Homeಮುಖಪುಟಮಕ್ಕಳಿಗೆ ಟಿಫಿನ್ ಬಾಕ್ಸ್‌ಗಳಲ್ಲಿ ಮಾಂಸಾಹಾರ ತರದಂತೆ ಸೂಚಿಸಿದ ಶಾಲೆ: ಆರೋಪ

ಮಕ್ಕಳಿಗೆ ಟಿಫಿನ್ ಬಾಕ್ಸ್‌ಗಳಲ್ಲಿ ಮಾಂಸಾಹಾರ ತರದಂತೆ ಸೂಚಿಸಿದ ಶಾಲೆ: ಆರೋಪ

- Advertisement -
- Advertisement -

ಜೈಪುರದ ಪ್ರತಿಷ್ಠಿತ ಶಾಲೆಯೊಂದರಲ್ಲಿ ಮಕ್ಕಳಿಗೆ ಟಿಫಿನ್ ಬಾಕ್ಸ್‌ಗಳಲ್ಲಿ ಮಾಂಸಾಹಾರವನ್ನು ತರದಂತೆ ನಿಷೇಧಿಸಲಾಗಿದ್ದು, ಸಾಮಾಜಿಕ ಮಾಧ್ಯಮದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಆದರೆ ಈ ಬಗೆಗಿನ ಆರೋಪವನ್ನು ಶಾಲೆಯ ಮುಖ್ಯೋಪಾಧ್ಯಾಯರು ನಿರಾಕರಿಸಿದ್ದಾರೆ.

ಕಥೆಗಾರ ಮತ್ತು ಚಿತ್ರಕಥೆಗಾರ, ದರಾಬ್ ಫಾರೂಕಿ ಅವರು ಈ ಕುರಿತು ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿದ್ದು, ಮೇ 1ರಂದು ಶಾಲೆಯು ನೋಟಿಸ್‌ನಲ್ಲಿ “ಆತ್ಮೀಯ ಪೋಷಕರೇ, ದಯವಿಟ್ಟು ಗಮನಿಸಿ, ಟಿಫಿನ್‌ನಲ್ಲಿ ಮಾಂಸಾಹಾರ (ಮೊಟ್ಟೆ ಸೇರಿದಂತೆ) ತರುವುದನ್ನು ನಿಷೇಧಿಸಿದೆ’ ಎಂದು ಸೂಚಿಸಿರುವ ಬಗ್ಗೆ ಹೇಳಿದ್ದಾರೆ. ಈ ಸಂದೇಶವನ್ನು ತಮ್ಮ ಕುಟುಂಬದವರಿಗೂ ಕಳುಹಿಸಲಾಗಿದೆ ಎಂದು ಹೇಳಿದ್ದಾರೆ.

ವಿದ್ಯಾರ್ಥಿಗಳು ಶಾಲೆಗೆ ಮೊಟ್ಟೆಯನ್ನು ತರಲು ಸಾಧ್ಯವಿಲ್ಲ ಎಂಬ ನೀತಿಯನ್ನು ಶಾಲೆಗೆ ಹೊಂದಬಹುದೇ ಎಂದು ದರಾಬ್ ಫಾರೂಕಿ ಪ್ರಶ್ನಿಸಿದ್ದಾರೆ. ಅವರು ಶಾಲೆಯ ಪಠ್ಯಪುಸ್ತಕದಿಂದ ಪುಟಗಳನ್ನು ಕೂಡ ಪೋಸ್ಟ್ ಮಾಡಿದ್ದು, ಅದರಲ್ಲಿ ಮೊಟ್ಟೆ, ಕೋಳಿಯಂತಹ ಆಹಾರಗಳು ಮಕ್ಕಳನ್ನು ಶಕ್ತಿಯುತ ಮತ್ತು ಆರೋಗ್ಯವಂತರನ್ನಾಗಿ ಮಾಡುವ ಆಹಾರ ಪದಾರ್ಥಗಳು ಎಂದು ಉಲ್ಲೇಖಿಸಲಾಗಿತ್ತು.

ಮಹಾರಾಜ ಸವಾಯಿ ಮಾನ್ ಸಿಂಗ್ ವಿದ್ಯಾಲಯ ಎಂಬ ಶಾಲೆಯು ನಗರದ ಹೃದಯಭಾಗದಲ್ಲಿದೆ ಮತ್ತು ಇದನ್ನು ಜೈಪುರದ ರಾಜಮಾತಾ ಗಾಯತ್ರಿ ದೇವಿಯವರು 1984ರಲ್ಲಿ ಪ್ರಾರಂಭಿಸಿದರು. ಇದು ನಗರದ ಪ್ರತಿಷ್ಠಿತ ಶಾಲೆ, ಶಾಲಾ ವಿದ್ಯಾರ್ಥಿಗಳು ಟಿಫಿನ್‌ನಲ್ಲಿ ಆಹಾರ ಪದಾರ್ಥಗಳ ವಿಷಯದಲ್ಲಿ ಈ ಹಿಂದೆಂದೂ ಇಂತಹ ತಾರತಮ್ಯವನ್ನು ಎದುರಿಸಿಲ್ಲ. ಶಾಲೆಯಲ್ಲಿದ್ದಾಗ ನನ್ನ ಮಗನಿಗೆ ನಿಯಮಿತವಾಗಿ ಮಾಂಸಾಹಾರವನ್ನು ನೀಡುತ್ತಿದ್ದೆ. ಆಗ ಯಾವುದೇ ನಿರ್ಬಂಧಗಳಿರಲಿಲ್ಲ ಎಂದು ಈ ಬಗ್ಗೆ ಪೋಷಕರೋರ್ವರು ಹೇಳಿದ್ದಾರೆ.

ಶಾಲೆಯ ಪ್ರಾಂಶುಪಾಲರಾದ ಜ್ಯೋತಿ ಜೋಶಿ ಅವರು ಈ ಬಗ್ಗೆ ಪ್ರತಿಕ್ರಿಯಿಸಿದ್ದು, ಅಂತಹ ಸೂಚನೆಯನ್ನು ಕಳುಹಿಸಲಾಗಿಲ್ಲ. ಆದರೂ ಈ ಬಗ್ಗೆ ‘ಎಕ್ಸ್’ ವೇದಿಕೆಯಲ್ಲಿ ಚರ್ಚಿಸಲಾಗುತ್ತಿದೆ. ಚರ್ಚಿಸಲು ಇದಕ್ಕಿಂತಲೂ ಹೆಚ್ಚು ಮುಖ್ಯವಾದ ವಿಷಯಗಳಿವೆ. ಆದರೆ, ಟಿಫಿನ್ ಬಾಕ್ಸ್‌ನಲ್ಲಿ ಮಾಂಸಾಹಾರದ ಪದಾರ್ಥಗಳು ಹಳಸುವ ಕಾರಣ, ಅದು ತಿನ್ನಲು ಯೋಗ್ಯವಾಗಿರುವುದಿಲ್ಲ. ನಾನು ವಿಜ್ಞಾನದ ಹಿನ್ನೆಲೆಯಿಂದ ಬಂದಿರುವುದರಿಂದ ಈ ಬಗ್ಗೆ ಚೆನ್ನಾಗಿ ತಿಳಿದಿದೆ. ವಾತಾವರಣವೂ ಬಿಸಿಯಾಗಿದೆ ಎಂದು ಹೇಳಿದ್ದಾರೆ.

ಹೈದರಾಬಾದ್‌ನ ಶಾಲೆಯೊಂದು 2018ರಲ್ಲಿ ಟಿಫಿನ್‌ಗಳಲ್ಲಿ ಮಾಂಸಾಹಾರವನ್ನು ನಿಷೇಧಿಸಿತ್ತು. ಮೊಟ್ಟೆಗಳು ಪ್ರೋಟೀನ್‌ನ ಪ್ರಮುಖ ಮೂಲವಾಗಿದ್ದರೂ ಬಿಜೆಪಿ ಆಡಳಿತದ ರಾಜಸ್ಥಾನ, ಗುಜರಾತ್, ಮಧ್ಯಪ್ರದೇಶ ರಾಜ್ಯಗಳು ಸರ್ಕಾರಿ ಶಾಲೆಗಳಲ್ಲಿ ಮಧ್ಯಾಹ್ನದ ಊಟದಲ್ಲಿ ಮೊಟ್ಟೆಗಳನ್ನು ನೀಡುತ್ತಿಲ್ಲ. ಒಡಿಶಾ, ತಮಿಳುನಾಡು, ಉತ್ತರಾಖಂಡ, ತೆಲಂಗಾಣ ಸರ್ಕಾರಗಳು ಮಕ್ಕಳಿಗೆ ಮಧ್ಯಾಹ್ನದ ಊಟದಲ್ಲಿ ಮೊಟ್ಟೆಯನ್ನು ನೀಡುತ್ತಿವೆ. ಶಾಲೆಯ ಮಧ್ಯಾಹ್ನದ ಊಟದಲ್ಲಿ ಮೊಟ್ಟೆಗಳನ್ನು ನೀಡುವ ಬಗ್ಗೆ ಹಲವು ಬಾರಿ ಚರ್ಚೆಗಳು ಕೂಡ ನಡೆದಿದೆ.

ಇದನ್ನು ಓದಿ: ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ಭಾರತದಲ್ಲಿ ಬಿಕ್ಕಟ್ಟಿನಲ್ಲಿ ಪತ್ರಿಕಾ ಸ್ವಾತಂತ್ರ್ಯ: ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...