Homeಮುಖಪುಟಜೈಪುರ:  ಗ್ಯಾಸ್ ಟ್ಯಾಂಕರ್ ಇತರ ವಾಹನಗಳಿಗೆ ಡಿಕ್ಕಿ;  9 ಸಾವು

ಜೈಪುರ:  ಗ್ಯಾಸ್ ಟ್ಯಾಂಕರ್ ಇತರ ವಾಹನಗಳಿಗೆ ಡಿಕ್ಕಿ;  9 ಸಾವು

- Advertisement -
- Advertisement -

ಜೈಪುರ: ಇಲ್ಲಿನ ಜೈಪುರ-ಅಜ್ಮೀರ್ ಹೆದ್ದಾರಿಯಲ್ಲಿ ಗ್ಯಾಸ್ ಟ್ಯಾಂಕರ್ ಮತ್ತು ಹಲವು ವಾಹನಗಳ ನಡುವೆ ಸಂಭವಿಸಿದ ಭೀಕರ ಡಿಕ್ಕಿಯಿಂದಾಗಿ 9 ಮಂದಿ ಸಾವನ್ನಪ್ಪಿರುವ ಘಟನೆ ಶುಕ್ರವಾರ ಬೆಳಗ್ಗೆ ಸಂಭವಿಸಿದೆ.

ಘಟನೆಯಲ್ಲಿ 35 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಮತ್ತು 30 ಕ್ಕೂ ಹೆಚ್ಚು ವಾಹನಗಳಿಗೆ ಬೆಂಕಿ ಹೊತ್ತಿಕೊಂಡಿದ್ದು, ದಟ್ಟವಾದ ಕಪ್ಪು ಹೊಗೆ ಅವರಿಸಿದೆ. ಆಂಬ್ಯುಲೆನ್ಸ್ ಮತ್ತು ಅಗ್ನಿಶಾಮಕ ದಳದ ವಾಹನಗಳು ಅಪಘಾತದ  ನಡೆದ ಸ್ಥಳಕ್ಕೆ ಧಾವಿಸುತ್ತಿದ್ದಂತೆ ಸುಮಾರು ಒಂದು ಕಿಲೋಮೀಟರ್ ದೂರದಿಂದ ಬೆಂಕಿ ಕಾಣಿಸಿಕೊಂಡಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ವಿದ್ಯಾರ್ಥಿಗಳನ್ನು ಕರೆದೊಯ್ಯಲು ಹೋಗುತ್ತಿದ್ದ ಶಾಲಾ ವ್ಯಾನ್ ಚಾಲಕನೊಬ್ಬ ಬೆಂಕಿಯಲ್ಲಿ ಸುಟ್ಟು ಕರಕಲಾದ ದೃಶ್ಯವನ್ನು ವ್ಯಕ್ತಿಯೊಬ್ಬ ಚಿತ್ರಿಕರಿಸಿದ್ದಾನೆ.

ಅಪಘಾತದಲ್ಲಿ 9 ಮಂದಿ ಸಾವನ್ನಪ್ಪಿದ್ದು, 35ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ರಾಜಸ್ಥಾನದ ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಕೆಲವರು ವಾಹನದಿಂದ ಹೊರಬರಲಾಗದೆ ಒಳಗೆ ಸುಟ್ಟು ಕರಕಲಾದ ಸಾಧ್ಯತೆಗಳಿವೆ. ಎಲ್ಲ ವಾಹನಗಳನ್ನು ಕೂಲಂಕುಷವಾಗಿ ಪರಿಶೀಲಿಸಿದ ಬಳಿಕ ಪರಿಸ್ಥಿತಿ ತಿಳಿಯಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ರಾಜಸ್ಥಾನ ಮುಖ್ಯಮಂತ್ರಿ ಭಜನ್‌ಲಾಲ್ ಶರ್ಮಾ ಮತ್ತು ಆರೋಗ್ಯ ಸಚಿವ ಗಜೇಂದ್ರ ಸಿಂಗ್ ಖಿಮ್ಸರ್ ಅವರು ಗಾಯಾಳುಗಳನ್ನು ದಾಖಲಿಸಲಾಗಿರುವ ಎಸ್‌ಎಂಎಸ್ ಆಸ್ಪತ್ರೆಗೆ ಧಾವಿಸಿದ್ದಾರೆ. ಶರ್ಮಾ ಅವರು ಆಡಳಿತ ಅಧಿಕಾರಿಗಳು ಮತ್ತು ವೈದ್ಯರೊಂದಿಗೆ ಮಾತನಾಡಿ, ಸೂಕ್ತ ಚಿಕಿತ್ಸೆಗೆ ಅನುಕೂಲವಾಗುವಂತೆ ನಿರ್ದೇಶನಗಳನ್ನು ನೀಡಿದ್ದಾರೆ. ನಂತರ ಅವರು ಅಪಘಾತ ಸ್ಥಳಕ್ಕೆ ಭೇಟಿ ನೀಡಿ ಪೊಲೀಸ್ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದರು.

ಮುಖ್ಯಮಂತ್ರಿ ತಮ್ಮ ಎಕ್ಸ್‌ನಲ್ಲಿ ಹಿಂದಿಯಲ್ಲಿ ಬರೆದ ಪೋಸ್ಟ್‌ನಲ್ಲಿ, ಜೈಪುರ-ಅಜ್ಮೀರ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಗ್ಯಾಸ್ ಟ್ಯಾಂಕರ್ ಡಿಕ್ಕಿ ಘಟನೆಯಿಂದಾದ ಸಾವುನೋವುಗಳ ಸುದ್ದಿ ಕೇಳಿ ತೀವ್ರ ದುಃಖವಾಗಿದೆ. ಘಟನೆಯ ಬಗ್ಗೆ ಮಾಹಿತಿ ಬಂದ ತಕ್ಷಣ ನಾನು ಸ್ಥಳಕ್ಕೆ ಹೋದೆ. ವೈದ್ಯಕೀಯ ಸೌಲಭ್ಯಗಳನ್ನು ಒದಗಿಸುವಂತೆ ಮತ್ತು ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಎಸ್‌ಎಂಎಸ್ ಆಸ್ಪತ್ರೆಯ ವೈದ್ಯರಿಗೆ ಸೂಚಿಸಿದೆ.

ಜೈಪುರ ಪೊಲೀಸ್ ಆಯುಕ್ತ ಬಿಜು ಜಾರ್ಜ್ ಜೋಸೆಫ್ ಮತ್ತು ಇಲಾಖೆಯ ಇತರ ಅಧಿಕಾರಿಗಳು ದುರ್ಘಟನೆ ನಡೆದ ಹೆದ್ದಾರಿಯಲ್ಲಿ ಮೊಕಂ ಹೂಡಿದ್ದಾರೆ. ಆಸ್ಪತ್ರೆಗೆ ಕರೆತರಲಾದ ಸುಮಾರು ಅರ್ಧದಷ್ಟು ಗಾಯಾಳುಗಳ ಸ್ಥಿತಿ ತುಂಬಾ ಗಂಭೀರವಾಗಿದೆ ಎಂದು ಖಿಮ್ಸರ್ ಸುದ್ದಿಗಾರರಿಗೆ ತಿಳಿಸಿದ್ದಾರೆ.

“ಪರಿಸ್ಥಿತಿಯನ್ನು ನಿಭಾಯಿಸಲು ಎಲ್ಲಾ ವೈದ್ಯರು ಮತ್ತು ಶುಶ್ರೂಷಾ ಸಿಬ್ಬಂದಿಯನ್ನು ಕರೆಸಲಾಗಿದೆ. ರೋಗಿಗಳಿಗೆ ವಸತಿ ಕಲ್ಪಿಸಲು ಮತ್ತೊಂದು ವಾರ್ಡ್ ತೆರೆಯಲಾಗಿದೆ. ಕೆಲವರು ಹತ್ತಿರದ ಆಸ್ಪತ್ರೆಗಳಲ್ಲಿ ಪ್ರಾಥಮಿಕ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.

ಅಪಘಾತ ನಡೆದ ಸ್ಥಳದಿಂದ ಎಸ್‌ಎಂಎಸ್‌ ಆಸ್ಪತ್ರೆವರೆಗೆ ‘ಗ್ರೀನ್‌ ಕಾರಿಡಾರ್‌’ ವ್ಯವಸ್ಥೆ ಮಾಡಲಾಗಿದೆ ಎಂದು ಆರೋಗ್ಯ ಸಚಿವರು ತಿಳಿಸಿದರು.

ಅಪಘಾತ ಸಂಭವಿಸಿದಾಗ ರಾಜ್‌ಸಮಂದ್‌ನಿಂದ ಜೈಪುರಕ್ಕೆ ತೆರಳುತ್ತಿದ್ದ ಸ್ಲೀಪರ್ ಬಸ್ ಗ್ಯಾಸ್ ಟ್ಯಾಂಕರ್ ಹಿಂದೆ ಇತ್ತು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸುಟ್ಟ ವಾಹನಗಳನ್ನು ಹೆದ್ದಾರಿಯಿಂದ ತೆಗೆಯಲಾಗುತ್ತಿದ್ದು, ಸಂಚಾರ ಪುನರಾರಂಭಿಸಬಹುದಾಗಿದೆ. ಸಿಎಂ ಶರ್ಮಾ, ರಾಜ್ಯಪಾಲ ಹರಿಭಾವು ಬಗಾಡೆ ಮತ್ತು ಮಾಜಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅಪಘಾತದಲ್ಲಿ ಜೀವಹಾನಿಗೆ ಸಂತಾಪ ಸೂಚಿಸಿದ್ದಾರೆ. ಆರಂಭದಲ್ಲಿ ಬೆಂಕಿಯನ್ನು ಹತೋಟಿಗೆ ತರಲು ಕಷ್ಟವಾಯಿತು ಎಂದು ಬಂಕ್ರೋಟಾದ ಠಾಣಾಧಿಕಾರಿ ಮನೀಶ್ ಗುಪ್ತಾ ತಿಳಿಸಿದ್ದಾರೆ.

ಆಗ್ನಿಶಾಮಕ ದಳದ ತಂಡಗಳು ಆರಂಭದಲ್ಲಿ ಸುಟ್ಟುಹೋದ ವಾಹನಗಳ ಹತ್ತಿರ ತಲುಪಲು ಸಾಧ್ಯವಾಗಲಿಲ್ಲ. ಈ ಪ್ರದೇಶದಲ್ಲಿ ಮೂರು ಪೆಟ್ರೋಲ್ ಪಂಪ್‌ಗಳಿವೆ. ಆದರೆ ಅದೃಷ್ಟವಶಾತ್ ಅವು ಸುರಕ್ಷಿತವಾಗಿವೆ ಎಂದು ಅವರು ಹೇಳಿದ್ದಾರೆ.

ಸಂತ್ರಸ್ತರನ್ನು ಆಸ್ಪತ್ರೆಗೆ ಸಾಗಿಸಲು 25ಕ್ಕೂ ಹೆಚ್ಚು ಆಂಬ್ಯುಲೆನ್ಸ್‌ಗಳನ್ನು ಬಳಸಲಾಗಿದೆ. ಅಪಘಾತದಿಂದಾಗಿ ಹೆದ್ದಾರಿಯ ಸುಮಾರು 300 ಮೀಟರ್ ಜನನಿಬಿಡ ಪ್ರದೇಶಕ್ಕೆ ಪರಿಣಾಮ ಬೀರಿದೆ. ಇದರಿಂದಾಗಿ ವಾಹನಗಳ ಉದ್ದನೆಯ ಸರತಿಗೆ ಕಾರಣವಾಯಿತು. ಹೆದ್ದಾರಿಯುದ್ದಕ್ಕೂ ಕೆಲವು ಸಂಸ್ಥೆಗಳಿಗೆ ಬೆಂಕಿ ಆವರಿಸಿದೆ. ಆದರೆ ನಿಜವಾದ ನಷ್ಟದ ವಿವರಗಳು ಇನ್ನೂ ಸ್ಪಷ್ಟವಾಗಿಲ್ಲ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಒಂದು ಕಿಲೋಮೀಟರ್ ದೂರದಿಂದ ಜ್ವಾಲೆಗಳು ಗೋಚರಿಸುತ್ತಿವೆ ಮತ್ತು ಹೆದ್ದಾರಿಯಲ್ಲಿ ಭಯ ಮತ್ತು ಅವ್ಯವಸ್ಥೆ ಉಂಟಾಗಿದೆ ಎಂದು ಶಾಲಾ ವ್ಯಾನ್ ಚಾಲಕ ತಿಳಿಸಿದ್ದಾರೆ.

ನಾನು ಸ್ಥಳಕ್ಕೆ ಹತ್ತಿರವಾಗುತ್ತಿದ್ದಂತೆ, ಜನರು ತರಾತುರಿಯಲ್ಲಿ ಓಡಿ ಬಂದು ಸಹಾಯಕ್ಕಾಗಿ ಕೂಗುತ್ತಿರುವುದನ್ನು ನಾನು ನೋಡಿದೆ. ಒಬ್ಬ ವ್ಯಕ್ತಿ ಬೆಂಕಿಯಲ್ಲಿ ಬೆಂದುಹೋಗುತ್ತಿರುವುದನ್ನು ನೋಡಿದೆ. ಇದು ಭಯಾನಕ ದೃಶ್ಯವಾಗಿತ್ತು. ಅಗ್ನಿಶಾಮಕ ದಳಗಳು ಮತ್ತು ಆಂಬ್ಯುಲೆನ್ಸ್‌ಗಳು ಅಲ್ಲಿದ್ದವು. ಆದರೆ ಅವರಿಗೆ ದುರ್ಘಟನೆಯ ಸ್ಥಳಕ್ಕೆ ತಲುಪಲು ಕಷ್ಟವಾಯಿತು ಎಂದು ಅವರು ಹೇಳಿದರು.

ಸಂತ್ರಸ್ತರ ಕುಟುಂಬ ಸದಸ್ಯರಿಗೆ ಸಹಾಯ ಮಾಡಲು ಜಿಲ್ಲಾಡಳಿತದ ತಂಡ ಸಜ್ಜುಗೊಂಡಿದೆ. ಜನರು ವಿಚಾರಣೆ ಅಥವಾ ಸೂಕ್ತ ಮಾಹಿತಿಗಾಗಿ ಸಂಪರ್ಕಿಸಲು ಜೈಪುರ ಪೊಲೀಸರು ಸಹಾಯವಾಣಿ ಸಂಖ್ಯೆ 9166347551, 8764688431 ಮತ್ತು 7300363636 ಅನ್ನು ಬಿಡುಗಡೆ ಮಾಡಿದ್ದಾರೆ.

ಇದನ್ನೂ ಓದಿ…ಚಿಕ್ಕಮಗಳೂರು | ದೇವಾಲಯ ಪ್ರವೇಶಿಸಿದ ದಲಿತರಿಗೆ 2.50 ಲಕ್ಷ ರೂ. ದಂಡ ವಿಧಿಸಿದ ಸವರ್ಣೀಯರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...

ಪೋಕ್ಸೋ ಕೇಸ್ : ವಚನಾನಂದ ಸ್ವಾಮಿಯ ನಿರೀಕ್ಷಣಾ ಜಾಮೀನು ರದ್ದು

ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಸ್ವಾಮಿಗೆ ಸೆಷನ್ಸ್ ಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ಗುರುವಾರ (ಜೂನ್ 25) ರದ್ದುಗೊಳಿಸಿದೆ. ಅಲ್ಲದೆ, ಸೆಷನ್ಸ್ ಕೋರ್ಟ್ ಜಾಮೀನು ನೀಡಿದ ರೀತಿಯ ಬಗ್ಗೆ ತೀವ್ರ ಕಳವಳ ಮತ್ತು...

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...