Homeಕರ್ನಾಟಕಮೈಸೂರಿನ ‘ಹದಿನಾರು’ ಗ್ರಾಮದಲ್ಲಿ ವೈಷ್ಣವ ದೇವಾಲಯದ ಗೋಡೆ ಕೆಡವಿದಾಗ ಸಿಕ್ಕಿತ್ತು ಜೈನ ವಿಗ್ರಹ!

ಮೈಸೂರಿನ ‘ಹದಿನಾರು’ ಗ್ರಾಮದಲ್ಲಿ ವೈಷ್ಣವ ದೇವಾಲಯದ ಗೋಡೆ ಕೆಡವಿದಾಗ ಸಿಕ್ಕಿತ್ತು ಜೈನ ವಿಗ್ರಹ!

- Advertisement -
- Advertisement -

ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ಹದಿನಾರು ಗ್ರಾಮದಲ್ಲಿ ನಾಲ್ಕು ವರ್ಷಗಳ ಹಿಂದೆ ವೈಷ್ಣವ ದೇವಾಲಯ (ಚೆನ್ನಕೇಶವ ದೇವಾಲಯ) ಕೆಡವಿದಾಗ ಜೈನ ವಿಗ್ರಹ ಪತ್ತೆಯಾಗಿತ್ತು ಎಂಬುದು ಚರ್ಚೆಯ ಮುನ್ನೆಲೆಗೆ ಬಂದಿದೆ.

ಟಿಪ್ಪು ಸುಲ್ತಾನ್‌ ಆಳ್ವಿಕೆಯ ಅವಧಿಯಲ್ಲಿ ದೇವಾಲಯವನ್ನು ಕೆಡವಿ ಶ್ರೀರಂಗಪಟ್ಟಣದ ಜಾಮಿಯಾ ಮಸೀದಿ ಕಟ್ಟಲಾಗಿದೆ ಎಂಬ ಚರ್ಚೆ ನಡೆಯುತ್ತಿದ್ದು, ಜೈನ ಹಾಗೂ ಬೌದ್ಧ ಧಾರ್ಮಿಕ ಕೇಂದ್ರಗಳ ಮೇಲೆ ವೈಷ್ಣವ ಹಾಗೂ ಶೈವ ದೇವಾಲಯಗಳನ್ನು ನಿರ್ಮಿಸಿರುವ ವಿಷಯಗಳೂ ಚರ್ಚೆಯಾಗುತ್ತಿವೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

‘ಟಿಪ್ಪು ಸುಲ್ತಾನ್’ ಹಾಗೂ ‘ಮೈಸೂರು ಇತಿಹಾಸ’ದ ಕುರಿತು ಆಳವಾಗಿ ಅಧ್ಯಯನ ಮಾಡಿದವರಾದ ಪ್ರೊ.ಪಿ.ವಿ.ನಂಜರಾಜ ಅರಸು ರವರು, ‘ನಾನುಗೌರಿ.ಕಾಂ’ ಜೊತೆ ಮಾತನಾಡಿ, ಜಾಮೀಯ ಮಸೀದಿ ಇತಿಹಾಸದ ಜೊತೆಗೆ ಹದಿನಾರು ಗ್ರಾಮದ ಚೆನ್ನಕೇಶವ ದೇವಾಲಯದ ಕುತಿತೂ ವಿವರಿಸಿದ್ದಾರೆ.

“ಶ್ರೀರಂಗಪಟ್ಟಣದಲ್ಲಿ ದೇವಸ್ಥಾನ ಇದ್ದದ್ದು ನಿಜ. ಒಂದು ರಾಜ್ಯದ ರಾಜಧಾನಿ ಅಂದಾಗ ಶತ್ರುಗಳ ದಾಳಿಯನ್ನು ಗಮನಿಸುತ್ತಿರಬೇಕಾಗುತ್ತದೆ. ಅದಕ್ಕಾಗಿ ಕಾವಲು ಗೋಪುರಗಳು ಬೇಕಾಗಿರುತ್ತವೆ. ಬ್ರಿಟಿಷರ ನಡುವೆ ಟಿಪ್ಪು ನಡೆಸಿದ ನಾಲ್ಕು ಆಂಗ್ಲೋ ಮೈಸೂರು ಯುದ್ಧದಲ್ಲೂ ಬ್ರಿಟಿಷರು ದಾಳಿ ಮಾಡಿದ್ದು ಮಳವಳ್ಳಿ ಕಡೆಯಿಂದ. ಮದ್ದೂರು, ಮಂಡ್ಯ ಕಡೆಯಿಂದ ಬರಲು ಸಾಧ್ಯವಾಗುತ್ತಿರಲಿಲ್ಲ. ಯಾಕೆಂದರೆ ನದಿ ದಾಟುವುದು ಕಷ್ಟವಿತ್ತು. ಹೀಗಾಗಿ ಮಳವಳ್ಳಿ ಮಾರ್ಗವನ್ನು ಬ್ರಿಟಿಷರು ಆಯ್ದುಕೊಂಡರು. ಹೀಗಾಗಿ ಕಾವಲು ಗೋಪುರಗಳನ್ನು ನಿರ್ಮಿಸಲಾಯಿತು. ಈ ಮಸೀದಿಯಲ್ಲಿನ ಕಾವಲು ಗೋಪುರದ ಒಳಗೆ 200 ಮೆಟ್ಟಿಲುಗಳಿವೆ. ಈಗ ಬೀಗ ಹಾಕಿದ್ದಾರೆ. ನೀವು ಬೀಗ ತೆಗೆಸಿ ಹೋಗಿ ನೋಡಿ. ಸುಮಾರು ನಲವತ್ತು ಮೈಲಿ ದೂರದ ಮಳವಳ್ಳಿವರೆಗೂ ನೋಡಬಹುದು. ಮತ್ತೆ ಈ ಕಡೆ ತಿರುಗಿ ನೋಡಿದರೆ ಮದ್ದೂರುವರೆಗೂ ನೋಡಬಹುದು. ಇದಕ್ಕಾಗಿ ದೇವಾಲಯವನ್ನು ಮಸೀದಿಯಾಗಿ ರೂಪಾಂತರಿಸುತ್ತಾನೆ. ಅಲ್ಲಿನ ಆಂಜನೇಯ ದೇವರನ್ನು ಕೋಟೆಗೆ ಸ್ಥಳಾಂತರಿಸುತ್ತಾನೆ” ಎಂದು ವಿವರಿಸಿದ ಅವರು, “ಹದಿನಾರು ಗ್ರಾಮದಲ್ಲಿ ವೈಷ್ಣವ ದೇವಾಲಯದ ಗೋಡೆಯನ್ನು ಒಡೆದಾಗ ಜೈನ ತೀರ್ಥಂಕರರ ವಿಗ್ರಹ ಪತ್ತೆಯಾಗಿದೆ. ಇಲ್ಲಿನ ಚೆನ್ನಕೇಶವ ದೇವಾಲಯ ಕೆಡವಿ ಬಸದಿಯನ್ನು ಮುತಾಲಿಕ್‌ ನಿರ್ಮಿಸುತ್ತಾರೆಯೇ?” ಎಂದು ಪ್ರಶ್ನಿಸಿದರು.

ಇದನ್ನೂ ಓದಿರಿ: ಟಿಪ್ಪು ಮತ್ತು ಮೈಸೂರು ಚರಿತ್ರೆ ಕುರಿತ ಎರಡು ಅಮೂಲ್ಯ ಬರಹಗಳು

ಇತಿಹಾಸವನ್ನು ಕೆದಕುತ್ತಾ ಹೋದರೆ ದೇವಾಲಯಗಳ ಅಡಿಯಲ್ಲಿ ಜೈನ ಹಾಗೂ ಬೌದ್ಧ ಧರ್ಮದ ಕುರುಹುಗಳು ಸಿಗುತ್ತವೆ ಎಂಬುದಕ್ಕೆ ಸಾಕಷ್ಟು ಉದಾಹರಣೆಗಳಿವೆ. ಇದಕ್ಕೆ ಪೂರಕವಾಗಿ ಹದಿನಾರು ಗ್ರಾಮದ ಇತಿಹಾಸವನ್ನು ಪ್ರೊ.ನಂಜರಾಜ ಅರಸು ಉಲ್ಲೇಖಿಸುತ್ತಾರೆ.

ಇದನ್ನೂ ಓದಿರಿ: ಫ್ಯಾಕ್ಟ್‌ಚೆಕ್: ಕರ್ನಾಟಕ ಹೈಕೋರ್ಟ್ ಟಿಪ್ಪು ಸುಲ್ತಾನ್‌ರನ್ನು ಜಿಹಾದಿ, ಅತ್ಯಾಚಾರಿ ಎಂದು ಕರೆದಿಲ್ಲ

“ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಹದಿನಾರು ಗ್ರಾಮದ ಇತಿಹಾಸವನ್ನು ಬರೆಯಲು ಹೊರಟಾಗ ಹಲವಾರು ಸಂಗತಿಗಳು ತೆರೆದುಕೊಂಡವು. ಯದುವಂಶರು ಹುಟ್ಟಿದ್ದು ಇದೇ ಗ್ರಾಮದಲ್ಲಿ ಎನ್ನುತ್ತಾರೆ. ಈ ಹಿಂದೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ, ಹದಿನಾರು ಗ್ರಾಮದ ನಿವಾಸಿ ಡಾ.ಎಚ್.ಸಿ.ಮಹದೇವಪ್ಪ ಅವರು ತಮ್ಮ ಅಧಿಕಾರವಧಿಯಲ್ಲಿ ಹದಿನಾರು ಗ್ರಾಮದ ಅಭಿವೃದ್ಧಿಗೆ, ದೇವಾಲಯಗಳ ಜೀರ್ಣೋದ್ಧಾರಕ್ಕೆ ಕ್ರಮ ವಹಿಸಿದರು. ಆಗ ಜೈನ ತೀರ್ಥಂಕರರ ವಿಗ್ರಹ ಪತ್ತೆಯಾಗಿತ್ತು” ಎಂದು ಹೇಳುತ್ತಾರೆ ನಂಜರಾಜ ಅರಸು.

“ಹದಿನಾರು ಗ್ರಾಮದಲ್ಲಿ ಚೆನ್ನಕೇಶವ ದೇವಾಲಯವಿದೆ. ಅದು ವೈಷ್ಣವ ದೇವರು. ವಿಜಯನಗರ ಕಾಲದ ವಾಸ್ತುಶಿಲ್ಪ ಶೈಲಿಯಲ್ಲಿ ದೇವಾಲಯವನ್ನು ಕಾಣಬಹುದು. ದೇವಾಲಯದ ಗೋಡೆಗಳು ಶಿಥಿಲವಾಗಿದ್ದರಿಂದ ಹೊಸದಾಗಿಯೇ ಕಟ್ಟಲು ಅಂದಿನ ಸಚಿವ ಮಹದೇವಪ್ಪ ಸೂಚಿಸಿದರು. ಗರ್ಭಗುಡಿಯಲ್ಲಿನ ದೇವರನ್ನು ಗೋಣಿಚೀಲ, ಟಾರ್ಪಲ್‌ ಇತ್ಯಾದಿಗಳಿಂದ ಮುಚ್ಚಿ ಸುರಕ್ಷಿತವಾಗಿಟ್ಟು ಗೋಡೆಗಳನ್ನು ಒಡೆಯಲಾಯಿತು. ಹೊಸದಾಗಿ ಗೋಡೆ ನಿರ್ಮಿಸಲು ಒಂದು ಬದಿಯ ಗೋಡೆಯ ಬಳಿ ಆರು ಅಡಿ ಅಗೆದಾಗ ತೀರ್ಥಂಕರರ ಅರ್ಧಭಾಗ (ಸೊಂಟದ ಮೇಲಿನ ಭಾಗ) ಸಿಕ್ಕಿತು. ಇನ್ನೊಂದು ಗೋಡೆ ಒಡೆದಾಗ ಸೊಂಟದಿಂದ ಕೆಳಭಾಗ ಸಿಕ್ಕಿತು. ಅಂದರೆ ಇಲ್ಲಿ ಮೊದಲು ಜೈನರ ಬಸದಿ ಇತ್ತು. ಅದನ್ನು ವೈಷ್ಣವರು ಒಡೆದುಹಾಕಿದ್ದಾರೆ. ತೀರ್ಥಂಕರರ ವಿಗ್ರಹವನ್ನು ಅಲ್ಲಿಯೇ ಮುಚ್ಚಿಹಾಕಿ ವಿಷ್ಣು ದೇವಾಲಯ ಕಟ್ಟಿದ್ದಾರೆ ಎಂದಾಯಿತಲ್ಲ. ಮುತಾಲಿಕ್ ಹಾಗೂ ಕೆಲವು ಸ್ವಾಮೀಜಿಗಳು ಚೆನ್ನಕೇಶವನ ವಿಗ್ರಹ ತೆರವು ಮಾಡಿ, ಪಾರ್ಶ್ವನಾಥರ ವಿಗ್ರಹವನ್ನು ಪ್ರತಿಷ್ಠಾಪಿಸಬೇಕಲ್ಲವೇ?” ಎಂದು ಪ್ರಶ್ನಿಸಿದರು.

“ನನಗೆ ಯಾವ ದೇವರ ಬಗ್ಗೆಯೂ ಆಸಕ್ತಿ ಇಲ್ಲ. ಆದರೆ ಮಸೀದಿ ಒಡೆದು ದೇವಸ್ಥಾನ ಮಾಡುತ್ತೇವೆ ಎನ್ನುತ್ತಾರಲ್ಲ. ಹದಿನಾರು ಗ್ರಾಮದಲ್ಲಿ ಯಾವುದನ್ನು ಒಡೆಯುತ್ತಾರೆ? ಮೈಸೂರಿನಿಂದ ಪಶ್ಚಿಮವಾಹಿನಿಗೆ ಹೊರಟರೆ ದಾರಿಯಲ್ಲಿ ಕಳಸ್ತವಾಡಿ ಎಂಬ ಗ್ರಾಮ ಸಿಗುತ್ತದೆ. ಮುತಾಲಿಕ್‌ ಉಲ್ಲೇಖಿಸುವ ಬ್ರಿಟಿಷರೇ ಬರೆದ ಪ್ರಕಾರ, 1484ರ ಅವಧಿಯಲ್ಲಿ ತಿಮ್ಮಣ್ಣನಾಯಕನಿಗೆ ವಿಜಯನಗರದ ಅರಸರು ಅನುಮತಿ ನೀಡಿ ಕಳಸ್ತವಾಡಿಯಲ್ಲಿದ್ದ 100 ಜೈನಬಸದಿಗಳನ್ನು ಒಡೆದುಹಾಕುತ್ತಾರೆ. ನಂತರ ಇಲ್ಲಿನ ಜೈನ ಬಸದಿಗಳಿಂದ ಕಲ್ಲು, ಮರದ ವಸ್ತುಗಳನ್ನು ತೆಗೆದುಕೊಂಡು ಹೋಗಿ ಶ್ರೀರಂಗಪಟ್ಟಣದಲ್ಲಿರುವ ರಂಗನಾಥಸ್ವಾಮಿ ದೇವಸ್ಥಾನವನ್ನು ವಿಸ್ತಾರಗೊಳಿಸಲಾಗುತ್ತದೆ. ಮುತಾಲಿಕ್‌ ಅವರೇ ಇದನ್ನು ನಿಮ್ಮ ಬ್ರಿಟಿಷರೇ ಬರೆದಿದ್ದಾರೆ. ನೂರೊಂದು ಜೈನ ಬಸದಿ ಇತ್ತೆಂದು ಇಲ್ಲಿನ ಜನರಿಗೇ ಗೊತ್ತೇ ಇಲ್ಲ. ಹೊಸದಾಗಿ ಪ್ರತಿಷ್ಠಾಪನೆ ಮಾಡುತ್ತೀರಾ?” ಎಂದು ಕೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಭಶೀರರ ಯೋಗ್ಯತೆಗಳ ಅನಾವರಣ ತಿಳಿತಿದೆ ,ಶಾಂತಿದೂತರ ಬಣ್ಣ ಬಯಲು ಆಗಲೇ ಬೇಕಿದೆ.

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...