Homeಕರ್ನಾಟಕಪ್ರಧಾನಿ ಮೋದಿಯವರ ಬಡವಿರೋಧಿ, ಸೇಡಿನ ರಾಜಕಾರಣದ ಕ್ರೋನಾಲಜಿ ವಿವರಿಸಿದ ಜೈರಾಮ್ ರಮೇಶ್

ಪ್ರಧಾನಿ ಮೋದಿಯವರ ಬಡವಿರೋಧಿ, ಸೇಡಿನ ರಾಜಕಾರಣದ ಕ್ರೋನಾಲಜಿ ವಿವರಿಸಿದ ಜೈರಾಮ್ ರಮೇಶ್

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಅವರ ಬಿಜೆಪಿ ಸರ್ಕಾರ ಬಡವರ ವಿರೋಧಿಯಾಗಿದೆ. ಕರ್ನಾಟಕದ ಅನ್ನಭಾಗ್ಯ ಯೋಜನೆಗೆ ಅಕ್ಕಿ ನೀಡದೇ ಸೇಡಿನ ರಾಜಕಾರಣ ಮಾಡುತ್ತಿದೆ ಎಂದು ಕಾಂಗ್ರೆಸ್ ಮುಖಂಡ ಜೈರಾಮ್ ರಮೇಶ್ ಆರೋಪಿಸಿದ್ದಾರೆ.

ಈ ವಿಚಾರವಾಗಿ ಟ್ವಿಟ್ ಮಾಡಿರುವ ಅವರು, ಪ್ರಧಾನಿ ಮೋದಿಯವರ ಬಡವಿರೋಧಿ ಮತ್ತು ಸೇಡಿನ ರಾಜಕಾರಣದ ಇತ್ತೀಚಿನ ಕ್ರೋನಾಲಜಿ ಹೀಗಿದೆ ಎಂದು ಟ್ವಿಟ್ ಮಾಡಿದ್ದಾರೆ.

1. ಮೇ 13, 2023: ಕರ್ನಾಟಕದ ಜನರಿಂದ ಪ್ರಧಾನಿ ಮತ್ತು ಬಿಜೆಪಿಯನ್ನು ಸಂಪೂರ್ಣವಾಗಿ ತಿರಸ್ಕರಿಸಲಾಗಿದೆ.

2. ಜೂನ್ 2, 2023: ಬಡ ಕುಟುಂಬಗಳಿಗೆ 10 ಕೆಜಿ ಉಚಿತ ಆಹಾರ ಧಾನ್ಯಗಳನ್ನು ನೀಡುವ ಅನ್ನಭಾಗ್ಯ ಗ್ಯಾರಂಟಿಯನ್ನು ಜುಲೈ 1ರಿಂದ ಜಾರಿಗೊಳಿಸುವುದಾಗಿ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದರು.

3. ಜೂನ್ 13, 2023: ಮುಕ್ತ ಮಾರುಕಟ್ಟೆ ಮಾರಾಟ ಯೋಜನೆಯಡಿಯಲ್ಲಿ ಎಫ್‌ಸಿಐನಿಂದ ರಾಜ್ಯಗಳಿಗೆ ಅಕ್ಕಿ ಮಾರಾಟವನ್ನು ನಿಷೇಧಿಸುವ ಸುತ್ತೋಲೆಯನ್ನು ಕೇಂದ್ರ ಸರ್ಕಾರ ಹೊರಡಿಸಿದೆ. ಅನ್ನಭಾಗ್ಯ ಯೋಜನೆಗೆ ಹಿನ್ನಡೆ ತರಲು ಈ ಆದೇಶ ಹೊರಡಿಸಲಾಯಿತು.

”ಕರ್ನಾಟಕವು ಎಫ್‌ಸಿಐಗೆ ಪ್ರತಿ ಕ್ವಿಂಟಲ್‌ಗೆ 3400ರೂ. ನೀಡುತ್ತೇವೆ ಎಂದರೂ ಅಕ್ಕಿ ನೀಡಲಿಲ್ಲ. ಆದರೆ ಎಫ್‌ಸಿಐ ಎಥೆನಾಲ್ ಉತ್ಪಾದನೆ ಮತ್ತು ಪೆಟ್ರೋಲ್ ಮಿಶ್ರಣಕ್ಕಾಗಿ ಪ್ರತಿ ಕ್ವಿಂಟಾಲ್‌ಗೆ 2000ರೂ.ಗೆ ಅಕ್ಕಿಯನ್ನು ಮಾರಾಟ ಮಾಡಲು ಸಿದ್ಧವಾಗಿದೆ. ಬೇರೆಲ್ಲಕ್ಕಿಂತಲೂ ಆಹಾರ ಭದ್ರತೆ ಕುರಿತ ಕಾಳಜಿ ಆದ್ಯತೆಯಾಗಬೇಕಿದೆ” ಎಂದು ಜೈರಾಂ ರಮೇಶ್ ಟ್ವಿಟ್ ಮಾಡಿದ್ದಾರೆ.

ಇದನ್ನೂ ಓದಿ: ಬಿಜೆಪಿಯ ಹೀನ ರಾಜಕೀಯವು ಬಡವರ ತಟ್ಟೆಯ ಅನ್ನಕ್ಕೂ ವ್ಯಾಪಿಸಿರುವುದು ದುರಂತ: ಕಾಂಗ್ರೆಸ್

ಅಕ್ಕಿ ವಿಚಾರಕ್ಕೆ ಬಿಜೆಪಿ ವಿರುದ್ಧ ರಾಜ್ಯ ಕಾಂಗ್ರೆಸ್ ಆಕ್ರೋಶ

ಅನ್ನಭಾಗ್ಯ ಯೋಜನೆಗೆ ಅಕ್ಕಿ ನೀಡಲು ನಿರಾಕರಿಸಿರುವ ಕೇಂದ್ರ ಬಿಜೆಪಿ ವಿರುದ್ಧ ರಾಜ್ಯ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿ ಸರಣಿ ಟ್ವೀಟ್ ಮಾಡಿದ್ದು, ”ಬಿಜೆಪಿಯ ಹೀನ ರಾಜಕೀಯವು ಬಡವರ ತಟ್ಟೆಯ ಅನ್ನಕ್ಕೂ ವ್ಯಾಪಿಸಿರುವುದು ದುರಂತ. FCI ಗೋದಾಮುಗಳು ಕರ್ನಾಟಕದಲ್ಲೇ ಇವೆ, FCI ನಿಂದ ಅಕ್ಕಿ ಖರೀದಿಸುವುದಾದರೆ ಸಾಗಣೆ ವೆಚ್ಚ ಹಾಗೂ ಸಮಯ ಉಳಿಯಲಿದೆ. ಇತರ ರಾಜ್ಯಗಳಿಂದ ತರಿಸುವುದಾದರೆ ಸಾಗಣೆಯ ದರ ಹಾಗೂ ಸಮಯ ಹೆಚ್ಚಲಿದೆ. ನಮ್ಮ ಗ್ಯಾರಂಟಿಗಳ ಯಶಸ್ಸನ್ನು ತಡೆಯುವ ಬಿಜೆಪಿಯ ಕುತಂತ್ರವು ರಾಜ್ಯಕ್ಕೆ ಹೊರೆಯಾಗಿ ಪರಿಣಮಿಸಿದೆ” ಎಂದಿದ್ದಾರೆ.

ರಾಜ್ಯ ಬಿಜೆಪಿ ನಾಯಕರ ವಿರುದ್ಧ ಕೆಂಡಕಾರಿರುವ ಕಾಂಗ್ರೆಸ್, ”ಕರ್ನಾಟಕದ ಬಡವರಿಗೆ ಅನ್ನ ನೀಡುವ ಯೋಜನೆಯೊಂದಕ್ಕೆ ಅಡೆತಡೆ ಉಂಟಾದಾಗ ಪಕ್ಷಾತೀತವಾಗಿ ಜನಪರವಾಗಿ ಕೆಲಸ ಮಾಡಬೇಕಿತ್ತು, ಬಡವರಿಗೆ ಅನ್ನ ಕೊಡಿಸುವ ಹೊಣೆಗಾರಿಕೆಯನ್ನು ವಿರೋಧಪಕ್ಷಗಳೂ ಹೊರಬೇಕಿತ್ತು. ಆದರೆ ರಾಜ್ಯ ಬಿಜೆಪಿ ನಾಯಕರು ಕೇಂದ್ರದ ಮೇಲೆ ಒತ್ತಡ ಹೇರುವ ಬದಲು ಅನ್ನದ ವಿಷಯದಲ್ಲೂ ಕ್ಷುಲ್ಲುಕ ರಾಜಕೀಯ ಮಾಡಲು ಹೊರಟಿದ್ದು ದುರಾದೃಷ್ಟಕರ” ಎಂದು ಟ್ವೀಟ್ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದಿಂದ ದಾಳಿ ಬೆದರಿಕೆ : ಇರಾನ್ ತೊರೆಯುವಂತೆ ಭಾರತೀಯ ಪ್ರಜೆಗಳಿಗೆ ಸೂಚನೆ

ಅಮೆರಿಕದ ದಾಳಿ ಬೆದರಿಕೆ ಹಾಗೂ ಮತ್ತೆ ಪ್ರತಿಭಟನೆಗಳು ಭುಗಿಲೆದ್ದಿರುವ ಕಾರಣ, ಇರಾನ್‌ನಲ್ಲಿರುವ ಎಲ್ಲಾ ಭಾರತೀಯರು ವಾಣಿಜ್ಯ ವಿಮಾನಗಳು ಸೇರಿದಂತೆ ಲಭ್ಯವಿರುವ ಸಾರಿಗೆ ವ್ಯವಸ್ಥೆಯ ಮೂಲಕ ತಕ್ಷಣ ದೇಶ ತೊರೆಯುವಂತೆ ತೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ...

ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್

ಕೇಂದ್ರ ಅಪರಾಧ ಶಾಖೆ (ಸಿಸಿಬಿ) ವಶಕ್ಕೆ ಪಡೆದು ವಿಚಾರಣೆ ನಡೆಸಿದ ಕೆಲವು ದಿನಗಳ ನಂತರ, ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.  ಪವಿತ್ರಾ ಬಿ.ಎನ್ ಸಲ್ಲಿಸಿದ ದೂರಿನ ಆಧಾರದ ಮೇಲೆ...

ವಾರಣಾಸಿಯಲ್ಲಿ ಆಚರಿಸುವ ಪ್ರಸಿದ್ಧ ‘ಭಸ್ಮ ಹೋಳಿ’ಗೆ ಸಂಸ್ಕೃತ ವಿದ್ವಾಂಸರು ಮತ್ತು ಕಾಶಿ ವಿದ್ವತ್ ಪರಿಷತ್ ವಿರೋಧ 

ವಾರಣಾಸಿ (ಉತ್ತರ ಪ್ರದೇಶ): ನಗರದ ಸ್ಮಶಾನ ಭೂಮಿಗಳಾದ ಮಣಿಕರ್ಣಿಕಾ ಮತ್ತು ಹರಿಶ್ಚಂದ್ರ ಘಾಟ್‌ಗಳಲ್ಲಿ 'ಮಸಾನೆ ಕಿ ಹೋ ಲಿ ' ನುಡಿಸುವ ಸಂಪ್ರದಾಯವನ್ನು ಸಂಸ್ಕೃತ ವಿದ್ವಾಂಸರು ಮತ್ತು ಹಿಂದೂ ಧರ್ಮಗ್ರಂಥಗಳ ತಜ್ಞರ ಪರಿಷತ್ತು...

ಮುಸ್ಲಿಮರೆಂದು ತಿಳಿದು ಮಹಿಳೆಯರಿಗೆ ವಿತರಿಸಿದ್ದ ಕಂಬಳಿ ವಾಪಸ್ ಪಡೆದ ಬಿಜೆಪಿ ಮಾಜಿ ಸಂಸದ

ಬಿಜೆಪಿಯ ಮಾಜಿ ಸಂಸದ ಸುಖ್‌ವೀರ್ ಸಿಂಗ್ ಜೌನ್‌ಪುರಿಯಾ ಅವರು, ಮುಸ್ಲಿಮರೆಂದು ಗೊತ್ತಾದ ಬಳಿಕ ಮಹಿಳೆಯರಿಗೆ ವಿತರಿಸಿದ್ದ ಕಂಬಳಿಯನ್ನು ವಾಪಸ್ ಪಡೆದಿದ್ದಾರೆ ಎಂದು ರಾಜಸ್ಥಾನ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಟಿಕರಾಮ್ ಜುಲ್ಲಿ ಭಾನುವಾರ...

ಜೆಎನ್‌ಯು: ಎಡಪಂಥೀಯ ವಿದ್ಯಾರ್ಥಿ ಸಂಘಟನೆ ಮತ್ತು ಎಬಿವಿಪಿ ನಡುವೆ ಘರ್ಷಣೆ: ಉದ್ವಿಗ್ನತೆ  

ಸೋಮವಾರ ಮುಂಜಾನೆ ನಡೆದ ಪ್ರತಿಭಟನಾ ಮೆರವಣಿಗೆಯಲ್ಲಿ ಎಡಪಂಥೀಯ ಮತ್ತು ಬಲಪಂಥೀಯ ವಿದ್ಯಾರ್ಥಿ ಗುಂಪುಗಳು ಪರಸ್ಪರ ಹಿಂಸಾಚಾರವನ್ನು ಬಿಚ್ಚಿಟ್ಟಿದ್ದಾರೆ ಎಂದು ಆರೋಪಿಸಿದ ನಂತರ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯ (ಜೆಎನ್‌ಯು) ಆವರಣದಲ್ಲಿ ಉದ್ವಿಗ್ನತೆ ಉಂಟಾಗಿದೆ.  ಸೋಮವಾರ ಬೆಳಗಿನ...

ಡ್ರಗ್ ದೊರೆ ‘ಎಲ್ ಮೆಂಚೊ’ ಹತ್ಯೆ : ಮೆಕ್ಸಿಕೋದಲ್ಲಿ ಭುಗಿಲೆದ್ದ ಹಿಂಸಾಚಾರ

'ಎಲ್ ಮೆಂಚೊ' ಎಂದೇ ಪರಿಚಿತನಾಗಿದ್ದ ಡ್ರಗ್ ದೊರೆ ನೆಮೆಸಿಯೊ ಒಸೆಗುಯೆರಾನನ್ನು ಕಾರ್ಯಾಚರಣೆಯೊಂದರಲ್ಲಿ ಕೊಂದಿರುವುದಾಗಿ ಮೆಕ್ಸಿಕನ್ ಸೇನೆ ಭಾನುವಾರ (ಫೆ.22) ಘೋಷಿಸಿದೆ. ಆ ಬಳಿಕ ದೇಶದ ವಿವಿಧ ಭಾಗಗಳಲ್ಲಿ ಭಾರೀ ಹಿಂಸಾಚಾರ ಭುಗಿಲೆದ್ದಿದೆ ಎಂದು...

ನೇಪಾಳ ಬಸ್ ಅಪಘಾತ: ಧಾಡಿಂಗ್‌ನಲ್ಲಿ ತ್ರಿಶೂಲಿ ನದಿಗೆ ಬಸ್ ಬಿದ್ದು 18 ಮಂದಿ ಸಾವು; ಮುಂದುವರಿದ ರಕ್ಷಣಾ ಕಾರ್ಯಾಚರಣೆ

ಧಾಡಿಂಗ್ (ನೇಪಾಳ): ಸೋಮವಾರ ಮುಂಜಾನೆ ನೇಪಾಳದ ಧಾಡಿಂಗ್‌ನಲ್ಲಿ ಪ್ರಯಾಣಿಕರ ಬಸ್ ತ್ರಿಶೂಲಿ ನದಿಗೆ ಉರುಳಿಬಿದ್ದ ಪರಿಣಾಮ ಕನಿಷ್ಠ 18 ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅಪಘಾತದಲ್ಲಿ 24 ಕ್ಕೂ ಹೆಚ್ಚು ಪ್ರಯಾಣಿಕರು...

ಅಜಿತ್ ಪವಾರ್ ಸಾವು | ಪತನಗೊಂಡ ವಿಮಾನದ ನಿರ್ವಹಣಾ ಸಂಸ್ಥೆಗೂ ಟಿಡಿಪಿಗೂ ನಂಟು : ರೋಹಿತ್ ಪವಾರ್

ಅಜಿತ್ ಪವಾರ್ ಸಾವಿಗೆ ಕಾರಣವಾದ ಪತನಗೊಂಡ ವಿಮಾನದ ನಿರ್ವಾಹಕ ಸಂಸ್ಥೆ ವಿಎಸ್ಆರ್ ವೆಂಚರ್ಸ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಡುವೆ ಸಂಬಂಧವಿದೆ ಎಂದು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಶರದ್ ಪವಾರ್ ಬಣದ)...

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...