Homeಮುಖಪುಟಜೈಪುರ:  ಗ್ಯಾಸ್ ಟ್ಯಾಂಕರ್ ಇತರ ವಾಹನಗಳಿಗೆ ಡಿಕ್ಕಿ;  9 ಸಾವು

ಜೈಪುರ:  ಗ್ಯಾಸ್ ಟ್ಯಾಂಕರ್ ಇತರ ವಾಹನಗಳಿಗೆ ಡಿಕ್ಕಿ;  9 ಸಾವು

- Advertisement -
- Advertisement -

ಜೈಪುರ: ಇಲ್ಲಿನ ಜೈಪುರ-ಅಜ್ಮೀರ್ ಹೆದ್ದಾರಿಯಲ್ಲಿ ಗ್ಯಾಸ್ ಟ್ಯಾಂಕರ್ ಮತ್ತು ಹಲವು ವಾಹನಗಳ ನಡುವೆ ಸಂಭವಿಸಿದ ಭೀಕರ ಡಿಕ್ಕಿಯಿಂದಾಗಿ 9 ಮಂದಿ ಸಾವನ್ನಪ್ಪಿರುವ ಘಟನೆ ಶುಕ್ರವಾರ ಬೆಳಗ್ಗೆ ಸಂಭವಿಸಿದೆ.

ಘಟನೆಯಲ್ಲಿ 35 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಮತ್ತು 30 ಕ್ಕೂ ಹೆಚ್ಚು ವಾಹನಗಳಿಗೆ ಬೆಂಕಿ ಹೊತ್ತಿಕೊಂಡಿದ್ದು, ದಟ್ಟವಾದ ಕಪ್ಪು ಹೊಗೆ ಅವರಿಸಿದೆ. ಆಂಬ್ಯುಲೆನ್ಸ್ ಮತ್ತು ಅಗ್ನಿಶಾಮಕ ದಳದ ವಾಹನಗಳು ಅಪಘಾತದ  ನಡೆದ ಸ್ಥಳಕ್ಕೆ ಧಾವಿಸುತ್ತಿದ್ದಂತೆ ಸುಮಾರು ಒಂದು ಕಿಲೋಮೀಟರ್ ದೂರದಿಂದ ಬೆಂಕಿ ಕಾಣಿಸಿಕೊಂಡಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ವಿದ್ಯಾರ್ಥಿಗಳನ್ನು ಕರೆದೊಯ್ಯಲು ಹೋಗುತ್ತಿದ್ದ ಶಾಲಾ ವ್ಯಾನ್ ಚಾಲಕನೊಬ್ಬ ಬೆಂಕಿಯಲ್ಲಿ ಸುಟ್ಟು ಕರಕಲಾದ ದೃಶ್ಯವನ್ನು ವ್ಯಕ್ತಿಯೊಬ್ಬ ಚಿತ್ರಿಕರಿಸಿದ್ದಾನೆ.

ಅಪಘಾತದಲ್ಲಿ 9 ಮಂದಿ ಸಾವನ್ನಪ್ಪಿದ್ದು, 35ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ರಾಜಸ್ಥಾನದ ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಕೆಲವರು ವಾಹನದಿಂದ ಹೊರಬರಲಾಗದೆ ಒಳಗೆ ಸುಟ್ಟು ಕರಕಲಾದ ಸಾಧ್ಯತೆಗಳಿವೆ. ಎಲ್ಲ ವಾಹನಗಳನ್ನು ಕೂಲಂಕುಷವಾಗಿ ಪರಿಶೀಲಿಸಿದ ಬಳಿಕ ಪರಿಸ್ಥಿತಿ ತಿಳಿಯಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ರಾಜಸ್ಥಾನ ಮುಖ್ಯಮಂತ್ರಿ ಭಜನ್‌ಲಾಲ್ ಶರ್ಮಾ ಮತ್ತು ಆರೋಗ್ಯ ಸಚಿವ ಗಜೇಂದ್ರ ಸಿಂಗ್ ಖಿಮ್ಸರ್ ಅವರು ಗಾಯಾಳುಗಳನ್ನು ದಾಖಲಿಸಲಾಗಿರುವ ಎಸ್‌ಎಂಎಸ್ ಆಸ್ಪತ್ರೆಗೆ ಧಾವಿಸಿದ್ದಾರೆ. ಶರ್ಮಾ ಅವರು ಆಡಳಿತ ಅಧಿಕಾರಿಗಳು ಮತ್ತು ವೈದ್ಯರೊಂದಿಗೆ ಮಾತನಾಡಿ, ಸೂಕ್ತ ಚಿಕಿತ್ಸೆಗೆ ಅನುಕೂಲವಾಗುವಂತೆ ನಿರ್ದೇಶನಗಳನ್ನು ನೀಡಿದ್ದಾರೆ. ನಂತರ ಅವರು ಅಪಘಾತ ಸ್ಥಳಕ್ಕೆ ಭೇಟಿ ನೀಡಿ ಪೊಲೀಸ್ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದರು.

ಮುಖ್ಯಮಂತ್ರಿ ತಮ್ಮ ಎಕ್ಸ್‌ನಲ್ಲಿ ಹಿಂದಿಯಲ್ಲಿ ಬರೆದ ಪೋಸ್ಟ್‌ನಲ್ಲಿ, ಜೈಪುರ-ಅಜ್ಮೀರ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಗ್ಯಾಸ್ ಟ್ಯಾಂಕರ್ ಡಿಕ್ಕಿ ಘಟನೆಯಿಂದಾದ ಸಾವುನೋವುಗಳ ಸುದ್ದಿ ಕೇಳಿ ತೀವ್ರ ದುಃಖವಾಗಿದೆ. ಘಟನೆಯ ಬಗ್ಗೆ ಮಾಹಿತಿ ಬಂದ ತಕ್ಷಣ ನಾನು ಸ್ಥಳಕ್ಕೆ ಹೋದೆ. ವೈದ್ಯಕೀಯ ಸೌಲಭ್ಯಗಳನ್ನು ಒದಗಿಸುವಂತೆ ಮತ್ತು ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಎಸ್‌ಎಂಎಸ್ ಆಸ್ಪತ್ರೆಯ ವೈದ್ಯರಿಗೆ ಸೂಚಿಸಿದೆ.

ಜೈಪುರ ಪೊಲೀಸ್ ಆಯುಕ್ತ ಬಿಜು ಜಾರ್ಜ್ ಜೋಸೆಫ್ ಮತ್ತು ಇಲಾಖೆಯ ಇತರ ಅಧಿಕಾರಿಗಳು ದುರ್ಘಟನೆ ನಡೆದ ಹೆದ್ದಾರಿಯಲ್ಲಿ ಮೊಕಂ ಹೂಡಿದ್ದಾರೆ. ಆಸ್ಪತ್ರೆಗೆ ಕರೆತರಲಾದ ಸುಮಾರು ಅರ್ಧದಷ್ಟು ಗಾಯಾಳುಗಳ ಸ್ಥಿತಿ ತುಂಬಾ ಗಂಭೀರವಾಗಿದೆ ಎಂದು ಖಿಮ್ಸರ್ ಸುದ್ದಿಗಾರರಿಗೆ ತಿಳಿಸಿದ್ದಾರೆ.

“ಪರಿಸ್ಥಿತಿಯನ್ನು ನಿಭಾಯಿಸಲು ಎಲ್ಲಾ ವೈದ್ಯರು ಮತ್ತು ಶುಶ್ರೂಷಾ ಸಿಬ್ಬಂದಿಯನ್ನು ಕರೆಸಲಾಗಿದೆ. ರೋಗಿಗಳಿಗೆ ವಸತಿ ಕಲ್ಪಿಸಲು ಮತ್ತೊಂದು ವಾರ್ಡ್ ತೆರೆಯಲಾಗಿದೆ. ಕೆಲವರು ಹತ್ತಿರದ ಆಸ್ಪತ್ರೆಗಳಲ್ಲಿ ಪ್ರಾಥಮಿಕ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.

ಅಪಘಾತ ನಡೆದ ಸ್ಥಳದಿಂದ ಎಸ್‌ಎಂಎಸ್‌ ಆಸ್ಪತ್ರೆವರೆಗೆ ‘ಗ್ರೀನ್‌ ಕಾರಿಡಾರ್‌’ ವ್ಯವಸ್ಥೆ ಮಾಡಲಾಗಿದೆ ಎಂದು ಆರೋಗ್ಯ ಸಚಿವರು ತಿಳಿಸಿದರು.

ಅಪಘಾತ ಸಂಭವಿಸಿದಾಗ ರಾಜ್‌ಸಮಂದ್‌ನಿಂದ ಜೈಪುರಕ್ಕೆ ತೆರಳುತ್ತಿದ್ದ ಸ್ಲೀಪರ್ ಬಸ್ ಗ್ಯಾಸ್ ಟ್ಯಾಂಕರ್ ಹಿಂದೆ ಇತ್ತು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸುಟ್ಟ ವಾಹನಗಳನ್ನು ಹೆದ್ದಾರಿಯಿಂದ ತೆಗೆಯಲಾಗುತ್ತಿದ್ದು, ಸಂಚಾರ ಪುನರಾರಂಭಿಸಬಹುದಾಗಿದೆ. ಸಿಎಂ ಶರ್ಮಾ, ರಾಜ್ಯಪಾಲ ಹರಿಭಾವು ಬಗಾಡೆ ಮತ್ತು ಮಾಜಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅಪಘಾತದಲ್ಲಿ ಜೀವಹಾನಿಗೆ ಸಂತಾಪ ಸೂಚಿಸಿದ್ದಾರೆ. ಆರಂಭದಲ್ಲಿ ಬೆಂಕಿಯನ್ನು ಹತೋಟಿಗೆ ತರಲು ಕಷ್ಟವಾಯಿತು ಎಂದು ಬಂಕ್ರೋಟಾದ ಠಾಣಾಧಿಕಾರಿ ಮನೀಶ್ ಗುಪ್ತಾ ತಿಳಿಸಿದ್ದಾರೆ.

ಆಗ್ನಿಶಾಮಕ ದಳದ ತಂಡಗಳು ಆರಂಭದಲ್ಲಿ ಸುಟ್ಟುಹೋದ ವಾಹನಗಳ ಹತ್ತಿರ ತಲುಪಲು ಸಾಧ್ಯವಾಗಲಿಲ್ಲ. ಈ ಪ್ರದೇಶದಲ್ಲಿ ಮೂರು ಪೆಟ್ರೋಲ್ ಪಂಪ್‌ಗಳಿವೆ. ಆದರೆ ಅದೃಷ್ಟವಶಾತ್ ಅವು ಸುರಕ್ಷಿತವಾಗಿವೆ ಎಂದು ಅವರು ಹೇಳಿದ್ದಾರೆ.

ಸಂತ್ರಸ್ತರನ್ನು ಆಸ್ಪತ್ರೆಗೆ ಸಾಗಿಸಲು 25ಕ್ಕೂ ಹೆಚ್ಚು ಆಂಬ್ಯುಲೆನ್ಸ್‌ಗಳನ್ನು ಬಳಸಲಾಗಿದೆ. ಅಪಘಾತದಿಂದಾಗಿ ಹೆದ್ದಾರಿಯ ಸುಮಾರು 300 ಮೀಟರ್ ಜನನಿಬಿಡ ಪ್ರದೇಶಕ್ಕೆ ಪರಿಣಾಮ ಬೀರಿದೆ. ಇದರಿಂದಾಗಿ ವಾಹನಗಳ ಉದ್ದನೆಯ ಸರತಿಗೆ ಕಾರಣವಾಯಿತು. ಹೆದ್ದಾರಿಯುದ್ದಕ್ಕೂ ಕೆಲವು ಸಂಸ್ಥೆಗಳಿಗೆ ಬೆಂಕಿ ಆವರಿಸಿದೆ. ಆದರೆ ನಿಜವಾದ ನಷ್ಟದ ವಿವರಗಳು ಇನ್ನೂ ಸ್ಪಷ್ಟವಾಗಿಲ್ಲ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಒಂದು ಕಿಲೋಮೀಟರ್ ದೂರದಿಂದ ಜ್ವಾಲೆಗಳು ಗೋಚರಿಸುತ್ತಿವೆ ಮತ್ತು ಹೆದ್ದಾರಿಯಲ್ಲಿ ಭಯ ಮತ್ತು ಅವ್ಯವಸ್ಥೆ ಉಂಟಾಗಿದೆ ಎಂದು ಶಾಲಾ ವ್ಯಾನ್ ಚಾಲಕ ತಿಳಿಸಿದ್ದಾರೆ.

ನಾನು ಸ್ಥಳಕ್ಕೆ ಹತ್ತಿರವಾಗುತ್ತಿದ್ದಂತೆ, ಜನರು ತರಾತುರಿಯಲ್ಲಿ ಓಡಿ ಬಂದು ಸಹಾಯಕ್ಕಾಗಿ ಕೂಗುತ್ತಿರುವುದನ್ನು ನಾನು ನೋಡಿದೆ. ಒಬ್ಬ ವ್ಯಕ್ತಿ ಬೆಂಕಿಯಲ್ಲಿ ಬೆಂದುಹೋಗುತ್ತಿರುವುದನ್ನು ನೋಡಿದೆ. ಇದು ಭಯಾನಕ ದೃಶ್ಯವಾಗಿತ್ತು. ಅಗ್ನಿಶಾಮಕ ದಳಗಳು ಮತ್ತು ಆಂಬ್ಯುಲೆನ್ಸ್‌ಗಳು ಅಲ್ಲಿದ್ದವು. ಆದರೆ ಅವರಿಗೆ ದುರ್ಘಟನೆಯ ಸ್ಥಳಕ್ಕೆ ತಲುಪಲು ಕಷ್ಟವಾಯಿತು ಎಂದು ಅವರು ಹೇಳಿದರು.

ಸಂತ್ರಸ್ತರ ಕುಟುಂಬ ಸದಸ್ಯರಿಗೆ ಸಹಾಯ ಮಾಡಲು ಜಿಲ್ಲಾಡಳಿತದ ತಂಡ ಸಜ್ಜುಗೊಂಡಿದೆ. ಜನರು ವಿಚಾರಣೆ ಅಥವಾ ಸೂಕ್ತ ಮಾಹಿತಿಗಾಗಿ ಸಂಪರ್ಕಿಸಲು ಜೈಪುರ ಪೊಲೀಸರು ಸಹಾಯವಾಣಿ ಸಂಖ್ಯೆ 9166347551, 8764688431 ಮತ್ತು 7300363636 ಅನ್ನು ಬಿಡುಗಡೆ ಮಾಡಿದ್ದಾರೆ.

ಇದನ್ನೂ ಓದಿ…ಚಿಕ್ಕಮಗಳೂರು | ದೇವಾಲಯ ಪ್ರವೇಶಿಸಿದ ದಲಿತರಿಗೆ 2.50 ಲಕ್ಷ ರೂ. ದಂಡ ವಿಧಿಸಿದ ಸವರ್ಣೀಯರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...

ನೇತ್ರಾವತಿ ತೀರದಲ್ಲಿ ‘ಅಂತರಗಂಗೆ’ಯಂತೆ ಹರಿಯುತ್ತಿರುವ ಪ್ರತಿರೋಧ: ವೇದವಲ್ಲಿಯಿಂದ ಸೌಜನ್ಯಳವರೆಗೆ ಪ್ರತಿಧ್ವನಿಸುತ್ತಿರುವ ಪ್ರಶ್ನೆ-‘ಕೊಂದವರು ಯಾರು?’

ಪ್ರಪಂಚದಾದ್ಯಂತ ಪಿತೃಪ್ರಧಾನ ವ್ಯವಸ್ಥೆ ಮತ್ತು ಪ್ರಭುತ್ವಗಳು ಹಲವು ರೀತಿಗಳಲ್ಲಿ ಮಹಿಳೆಯರನ್ನು ದಮನಿಸುವ ವಿಧಾನಗಳನ್ನು ಕಂಡುಕೊಂಡು ಕರಗತ ಮಾಡಿಕೊಂಡಿವೆ. ಅದರಲ್ಲಿ ಅತ್ಯಂತ ಪರಿಣಾಮಕಾರಿಯಾದುದು, ದೇವರು, ಭಕ್ತಿ ಮತ್ತು ಧರ್ಮದ ಹೆಸರಿನಲ್ಲಿ ಮಹಿಳೆಯರನ್ನು ದಮನಕ್ಕೊಳಪಡಿಸುವ ತಂತ್ರ....

ರೂ. 170 ಕೋಟಿ ದಂಡ ಪಾವತಿಸಲು ಮುಂದಾದ ಅದಾನಿ : ಏನಿದು ಪ್ರಕರಣ?

ಅಮೆರಿಕದ ನ್ಯಾಯಾಲಯದಲ್ಲಿ ದಾಖಲಾಗಿದ್ದ ವಂಚನೆ ಮತ್ತು ಲಂಚದ ಪ್ರಕರಣಕ್ಕೆ ಸಂಬಂಧಿಸಿದಂತೆ, ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಟ್ಟು 18 ಮಿಲಿಯನ್ ಡಾಲರ್ (ಸುಮಾರು 170 ಕೋಟಿ ರೂಪಾಯಿ) ದಂಡ ಪಾವತಿಸಲು ಒಪ್ಪಿಕೊಳ್ಳುವ ಮೂಲಕ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣದಲ್ಲಿ ಹಿಂದೂಗಳ ಪರ ತೀರ್ಪು…ಮಸೀದಿಯಲ್ಲ ದೇವಸ್ಥಾನವೆಂದ ಕೋರ್ಟ್ : ಏನಿದು ವಿವಾದ?

ಸುಮಾರು 100 ವರ್ಷಗಳ ಹಳೆಯ ವಿವಾದವಾದ ಭೋಜಶಾಲಾ-ಕಮಲ್ ಮೌಲಾ ಮಸೀದಿ ಪ್ರಕರಣದಲ್ಲಿ ಶುಕ್ರವಾರ (ಮೇ 15) ಮಧ್ಯಪ್ರದೇಶ ಹೈಕೋರ್ಟ್ ತೀರ್ಪು ನೀಡಿದ್ದು, ಭೋಜಶಾಲಾದಲ್ಲಿರುವ ಐತಿಹಾಸಿಕ ಸ್ಥಳವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು...

“ಮಹಿಳಾ ಮೀಸಲಾತಿ ಮುಖವಾಡದಲ್ಲಿ ಡಿಲಿಮಿಟೇಷನ್ ಕುತಂತ್ರ ವಿಫಲ” ಬಿಜೆಪಿಗೆ ದಕ್ಷಿಣ ಭಾರತದ ಎಚ್ಚರಿಕೆ

ಮೋದಿ ನೇತೃತ್ವದ ಕೇಂದ್ರ ಸರ್ಕಾರವು 2026ರ ಏಪ್ರಿಲ್ 16ರಂದು ಸಂಸತ್ತಿನ ವಿಶೇಷ ಅಧಿವೇಶನ ಕರೆದು, ಮಹಿಳಾ ಮೀಸಲಾತಿ ಅನುಷ್ಠಾನವನ್ನು ತ್ವರಿತಗೊಳಿಸುವ ನೆಪವನ್ನು ಮುಂದುಮಾಡಿ ಮೂರು ಮಸೂದೆಗಳನ್ನು ಮಂಡಿಸಿತು. ಇವುಗಳಲ್ಲಿ ಪ್ರಮುಖವಾದ ಸಂವಿಧಾನ (131ನೇ...

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...