Homeಕರ್ನಾಟಕಮೈಸೂರಿನ ‘ಹದಿನಾರು’ ಗ್ರಾಮದಲ್ಲಿ ವೈಷ್ಣವ ದೇವಾಲಯದ ಗೋಡೆ ಕೆಡವಿದಾಗ ಸಿಕ್ಕಿತ್ತು ಜೈನ ವಿಗ್ರಹ!

ಮೈಸೂರಿನ ‘ಹದಿನಾರು’ ಗ್ರಾಮದಲ್ಲಿ ವೈಷ್ಣವ ದೇವಾಲಯದ ಗೋಡೆ ಕೆಡವಿದಾಗ ಸಿಕ್ಕಿತ್ತು ಜೈನ ವಿಗ್ರಹ!

- Advertisement -
- Advertisement -

ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ಹದಿನಾರು ಗ್ರಾಮದಲ್ಲಿ ನಾಲ್ಕು ವರ್ಷಗಳ ಹಿಂದೆ ವೈಷ್ಣವ ದೇವಾಲಯ (ಚೆನ್ನಕೇಶವ ದೇವಾಲಯ) ಕೆಡವಿದಾಗ ಜೈನ ವಿಗ್ರಹ ಪತ್ತೆಯಾಗಿತ್ತು ಎಂಬುದು ಚರ್ಚೆಯ ಮುನ್ನೆಲೆಗೆ ಬಂದಿದೆ.

ಟಿಪ್ಪು ಸುಲ್ತಾನ್‌ ಆಳ್ವಿಕೆಯ ಅವಧಿಯಲ್ಲಿ ದೇವಾಲಯವನ್ನು ಕೆಡವಿ ಶ್ರೀರಂಗಪಟ್ಟಣದ ಜಾಮಿಯಾ ಮಸೀದಿ ಕಟ್ಟಲಾಗಿದೆ ಎಂಬ ಚರ್ಚೆ ನಡೆಯುತ್ತಿದ್ದು, ಜೈನ ಹಾಗೂ ಬೌದ್ಧ ಧಾರ್ಮಿಕ ಕೇಂದ್ರಗಳ ಮೇಲೆ ವೈಷ್ಣವ ಹಾಗೂ ಶೈವ ದೇವಾಲಯಗಳನ್ನು ನಿರ್ಮಿಸಿರುವ ವಿಷಯಗಳೂ ಚರ್ಚೆಯಾಗುತ್ತಿವೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

‘ಟಿಪ್ಪು ಸುಲ್ತಾನ್’ ಹಾಗೂ ‘ಮೈಸೂರು ಇತಿಹಾಸ’ದ ಕುರಿತು ಆಳವಾಗಿ ಅಧ್ಯಯನ ಮಾಡಿದವರಾದ ಪ್ರೊ.ಪಿ.ವಿ.ನಂಜರಾಜ ಅರಸು ರವರು, ‘ನಾನುಗೌರಿ.ಕಾಂ’ ಜೊತೆ ಮಾತನಾಡಿ, ಜಾಮೀಯ ಮಸೀದಿ ಇತಿಹಾಸದ ಜೊತೆಗೆ ಹದಿನಾರು ಗ್ರಾಮದ ಚೆನ್ನಕೇಶವ ದೇವಾಲಯದ ಕುತಿತೂ ವಿವರಿಸಿದ್ದಾರೆ.

“ಶ್ರೀರಂಗಪಟ್ಟಣದಲ್ಲಿ ದೇವಸ್ಥಾನ ಇದ್ದದ್ದು ನಿಜ. ಒಂದು ರಾಜ್ಯದ ರಾಜಧಾನಿ ಅಂದಾಗ ಶತ್ರುಗಳ ದಾಳಿಯನ್ನು ಗಮನಿಸುತ್ತಿರಬೇಕಾಗುತ್ತದೆ. ಅದಕ್ಕಾಗಿ ಕಾವಲು ಗೋಪುರಗಳು ಬೇಕಾಗಿರುತ್ತವೆ. ಬ್ರಿಟಿಷರ ನಡುವೆ ಟಿಪ್ಪು ನಡೆಸಿದ ನಾಲ್ಕು ಆಂಗ್ಲೋ ಮೈಸೂರು ಯುದ್ಧದಲ್ಲೂ ಬ್ರಿಟಿಷರು ದಾಳಿ ಮಾಡಿದ್ದು ಮಳವಳ್ಳಿ ಕಡೆಯಿಂದ. ಮದ್ದೂರು, ಮಂಡ್ಯ ಕಡೆಯಿಂದ ಬರಲು ಸಾಧ್ಯವಾಗುತ್ತಿರಲಿಲ್ಲ. ಯಾಕೆಂದರೆ ನದಿ ದಾಟುವುದು ಕಷ್ಟವಿತ್ತು. ಹೀಗಾಗಿ ಮಳವಳ್ಳಿ ಮಾರ್ಗವನ್ನು ಬ್ರಿಟಿಷರು ಆಯ್ದುಕೊಂಡರು. ಹೀಗಾಗಿ ಕಾವಲು ಗೋಪುರಗಳನ್ನು ನಿರ್ಮಿಸಲಾಯಿತು. ಈ ಮಸೀದಿಯಲ್ಲಿನ ಕಾವಲು ಗೋಪುರದ ಒಳಗೆ 200 ಮೆಟ್ಟಿಲುಗಳಿವೆ. ಈಗ ಬೀಗ ಹಾಕಿದ್ದಾರೆ. ನೀವು ಬೀಗ ತೆಗೆಸಿ ಹೋಗಿ ನೋಡಿ. ಸುಮಾರು ನಲವತ್ತು ಮೈಲಿ ದೂರದ ಮಳವಳ್ಳಿವರೆಗೂ ನೋಡಬಹುದು. ಮತ್ತೆ ಈ ಕಡೆ ತಿರುಗಿ ನೋಡಿದರೆ ಮದ್ದೂರುವರೆಗೂ ನೋಡಬಹುದು. ಇದಕ್ಕಾಗಿ ದೇವಾಲಯವನ್ನು ಮಸೀದಿಯಾಗಿ ರೂಪಾಂತರಿಸುತ್ತಾನೆ. ಅಲ್ಲಿನ ಆಂಜನೇಯ ದೇವರನ್ನು ಕೋಟೆಗೆ ಸ್ಥಳಾಂತರಿಸುತ್ತಾನೆ” ಎಂದು ವಿವರಿಸಿದ ಅವರು, “ಹದಿನಾರು ಗ್ರಾಮದಲ್ಲಿ ವೈಷ್ಣವ ದೇವಾಲಯದ ಗೋಡೆಯನ್ನು ಒಡೆದಾಗ ಜೈನ ತೀರ್ಥಂಕರರ ವಿಗ್ರಹ ಪತ್ತೆಯಾಗಿದೆ. ಇಲ್ಲಿನ ಚೆನ್ನಕೇಶವ ದೇವಾಲಯ ಕೆಡವಿ ಬಸದಿಯನ್ನು ಮುತಾಲಿಕ್‌ ನಿರ್ಮಿಸುತ್ತಾರೆಯೇ?” ಎಂದು ಪ್ರಶ್ನಿಸಿದರು.

ಇದನ್ನೂ ಓದಿರಿ: ಟಿಪ್ಪು ಮತ್ತು ಮೈಸೂರು ಚರಿತ್ರೆ ಕುರಿತ ಎರಡು ಅಮೂಲ್ಯ ಬರಹಗಳು

ಇತಿಹಾಸವನ್ನು ಕೆದಕುತ್ತಾ ಹೋದರೆ ದೇವಾಲಯಗಳ ಅಡಿಯಲ್ಲಿ ಜೈನ ಹಾಗೂ ಬೌದ್ಧ ಧರ್ಮದ ಕುರುಹುಗಳು ಸಿಗುತ್ತವೆ ಎಂಬುದಕ್ಕೆ ಸಾಕಷ್ಟು ಉದಾಹರಣೆಗಳಿವೆ. ಇದಕ್ಕೆ ಪೂರಕವಾಗಿ ಹದಿನಾರು ಗ್ರಾಮದ ಇತಿಹಾಸವನ್ನು ಪ್ರೊ.ನಂಜರಾಜ ಅರಸು ಉಲ್ಲೇಖಿಸುತ್ತಾರೆ.

ಇದನ್ನೂ ಓದಿರಿ: ಫ್ಯಾಕ್ಟ್‌ಚೆಕ್: ಕರ್ನಾಟಕ ಹೈಕೋರ್ಟ್ ಟಿಪ್ಪು ಸುಲ್ತಾನ್‌ರನ್ನು ಜಿಹಾದಿ, ಅತ್ಯಾಚಾರಿ ಎಂದು ಕರೆದಿಲ್ಲ

“ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಹದಿನಾರು ಗ್ರಾಮದ ಇತಿಹಾಸವನ್ನು ಬರೆಯಲು ಹೊರಟಾಗ ಹಲವಾರು ಸಂಗತಿಗಳು ತೆರೆದುಕೊಂಡವು. ಯದುವಂಶರು ಹುಟ್ಟಿದ್ದು ಇದೇ ಗ್ರಾಮದಲ್ಲಿ ಎನ್ನುತ್ತಾರೆ. ಈ ಹಿಂದೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ, ಹದಿನಾರು ಗ್ರಾಮದ ನಿವಾಸಿ ಡಾ.ಎಚ್.ಸಿ.ಮಹದೇವಪ್ಪ ಅವರು ತಮ್ಮ ಅಧಿಕಾರವಧಿಯಲ್ಲಿ ಹದಿನಾರು ಗ್ರಾಮದ ಅಭಿವೃದ್ಧಿಗೆ, ದೇವಾಲಯಗಳ ಜೀರ್ಣೋದ್ಧಾರಕ್ಕೆ ಕ್ರಮ ವಹಿಸಿದರು. ಆಗ ಜೈನ ತೀರ್ಥಂಕರರ ವಿಗ್ರಹ ಪತ್ತೆಯಾಗಿತ್ತು” ಎಂದು ಹೇಳುತ್ತಾರೆ ನಂಜರಾಜ ಅರಸು.

“ಹದಿನಾರು ಗ್ರಾಮದಲ್ಲಿ ಚೆನ್ನಕೇಶವ ದೇವಾಲಯವಿದೆ. ಅದು ವೈಷ್ಣವ ದೇವರು. ವಿಜಯನಗರ ಕಾಲದ ವಾಸ್ತುಶಿಲ್ಪ ಶೈಲಿಯಲ್ಲಿ ದೇವಾಲಯವನ್ನು ಕಾಣಬಹುದು. ದೇವಾಲಯದ ಗೋಡೆಗಳು ಶಿಥಿಲವಾಗಿದ್ದರಿಂದ ಹೊಸದಾಗಿಯೇ ಕಟ್ಟಲು ಅಂದಿನ ಸಚಿವ ಮಹದೇವಪ್ಪ ಸೂಚಿಸಿದರು. ಗರ್ಭಗುಡಿಯಲ್ಲಿನ ದೇವರನ್ನು ಗೋಣಿಚೀಲ, ಟಾರ್ಪಲ್‌ ಇತ್ಯಾದಿಗಳಿಂದ ಮುಚ್ಚಿ ಸುರಕ್ಷಿತವಾಗಿಟ್ಟು ಗೋಡೆಗಳನ್ನು ಒಡೆಯಲಾಯಿತು. ಹೊಸದಾಗಿ ಗೋಡೆ ನಿರ್ಮಿಸಲು ಒಂದು ಬದಿಯ ಗೋಡೆಯ ಬಳಿ ಆರು ಅಡಿ ಅಗೆದಾಗ ತೀರ್ಥಂಕರರ ಅರ್ಧಭಾಗ (ಸೊಂಟದ ಮೇಲಿನ ಭಾಗ) ಸಿಕ್ಕಿತು. ಇನ್ನೊಂದು ಗೋಡೆ ಒಡೆದಾಗ ಸೊಂಟದಿಂದ ಕೆಳಭಾಗ ಸಿಕ್ಕಿತು. ಅಂದರೆ ಇಲ್ಲಿ ಮೊದಲು ಜೈನರ ಬಸದಿ ಇತ್ತು. ಅದನ್ನು ವೈಷ್ಣವರು ಒಡೆದುಹಾಕಿದ್ದಾರೆ. ತೀರ್ಥಂಕರರ ವಿಗ್ರಹವನ್ನು ಅಲ್ಲಿಯೇ ಮುಚ್ಚಿಹಾಕಿ ವಿಷ್ಣು ದೇವಾಲಯ ಕಟ್ಟಿದ್ದಾರೆ ಎಂದಾಯಿತಲ್ಲ. ಮುತಾಲಿಕ್ ಹಾಗೂ ಕೆಲವು ಸ್ವಾಮೀಜಿಗಳು ಚೆನ್ನಕೇಶವನ ವಿಗ್ರಹ ತೆರವು ಮಾಡಿ, ಪಾರ್ಶ್ವನಾಥರ ವಿಗ್ರಹವನ್ನು ಪ್ರತಿಷ್ಠಾಪಿಸಬೇಕಲ್ಲವೇ?” ಎಂದು ಪ್ರಶ್ನಿಸಿದರು.

“ನನಗೆ ಯಾವ ದೇವರ ಬಗ್ಗೆಯೂ ಆಸಕ್ತಿ ಇಲ್ಲ. ಆದರೆ ಮಸೀದಿ ಒಡೆದು ದೇವಸ್ಥಾನ ಮಾಡುತ್ತೇವೆ ಎನ್ನುತ್ತಾರಲ್ಲ. ಹದಿನಾರು ಗ್ರಾಮದಲ್ಲಿ ಯಾವುದನ್ನು ಒಡೆಯುತ್ತಾರೆ? ಮೈಸೂರಿನಿಂದ ಪಶ್ಚಿಮವಾಹಿನಿಗೆ ಹೊರಟರೆ ದಾರಿಯಲ್ಲಿ ಕಳಸ್ತವಾಡಿ ಎಂಬ ಗ್ರಾಮ ಸಿಗುತ್ತದೆ. ಮುತಾಲಿಕ್‌ ಉಲ್ಲೇಖಿಸುವ ಬ್ರಿಟಿಷರೇ ಬರೆದ ಪ್ರಕಾರ, 1484ರ ಅವಧಿಯಲ್ಲಿ ತಿಮ್ಮಣ್ಣನಾಯಕನಿಗೆ ವಿಜಯನಗರದ ಅರಸರು ಅನುಮತಿ ನೀಡಿ ಕಳಸ್ತವಾಡಿಯಲ್ಲಿದ್ದ 100 ಜೈನಬಸದಿಗಳನ್ನು ಒಡೆದುಹಾಕುತ್ತಾರೆ. ನಂತರ ಇಲ್ಲಿನ ಜೈನ ಬಸದಿಗಳಿಂದ ಕಲ್ಲು, ಮರದ ವಸ್ತುಗಳನ್ನು ತೆಗೆದುಕೊಂಡು ಹೋಗಿ ಶ್ರೀರಂಗಪಟ್ಟಣದಲ್ಲಿರುವ ರಂಗನಾಥಸ್ವಾಮಿ ದೇವಸ್ಥಾನವನ್ನು ವಿಸ್ತಾರಗೊಳಿಸಲಾಗುತ್ತದೆ. ಮುತಾಲಿಕ್‌ ಅವರೇ ಇದನ್ನು ನಿಮ್ಮ ಬ್ರಿಟಿಷರೇ ಬರೆದಿದ್ದಾರೆ. ನೂರೊಂದು ಜೈನ ಬಸದಿ ಇತ್ತೆಂದು ಇಲ್ಲಿನ ಜನರಿಗೇ ಗೊತ್ತೇ ಇಲ್ಲ. ಹೊಸದಾಗಿ ಪ್ರತಿಷ್ಠಾಪನೆ ಮಾಡುತ್ತೀರಾ?” ಎಂದು ಕೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಭಶೀರರ ಯೋಗ್ಯತೆಗಳ ಅನಾವರಣ ತಿಳಿತಿದೆ ,ಶಾಂತಿದೂತರ ಬಣ್ಣ ಬಯಲು ಆಗಲೇ ಬೇಕಿದೆ.

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...