HomeUncategorizedಮಾಂಸದ ಅಂಗಡಿಗಳಲ್ಲಿ 'ಜಟ್ಕಾ-ಹಲಾಲ್' ಚಿಹ್ನೆ ಕಡ್ಡಾಯಗೊಳಿಸಿದ ಜೈಪುರ ಮುನಿಸಿಪಲ್ ಕಾರ್ಪೊರೇಷನ್

ಮಾಂಸದ ಅಂಗಡಿಗಳಲ್ಲಿ ‘ಜಟ್ಕಾ-ಹಲಾಲ್’ ಚಿಹ್ನೆ ಕಡ್ಡಾಯಗೊಳಿಸಿದ ಜೈಪುರ ಮುನಿಸಿಪಲ್ ಕಾರ್ಪೊರೇಷನ್

- Advertisement -
- Advertisement -

ರಾಜಸ್ಥಾನದ ಜೈಪುರ ಮುನ್ಸಿಪಲ್ ಕಾರ್ಪೊರೇಷನ್ ಗ್ರೇಟರ್ ಪ್ರದೇಶದಲ್ಲಿ ಮಾಂಸ ಮಾರಾಟಗಾರರಿಗೆ ನೂತನ ಆದೇಶ ನೀಡಿದೆ. ಈ ಹೊಸ ನಿಯಮದ ಪ್ರಕಾರ, ಮಾಂಸದ ಅಂಗಡಿಗಳು ತಮ್ಮ ಅಂಗಡಿಗಳ ಹೊರಗೆ ‘ಝಟ್ಕಾ’ ಅಥವಾ ‘ಹಲಾಲ್’ ಚಿನ್ಹೆಯನ್ನು ಪ್ರದರ್ಶಿಸುವುದು ಈಗ ಕಡ್ಡಾಯವಾಗಿದೆ. ಈ ನಿರ್ಧಾರವನ್ನು ಬೃಹತ್ ಮಹಾನಗರ ಪಾಲಿಕೆಯ ಮೇಯರ್ ಡಾ. ಸೌಮ್ಯ ಗುರ್ಜರ್ ಅವರು ಅನುಮೋದಿಸಿದ್ದಾರೆ. ಕಾರ್ಯಕಾರಿ ಸಮಿತಿಯ ನಾಲ್ಕನೇ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎನ್ನಲಾಗಿದೆ.

ಇದರ ಜೊತೆಗೆ, ವಸತಿ ಪ್ರದೇಶಗಳಲ್ಲಿ ಮಾಂಸದ ಅಂಗಡಿಗಳನ್ನು ನಿಷೇಧಿಸಲಾಗಿದೆ. ವಾಣಿಜ್ಯ ಗುತ್ತಿಗೆಯನ್ನು ಹೊಂದಿದ್ದರೆ ಮಾತ್ರ ಮಾಂಸದ ಅಂಗಡಿಗಳಿಗೆ ಪರವಾನಗಿಗಳ ನವೀಕರಣವನ್ನು ನೀಡಲಾಗುವುದು. ಯೋಗಿ ಸರ್ಕಾರದ ಅಡಿಯಲ್ಲಿ ಉತ್ತರ ಪ್ರದೇಶದಲ್ಲಿ ಅಂಗಡಿಗಳ ಮೇಲೆ ನಾಮಫಲಕಗಳನ್ನು ಪ್ರದರ್ಶಿಸುವ ವಿಷಯವು ಪ್ರಸ್ತುತ ಚರ್ಚೆಯ ವಿಷಯವಾಗಿದೆ. ಆದರೆ, ಜೈಪುರವು ‘ಹಲಾಲ್’ ಮತ್ತು ‘ಜಟ್ಕಾ’ ಮಾಂಸದ ಚಿನ್ಹೆ ಪ್ರದರ್ಶಿಸುವ ನಿರ್ಧಾರವನ್ನು ತೆಗೆದುಕೊಂಡಿದೆ.

ನಗರದಲ್ಲಿ ವಾಣಿಜ್ಯ ಗುತ್ತಿಗೆ ಪತ್ರಗಳಿಲ್ಲದೆ ಕಾರ್ಯನಿರ್ವಹಿಸುತ್ತಿರುವ ಮಾಂಸದ ಅಂಗಡಿಗಳನ್ನು ಮುಚ್ಚಲಾಗುವುದು ಎಂದು ಜೈಪುರ ನಾಗರಿಕ ಸಂಸ್ಥೆ ಘೋಷಿಸಿದ ಕೆಲವು ದಿನಗಳ ನಂತರ ಹೊಸ ಆದೇಶ ಬಂದಿದೆ. ಮಹಾನಗರ ಪಾಲಿಕೆಯಲ್ಲಿ ಬಾಕಿ ಉಳಿದಿರುವ ಗುತ್ತಿಗೆ ಅರ್ಜಿಗಳನ್ನು ತಿಂಗಳೊಳಗೆ ವಿಲೇವಾರಿ ಮಾಡಲು ನಿರ್ಧರಿಸಲಾಯಿತು.

ಜೈಪುರ ಗ್ರೇಟರ್ ನಾಗರಿಕ ಸಂಸ್ಥೆಯ ಪ್ರಕಾರ, ಒಂದು ಉದ್ದೇಶಕ್ಕಾಗಿ ಅಂಗಡಿಗಳಿಗೆ ಪರವಾನಗಿ ಪಡೆದುಕೊಂಡು, ಸಂಪೂರ್ಣವಾಗಿ ವಿಭಿನ್ನ ಉದ್ದೇಶಗಳಿಗಾಗಿ ಬಳಸಲಾಗುತ್ತಿದೆ ಎಂದು ದೂರುಗಳು ನಿರಂತರವಾಗಿ ಸ್ವೀಕರಿಸಲ್ಪಟ್ಟಿವೆ. ಈ ದೂರುಗಳನ್ನು ಗಮನದಲ್ಲಿಟ್ಟುಕೊಂಡು, ಈಗ ಅಂಗಡಿಗಳು ಹಲಾಲ್ ಅಥವಾ ಝಟ್ಕಾ ಮಾಂಸವನ್ನು ಮಾರಾಟ ಮಾಡುವ ಬಗ್ಗೆ ಮಾಹಿತಿ ನೀಡುವುದನ್ನು ಕಡ್ಡಾಯಗೊಳಿಸಲಾಗಿದೆ.

ಇದಲ್ಲದೆ, ಈ ಅಂಗಡಿಗಳ ಸ್ಥಳಗಳು ಮತ್ತು ಅವು ಎಷ್ಟು ಪ್ರಮಾಣದಲ್ಲಿ ನಿಯಮಾವಳಿಗಳನ್ನು ಅನುಸರಿಸುತ್ತಿವೆ ಎಂಬುದನ್ನು ಖಚಿತಪಡಿಸಿಕೊಳ್ಳಲು ಸಮೀಕ್ಷೆಯನ್ನು ನಡೆಸಲಾಗುವುದು ಎಂದು ನಿರೀಕ್ಷಿಸಲಾಗಿದೆ. ಮಹಾನಗರ ಪಾಲಿಕೆ ಈ ನಿಯಮಗಳನ್ನು ಜಾರಿಗೆ ತರಲು ಬೇಕಾದ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದ್ದು, ಅತಿ ಶೀಘ್ರದಲ್ಲಿ ಜಾರಿಯಾಗಲಿದೆ. ಪರವಾನಗಿ ಹೊಂದಿರುವವರು ಹಾಜರುಪಡಿಸಬೇಕು, ಪರವಾನಗಿ ಇಲ್ಲದವರು ಆದಷ್ಟು ಬೇಗ ವಾಣಿಜ್ಯ ಪರವಾನಗಿ ಪಡೆಯಬೇಕು ಎಂದು ಎಲ್ಲರಿಗೂ ಸೂಚನೆ ನೀಡಲಾಗಿದೆ ಎನ್ನಲಾಗಿದೆ.

ಇದನ್ನೂ ಓದಿ; ಮಣಿಪುರದ ಪರಿಸ್ಥಿತಿ ತ್ರಿಪುರದಲ್ಲಿ ಸ್ಫೋಟಗೊಳ್ಳುವುದನ್ನು ಕಾಂಗ್ರೆಸ್ ಬಯಸುವುದಿಲ್ಲ: ಗೌರವ್ ಗೊಗೊಯ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...