Homeಮುಖಪುಟಮಕ್ಕಳಿಗೆ ಟಿಫಿನ್ ಬಾಕ್ಸ್‌ಗಳಲ್ಲಿ ಮಾಂಸಾಹಾರ ತರದಂತೆ ಸೂಚಿಸಿದ ಶಾಲೆ: ಆರೋಪ

ಮಕ್ಕಳಿಗೆ ಟಿಫಿನ್ ಬಾಕ್ಸ್‌ಗಳಲ್ಲಿ ಮಾಂಸಾಹಾರ ತರದಂತೆ ಸೂಚಿಸಿದ ಶಾಲೆ: ಆರೋಪ

- Advertisement -
- Advertisement -

ಜೈಪುರದ ಪ್ರತಿಷ್ಠಿತ ಶಾಲೆಯೊಂದರಲ್ಲಿ ಮಕ್ಕಳಿಗೆ ಟಿಫಿನ್ ಬಾಕ್ಸ್‌ಗಳಲ್ಲಿ ಮಾಂಸಾಹಾರವನ್ನು ತರದಂತೆ ನಿಷೇಧಿಸಲಾಗಿದ್ದು, ಸಾಮಾಜಿಕ ಮಾಧ್ಯಮದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಆದರೆ ಈ ಬಗೆಗಿನ ಆರೋಪವನ್ನು ಶಾಲೆಯ ಮುಖ್ಯೋಪಾಧ್ಯಾಯರು ನಿರಾಕರಿಸಿದ್ದಾರೆ.

ಕಥೆಗಾರ ಮತ್ತು ಚಿತ್ರಕಥೆಗಾರ, ದರಾಬ್ ಫಾರೂಕಿ ಅವರು ಈ ಕುರಿತು ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿದ್ದು, ಮೇ 1ರಂದು ಶಾಲೆಯು ನೋಟಿಸ್‌ನಲ್ಲಿ “ಆತ್ಮೀಯ ಪೋಷಕರೇ, ದಯವಿಟ್ಟು ಗಮನಿಸಿ, ಟಿಫಿನ್‌ನಲ್ಲಿ ಮಾಂಸಾಹಾರ (ಮೊಟ್ಟೆ ಸೇರಿದಂತೆ) ತರುವುದನ್ನು ನಿಷೇಧಿಸಿದೆ’ ಎಂದು ಸೂಚಿಸಿರುವ ಬಗ್ಗೆ ಹೇಳಿದ್ದಾರೆ. ಈ ಸಂದೇಶವನ್ನು ತಮ್ಮ ಕುಟುಂಬದವರಿಗೂ ಕಳುಹಿಸಲಾಗಿದೆ ಎಂದು ಹೇಳಿದ್ದಾರೆ.

ವಿದ್ಯಾರ್ಥಿಗಳು ಶಾಲೆಗೆ ಮೊಟ್ಟೆಯನ್ನು ತರಲು ಸಾಧ್ಯವಿಲ್ಲ ಎಂಬ ನೀತಿಯನ್ನು ಶಾಲೆಗೆ ಹೊಂದಬಹುದೇ ಎಂದು ದರಾಬ್ ಫಾರೂಕಿ ಪ್ರಶ್ನಿಸಿದ್ದಾರೆ. ಅವರು ಶಾಲೆಯ ಪಠ್ಯಪುಸ್ತಕದಿಂದ ಪುಟಗಳನ್ನು ಕೂಡ ಪೋಸ್ಟ್ ಮಾಡಿದ್ದು, ಅದರಲ್ಲಿ ಮೊಟ್ಟೆ, ಕೋಳಿಯಂತಹ ಆಹಾರಗಳು ಮಕ್ಕಳನ್ನು ಶಕ್ತಿಯುತ ಮತ್ತು ಆರೋಗ್ಯವಂತರನ್ನಾಗಿ ಮಾಡುವ ಆಹಾರ ಪದಾರ್ಥಗಳು ಎಂದು ಉಲ್ಲೇಖಿಸಲಾಗಿತ್ತು.

ಮಹಾರಾಜ ಸವಾಯಿ ಮಾನ್ ಸಿಂಗ್ ವಿದ್ಯಾಲಯ ಎಂಬ ಶಾಲೆಯು ನಗರದ ಹೃದಯಭಾಗದಲ್ಲಿದೆ ಮತ್ತು ಇದನ್ನು ಜೈಪುರದ ರಾಜಮಾತಾ ಗಾಯತ್ರಿ ದೇವಿಯವರು 1984ರಲ್ಲಿ ಪ್ರಾರಂಭಿಸಿದರು. ಇದು ನಗರದ ಪ್ರತಿಷ್ಠಿತ ಶಾಲೆ, ಶಾಲಾ ವಿದ್ಯಾರ್ಥಿಗಳು ಟಿಫಿನ್‌ನಲ್ಲಿ ಆಹಾರ ಪದಾರ್ಥಗಳ ವಿಷಯದಲ್ಲಿ ಈ ಹಿಂದೆಂದೂ ಇಂತಹ ತಾರತಮ್ಯವನ್ನು ಎದುರಿಸಿಲ್ಲ. ಶಾಲೆಯಲ್ಲಿದ್ದಾಗ ನನ್ನ ಮಗನಿಗೆ ನಿಯಮಿತವಾಗಿ ಮಾಂಸಾಹಾರವನ್ನು ನೀಡುತ್ತಿದ್ದೆ. ಆಗ ಯಾವುದೇ ನಿರ್ಬಂಧಗಳಿರಲಿಲ್ಲ ಎಂದು ಈ ಬಗ್ಗೆ ಪೋಷಕರೋರ್ವರು ಹೇಳಿದ್ದಾರೆ.

ಶಾಲೆಯ ಪ್ರಾಂಶುಪಾಲರಾದ ಜ್ಯೋತಿ ಜೋಶಿ ಅವರು ಈ ಬಗ್ಗೆ ಪ್ರತಿಕ್ರಿಯಿಸಿದ್ದು, ಅಂತಹ ಸೂಚನೆಯನ್ನು ಕಳುಹಿಸಲಾಗಿಲ್ಲ. ಆದರೂ ಈ ಬಗ್ಗೆ ‘ಎಕ್ಸ್’ ವೇದಿಕೆಯಲ್ಲಿ ಚರ್ಚಿಸಲಾಗುತ್ತಿದೆ. ಚರ್ಚಿಸಲು ಇದಕ್ಕಿಂತಲೂ ಹೆಚ್ಚು ಮುಖ್ಯವಾದ ವಿಷಯಗಳಿವೆ. ಆದರೆ, ಟಿಫಿನ್ ಬಾಕ್ಸ್‌ನಲ್ಲಿ ಮಾಂಸಾಹಾರದ ಪದಾರ್ಥಗಳು ಹಳಸುವ ಕಾರಣ, ಅದು ತಿನ್ನಲು ಯೋಗ್ಯವಾಗಿರುವುದಿಲ್ಲ. ನಾನು ವಿಜ್ಞಾನದ ಹಿನ್ನೆಲೆಯಿಂದ ಬಂದಿರುವುದರಿಂದ ಈ ಬಗ್ಗೆ ಚೆನ್ನಾಗಿ ತಿಳಿದಿದೆ. ವಾತಾವರಣವೂ ಬಿಸಿಯಾಗಿದೆ ಎಂದು ಹೇಳಿದ್ದಾರೆ.

ಹೈದರಾಬಾದ್‌ನ ಶಾಲೆಯೊಂದು 2018ರಲ್ಲಿ ಟಿಫಿನ್‌ಗಳಲ್ಲಿ ಮಾಂಸಾಹಾರವನ್ನು ನಿಷೇಧಿಸಿತ್ತು. ಮೊಟ್ಟೆಗಳು ಪ್ರೋಟೀನ್‌ನ ಪ್ರಮುಖ ಮೂಲವಾಗಿದ್ದರೂ ಬಿಜೆಪಿ ಆಡಳಿತದ ರಾಜಸ್ಥಾನ, ಗುಜರಾತ್, ಮಧ್ಯಪ್ರದೇಶ ರಾಜ್ಯಗಳು ಸರ್ಕಾರಿ ಶಾಲೆಗಳಲ್ಲಿ ಮಧ್ಯಾಹ್ನದ ಊಟದಲ್ಲಿ ಮೊಟ್ಟೆಗಳನ್ನು ನೀಡುತ್ತಿಲ್ಲ. ಒಡಿಶಾ, ತಮಿಳುನಾಡು, ಉತ್ತರಾಖಂಡ, ತೆಲಂಗಾಣ ಸರ್ಕಾರಗಳು ಮಕ್ಕಳಿಗೆ ಮಧ್ಯಾಹ್ನದ ಊಟದಲ್ಲಿ ಮೊಟ್ಟೆಯನ್ನು ನೀಡುತ್ತಿವೆ. ಶಾಲೆಯ ಮಧ್ಯಾಹ್ನದ ಊಟದಲ್ಲಿ ಮೊಟ್ಟೆಗಳನ್ನು ನೀಡುವ ಬಗ್ಗೆ ಹಲವು ಬಾರಿ ಚರ್ಚೆಗಳು ಕೂಡ ನಡೆದಿದೆ.

ಇದನ್ನು ಓದಿ: ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ಭಾರತದಲ್ಲಿ ಬಿಕ್ಕಟ್ಟಿನಲ್ಲಿ ಪತ್ರಿಕಾ ಸ್ವಾತಂತ್ರ್ಯ: ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದ ಕಾರ್ಯತಂತ್ರದ ಸ್ವಾಯತ್ತತೆಗೆ ಏನಾಯಿತು; ಅಮೆರಿಕದೊಂದಿಗಿನ ವ್ಯಾಪಾರ ಒಪ್ಪಂದದ ಕುರಿತು ಬಿಜೆಪಿಯನ್ನು ಪ್ರಶ್ನಿಸಿದ ಮನೀಶ್ ತಿವಾರಿ

ಮಂಗಳವಾರ ಅಮೆರಿಕ ಜೊತೆಗಿನ ಹೊಸ ವ್ಯಾಪಾರ ಒಪ್ಪಂದದ ಬಗ್ಗೆ ಕಾಂಗ್ರೆಸ್ ಸಂಸದ ಮನೀಶ್ ತಿವಾರಿ ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡರು ಮತ್ತು ವ್ಯಾಪಾರ ಒಪ್ಪಂದಕ್ಕಾಗಿ ನವದೆಹಲಿ ತನ್ನ ಕಾರ್ಯತಂತ್ರದ ಸ್ವಾಯತ್ತತೆಯನ್ನು ತ್ಯಾಗ ಮಾಡಿದೆಯೇ ಎಂದು...

ಖಾಸಗಿ ಜಾಗದಲ್ಲಿ ಪ್ರಾರ್ಥನಾ ಸಭೆ ನಡೆಸಲು ಅನುಮತಿ ಅಗತ್ಯವಿಲ್ಲ : ಅಲಹಾಬಾದ್ ಹೈಕೋರ್ಟ್

ಉತ್ತರ ಪ್ರದೇಶದಲ್ಲಿ ಖಾಸಗಿ ಆಸ್ತಿಯಲ್ಲಿ ಧಾರ್ಮಿಕ ಪ್ರಾರ್ಥನಾ ಸಭೆ ನಡೆಸಲು ಯಾವುದೇ ಅನುಮತಿ ಅಗತ್ಯವಿಲ್ಲ ಎಂದು ಅಲಹಾಬಾದ್ ಹೈಕೋರ್ಟ್ ತೀರ್ಪು ನೀಡಿದೆ. ಆದರೆ, ಕಾರ್ಯಕ್ರಮಕ್ಕೆ ಸಾರ್ವಜನಿಕ ರಸ್ತೆ ಅಥವಾ ಸಾರ್ವಜನಿಕ ಆಸ್ತಿ ಬಳಸಿಕೊಳ್ಳುವುದಾದರೆ ಕನಿಷ್ಠ...

ರಾಜ್ಯ ಸರ್ಕಾರ ‘ವಿಬಿ–ಜಿ ರಾಮ್ ಜಿ ಕಾಯ್ದೆ’ ತಿರಸ್ಕರಿಸಬೇಕು : ಮನರೇಗಾ ರಕ್ಷಣಾ ಒಕ್ಕೂಟದ ಮಹಾ ಪಂಚಾಯತ್‌ ಆಗ್ರಹ

ನರೇಗಾ ಯೋಜನೆ ಮುಂದುವರಿಸಲು ರಾಷ್ಟ್ರಪತಿ ಆದೇಶ ಹೊರಡಿಸಬೇಕು. ವಿಬಿ–ಜಿ ರಾಮ್‌ ಜಿ ಕಾಯ್ದೆಯನ್ನು ರಾಜ್ಯ ಸರ್ಕಾರ ತಿರಸ್ಕರಿಸಬೇಕು ಎಂದು ಆಗ್ರಹಿಸಿ 'ಮನರೇಗಾ ರಕ್ಷಣಾ ಒಕ್ಕೂಟ'ದ ಮಹಾ ಪಂಚಾಯತ್‌ನಲ್ಲಿ ನಿರ್ಣಯ ಕೈಗೊಳ್ಳಲಾಗಿದೆ. ಸೋಮವಾರ (ಫೆ.2)...

‘ರಾಜಭವನ’ಗಳನ್ನು ‘ಲೋಕಭವನ’ಗಳೆಂದು ಮರುನಾಮಕರಣ; ಇದು ಒಕ್ಕೂಟ ವ್ಯವಸ್ಥೆ ಮತ್ತು ಭಾಷಾ ಸಮಾನತೆಯ ಮೇಲಿನ ಆಕ್ರಮಣ: ಜಾಗೃತ ಕರ್ನಾಟಕ

ದೇಶಾದಾದ್ಯಂತ ಇರುವ ರಾಜಭವನಗಳ ಹೆಸರನ್ನು ಲೋಕಭವನ ಎಂದು ಮರುನಾಮಕರಣ ಮಾಡುವುದಾಗಿ ಕೇಂದ್ರ ಗೃಹಸಚಿವಾಲಯ ತೀರ್ಮಾನಿಸಿದೆ. ಕೇಂದ್ರದ  ಈ ನೀತಿಯನ್ನು ವಿರೋಧಿಸಿರುವ ಜಾಗೃತ ಕರ್ನಾಟಕ ದೇಶದ ಎಲ್ಲಾ ಹಿಂದಿಯೇತರ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದೆ....

ಯುಜಿಸಿ ಈಕ್ವಿಟಿ ನಿಯಮಗಳ ಮೇಲಿನ ಸುಪ್ರೀಂ ಕೋರ್ಟ್ ತಡೆಗೆ ವಿದ್ಯಾರ್ಥಿಗಳ ಪ್ರತಿಭಟನೆ, ರೋಹಿತ್ ಕಾಯ್ದೆಗೆ ಒತ್ತಾಯ

ಯುಜಿಸಿ ಇಕ್ವಿಟಿ ನಿಯಮಗಳಿಗೆ ಸುಪ್ರೀಂ ಕೋರ್ಟ್ ನೀಡಿದ ತಡೆಯಾಜ್ಞೆಯ ವಿರುದ್ಧ ಮತ್ತು ವಿಶ್ವವಿದ್ಯಾಲಯಗಳಲ್ಲಿ ಜಾತಿ ತಾರತಮ್ಯವನ್ನು ಎದುರಿಸಲು ಶಾಸನಬದ್ಧ ರೋಹಿತ್ ಕಾಯ್ದೆಯನ್ನು ಜಾರಿಗೆ ತರುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಸಂಘ (ಎಐಎಸ್ಎ)...

ನರವಾಣೆ ಅಪ್ರಕಟಿತ ಪುಸ್ತಕ ಗದ್ದಲ | ಸತ್ಯ ಹೊರಬಂದರೆ ಮೋದಿ, ರಾಜನಾಥ್ ಸಿಂಗ್ ಮುಖವಾಡ ಬಯಲಾಗಲಿದೆ : ರಾಹುಲ್ ಗಾಂಧಿ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ ಕುರಿತು ರಾಹುಲ್ ಗಾಂಧಿ ಸೋಮವಾರ (ಫೆ.2) ಲೋಕಸಭೆಯಲ್ಲಿ ಉಲ್ಲೇಖಿಸಿದ್ದು, ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ...

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...