Homeಮುಖಪುಟಮಕ್ಕಳಿಗೆ ಟಿಫಿನ್ ಬಾಕ್ಸ್‌ಗಳಲ್ಲಿ ಮಾಂಸಾಹಾರ ತರದಂತೆ ಸೂಚಿಸಿದ ಶಾಲೆ: ಆರೋಪ

ಮಕ್ಕಳಿಗೆ ಟಿಫಿನ್ ಬಾಕ್ಸ್‌ಗಳಲ್ಲಿ ಮಾಂಸಾಹಾರ ತರದಂತೆ ಸೂಚಿಸಿದ ಶಾಲೆ: ಆರೋಪ

- Advertisement -
- Advertisement -

ಜೈಪುರದ ಪ್ರತಿಷ್ಠಿತ ಶಾಲೆಯೊಂದರಲ್ಲಿ ಮಕ್ಕಳಿಗೆ ಟಿಫಿನ್ ಬಾಕ್ಸ್‌ಗಳಲ್ಲಿ ಮಾಂಸಾಹಾರವನ್ನು ತರದಂತೆ ನಿಷೇಧಿಸಲಾಗಿದ್ದು, ಸಾಮಾಜಿಕ ಮಾಧ್ಯಮದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಆದರೆ ಈ ಬಗೆಗಿನ ಆರೋಪವನ್ನು ಶಾಲೆಯ ಮುಖ್ಯೋಪಾಧ್ಯಾಯರು ನಿರಾಕರಿಸಿದ್ದಾರೆ.

ಕಥೆಗಾರ ಮತ್ತು ಚಿತ್ರಕಥೆಗಾರ, ದರಾಬ್ ಫಾರೂಕಿ ಅವರು ಈ ಕುರಿತು ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿದ್ದು, ಮೇ 1ರಂದು ಶಾಲೆಯು ನೋಟಿಸ್‌ನಲ್ಲಿ “ಆತ್ಮೀಯ ಪೋಷಕರೇ, ದಯವಿಟ್ಟು ಗಮನಿಸಿ, ಟಿಫಿನ್‌ನಲ್ಲಿ ಮಾಂಸಾಹಾರ (ಮೊಟ್ಟೆ ಸೇರಿದಂತೆ) ತರುವುದನ್ನು ನಿಷೇಧಿಸಿದೆ’ ಎಂದು ಸೂಚಿಸಿರುವ ಬಗ್ಗೆ ಹೇಳಿದ್ದಾರೆ. ಈ ಸಂದೇಶವನ್ನು ತಮ್ಮ ಕುಟುಂಬದವರಿಗೂ ಕಳುಹಿಸಲಾಗಿದೆ ಎಂದು ಹೇಳಿದ್ದಾರೆ.

ವಿದ್ಯಾರ್ಥಿಗಳು ಶಾಲೆಗೆ ಮೊಟ್ಟೆಯನ್ನು ತರಲು ಸಾಧ್ಯವಿಲ್ಲ ಎಂಬ ನೀತಿಯನ್ನು ಶಾಲೆಗೆ ಹೊಂದಬಹುದೇ ಎಂದು ದರಾಬ್ ಫಾರೂಕಿ ಪ್ರಶ್ನಿಸಿದ್ದಾರೆ. ಅವರು ಶಾಲೆಯ ಪಠ್ಯಪುಸ್ತಕದಿಂದ ಪುಟಗಳನ್ನು ಕೂಡ ಪೋಸ್ಟ್ ಮಾಡಿದ್ದು, ಅದರಲ್ಲಿ ಮೊಟ್ಟೆ, ಕೋಳಿಯಂತಹ ಆಹಾರಗಳು ಮಕ್ಕಳನ್ನು ಶಕ್ತಿಯುತ ಮತ್ತು ಆರೋಗ್ಯವಂತರನ್ನಾಗಿ ಮಾಡುವ ಆಹಾರ ಪದಾರ್ಥಗಳು ಎಂದು ಉಲ್ಲೇಖಿಸಲಾಗಿತ್ತು.

ಮಹಾರಾಜ ಸವಾಯಿ ಮಾನ್ ಸಿಂಗ್ ವಿದ್ಯಾಲಯ ಎಂಬ ಶಾಲೆಯು ನಗರದ ಹೃದಯಭಾಗದಲ್ಲಿದೆ ಮತ್ತು ಇದನ್ನು ಜೈಪುರದ ರಾಜಮಾತಾ ಗಾಯತ್ರಿ ದೇವಿಯವರು 1984ರಲ್ಲಿ ಪ್ರಾರಂಭಿಸಿದರು. ಇದು ನಗರದ ಪ್ರತಿಷ್ಠಿತ ಶಾಲೆ, ಶಾಲಾ ವಿದ್ಯಾರ್ಥಿಗಳು ಟಿಫಿನ್‌ನಲ್ಲಿ ಆಹಾರ ಪದಾರ್ಥಗಳ ವಿಷಯದಲ್ಲಿ ಈ ಹಿಂದೆಂದೂ ಇಂತಹ ತಾರತಮ್ಯವನ್ನು ಎದುರಿಸಿಲ್ಲ. ಶಾಲೆಯಲ್ಲಿದ್ದಾಗ ನನ್ನ ಮಗನಿಗೆ ನಿಯಮಿತವಾಗಿ ಮಾಂಸಾಹಾರವನ್ನು ನೀಡುತ್ತಿದ್ದೆ. ಆಗ ಯಾವುದೇ ನಿರ್ಬಂಧಗಳಿರಲಿಲ್ಲ ಎಂದು ಈ ಬಗ್ಗೆ ಪೋಷಕರೋರ್ವರು ಹೇಳಿದ್ದಾರೆ.

ಶಾಲೆಯ ಪ್ರಾಂಶುಪಾಲರಾದ ಜ್ಯೋತಿ ಜೋಶಿ ಅವರು ಈ ಬಗ್ಗೆ ಪ್ರತಿಕ್ರಿಯಿಸಿದ್ದು, ಅಂತಹ ಸೂಚನೆಯನ್ನು ಕಳುಹಿಸಲಾಗಿಲ್ಲ. ಆದರೂ ಈ ಬಗ್ಗೆ ‘ಎಕ್ಸ್’ ವೇದಿಕೆಯಲ್ಲಿ ಚರ್ಚಿಸಲಾಗುತ್ತಿದೆ. ಚರ್ಚಿಸಲು ಇದಕ್ಕಿಂತಲೂ ಹೆಚ್ಚು ಮುಖ್ಯವಾದ ವಿಷಯಗಳಿವೆ. ಆದರೆ, ಟಿಫಿನ್ ಬಾಕ್ಸ್‌ನಲ್ಲಿ ಮಾಂಸಾಹಾರದ ಪದಾರ್ಥಗಳು ಹಳಸುವ ಕಾರಣ, ಅದು ತಿನ್ನಲು ಯೋಗ್ಯವಾಗಿರುವುದಿಲ್ಲ. ನಾನು ವಿಜ್ಞಾನದ ಹಿನ್ನೆಲೆಯಿಂದ ಬಂದಿರುವುದರಿಂದ ಈ ಬಗ್ಗೆ ಚೆನ್ನಾಗಿ ತಿಳಿದಿದೆ. ವಾತಾವರಣವೂ ಬಿಸಿಯಾಗಿದೆ ಎಂದು ಹೇಳಿದ್ದಾರೆ.

ಹೈದರಾಬಾದ್‌ನ ಶಾಲೆಯೊಂದು 2018ರಲ್ಲಿ ಟಿಫಿನ್‌ಗಳಲ್ಲಿ ಮಾಂಸಾಹಾರವನ್ನು ನಿಷೇಧಿಸಿತ್ತು. ಮೊಟ್ಟೆಗಳು ಪ್ರೋಟೀನ್‌ನ ಪ್ರಮುಖ ಮೂಲವಾಗಿದ್ದರೂ ಬಿಜೆಪಿ ಆಡಳಿತದ ರಾಜಸ್ಥಾನ, ಗುಜರಾತ್, ಮಧ್ಯಪ್ರದೇಶ ರಾಜ್ಯಗಳು ಸರ್ಕಾರಿ ಶಾಲೆಗಳಲ್ಲಿ ಮಧ್ಯಾಹ್ನದ ಊಟದಲ್ಲಿ ಮೊಟ್ಟೆಗಳನ್ನು ನೀಡುತ್ತಿಲ್ಲ. ಒಡಿಶಾ, ತಮಿಳುನಾಡು, ಉತ್ತರಾಖಂಡ, ತೆಲಂಗಾಣ ಸರ್ಕಾರಗಳು ಮಕ್ಕಳಿಗೆ ಮಧ್ಯಾಹ್ನದ ಊಟದಲ್ಲಿ ಮೊಟ್ಟೆಯನ್ನು ನೀಡುತ್ತಿವೆ. ಶಾಲೆಯ ಮಧ್ಯಾಹ್ನದ ಊಟದಲ್ಲಿ ಮೊಟ್ಟೆಗಳನ್ನು ನೀಡುವ ಬಗ್ಗೆ ಹಲವು ಬಾರಿ ಚರ್ಚೆಗಳು ಕೂಡ ನಡೆದಿದೆ.

ಇದನ್ನು ಓದಿ: ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ಭಾರತದಲ್ಲಿ ಬಿಕ್ಕಟ್ಟಿನಲ್ಲಿ ಪತ್ರಿಕಾ ಸ್ವಾತಂತ್ರ್ಯ: ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...