Homeಕರ್ನಾಟಕಮೈಸೂರಿನ ‘ಹದಿನಾರು’ ಗ್ರಾಮದಲ್ಲಿ ವೈಷ್ಣವ ದೇವಾಲಯದ ಗೋಡೆ ಕೆಡವಿದಾಗ ಸಿಕ್ಕಿತ್ತು ಜೈನ ವಿಗ್ರಹ!

ಮೈಸೂರಿನ ‘ಹದಿನಾರು’ ಗ್ರಾಮದಲ್ಲಿ ವೈಷ್ಣವ ದೇವಾಲಯದ ಗೋಡೆ ಕೆಡವಿದಾಗ ಸಿಕ್ಕಿತ್ತು ಜೈನ ವಿಗ್ರಹ!

- Advertisement -
- Advertisement -

ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ಹದಿನಾರು ಗ್ರಾಮದಲ್ಲಿ ನಾಲ್ಕು ವರ್ಷಗಳ ಹಿಂದೆ ವೈಷ್ಣವ ದೇವಾಲಯ (ಚೆನ್ನಕೇಶವ ದೇವಾಲಯ) ಕೆಡವಿದಾಗ ಜೈನ ವಿಗ್ರಹ ಪತ್ತೆಯಾಗಿತ್ತು ಎಂಬುದು ಚರ್ಚೆಯ ಮುನ್ನೆಲೆಗೆ ಬಂದಿದೆ.

ಟಿಪ್ಪು ಸುಲ್ತಾನ್‌ ಆಳ್ವಿಕೆಯ ಅವಧಿಯಲ್ಲಿ ದೇವಾಲಯವನ್ನು ಕೆಡವಿ ಶ್ರೀರಂಗಪಟ್ಟಣದ ಜಾಮಿಯಾ ಮಸೀದಿ ಕಟ್ಟಲಾಗಿದೆ ಎಂಬ ಚರ್ಚೆ ನಡೆಯುತ್ತಿದ್ದು, ಜೈನ ಹಾಗೂ ಬೌದ್ಧ ಧಾರ್ಮಿಕ ಕೇಂದ್ರಗಳ ಮೇಲೆ ವೈಷ್ಣವ ಹಾಗೂ ಶೈವ ದೇವಾಲಯಗಳನ್ನು ನಿರ್ಮಿಸಿರುವ ವಿಷಯಗಳೂ ಚರ್ಚೆಯಾಗುತ್ತಿವೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

‘ಟಿಪ್ಪು ಸುಲ್ತಾನ್’ ಹಾಗೂ ‘ಮೈಸೂರು ಇತಿಹಾಸ’ದ ಕುರಿತು ಆಳವಾಗಿ ಅಧ್ಯಯನ ಮಾಡಿದವರಾದ ಪ್ರೊ.ಪಿ.ವಿ.ನಂಜರಾಜ ಅರಸು ರವರು, ‘ನಾನುಗೌರಿ.ಕಾಂ’ ಜೊತೆ ಮಾತನಾಡಿ, ಜಾಮೀಯ ಮಸೀದಿ ಇತಿಹಾಸದ ಜೊತೆಗೆ ಹದಿನಾರು ಗ್ರಾಮದ ಚೆನ್ನಕೇಶವ ದೇವಾಲಯದ ಕುತಿತೂ ವಿವರಿಸಿದ್ದಾರೆ.

“ಶ್ರೀರಂಗಪಟ್ಟಣದಲ್ಲಿ ದೇವಸ್ಥಾನ ಇದ್ದದ್ದು ನಿಜ. ಒಂದು ರಾಜ್ಯದ ರಾಜಧಾನಿ ಅಂದಾಗ ಶತ್ರುಗಳ ದಾಳಿಯನ್ನು ಗಮನಿಸುತ್ತಿರಬೇಕಾಗುತ್ತದೆ. ಅದಕ್ಕಾಗಿ ಕಾವಲು ಗೋಪುರಗಳು ಬೇಕಾಗಿರುತ್ತವೆ. ಬ್ರಿಟಿಷರ ನಡುವೆ ಟಿಪ್ಪು ನಡೆಸಿದ ನಾಲ್ಕು ಆಂಗ್ಲೋ ಮೈಸೂರು ಯುದ್ಧದಲ್ಲೂ ಬ್ರಿಟಿಷರು ದಾಳಿ ಮಾಡಿದ್ದು ಮಳವಳ್ಳಿ ಕಡೆಯಿಂದ. ಮದ್ದೂರು, ಮಂಡ್ಯ ಕಡೆಯಿಂದ ಬರಲು ಸಾಧ್ಯವಾಗುತ್ತಿರಲಿಲ್ಲ. ಯಾಕೆಂದರೆ ನದಿ ದಾಟುವುದು ಕಷ್ಟವಿತ್ತು. ಹೀಗಾಗಿ ಮಳವಳ್ಳಿ ಮಾರ್ಗವನ್ನು ಬ್ರಿಟಿಷರು ಆಯ್ದುಕೊಂಡರು. ಹೀಗಾಗಿ ಕಾವಲು ಗೋಪುರಗಳನ್ನು ನಿರ್ಮಿಸಲಾಯಿತು. ಈ ಮಸೀದಿಯಲ್ಲಿನ ಕಾವಲು ಗೋಪುರದ ಒಳಗೆ 200 ಮೆಟ್ಟಿಲುಗಳಿವೆ. ಈಗ ಬೀಗ ಹಾಕಿದ್ದಾರೆ. ನೀವು ಬೀಗ ತೆಗೆಸಿ ಹೋಗಿ ನೋಡಿ. ಸುಮಾರು ನಲವತ್ತು ಮೈಲಿ ದೂರದ ಮಳವಳ್ಳಿವರೆಗೂ ನೋಡಬಹುದು. ಮತ್ತೆ ಈ ಕಡೆ ತಿರುಗಿ ನೋಡಿದರೆ ಮದ್ದೂರುವರೆಗೂ ನೋಡಬಹುದು. ಇದಕ್ಕಾಗಿ ದೇವಾಲಯವನ್ನು ಮಸೀದಿಯಾಗಿ ರೂಪಾಂತರಿಸುತ್ತಾನೆ. ಅಲ್ಲಿನ ಆಂಜನೇಯ ದೇವರನ್ನು ಕೋಟೆಗೆ ಸ್ಥಳಾಂತರಿಸುತ್ತಾನೆ” ಎಂದು ವಿವರಿಸಿದ ಅವರು, “ಹದಿನಾರು ಗ್ರಾಮದಲ್ಲಿ ವೈಷ್ಣವ ದೇವಾಲಯದ ಗೋಡೆಯನ್ನು ಒಡೆದಾಗ ಜೈನ ತೀರ್ಥಂಕರರ ವಿಗ್ರಹ ಪತ್ತೆಯಾಗಿದೆ. ಇಲ್ಲಿನ ಚೆನ್ನಕೇಶವ ದೇವಾಲಯ ಕೆಡವಿ ಬಸದಿಯನ್ನು ಮುತಾಲಿಕ್‌ ನಿರ್ಮಿಸುತ್ತಾರೆಯೇ?” ಎಂದು ಪ್ರಶ್ನಿಸಿದರು.

ಇದನ್ನೂ ಓದಿರಿ: ಟಿಪ್ಪು ಮತ್ತು ಮೈಸೂರು ಚರಿತ್ರೆ ಕುರಿತ ಎರಡು ಅಮೂಲ್ಯ ಬರಹಗಳು

ಇತಿಹಾಸವನ್ನು ಕೆದಕುತ್ತಾ ಹೋದರೆ ದೇವಾಲಯಗಳ ಅಡಿಯಲ್ಲಿ ಜೈನ ಹಾಗೂ ಬೌದ್ಧ ಧರ್ಮದ ಕುರುಹುಗಳು ಸಿಗುತ್ತವೆ ಎಂಬುದಕ್ಕೆ ಸಾಕಷ್ಟು ಉದಾಹರಣೆಗಳಿವೆ. ಇದಕ್ಕೆ ಪೂರಕವಾಗಿ ಹದಿನಾರು ಗ್ರಾಮದ ಇತಿಹಾಸವನ್ನು ಪ್ರೊ.ನಂಜರಾಜ ಅರಸು ಉಲ್ಲೇಖಿಸುತ್ತಾರೆ.

ಇದನ್ನೂ ಓದಿರಿ: ಫ್ಯಾಕ್ಟ್‌ಚೆಕ್: ಕರ್ನಾಟಕ ಹೈಕೋರ್ಟ್ ಟಿಪ್ಪು ಸುಲ್ತಾನ್‌ರನ್ನು ಜಿಹಾದಿ, ಅತ್ಯಾಚಾರಿ ಎಂದು ಕರೆದಿಲ್ಲ

“ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಹದಿನಾರು ಗ್ರಾಮದ ಇತಿಹಾಸವನ್ನು ಬರೆಯಲು ಹೊರಟಾಗ ಹಲವಾರು ಸಂಗತಿಗಳು ತೆರೆದುಕೊಂಡವು. ಯದುವಂಶರು ಹುಟ್ಟಿದ್ದು ಇದೇ ಗ್ರಾಮದಲ್ಲಿ ಎನ್ನುತ್ತಾರೆ. ಈ ಹಿಂದೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ, ಹದಿನಾರು ಗ್ರಾಮದ ನಿವಾಸಿ ಡಾ.ಎಚ್.ಸಿ.ಮಹದೇವಪ್ಪ ಅವರು ತಮ್ಮ ಅಧಿಕಾರವಧಿಯಲ್ಲಿ ಹದಿನಾರು ಗ್ರಾಮದ ಅಭಿವೃದ್ಧಿಗೆ, ದೇವಾಲಯಗಳ ಜೀರ್ಣೋದ್ಧಾರಕ್ಕೆ ಕ್ರಮ ವಹಿಸಿದರು. ಆಗ ಜೈನ ತೀರ್ಥಂಕರರ ವಿಗ್ರಹ ಪತ್ತೆಯಾಗಿತ್ತು” ಎಂದು ಹೇಳುತ್ತಾರೆ ನಂಜರಾಜ ಅರಸು.

“ಹದಿನಾರು ಗ್ರಾಮದಲ್ಲಿ ಚೆನ್ನಕೇಶವ ದೇವಾಲಯವಿದೆ. ಅದು ವೈಷ್ಣವ ದೇವರು. ವಿಜಯನಗರ ಕಾಲದ ವಾಸ್ತುಶಿಲ್ಪ ಶೈಲಿಯಲ್ಲಿ ದೇವಾಲಯವನ್ನು ಕಾಣಬಹುದು. ದೇವಾಲಯದ ಗೋಡೆಗಳು ಶಿಥಿಲವಾಗಿದ್ದರಿಂದ ಹೊಸದಾಗಿಯೇ ಕಟ್ಟಲು ಅಂದಿನ ಸಚಿವ ಮಹದೇವಪ್ಪ ಸೂಚಿಸಿದರು. ಗರ್ಭಗುಡಿಯಲ್ಲಿನ ದೇವರನ್ನು ಗೋಣಿಚೀಲ, ಟಾರ್ಪಲ್‌ ಇತ್ಯಾದಿಗಳಿಂದ ಮುಚ್ಚಿ ಸುರಕ್ಷಿತವಾಗಿಟ್ಟು ಗೋಡೆಗಳನ್ನು ಒಡೆಯಲಾಯಿತು. ಹೊಸದಾಗಿ ಗೋಡೆ ನಿರ್ಮಿಸಲು ಒಂದು ಬದಿಯ ಗೋಡೆಯ ಬಳಿ ಆರು ಅಡಿ ಅಗೆದಾಗ ತೀರ್ಥಂಕರರ ಅರ್ಧಭಾಗ (ಸೊಂಟದ ಮೇಲಿನ ಭಾಗ) ಸಿಕ್ಕಿತು. ಇನ್ನೊಂದು ಗೋಡೆ ಒಡೆದಾಗ ಸೊಂಟದಿಂದ ಕೆಳಭಾಗ ಸಿಕ್ಕಿತು. ಅಂದರೆ ಇಲ್ಲಿ ಮೊದಲು ಜೈನರ ಬಸದಿ ಇತ್ತು. ಅದನ್ನು ವೈಷ್ಣವರು ಒಡೆದುಹಾಕಿದ್ದಾರೆ. ತೀರ್ಥಂಕರರ ವಿಗ್ರಹವನ್ನು ಅಲ್ಲಿಯೇ ಮುಚ್ಚಿಹಾಕಿ ವಿಷ್ಣು ದೇವಾಲಯ ಕಟ್ಟಿದ್ದಾರೆ ಎಂದಾಯಿತಲ್ಲ. ಮುತಾಲಿಕ್ ಹಾಗೂ ಕೆಲವು ಸ್ವಾಮೀಜಿಗಳು ಚೆನ್ನಕೇಶವನ ವಿಗ್ರಹ ತೆರವು ಮಾಡಿ, ಪಾರ್ಶ್ವನಾಥರ ವಿಗ್ರಹವನ್ನು ಪ್ರತಿಷ್ಠಾಪಿಸಬೇಕಲ್ಲವೇ?” ಎಂದು ಪ್ರಶ್ನಿಸಿದರು.

“ನನಗೆ ಯಾವ ದೇವರ ಬಗ್ಗೆಯೂ ಆಸಕ್ತಿ ಇಲ್ಲ. ಆದರೆ ಮಸೀದಿ ಒಡೆದು ದೇವಸ್ಥಾನ ಮಾಡುತ್ತೇವೆ ಎನ್ನುತ್ತಾರಲ್ಲ. ಹದಿನಾರು ಗ್ರಾಮದಲ್ಲಿ ಯಾವುದನ್ನು ಒಡೆಯುತ್ತಾರೆ? ಮೈಸೂರಿನಿಂದ ಪಶ್ಚಿಮವಾಹಿನಿಗೆ ಹೊರಟರೆ ದಾರಿಯಲ್ಲಿ ಕಳಸ್ತವಾಡಿ ಎಂಬ ಗ್ರಾಮ ಸಿಗುತ್ತದೆ. ಮುತಾಲಿಕ್‌ ಉಲ್ಲೇಖಿಸುವ ಬ್ರಿಟಿಷರೇ ಬರೆದ ಪ್ರಕಾರ, 1484ರ ಅವಧಿಯಲ್ಲಿ ತಿಮ್ಮಣ್ಣನಾಯಕನಿಗೆ ವಿಜಯನಗರದ ಅರಸರು ಅನುಮತಿ ನೀಡಿ ಕಳಸ್ತವಾಡಿಯಲ್ಲಿದ್ದ 100 ಜೈನಬಸದಿಗಳನ್ನು ಒಡೆದುಹಾಕುತ್ತಾರೆ. ನಂತರ ಇಲ್ಲಿನ ಜೈನ ಬಸದಿಗಳಿಂದ ಕಲ್ಲು, ಮರದ ವಸ್ತುಗಳನ್ನು ತೆಗೆದುಕೊಂಡು ಹೋಗಿ ಶ್ರೀರಂಗಪಟ್ಟಣದಲ್ಲಿರುವ ರಂಗನಾಥಸ್ವಾಮಿ ದೇವಸ್ಥಾನವನ್ನು ವಿಸ್ತಾರಗೊಳಿಸಲಾಗುತ್ತದೆ. ಮುತಾಲಿಕ್‌ ಅವರೇ ಇದನ್ನು ನಿಮ್ಮ ಬ್ರಿಟಿಷರೇ ಬರೆದಿದ್ದಾರೆ. ನೂರೊಂದು ಜೈನ ಬಸದಿ ಇತ್ತೆಂದು ಇಲ್ಲಿನ ಜನರಿಗೇ ಗೊತ್ತೇ ಇಲ್ಲ. ಹೊಸದಾಗಿ ಪ್ರತಿಷ್ಠಾಪನೆ ಮಾಡುತ್ತೀರಾ?” ಎಂದು ಕೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಭಶೀರರ ಯೋಗ್ಯತೆಗಳ ಅನಾವರಣ ತಿಳಿತಿದೆ ,ಶಾಂತಿದೂತರ ಬಣ್ಣ ಬಯಲು ಆಗಲೇ ಬೇಕಿದೆ.

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...