Homeಕರ್ನಾಟಕಮೈಸೂರಿನ ‘ಹದಿನಾರು’ ಗ್ರಾಮದಲ್ಲಿ ವೈಷ್ಣವ ದೇವಾಲಯದ ಗೋಡೆ ಕೆಡವಿದಾಗ ಸಿಕ್ಕಿತ್ತು ಜೈನ ವಿಗ್ರಹ!

ಮೈಸೂರಿನ ‘ಹದಿನಾರು’ ಗ್ರಾಮದಲ್ಲಿ ವೈಷ್ಣವ ದೇವಾಲಯದ ಗೋಡೆ ಕೆಡವಿದಾಗ ಸಿಕ್ಕಿತ್ತು ಜೈನ ವಿಗ್ರಹ!

- Advertisement -
- Advertisement -

ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ಹದಿನಾರು ಗ್ರಾಮದಲ್ಲಿ ನಾಲ್ಕು ವರ್ಷಗಳ ಹಿಂದೆ ವೈಷ್ಣವ ದೇವಾಲಯ (ಚೆನ್ನಕೇಶವ ದೇವಾಲಯ) ಕೆಡವಿದಾಗ ಜೈನ ವಿಗ್ರಹ ಪತ್ತೆಯಾಗಿತ್ತು ಎಂಬುದು ಚರ್ಚೆಯ ಮುನ್ನೆಲೆಗೆ ಬಂದಿದೆ.

ಟಿಪ್ಪು ಸುಲ್ತಾನ್‌ ಆಳ್ವಿಕೆಯ ಅವಧಿಯಲ್ಲಿ ದೇವಾಲಯವನ್ನು ಕೆಡವಿ ಶ್ರೀರಂಗಪಟ್ಟಣದ ಜಾಮಿಯಾ ಮಸೀದಿ ಕಟ್ಟಲಾಗಿದೆ ಎಂಬ ಚರ್ಚೆ ನಡೆಯುತ್ತಿದ್ದು, ಜೈನ ಹಾಗೂ ಬೌದ್ಧ ಧಾರ್ಮಿಕ ಕೇಂದ್ರಗಳ ಮೇಲೆ ವೈಷ್ಣವ ಹಾಗೂ ಶೈವ ದೇವಾಲಯಗಳನ್ನು ನಿರ್ಮಿಸಿರುವ ವಿಷಯಗಳೂ ಚರ್ಚೆಯಾಗುತ್ತಿವೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

‘ಟಿಪ್ಪು ಸುಲ್ತಾನ್’ ಹಾಗೂ ‘ಮೈಸೂರು ಇತಿಹಾಸ’ದ ಕುರಿತು ಆಳವಾಗಿ ಅಧ್ಯಯನ ಮಾಡಿದವರಾದ ಪ್ರೊ.ಪಿ.ವಿ.ನಂಜರಾಜ ಅರಸು ರವರು, ‘ನಾನುಗೌರಿ.ಕಾಂ’ ಜೊತೆ ಮಾತನಾಡಿ, ಜಾಮೀಯ ಮಸೀದಿ ಇತಿಹಾಸದ ಜೊತೆಗೆ ಹದಿನಾರು ಗ್ರಾಮದ ಚೆನ್ನಕೇಶವ ದೇವಾಲಯದ ಕುತಿತೂ ವಿವರಿಸಿದ್ದಾರೆ.

“ಶ್ರೀರಂಗಪಟ್ಟಣದಲ್ಲಿ ದೇವಸ್ಥಾನ ಇದ್ದದ್ದು ನಿಜ. ಒಂದು ರಾಜ್ಯದ ರಾಜಧಾನಿ ಅಂದಾಗ ಶತ್ರುಗಳ ದಾಳಿಯನ್ನು ಗಮನಿಸುತ್ತಿರಬೇಕಾಗುತ್ತದೆ. ಅದಕ್ಕಾಗಿ ಕಾವಲು ಗೋಪುರಗಳು ಬೇಕಾಗಿರುತ್ತವೆ. ಬ್ರಿಟಿಷರ ನಡುವೆ ಟಿಪ್ಪು ನಡೆಸಿದ ನಾಲ್ಕು ಆಂಗ್ಲೋ ಮೈಸೂರು ಯುದ್ಧದಲ್ಲೂ ಬ್ರಿಟಿಷರು ದಾಳಿ ಮಾಡಿದ್ದು ಮಳವಳ್ಳಿ ಕಡೆಯಿಂದ. ಮದ್ದೂರು, ಮಂಡ್ಯ ಕಡೆಯಿಂದ ಬರಲು ಸಾಧ್ಯವಾಗುತ್ತಿರಲಿಲ್ಲ. ಯಾಕೆಂದರೆ ನದಿ ದಾಟುವುದು ಕಷ್ಟವಿತ್ತು. ಹೀಗಾಗಿ ಮಳವಳ್ಳಿ ಮಾರ್ಗವನ್ನು ಬ್ರಿಟಿಷರು ಆಯ್ದುಕೊಂಡರು. ಹೀಗಾಗಿ ಕಾವಲು ಗೋಪುರಗಳನ್ನು ನಿರ್ಮಿಸಲಾಯಿತು. ಈ ಮಸೀದಿಯಲ್ಲಿನ ಕಾವಲು ಗೋಪುರದ ಒಳಗೆ 200 ಮೆಟ್ಟಿಲುಗಳಿವೆ. ಈಗ ಬೀಗ ಹಾಕಿದ್ದಾರೆ. ನೀವು ಬೀಗ ತೆಗೆಸಿ ಹೋಗಿ ನೋಡಿ. ಸುಮಾರು ನಲವತ್ತು ಮೈಲಿ ದೂರದ ಮಳವಳ್ಳಿವರೆಗೂ ನೋಡಬಹುದು. ಮತ್ತೆ ಈ ಕಡೆ ತಿರುಗಿ ನೋಡಿದರೆ ಮದ್ದೂರುವರೆಗೂ ನೋಡಬಹುದು. ಇದಕ್ಕಾಗಿ ದೇವಾಲಯವನ್ನು ಮಸೀದಿಯಾಗಿ ರೂಪಾಂತರಿಸುತ್ತಾನೆ. ಅಲ್ಲಿನ ಆಂಜನೇಯ ದೇವರನ್ನು ಕೋಟೆಗೆ ಸ್ಥಳಾಂತರಿಸುತ್ತಾನೆ” ಎಂದು ವಿವರಿಸಿದ ಅವರು, “ಹದಿನಾರು ಗ್ರಾಮದಲ್ಲಿ ವೈಷ್ಣವ ದೇವಾಲಯದ ಗೋಡೆಯನ್ನು ಒಡೆದಾಗ ಜೈನ ತೀರ್ಥಂಕರರ ವಿಗ್ರಹ ಪತ್ತೆಯಾಗಿದೆ. ಇಲ್ಲಿನ ಚೆನ್ನಕೇಶವ ದೇವಾಲಯ ಕೆಡವಿ ಬಸದಿಯನ್ನು ಮುತಾಲಿಕ್‌ ನಿರ್ಮಿಸುತ್ತಾರೆಯೇ?” ಎಂದು ಪ್ರಶ್ನಿಸಿದರು.

ಇದನ್ನೂ ಓದಿರಿ: ಟಿಪ್ಪು ಮತ್ತು ಮೈಸೂರು ಚರಿತ್ರೆ ಕುರಿತ ಎರಡು ಅಮೂಲ್ಯ ಬರಹಗಳು

ಇತಿಹಾಸವನ್ನು ಕೆದಕುತ್ತಾ ಹೋದರೆ ದೇವಾಲಯಗಳ ಅಡಿಯಲ್ಲಿ ಜೈನ ಹಾಗೂ ಬೌದ್ಧ ಧರ್ಮದ ಕುರುಹುಗಳು ಸಿಗುತ್ತವೆ ಎಂಬುದಕ್ಕೆ ಸಾಕಷ್ಟು ಉದಾಹರಣೆಗಳಿವೆ. ಇದಕ್ಕೆ ಪೂರಕವಾಗಿ ಹದಿನಾರು ಗ್ರಾಮದ ಇತಿಹಾಸವನ್ನು ಪ್ರೊ.ನಂಜರಾಜ ಅರಸು ಉಲ್ಲೇಖಿಸುತ್ತಾರೆ.

ಇದನ್ನೂ ಓದಿರಿ: ಫ್ಯಾಕ್ಟ್‌ಚೆಕ್: ಕರ್ನಾಟಕ ಹೈಕೋರ್ಟ್ ಟಿಪ್ಪು ಸುಲ್ತಾನ್‌ರನ್ನು ಜಿಹಾದಿ, ಅತ್ಯಾಚಾರಿ ಎಂದು ಕರೆದಿಲ್ಲ

“ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಹದಿನಾರು ಗ್ರಾಮದ ಇತಿಹಾಸವನ್ನು ಬರೆಯಲು ಹೊರಟಾಗ ಹಲವಾರು ಸಂಗತಿಗಳು ತೆರೆದುಕೊಂಡವು. ಯದುವಂಶರು ಹುಟ್ಟಿದ್ದು ಇದೇ ಗ್ರಾಮದಲ್ಲಿ ಎನ್ನುತ್ತಾರೆ. ಈ ಹಿಂದೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ, ಹದಿನಾರು ಗ್ರಾಮದ ನಿವಾಸಿ ಡಾ.ಎಚ್.ಸಿ.ಮಹದೇವಪ್ಪ ಅವರು ತಮ್ಮ ಅಧಿಕಾರವಧಿಯಲ್ಲಿ ಹದಿನಾರು ಗ್ರಾಮದ ಅಭಿವೃದ್ಧಿಗೆ, ದೇವಾಲಯಗಳ ಜೀರ್ಣೋದ್ಧಾರಕ್ಕೆ ಕ್ರಮ ವಹಿಸಿದರು. ಆಗ ಜೈನ ತೀರ್ಥಂಕರರ ವಿಗ್ರಹ ಪತ್ತೆಯಾಗಿತ್ತು” ಎಂದು ಹೇಳುತ್ತಾರೆ ನಂಜರಾಜ ಅರಸು.

“ಹದಿನಾರು ಗ್ರಾಮದಲ್ಲಿ ಚೆನ್ನಕೇಶವ ದೇವಾಲಯವಿದೆ. ಅದು ವೈಷ್ಣವ ದೇವರು. ವಿಜಯನಗರ ಕಾಲದ ವಾಸ್ತುಶಿಲ್ಪ ಶೈಲಿಯಲ್ಲಿ ದೇವಾಲಯವನ್ನು ಕಾಣಬಹುದು. ದೇವಾಲಯದ ಗೋಡೆಗಳು ಶಿಥಿಲವಾಗಿದ್ದರಿಂದ ಹೊಸದಾಗಿಯೇ ಕಟ್ಟಲು ಅಂದಿನ ಸಚಿವ ಮಹದೇವಪ್ಪ ಸೂಚಿಸಿದರು. ಗರ್ಭಗುಡಿಯಲ್ಲಿನ ದೇವರನ್ನು ಗೋಣಿಚೀಲ, ಟಾರ್ಪಲ್‌ ಇತ್ಯಾದಿಗಳಿಂದ ಮುಚ್ಚಿ ಸುರಕ್ಷಿತವಾಗಿಟ್ಟು ಗೋಡೆಗಳನ್ನು ಒಡೆಯಲಾಯಿತು. ಹೊಸದಾಗಿ ಗೋಡೆ ನಿರ್ಮಿಸಲು ಒಂದು ಬದಿಯ ಗೋಡೆಯ ಬಳಿ ಆರು ಅಡಿ ಅಗೆದಾಗ ತೀರ್ಥಂಕರರ ಅರ್ಧಭಾಗ (ಸೊಂಟದ ಮೇಲಿನ ಭಾಗ) ಸಿಕ್ಕಿತು. ಇನ್ನೊಂದು ಗೋಡೆ ಒಡೆದಾಗ ಸೊಂಟದಿಂದ ಕೆಳಭಾಗ ಸಿಕ್ಕಿತು. ಅಂದರೆ ಇಲ್ಲಿ ಮೊದಲು ಜೈನರ ಬಸದಿ ಇತ್ತು. ಅದನ್ನು ವೈಷ್ಣವರು ಒಡೆದುಹಾಕಿದ್ದಾರೆ. ತೀರ್ಥಂಕರರ ವಿಗ್ರಹವನ್ನು ಅಲ್ಲಿಯೇ ಮುಚ್ಚಿಹಾಕಿ ವಿಷ್ಣು ದೇವಾಲಯ ಕಟ್ಟಿದ್ದಾರೆ ಎಂದಾಯಿತಲ್ಲ. ಮುತಾಲಿಕ್ ಹಾಗೂ ಕೆಲವು ಸ್ವಾಮೀಜಿಗಳು ಚೆನ್ನಕೇಶವನ ವಿಗ್ರಹ ತೆರವು ಮಾಡಿ, ಪಾರ್ಶ್ವನಾಥರ ವಿಗ್ರಹವನ್ನು ಪ್ರತಿಷ್ಠಾಪಿಸಬೇಕಲ್ಲವೇ?” ಎಂದು ಪ್ರಶ್ನಿಸಿದರು.

“ನನಗೆ ಯಾವ ದೇವರ ಬಗ್ಗೆಯೂ ಆಸಕ್ತಿ ಇಲ್ಲ. ಆದರೆ ಮಸೀದಿ ಒಡೆದು ದೇವಸ್ಥಾನ ಮಾಡುತ್ತೇವೆ ಎನ್ನುತ್ತಾರಲ್ಲ. ಹದಿನಾರು ಗ್ರಾಮದಲ್ಲಿ ಯಾವುದನ್ನು ಒಡೆಯುತ್ತಾರೆ? ಮೈಸೂರಿನಿಂದ ಪಶ್ಚಿಮವಾಹಿನಿಗೆ ಹೊರಟರೆ ದಾರಿಯಲ್ಲಿ ಕಳಸ್ತವಾಡಿ ಎಂಬ ಗ್ರಾಮ ಸಿಗುತ್ತದೆ. ಮುತಾಲಿಕ್‌ ಉಲ್ಲೇಖಿಸುವ ಬ್ರಿಟಿಷರೇ ಬರೆದ ಪ್ರಕಾರ, 1484ರ ಅವಧಿಯಲ್ಲಿ ತಿಮ್ಮಣ್ಣನಾಯಕನಿಗೆ ವಿಜಯನಗರದ ಅರಸರು ಅನುಮತಿ ನೀಡಿ ಕಳಸ್ತವಾಡಿಯಲ್ಲಿದ್ದ 100 ಜೈನಬಸದಿಗಳನ್ನು ಒಡೆದುಹಾಕುತ್ತಾರೆ. ನಂತರ ಇಲ್ಲಿನ ಜೈನ ಬಸದಿಗಳಿಂದ ಕಲ್ಲು, ಮರದ ವಸ್ತುಗಳನ್ನು ತೆಗೆದುಕೊಂಡು ಹೋಗಿ ಶ್ರೀರಂಗಪಟ್ಟಣದಲ್ಲಿರುವ ರಂಗನಾಥಸ್ವಾಮಿ ದೇವಸ್ಥಾನವನ್ನು ವಿಸ್ತಾರಗೊಳಿಸಲಾಗುತ್ತದೆ. ಮುತಾಲಿಕ್‌ ಅವರೇ ಇದನ್ನು ನಿಮ್ಮ ಬ್ರಿಟಿಷರೇ ಬರೆದಿದ್ದಾರೆ. ನೂರೊಂದು ಜೈನ ಬಸದಿ ಇತ್ತೆಂದು ಇಲ್ಲಿನ ಜನರಿಗೇ ಗೊತ್ತೇ ಇಲ್ಲ. ಹೊಸದಾಗಿ ಪ್ರತಿಷ್ಠಾಪನೆ ಮಾಡುತ್ತೀರಾ?” ಎಂದು ಕೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಭಶೀರರ ಯೋಗ್ಯತೆಗಳ ಅನಾವರಣ ತಿಳಿತಿದೆ ,ಶಾಂತಿದೂತರ ಬಣ್ಣ ಬಯಲು ಆಗಲೇ ಬೇಕಿದೆ.

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...