Homeಮುಖಪುಟಮಕ್ಕಳಿಗೆ ಟಿಫಿನ್ ಬಾಕ್ಸ್‌ಗಳಲ್ಲಿ ಮಾಂಸಾಹಾರ ತರದಂತೆ ಸೂಚಿಸಿದ ಶಾಲೆ: ಆರೋಪ

ಮಕ್ಕಳಿಗೆ ಟಿಫಿನ್ ಬಾಕ್ಸ್‌ಗಳಲ್ಲಿ ಮಾಂಸಾಹಾರ ತರದಂತೆ ಸೂಚಿಸಿದ ಶಾಲೆ: ಆರೋಪ

- Advertisement -
- Advertisement -

ಜೈಪುರದ ಪ್ರತಿಷ್ಠಿತ ಶಾಲೆಯೊಂದರಲ್ಲಿ ಮಕ್ಕಳಿಗೆ ಟಿಫಿನ್ ಬಾಕ್ಸ್‌ಗಳಲ್ಲಿ ಮಾಂಸಾಹಾರವನ್ನು ತರದಂತೆ ನಿಷೇಧಿಸಲಾಗಿದ್ದು, ಸಾಮಾಜಿಕ ಮಾಧ್ಯಮದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಆದರೆ ಈ ಬಗೆಗಿನ ಆರೋಪವನ್ನು ಶಾಲೆಯ ಮುಖ್ಯೋಪಾಧ್ಯಾಯರು ನಿರಾಕರಿಸಿದ್ದಾರೆ.

ಕಥೆಗಾರ ಮತ್ತು ಚಿತ್ರಕಥೆಗಾರ, ದರಾಬ್ ಫಾರೂಕಿ ಅವರು ಈ ಕುರಿತು ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿದ್ದು, ಮೇ 1ರಂದು ಶಾಲೆಯು ನೋಟಿಸ್‌ನಲ್ಲಿ “ಆತ್ಮೀಯ ಪೋಷಕರೇ, ದಯವಿಟ್ಟು ಗಮನಿಸಿ, ಟಿಫಿನ್‌ನಲ್ಲಿ ಮಾಂಸಾಹಾರ (ಮೊಟ್ಟೆ ಸೇರಿದಂತೆ) ತರುವುದನ್ನು ನಿಷೇಧಿಸಿದೆ’ ಎಂದು ಸೂಚಿಸಿರುವ ಬಗ್ಗೆ ಹೇಳಿದ್ದಾರೆ. ಈ ಸಂದೇಶವನ್ನು ತಮ್ಮ ಕುಟುಂಬದವರಿಗೂ ಕಳುಹಿಸಲಾಗಿದೆ ಎಂದು ಹೇಳಿದ್ದಾರೆ.

ವಿದ್ಯಾರ್ಥಿಗಳು ಶಾಲೆಗೆ ಮೊಟ್ಟೆಯನ್ನು ತರಲು ಸಾಧ್ಯವಿಲ್ಲ ಎಂಬ ನೀತಿಯನ್ನು ಶಾಲೆಗೆ ಹೊಂದಬಹುದೇ ಎಂದು ದರಾಬ್ ಫಾರೂಕಿ ಪ್ರಶ್ನಿಸಿದ್ದಾರೆ. ಅವರು ಶಾಲೆಯ ಪಠ್ಯಪುಸ್ತಕದಿಂದ ಪುಟಗಳನ್ನು ಕೂಡ ಪೋಸ್ಟ್ ಮಾಡಿದ್ದು, ಅದರಲ್ಲಿ ಮೊಟ್ಟೆ, ಕೋಳಿಯಂತಹ ಆಹಾರಗಳು ಮಕ್ಕಳನ್ನು ಶಕ್ತಿಯುತ ಮತ್ತು ಆರೋಗ್ಯವಂತರನ್ನಾಗಿ ಮಾಡುವ ಆಹಾರ ಪದಾರ್ಥಗಳು ಎಂದು ಉಲ್ಲೇಖಿಸಲಾಗಿತ್ತು.

ಮಹಾರಾಜ ಸವಾಯಿ ಮಾನ್ ಸಿಂಗ್ ವಿದ್ಯಾಲಯ ಎಂಬ ಶಾಲೆಯು ನಗರದ ಹೃದಯಭಾಗದಲ್ಲಿದೆ ಮತ್ತು ಇದನ್ನು ಜೈಪುರದ ರಾಜಮಾತಾ ಗಾಯತ್ರಿ ದೇವಿಯವರು 1984ರಲ್ಲಿ ಪ್ರಾರಂಭಿಸಿದರು. ಇದು ನಗರದ ಪ್ರತಿಷ್ಠಿತ ಶಾಲೆ, ಶಾಲಾ ವಿದ್ಯಾರ್ಥಿಗಳು ಟಿಫಿನ್‌ನಲ್ಲಿ ಆಹಾರ ಪದಾರ್ಥಗಳ ವಿಷಯದಲ್ಲಿ ಈ ಹಿಂದೆಂದೂ ಇಂತಹ ತಾರತಮ್ಯವನ್ನು ಎದುರಿಸಿಲ್ಲ. ಶಾಲೆಯಲ್ಲಿದ್ದಾಗ ನನ್ನ ಮಗನಿಗೆ ನಿಯಮಿತವಾಗಿ ಮಾಂಸಾಹಾರವನ್ನು ನೀಡುತ್ತಿದ್ದೆ. ಆಗ ಯಾವುದೇ ನಿರ್ಬಂಧಗಳಿರಲಿಲ್ಲ ಎಂದು ಈ ಬಗ್ಗೆ ಪೋಷಕರೋರ್ವರು ಹೇಳಿದ್ದಾರೆ.

ಶಾಲೆಯ ಪ್ರಾಂಶುಪಾಲರಾದ ಜ್ಯೋತಿ ಜೋಶಿ ಅವರು ಈ ಬಗ್ಗೆ ಪ್ರತಿಕ್ರಿಯಿಸಿದ್ದು, ಅಂತಹ ಸೂಚನೆಯನ್ನು ಕಳುಹಿಸಲಾಗಿಲ್ಲ. ಆದರೂ ಈ ಬಗ್ಗೆ ‘ಎಕ್ಸ್’ ವೇದಿಕೆಯಲ್ಲಿ ಚರ್ಚಿಸಲಾಗುತ್ತಿದೆ. ಚರ್ಚಿಸಲು ಇದಕ್ಕಿಂತಲೂ ಹೆಚ್ಚು ಮುಖ್ಯವಾದ ವಿಷಯಗಳಿವೆ. ಆದರೆ, ಟಿಫಿನ್ ಬಾಕ್ಸ್‌ನಲ್ಲಿ ಮಾಂಸಾಹಾರದ ಪದಾರ್ಥಗಳು ಹಳಸುವ ಕಾರಣ, ಅದು ತಿನ್ನಲು ಯೋಗ್ಯವಾಗಿರುವುದಿಲ್ಲ. ನಾನು ವಿಜ್ಞಾನದ ಹಿನ್ನೆಲೆಯಿಂದ ಬಂದಿರುವುದರಿಂದ ಈ ಬಗ್ಗೆ ಚೆನ್ನಾಗಿ ತಿಳಿದಿದೆ. ವಾತಾವರಣವೂ ಬಿಸಿಯಾಗಿದೆ ಎಂದು ಹೇಳಿದ್ದಾರೆ.

ಹೈದರಾಬಾದ್‌ನ ಶಾಲೆಯೊಂದು 2018ರಲ್ಲಿ ಟಿಫಿನ್‌ಗಳಲ್ಲಿ ಮಾಂಸಾಹಾರವನ್ನು ನಿಷೇಧಿಸಿತ್ತು. ಮೊಟ್ಟೆಗಳು ಪ್ರೋಟೀನ್‌ನ ಪ್ರಮುಖ ಮೂಲವಾಗಿದ್ದರೂ ಬಿಜೆಪಿ ಆಡಳಿತದ ರಾಜಸ್ಥಾನ, ಗುಜರಾತ್, ಮಧ್ಯಪ್ರದೇಶ ರಾಜ್ಯಗಳು ಸರ್ಕಾರಿ ಶಾಲೆಗಳಲ್ಲಿ ಮಧ್ಯಾಹ್ನದ ಊಟದಲ್ಲಿ ಮೊಟ್ಟೆಗಳನ್ನು ನೀಡುತ್ತಿಲ್ಲ. ಒಡಿಶಾ, ತಮಿಳುನಾಡು, ಉತ್ತರಾಖಂಡ, ತೆಲಂಗಾಣ ಸರ್ಕಾರಗಳು ಮಕ್ಕಳಿಗೆ ಮಧ್ಯಾಹ್ನದ ಊಟದಲ್ಲಿ ಮೊಟ್ಟೆಯನ್ನು ನೀಡುತ್ತಿವೆ. ಶಾಲೆಯ ಮಧ್ಯಾಹ್ನದ ಊಟದಲ್ಲಿ ಮೊಟ್ಟೆಗಳನ್ನು ನೀಡುವ ಬಗ್ಗೆ ಹಲವು ಬಾರಿ ಚರ್ಚೆಗಳು ಕೂಡ ನಡೆದಿದೆ.

ಇದನ್ನು ಓದಿ: ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ಭಾರತದಲ್ಲಿ ಬಿಕ್ಕಟ್ಟಿನಲ್ಲಿ ಪತ್ರಿಕಾ ಸ್ವಾತಂತ್ರ್ಯ: ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...