Homeಮುಖಪುಟಜೈಪುರ:  ಗ್ಯಾಸ್ ಟ್ಯಾಂಕರ್ ಇತರ ವಾಹನಗಳಿಗೆ ಡಿಕ್ಕಿ;  9 ಸಾವು

ಜೈಪುರ:  ಗ್ಯಾಸ್ ಟ್ಯಾಂಕರ್ ಇತರ ವಾಹನಗಳಿಗೆ ಡಿಕ್ಕಿ;  9 ಸಾವು

- Advertisement -
- Advertisement -

ಜೈಪುರ: ಇಲ್ಲಿನ ಜೈಪುರ-ಅಜ್ಮೀರ್ ಹೆದ್ದಾರಿಯಲ್ಲಿ ಗ್ಯಾಸ್ ಟ್ಯಾಂಕರ್ ಮತ್ತು ಹಲವು ವಾಹನಗಳ ನಡುವೆ ಸಂಭವಿಸಿದ ಭೀಕರ ಡಿಕ್ಕಿಯಿಂದಾಗಿ 9 ಮಂದಿ ಸಾವನ್ನಪ್ಪಿರುವ ಘಟನೆ ಶುಕ್ರವಾರ ಬೆಳಗ್ಗೆ ಸಂಭವಿಸಿದೆ.

ಘಟನೆಯಲ್ಲಿ 35 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಮತ್ತು 30 ಕ್ಕೂ ಹೆಚ್ಚು ವಾಹನಗಳಿಗೆ ಬೆಂಕಿ ಹೊತ್ತಿಕೊಂಡಿದ್ದು, ದಟ್ಟವಾದ ಕಪ್ಪು ಹೊಗೆ ಅವರಿಸಿದೆ. ಆಂಬ್ಯುಲೆನ್ಸ್ ಮತ್ತು ಅಗ್ನಿಶಾಮಕ ದಳದ ವಾಹನಗಳು ಅಪಘಾತದ  ನಡೆದ ಸ್ಥಳಕ್ಕೆ ಧಾವಿಸುತ್ತಿದ್ದಂತೆ ಸುಮಾರು ಒಂದು ಕಿಲೋಮೀಟರ್ ದೂರದಿಂದ ಬೆಂಕಿ ಕಾಣಿಸಿಕೊಂಡಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ವಿದ್ಯಾರ್ಥಿಗಳನ್ನು ಕರೆದೊಯ್ಯಲು ಹೋಗುತ್ತಿದ್ದ ಶಾಲಾ ವ್ಯಾನ್ ಚಾಲಕನೊಬ್ಬ ಬೆಂಕಿಯಲ್ಲಿ ಸುಟ್ಟು ಕರಕಲಾದ ದೃಶ್ಯವನ್ನು ವ್ಯಕ್ತಿಯೊಬ್ಬ ಚಿತ್ರಿಕರಿಸಿದ್ದಾನೆ.

ಅಪಘಾತದಲ್ಲಿ 9 ಮಂದಿ ಸಾವನ್ನಪ್ಪಿದ್ದು, 35ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ರಾಜಸ್ಥಾನದ ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಕೆಲವರು ವಾಹನದಿಂದ ಹೊರಬರಲಾಗದೆ ಒಳಗೆ ಸುಟ್ಟು ಕರಕಲಾದ ಸಾಧ್ಯತೆಗಳಿವೆ. ಎಲ್ಲ ವಾಹನಗಳನ್ನು ಕೂಲಂಕುಷವಾಗಿ ಪರಿಶೀಲಿಸಿದ ಬಳಿಕ ಪರಿಸ್ಥಿತಿ ತಿಳಿಯಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ರಾಜಸ್ಥಾನ ಮುಖ್ಯಮಂತ್ರಿ ಭಜನ್‌ಲಾಲ್ ಶರ್ಮಾ ಮತ್ತು ಆರೋಗ್ಯ ಸಚಿವ ಗಜೇಂದ್ರ ಸಿಂಗ್ ಖಿಮ್ಸರ್ ಅವರು ಗಾಯಾಳುಗಳನ್ನು ದಾಖಲಿಸಲಾಗಿರುವ ಎಸ್‌ಎಂಎಸ್ ಆಸ್ಪತ್ರೆಗೆ ಧಾವಿಸಿದ್ದಾರೆ. ಶರ್ಮಾ ಅವರು ಆಡಳಿತ ಅಧಿಕಾರಿಗಳು ಮತ್ತು ವೈದ್ಯರೊಂದಿಗೆ ಮಾತನಾಡಿ, ಸೂಕ್ತ ಚಿಕಿತ್ಸೆಗೆ ಅನುಕೂಲವಾಗುವಂತೆ ನಿರ್ದೇಶನಗಳನ್ನು ನೀಡಿದ್ದಾರೆ. ನಂತರ ಅವರು ಅಪಘಾತ ಸ್ಥಳಕ್ಕೆ ಭೇಟಿ ನೀಡಿ ಪೊಲೀಸ್ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದರು.

ಮುಖ್ಯಮಂತ್ರಿ ತಮ್ಮ ಎಕ್ಸ್‌ನಲ್ಲಿ ಹಿಂದಿಯಲ್ಲಿ ಬರೆದ ಪೋಸ್ಟ್‌ನಲ್ಲಿ, ಜೈಪುರ-ಅಜ್ಮೀರ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಗ್ಯಾಸ್ ಟ್ಯಾಂಕರ್ ಡಿಕ್ಕಿ ಘಟನೆಯಿಂದಾದ ಸಾವುನೋವುಗಳ ಸುದ್ದಿ ಕೇಳಿ ತೀವ್ರ ದುಃಖವಾಗಿದೆ. ಘಟನೆಯ ಬಗ್ಗೆ ಮಾಹಿತಿ ಬಂದ ತಕ್ಷಣ ನಾನು ಸ್ಥಳಕ್ಕೆ ಹೋದೆ. ವೈದ್ಯಕೀಯ ಸೌಲಭ್ಯಗಳನ್ನು ಒದಗಿಸುವಂತೆ ಮತ್ತು ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಎಸ್‌ಎಂಎಸ್ ಆಸ್ಪತ್ರೆಯ ವೈದ್ಯರಿಗೆ ಸೂಚಿಸಿದೆ.

ಜೈಪುರ ಪೊಲೀಸ್ ಆಯುಕ್ತ ಬಿಜು ಜಾರ್ಜ್ ಜೋಸೆಫ್ ಮತ್ತು ಇಲಾಖೆಯ ಇತರ ಅಧಿಕಾರಿಗಳು ದುರ್ಘಟನೆ ನಡೆದ ಹೆದ್ದಾರಿಯಲ್ಲಿ ಮೊಕಂ ಹೂಡಿದ್ದಾರೆ. ಆಸ್ಪತ್ರೆಗೆ ಕರೆತರಲಾದ ಸುಮಾರು ಅರ್ಧದಷ್ಟು ಗಾಯಾಳುಗಳ ಸ್ಥಿತಿ ತುಂಬಾ ಗಂಭೀರವಾಗಿದೆ ಎಂದು ಖಿಮ್ಸರ್ ಸುದ್ದಿಗಾರರಿಗೆ ತಿಳಿಸಿದ್ದಾರೆ.

“ಪರಿಸ್ಥಿತಿಯನ್ನು ನಿಭಾಯಿಸಲು ಎಲ್ಲಾ ವೈದ್ಯರು ಮತ್ತು ಶುಶ್ರೂಷಾ ಸಿಬ್ಬಂದಿಯನ್ನು ಕರೆಸಲಾಗಿದೆ. ರೋಗಿಗಳಿಗೆ ವಸತಿ ಕಲ್ಪಿಸಲು ಮತ್ತೊಂದು ವಾರ್ಡ್ ತೆರೆಯಲಾಗಿದೆ. ಕೆಲವರು ಹತ್ತಿರದ ಆಸ್ಪತ್ರೆಗಳಲ್ಲಿ ಪ್ರಾಥಮಿಕ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.

ಅಪಘಾತ ನಡೆದ ಸ್ಥಳದಿಂದ ಎಸ್‌ಎಂಎಸ್‌ ಆಸ್ಪತ್ರೆವರೆಗೆ ‘ಗ್ರೀನ್‌ ಕಾರಿಡಾರ್‌’ ವ್ಯವಸ್ಥೆ ಮಾಡಲಾಗಿದೆ ಎಂದು ಆರೋಗ್ಯ ಸಚಿವರು ತಿಳಿಸಿದರು.

ಅಪಘಾತ ಸಂಭವಿಸಿದಾಗ ರಾಜ್‌ಸಮಂದ್‌ನಿಂದ ಜೈಪುರಕ್ಕೆ ತೆರಳುತ್ತಿದ್ದ ಸ್ಲೀಪರ್ ಬಸ್ ಗ್ಯಾಸ್ ಟ್ಯಾಂಕರ್ ಹಿಂದೆ ಇತ್ತು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸುಟ್ಟ ವಾಹನಗಳನ್ನು ಹೆದ್ದಾರಿಯಿಂದ ತೆಗೆಯಲಾಗುತ್ತಿದ್ದು, ಸಂಚಾರ ಪುನರಾರಂಭಿಸಬಹುದಾಗಿದೆ. ಸಿಎಂ ಶರ್ಮಾ, ರಾಜ್ಯಪಾಲ ಹರಿಭಾವು ಬಗಾಡೆ ಮತ್ತು ಮಾಜಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅಪಘಾತದಲ್ಲಿ ಜೀವಹಾನಿಗೆ ಸಂತಾಪ ಸೂಚಿಸಿದ್ದಾರೆ. ಆರಂಭದಲ್ಲಿ ಬೆಂಕಿಯನ್ನು ಹತೋಟಿಗೆ ತರಲು ಕಷ್ಟವಾಯಿತು ಎಂದು ಬಂಕ್ರೋಟಾದ ಠಾಣಾಧಿಕಾರಿ ಮನೀಶ್ ಗುಪ್ತಾ ತಿಳಿಸಿದ್ದಾರೆ.

ಆಗ್ನಿಶಾಮಕ ದಳದ ತಂಡಗಳು ಆರಂಭದಲ್ಲಿ ಸುಟ್ಟುಹೋದ ವಾಹನಗಳ ಹತ್ತಿರ ತಲುಪಲು ಸಾಧ್ಯವಾಗಲಿಲ್ಲ. ಈ ಪ್ರದೇಶದಲ್ಲಿ ಮೂರು ಪೆಟ್ರೋಲ್ ಪಂಪ್‌ಗಳಿವೆ. ಆದರೆ ಅದೃಷ್ಟವಶಾತ್ ಅವು ಸುರಕ್ಷಿತವಾಗಿವೆ ಎಂದು ಅವರು ಹೇಳಿದ್ದಾರೆ.

ಸಂತ್ರಸ್ತರನ್ನು ಆಸ್ಪತ್ರೆಗೆ ಸಾಗಿಸಲು 25ಕ್ಕೂ ಹೆಚ್ಚು ಆಂಬ್ಯುಲೆನ್ಸ್‌ಗಳನ್ನು ಬಳಸಲಾಗಿದೆ. ಅಪಘಾತದಿಂದಾಗಿ ಹೆದ್ದಾರಿಯ ಸುಮಾರು 300 ಮೀಟರ್ ಜನನಿಬಿಡ ಪ್ರದೇಶಕ್ಕೆ ಪರಿಣಾಮ ಬೀರಿದೆ. ಇದರಿಂದಾಗಿ ವಾಹನಗಳ ಉದ್ದನೆಯ ಸರತಿಗೆ ಕಾರಣವಾಯಿತು. ಹೆದ್ದಾರಿಯುದ್ದಕ್ಕೂ ಕೆಲವು ಸಂಸ್ಥೆಗಳಿಗೆ ಬೆಂಕಿ ಆವರಿಸಿದೆ. ಆದರೆ ನಿಜವಾದ ನಷ್ಟದ ವಿವರಗಳು ಇನ್ನೂ ಸ್ಪಷ್ಟವಾಗಿಲ್ಲ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಒಂದು ಕಿಲೋಮೀಟರ್ ದೂರದಿಂದ ಜ್ವಾಲೆಗಳು ಗೋಚರಿಸುತ್ತಿವೆ ಮತ್ತು ಹೆದ್ದಾರಿಯಲ್ಲಿ ಭಯ ಮತ್ತು ಅವ್ಯವಸ್ಥೆ ಉಂಟಾಗಿದೆ ಎಂದು ಶಾಲಾ ವ್ಯಾನ್ ಚಾಲಕ ತಿಳಿಸಿದ್ದಾರೆ.

ನಾನು ಸ್ಥಳಕ್ಕೆ ಹತ್ತಿರವಾಗುತ್ತಿದ್ದಂತೆ, ಜನರು ತರಾತುರಿಯಲ್ಲಿ ಓಡಿ ಬಂದು ಸಹಾಯಕ್ಕಾಗಿ ಕೂಗುತ್ತಿರುವುದನ್ನು ನಾನು ನೋಡಿದೆ. ಒಬ್ಬ ವ್ಯಕ್ತಿ ಬೆಂಕಿಯಲ್ಲಿ ಬೆಂದುಹೋಗುತ್ತಿರುವುದನ್ನು ನೋಡಿದೆ. ಇದು ಭಯಾನಕ ದೃಶ್ಯವಾಗಿತ್ತು. ಅಗ್ನಿಶಾಮಕ ದಳಗಳು ಮತ್ತು ಆಂಬ್ಯುಲೆನ್ಸ್‌ಗಳು ಅಲ್ಲಿದ್ದವು. ಆದರೆ ಅವರಿಗೆ ದುರ್ಘಟನೆಯ ಸ್ಥಳಕ್ಕೆ ತಲುಪಲು ಕಷ್ಟವಾಯಿತು ಎಂದು ಅವರು ಹೇಳಿದರು.

ಸಂತ್ರಸ್ತರ ಕುಟುಂಬ ಸದಸ್ಯರಿಗೆ ಸಹಾಯ ಮಾಡಲು ಜಿಲ್ಲಾಡಳಿತದ ತಂಡ ಸಜ್ಜುಗೊಂಡಿದೆ. ಜನರು ವಿಚಾರಣೆ ಅಥವಾ ಸೂಕ್ತ ಮಾಹಿತಿಗಾಗಿ ಸಂಪರ್ಕಿಸಲು ಜೈಪುರ ಪೊಲೀಸರು ಸಹಾಯವಾಣಿ ಸಂಖ್ಯೆ 9166347551, 8764688431 ಮತ್ತು 7300363636 ಅನ್ನು ಬಿಡುಗಡೆ ಮಾಡಿದ್ದಾರೆ.

ಇದನ್ನೂ ಓದಿ…ಚಿಕ್ಕಮಗಳೂರು | ದೇವಾಲಯ ಪ್ರವೇಶಿಸಿದ ದಲಿತರಿಗೆ 2.50 ಲಕ್ಷ ರೂ. ದಂಡ ವಿಧಿಸಿದ ಸವರ್ಣೀಯರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಊನಾ ದಲಿತ ದೌರ್ಜನ್ಯ ಪ್ರಕರಣ: ಐವರು ದೋಷಿಗಳೆಂದು ತೀರ್ಪು ನೀಡಿದ ನ್ಯಾಯಾಲಯ; 37 ಆರೋಪಿಗಳು ಖುಲಾಸೆ

ದೇಶದಲ್ಲಿ ನಡೆಯುತ್ತಿರುವ ದಲಿತ ದೌರ್ಜನ್ಯ ಪ್ರಕರಣಗಳಲ್ಲಿ ಭಾರಿ ಸಂಚಲನ ಸೃಷ್ಟಿಸಿದ್ದ ಗುಜರಾತ್‌ನ ಊನಾ ದಲಿತರ ಮೇಲೆ ಹಲ್ಲೆ ಪ್ರಕರಣದಲ್ಲಿ, ಗಿರ್ ಸೋಮನಾಥ್ ಜಿಲ್ಲೆಯ ವೆರಾವಲ್ ನ್ಯಾಯಾಲಯವು ಸೋಮವಾರ ತನ್ನ ತೀರ್ಪು ನೀಡಿದ್ದು,...

ರಾಜ್ಯಸಭೆ ಚುನಾವಣೆ : ಬಿಹಾರದ ಎಲ್ಲಾ ಐದು ಸ್ಥಾನಗಳು ಎನ್‌ಡಿಎ ಪಾಲು; ಒಡಿಶಾದ ಮೂರು ಸ್ಥಾನಗಳಲ್ಲಿ ಗೆಲುವು

ರಾಜ್ಯಸಭೆಯ 37 ಸ್ಥಾನಗಳಿಗೆ ಸೋಮವಾರ (ಮಾ.16) ನಡೆದ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟ 21 ಸ್ಥಾನಗಳನ್ನು ಗೆದ್ದುಕೊಂಡಿದೆ. ಈ ಪೈಕಿ ಬಿಜೆಪಿ ಮಾತ್ರ 11 ಸ್ಥಾನಗಳನ್ನು ಪಡೆದಿದೆ. ವಿಪಕ್ಷಗಳ ಇಂಡಿಯಾ ಮೈತ್ರಿಕೂಟ ಒಟ್ಟು 11 ಸ್ಥಾನಗಳನ್ನು...

ಅಫ್ಘಾನಿಸ್ತಾನದ ಆಸ್ಪತ್ರೆ ಮೇಲೆ ಪಾಕಿಸ್ತಾನದಿಂದ ವಾಯುದಾಳಿ ; ಕನಿಷ್ಠ 400 ಸಾವು : ವರದಿ

ರಾಜಧಾನಿ ಕಾಬೂಲ್‌ನಲ್ಲಿ ಮಾದಕ ವ್ಯಸನಿಗಳಿಗೆ ಚಿಕಿತ್ಸೆ ನೀಡುತ್ತಿದ್ದ ಆಸ್ಪತ್ರೆಯ ಮೇಲೆ ಪಾಕಿಸ್ತಾನದ ಮಿಲಿಟರಿ ವಾಯು ದಾಳಿ ನಡೆಸಿದ್ದು, ಕನಿಷ್ಠ 400 ಜನರು ಸಾವನ್ನಪ್ಪಿದ್ದಾರೆ ಎಂದು ಅಫ್ಘಾನಿಸ್ತಾನ ಆರೋಪಿಸಿದೆ. ಅಲ್‌-ಜಝೀರಾ ವರದಿಯ ಪ್ರಕಾರ, ಅಫ್ಘಾನಿಸ್ತಾನದ ಆರೋಪವನ್ನು...

‘ನನ್ನ ಮನೆ ಮೇಲೆ ದಾಳಿ ಮಾಡಿ… ಹೇಗೆ ಎದುರಿಸಬೇಕೆಂದು ಗೊತ್ತಿದೆ..’; ಬಿಜೆಪಿಗೆ ಮಮತಾ ಬ್ಯಾನರ್ಜಿ ಸವಾಲು

"ತಮ್ಮ ನಿವಾಸ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ನಾಯಕರ ನಿವಾಸವನ್ನು ಗುರಿಯಾಗಿಸಿಕೊಳ್ಳುವಂತೆ" ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಬಿಜೆಪಿಗೆ ಸವಾಲು ಹಾಕಿದರು. ರಾಜ್ಯದಲ್ಲಿ, ಟಿಎಂಸಿ ನಾಯಕರ ಮೇಲಿನ ದಾಳಿಗೆ...

ಬೆಂಗಳೂರು: ವಿಶೇಷ ಪೂಜೆ ಹೆಸರಿನಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ವಂಚನೆ: 59 ವರ್ಷದ ‘ಗಿಳಿ ಶಾಸ್ತ್ರ’ ಹೇಳುವ ವ್ಯಕ್ತಿ ಬಂಧನ

ಬೆಂಗಳೂರು: ವಿಶೇಷ ಪೂಜೆ ಮಾಡುವುದಾಗಿ ಹೇಳಿಕೊಂಡು ಆದಾಯ ತೆರಿಗೆ ಅಧಿಕಾರಿಗೆ 35 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ತಮಿಳುನಾಡು ಮೂಲದ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಥೇಣಿಯ ಶೇಖರ್...

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...

ರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ; ಪ್ರತಿಪಕ್ಷ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದ ಸರ್ಕಾರ !

ನವದೆಹಲಿ: ರಾಜ್ಯಸಭೆಯಲ್ಲಿ ಸೋಮವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್‌ಪಿಜಿ ಕೊರತೆಯ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಅಡುಗೆ ಅನಿಲದ ಬಿಕ್ಕಟ್ಟು ಮತ್ತು ಕಾಳಸಂತೆಕೋರತನವನ್ನು ತಡೆಯಲು ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು...

ಬೆಂಗಳೂರು| ಹಣ ನೀಡಲು ನಿರಾಕರಿಸಿದ ವ್ಯಕ್ತಿಯನ್ನು ಮಕ್ಕಳ ಮುಂದೆಯೇ ಥಳಿಸಿ ಕೊಂದ ಗುಂಪು

ಹಣ ನೀಡಲು ನಿರಾಕರಿಸಿದ ತಂದೆಯನ್ನು ಮಕ್ಕಳ ಮುಂದೆಯೇ ಗುಂಪೊಂದು ಥಳಿಸಿ ಕೊಂದಿರುವ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ. ವಿಲ್ಸನ್ ಗಾರ್ಡನ್‌ನ ಬಡಾ ಮಕನ್ ರಸ್ತೆ ಬಳಿ ರಶೀದ್ ಪಾಷಾ ಎಂದು...

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...

ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್

ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ದ ಸೋಮವಾರ (ಮಾ.16) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಸದನವನ್ನು ಮುಂದೂಡಿಕೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯಲ್ಲಿ...