Homeಮುಖಪುಟಮಕ್ಕಳಿಗೆ ಟಿಫಿನ್ ಬಾಕ್ಸ್‌ಗಳಲ್ಲಿ ಮಾಂಸಾಹಾರ ತರದಂತೆ ಸೂಚಿಸಿದ ಶಾಲೆ: ಆರೋಪ

ಮಕ್ಕಳಿಗೆ ಟಿಫಿನ್ ಬಾಕ್ಸ್‌ಗಳಲ್ಲಿ ಮಾಂಸಾಹಾರ ತರದಂತೆ ಸೂಚಿಸಿದ ಶಾಲೆ: ಆರೋಪ

- Advertisement -
- Advertisement -

ಜೈಪುರದ ಪ್ರತಿಷ್ಠಿತ ಶಾಲೆಯೊಂದರಲ್ಲಿ ಮಕ್ಕಳಿಗೆ ಟಿಫಿನ್ ಬಾಕ್ಸ್‌ಗಳಲ್ಲಿ ಮಾಂಸಾಹಾರವನ್ನು ತರದಂತೆ ನಿಷೇಧಿಸಲಾಗಿದ್ದು, ಸಾಮಾಜಿಕ ಮಾಧ್ಯಮದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಆದರೆ ಈ ಬಗೆಗಿನ ಆರೋಪವನ್ನು ಶಾಲೆಯ ಮುಖ್ಯೋಪಾಧ್ಯಾಯರು ನಿರಾಕರಿಸಿದ್ದಾರೆ.

ಕಥೆಗಾರ ಮತ್ತು ಚಿತ್ರಕಥೆಗಾರ, ದರಾಬ್ ಫಾರೂಕಿ ಅವರು ಈ ಕುರಿತು ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿದ್ದು, ಮೇ 1ರಂದು ಶಾಲೆಯು ನೋಟಿಸ್‌ನಲ್ಲಿ “ಆತ್ಮೀಯ ಪೋಷಕರೇ, ದಯವಿಟ್ಟು ಗಮನಿಸಿ, ಟಿಫಿನ್‌ನಲ್ಲಿ ಮಾಂಸಾಹಾರ (ಮೊಟ್ಟೆ ಸೇರಿದಂತೆ) ತರುವುದನ್ನು ನಿಷೇಧಿಸಿದೆ’ ಎಂದು ಸೂಚಿಸಿರುವ ಬಗ್ಗೆ ಹೇಳಿದ್ದಾರೆ. ಈ ಸಂದೇಶವನ್ನು ತಮ್ಮ ಕುಟುಂಬದವರಿಗೂ ಕಳುಹಿಸಲಾಗಿದೆ ಎಂದು ಹೇಳಿದ್ದಾರೆ.

ವಿದ್ಯಾರ್ಥಿಗಳು ಶಾಲೆಗೆ ಮೊಟ್ಟೆಯನ್ನು ತರಲು ಸಾಧ್ಯವಿಲ್ಲ ಎಂಬ ನೀತಿಯನ್ನು ಶಾಲೆಗೆ ಹೊಂದಬಹುದೇ ಎಂದು ದರಾಬ್ ಫಾರೂಕಿ ಪ್ರಶ್ನಿಸಿದ್ದಾರೆ. ಅವರು ಶಾಲೆಯ ಪಠ್ಯಪುಸ್ತಕದಿಂದ ಪುಟಗಳನ್ನು ಕೂಡ ಪೋಸ್ಟ್ ಮಾಡಿದ್ದು, ಅದರಲ್ಲಿ ಮೊಟ್ಟೆ, ಕೋಳಿಯಂತಹ ಆಹಾರಗಳು ಮಕ್ಕಳನ್ನು ಶಕ್ತಿಯುತ ಮತ್ತು ಆರೋಗ್ಯವಂತರನ್ನಾಗಿ ಮಾಡುವ ಆಹಾರ ಪದಾರ್ಥಗಳು ಎಂದು ಉಲ್ಲೇಖಿಸಲಾಗಿತ್ತು.

ಮಹಾರಾಜ ಸವಾಯಿ ಮಾನ್ ಸಿಂಗ್ ವಿದ್ಯಾಲಯ ಎಂಬ ಶಾಲೆಯು ನಗರದ ಹೃದಯಭಾಗದಲ್ಲಿದೆ ಮತ್ತು ಇದನ್ನು ಜೈಪುರದ ರಾಜಮಾತಾ ಗಾಯತ್ರಿ ದೇವಿಯವರು 1984ರಲ್ಲಿ ಪ್ರಾರಂಭಿಸಿದರು. ಇದು ನಗರದ ಪ್ರತಿಷ್ಠಿತ ಶಾಲೆ, ಶಾಲಾ ವಿದ್ಯಾರ್ಥಿಗಳು ಟಿಫಿನ್‌ನಲ್ಲಿ ಆಹಾರ ಪದಾರ್ಥಗಳ ವಿಷಯದಲ್ಲಿ ಈ ಹಿಂದೆಂದೂ ಇಂತಹ ತಾರತಮ್ಯವನ್ನು ಎದುರಿಸಿಲ್ಲ. ಶಾಲೆಯಲ್ಲಿದ್ದಾಗ ನನ್ನ ಮಗನಿಗೆ ನಿಯಮಿತವಾಗಿ ಮಾಂಸಾಹಾರವನ್ನು ನೀಡುತ್ತಿದ್ದೆ. ಆಗ ಯಾವುದೇ ನಿರ್ಬಂಧಗಳಿರಲಿಲ್ಲ ಎಂದು ಈ ಬಗ್ಗೆ ಪೋಷಕರೋರ್ವರು ಹೇಳಿದ್ದಾರೆ.

ಶಾಲೆಯ ಪ್ರಾಂಶುಪಾಲರಾದ ಜ್ಯೋತಿ ಜೋಶಿ ಅವರು ಈ ಬಗ್ಗೆ ಪ್ರತಿಕ್ರಿಯಿಸಿದ್ದು, ಅಂತಹ ಸೂಚನೆಯನ್ನು ಕಳುಹಿಸಲಾಗಿಲ್ಲ. ಆದರೂ ಈ ಬಗ್ಗೆ ‘ಎಕ್ಸ್’ ವೇದಿಕೆಯಲ್ಲಿ ಚರ್ಚಿಸಲಾಗುತ್ತಿದೆ. ಚರ್ಚಿಸಲು ಇದಕ್ಕಿಂತಲೂ ಹೆಚ್ಚು ಮುಖ್ಯವಾದ ವಿಷಯಗಳಿವೆ. ಆದರೆ, ಟಿಫಿನ್ ಬಾಕ್ಸ್‌ನಲ್ಲಿ ಮಾಂಸಾಹಾರದ ಪದಾರ್ಥಗಳು ಹಳಸುವ ಕಾರಣ, ಅದು ತಿನ್ನಲು ಯೋಗ್ಯವಾಗಿರುವುದಿಲ್ಲ. ನಾನು ವಿಜ್ಞಾನದ ಹಿನ್ನೆಲೆಯಿಂದ ಬಂದಿರುವುದರಿಂದ ಈ ಬಗ್ಗೆ ಚೆನ್ನಾಗಿ ತಿಳಿದಿದೆ. ವಾತಾವರಣವೂ ಬಿಸಿಯಾಗಿದೆ ಎಂದು ಹೇಳಿದ್ದಾರೆ.

ಹೈದರಾಬಾದ್‌ನ ಶಾಲೆಯೊಂದು 2018ರಲ್ಲಿ ಟಿಫಿನ್‌ಗಳಲ್ಲಿ ಮಾಂಸಾಹಾರವನ್ನು ನಿಷೇಧಿಸಿತ್ತು. ಮೊಟ್ಟೆಗಳು ಪ್ರೋಟೀನ್‌ನ ಪ್ರಮುಖ ಮೂಲವಾಗಿದ್ದರೂ ಬಿಜೆಪಿ ಆಡಳಿತದ ರಾಜಸ್ಥಾನ, ಗುಜರಾತ್, ಮಧ್ಯಪ್ರದೇಶ ರಾಜ್ಯಗಳು ಸರ್ಕಾರಿ ಶಾಲೆಗಳಲ್ಲಿ ಮಧ್ಯಾಹ್ನದ ಊಟದಲ್ಲಿ ಮೊಟ್ಟೆಗಳನ್ನು ನೀಡುತ್ತಿಲ್ಲ. ಒಡಿಶಾ, ತಮಿಳುನಾಡು, ಉತ್ತರಾಖಂಡ, ತೆಲಂಗಾಣ ಸರ್ಕಾರಗಳು ಮಕ್ಕಳಿಗೆ ಮಧ್ಯಾಹ್ನದ ಊಟದಲ್ಲಿ ಮೊಟ್ಟೆಯನ್ನು ನೀಡುತ್ತಿವೆ. ಶಾಲೆಯ ಮಧ್ಯಾಹ್ನದ ಊಟದಲ್ಲಿ ಮೊಟ್ಟೆಗಳನ್ನು ನೀಡುವ ಬಗ್ಗೆ ಹಲವು ಬಾರಿ ಚರ್ಚೆಗಳು ಕೂಡ ನಡೆದಿದೆ.

ಇದನ್ನು ಓದಿ: ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ಭಾರತದಲ್ಲಿ ಬಿಕ್ಕಟ್ಟಿನಲ್ಲಿ ಪತ್ರಿಕಾ ಸ್ವಾತಂತ್ರ್ಯ: ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...