ಕಡೆಯಿಂದ. ಮದ್ದೂರು, ಮಂಡ್ಯ ಕಡೆಯಿಂದ ಬರಲು ಸಾಧ್ಯವಾಗುತ್ತಿರಲಿಲ್ಲ. ಯಾಕೆಂದರೆ ನದಿ ದಾಟುವುದು ಕಷ್ಟವಿತ್ತು. ಹೀಗಾಗಿ ಮಳವಳ್ಳಿ ಮಾರ್ಗವನ್ನು ಬ್ರಿಟಿಷರು ಆಯ್ದುಕೊಂಡರು. ಹೀಗಾಗಿ ಕಾವಲು ಗೋಪುರಗಳನ್ನು ನಿರ್ಮಿಸಲಾಯಿತು. ಈ ಮಸೀದಿಯಲ್ಲಿನ ಕಾವಲು ಗೋಪುರದ ಒಳಗೆ 200 ಮೆಟ್ಟಿಲುಗಳಿವೆ. ಈಗ ಬೀಗ ಹಾಕಿದ್ದಾರೆ. ನೀವು ಬೀಗ ತೆಗೆಸಿ ಹೋಗಿ ನೋಡಿ. ಸುಮಾರು ನಲವತ್ತು ಮೈಲಿ ದೂರದ ಮಳವಳ್ಳಿವರೆಗೂ ನೋಡಬಹುದು. ಮತ್ತೆ ಈ ಕಡೆ ತಿರುಗಿ ನೋಡಿದರೆ ಮದ್ದೂರುವರೆಗೂ ನೋಡಬಹುದು. ಇದಕ್ಕಾಗಿ ದೇವಾಲಯವನ್ನು ಮಸೀದಿಯಾಗಿ ರೂಪಾಂತರಿಸುತ್ತಾನೆ. ಅಲ್ಲಿನ ಆಂಜನೇಯ ದೇವರನ್ನು ಕೋಟೆಗೆ ಸ್ಥಳಾಂತರಿಸುತ್ತಾನೆ” ಎಂದು ವಿವರಿಸಿದ ಅವರು, “ಹದಿನಾರು ಗ್ರಾಮದಲ್ಲಿ ವೈಷ್ಣವ ದೇವಾಲಯದ ಗೋಡೆಯನ್ನು ಒಡೆದಾಗ ಜೈನ ತೀರ್ಥಂಕರರ ವಿಗ್ರಹ ಪತ್ತೆಯಾಗಿದೆ. ಇಲ್ಲಿನ ಚೆನ್ನಕೇಶವ ದೇವಾಲಯ ಕೆಡವಿ ಬಸದಿಯನ್ನು ಮುತಾಲಿಕ್‌ ನಿರ್ಮಿಸುತ್ತಾರೆಯೇ?” ಎಂದು ಪ್ರಶ್ನಿಸಿದರು.

ಇದನ್ನೂ ಓದಿರಿ: ಟಿಪ್ಪು ಮತ್ತು ಮೈಸೂರು ಚರಿತ್ರೆ ಕುರಿತ ಎರಡು ಅಮೂಲ್ಯ ಬರಹಗಳು

ಇತಿಹಾಸವನ್ನು ಕೆದಕುತ್ತಾ ಹೋದರೆ ದೇವಾಲಯಗಳ ಅಡಿಯಲ್ಲಿ ಜೈನ ಹಾಗೂ ಬೌದ್ಧ ಧರ್ಮದ ಕುರುಹುಗಳು ಸಿಗುತ್ತವೆ ಎಂಬುದಕ್ಕೆ ಸಾಕಷ್ಟು ಉದಾಹರಣೆಗಳಿವೆ. ಇದಕ್ಕೆ ಪೂರಕವಾಗಿ ಹದಿನಾರು ಗ್ರಾಮದ ಇತಿಹಾಸವನ್ನು ಪ್ರೊ.ನಂಜರಾಜ ಅರಸು ಉಲ್ಲೇಖಿಸುತ್ತಾರೆ.

ಇದನ್ನೂ ಓದಿರಿ: ಫ್ಯಾಕ್ಟ್‌ಚೆಕ್: ಕರ್ನಾಟಕ ಹೈಕೋರ್ಟ್ ಟಿಪ್ಪು ಸುಲ್ತಾನ್‌ರನ್ನು ಜಿಹಾದಿ, ಅತ್ಯಾಚಾರಿ ಎಂದು ಕರೆದಿಲ್ಲ

“ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಹದಿನಾರು ಗ್ರಾಮದ ಇತಿಹಾಸವನ್ನು ಬರೆಯಲು ಹೊರಟಾಗ ಹಲವಾರು ಸಂಗತಿಗಳು ತೆರೆದುಕೊಂಡವು. ಯದುವಂಶರು ಹುಟ್ಟಿದ್ದು ಇದೇ ಗ್ರಾಮದಲ್ಲಿ ಎನ್ನುತ್ತಾರೆ. ಈ ಹಿಂದೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ, ಹದಿನಾರು ಗ್ರಾಮದ ನಿವಾಸಿ ಡಾ.ಎಚ್.ಸಿ.ಮಹದೇವಪ್ಪ ಅವರು ತಮ್ಮ ಅಧಿಕಾರವಧಿಯಲ್ಲಿ ಹದಿನಾರು ಗ್ರಾಮದ ಅಭಿವೃದ್ಧಿಗೆ, ದೇವಾಲಯಗಳ ಜೀರ್ಣೋದ್ಧಾರಕ್ಕೆ ಕ್ರಮ ವಹಿಸಿದರು. ಆಗ ಜೈನ ತೀರ್ಥಂಕರರ ವಿಗ್ರಹ ಪತ್ತೆಯಾಗಿತ್ತು” ಎಂದು ಹೇಳುತ್ತಾರೆ ನಂಜರಾಜ ಅರಸು.

“ಹದಿನಾರು ಗ್ರಾಮದಲ್ಲಿ ಚೆನ್ನಕೇಶವ ದೇವಾಲಯವಿದೆ. ಅದು ವೈಷ್ಣವ ದೇವರು. ವಿಜಯನಗರ ಕಾಲದ ವಾಸ್ತುಶಿಲ್ಪ ಶೈಲಿಯಲ್ಲಿ ದೇವಾಲಯವನ್ನು ಕಾಣಬಹುದು. ದೇವಾಲಯದ ಗೋಡೆಗಳು ಶಿಥಿಲವಾಗಿದ್ದರಿಂದ ಹೊಸದಾಗಿಯೇ ಕಟ್ಟಲು ಅಂದಿನ ಸಚಿವ ಮಹದೇವಪ್ಪ ಸೂಚಿಸಿದರು. ಗರ್ಭಗುಡಿಯಲ್ಲಿನ ದೇವರನ್ನು ಗೋಣಿಚೀಲ, ಟಾರ್ಪಲ್‌ ಇತ್ಯಾದಿಗಳಿಂದ ಮುಚ್ಚಿ ಸುರಕ್ಷಿತವಾಗಿಟ್ಟು ಗೋಡೆಗಳನ್ನು ಒಡೆಯಲಾಯಿತು. ಹೊಸದಾಗಿ ಗೋಡೆ ನಿರ್ಮಿಸಲು ಒಂದು ಬದಿಯ ಗೋಡೆಯ ಬಳಿ ಆರು ಅಡಿ ಅಗೆದಾಗ ತೀರ್ಥಂಕರರ ಅರ್ಧಭಾಗ (ಸೊಂಟದ ಮೇಲಿನ ಭಾಗ) ಸಿಕ್ಕಿತು. ಇನ್ನೊಂದು ಗೋಡೆ ಒಡೆದಾಗ ಸೊಂಟದಿಂದ ಕೆಳಭಾಗ ಸಿಕ್ಕಿತು. ಅಂದರೆ ಇಲ್ಲಿ ಮೊದಲು ಜೈನರ ಬಸದಿ ಇತ್ತು. ಅದನ್ನು ವೈಷ್ಣವರು ಒಡೆದುಹಾಕಿದ್ದಾರೆ. ತೀರ್ಥಂಕರರ ವಿಗ್ರಹವನ್ನು ಅಲ್ಲಿಯೇ ಮುಚ್ಚಿಹಾಕಿ ವಿಷ್ಣು ದೇವಾಲಯ ಕಟ್ಟಿದ್ದಾರೆ ಎಂದಾಯಿತಲ್ಲ. ಮುತಾಲಿಕ್ ಹಾಗೂ ಕೆಲವು ಸ್ವಾಮೀಜಿಗಳು ಚೆನ್ನಕೇಶವನ ವಿಗ್ರಹ ತೆರವು ಮಾಡಿ, ಪಾರ್ಶ್ವನಾಥರ ವಿಗ್ರಹವನ್ನು ಪ್ರತಿಷ್ಠಾಪಿಸಬೇಕಲ್ಲವೇ?” ಎಂದು ಪ್ರಶ್ನಿಸಿದರು.

“ನನಗೆ ಯಾವ ದೇವರ ಬಗ್ಗೆಯೂ ಆಸಕ್ತಿ ಇಲ್ಲ. ಆದರೆ ಮಸೀದಿ ಒಡೆದು ದೇವಸ್ಥಾನ ಮಾಡುತ್ತೇವೆ ಎನ್ನುತ್ತಾರಲ್ಲ. ಹದಿನಾರು ಗ್ರಾಮದಲ್ಲಿ ಯಾವುದನ್ನು ಒಡೆಯುತ್ತಾರೆ? ಮೈಸೂರಿನಿಂದ ಪಶ್ಚಿಮವಾಹಿನಿಗೆ ಹೊರಟರೆ ದಾರಿಯಲ್ಲಿ ಕಳಸ್ತವಾಡಿ ಎಂಬ ಗ್ರಾಮ ಸಿಗುತ್ತದೆ. ಮುತಾಲಿಕ್‌ ಉಲ್ಲೇಖಿಸುವ ಬ್ರಿಟಿಷರೇ ಬರೆದ ಪ್ರಕಾರ, 1484ರ ಅವಧಿಯಲ್ಲಿ ತಿಮ್ಮಣ್ಣನಾಯಕನಿಗೆ ವಿಜಯನಗರದ ಅರಸರು ಅನುಮತಿ ನೀಡಿ ಕಳಸ್ತವಾಡಿಯಲ್ಲಿದ್ದ 100 ಜೈನಬಸದಿಗಳನ್ನು ಒಡೆದುಹಾಕುತ್ತಾರೆ. ನಂತರ ಇಲ್ಲಿನ ಜೈನ ಬಸದಿಗಳಿಂದ ಕಲ್ಲು, ಮರದ ವಸ್ತುಗಳನ್ನು ತೆಗೆದುಕೊಂಡು ಹೋಗಿ ಶ್ರೀರಂಗಪಟ್ಟಣದಲ್ಲಿರುವ ರಂಗನಾಥಸ್ವಾಮಿ ದೇವಸ್ಥಾನವನ್ನು ವಿಸ್ತಾರಗೊಳಿಸಲಾಗುತ್ತದೆ. ಮುತಾಲಿಕ್‌ ಅವರೇ ಇದನ್ನು ನಿಮ್ಮ ಬ್ರಿಟಿಷರೇ ಬರೆದಿದ್ದಾರೆ. ನೂರೊಂದು ಜೈನ ಬಸದಿ ಇತ್ತೆಂದು ಇಲ್ಲಿನ ಜನರಿಗೇ ಗೊತ್ತೇ ಇಲ್ಲ. ಹೊಸದಾಗಿ ಪ್ರತಿಷ್ಠಾಪನೆ ಮಾಡುತ್ತೀರಾ?” ಎಂದು ಕೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಭಶೀರರ ಯೋಗ್ಯತೆಗಳ ಅನಾವರಣ ತಿಳಿತಿದೆ ,ಶಾಂತಿದೂತರ ಬಣ್ಣ ಬಯಲು ಆಗಲೇ ಬೇಕಿದೆ.

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...