Homeಕರ್ನಾಟಕಪ್ರಧಾನಿ ಮೋದಿಯವರ ಬಡವಿರೋಧಿ, ಸೇಡಿನ ರಾಜಕಾರಣದ ಕ್ರೋನಾಲಜಿ ವಿವರಿಸಿದ ಜೈರಾಮ್ ರಮೇಶ್

ಪ್ರಧಾನಿ ಮೋದಿಯವರ ಬಡವಿರೋಧಿ, ಸೇಡಿನ ರಾಜಕಾರಣದ ಕ್ರೋನಾಲಜಿ ವಿವರಿಸಿದ ಜೈರಾಮ್ ರಮೇಶ್

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಅವರ ಬಿಜೆಪಿ ಸರ್ಕಾರ ಬಡವರ ವಿರೋಧಿಯಾಗಿದೆ. ಕರ್ನಾಟಕದ ಅನ್ನಭಾಗ್ಯ ಯೋಜನೆಗೆ ಅಕ್ಕಿ ನೀಡದೇ ಸೇಡಿನ ರಾಜಕಾರಣ ಮಾಡುತ್ತಿದೆ ಎಂದು ಕಾಂಗ್ರೆಸ್ ಮುಖಂಡ ಜೈರಾಮ್ ರಮೇಶ್ ಆರೋಪಿಸಿದ್ದಾರೆ.

ಈ ವಿಚಾರವಾಗಿ ಟ್ವಿಟ್ ಮಾಡಿರುವ ಅವರು, ಪ್ರಧಾನಿ ಮೋದಿಯವರ ಬಡವಿರೋಧಿ ಮತ್ತು ಸೇಡಿನ ರಾಜಕಾರಣದ ಇತ್ತೀಚಿನ ಕ್ರೋನಾಲಜಿ ಹೀಗಿದೆ ಎಂದು ಟ್ವಿಟ್ ಮಾಡಿದ್ದಾರೆ.

1. ಮೇ 13, 2023: ಕರ್ನಾಟಕದ ಜನರಿಂದ ಪ್ರಧಾನಿ ಮತ್ತು ಬಿಜೆಪಿಯನ್ನು ಸಂಪೂರ್ಣವಾಗಿ ತಿರಸ್ಕರಿಸಲಾಗಿದೆ.

2. ಜೂನ್ 2, 2023: ಬಡ ಕುಟುಂಬಗಳಿಗೆ 10 ಕೆಜಿ ಉಚಿತ ಆಹಾರ ಧಾನ್ಯಗಳನ್ನು ನೀಡುವ ಅನ್ನಭಾಗ್ಯ ಗ್ಯಾರಂಟಿಯನ್ನು ಜುಲೈ 1ರಿಂದ ಜಾರಿಗೊಳಿಸುವುದಾಗಿ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದರು.

3. ಜೂನ್ 13, 2023: ಮುಕ್ತ ಮಾರುಕಟ್ಟೆ ಮಾರಾಟ ಯೋಜನೆಯಡಿಯಲ್ಲಿ ಎಫ್‌ಸಿಐನಿಂದ ರಾಜ್ಯಗಳಿಗೆ ಅಕ್ಕಿ ಮಾರಾಟವನ್ನು ನಿಷೇಧಿಸುವ ಸುತ್ತೋಲೆಯನ್ನು ಕೇಂದ್ರ ಸರ್ಕಾರ ಹೊರಡಿಸಿದೆ. ಅನ್ನಭಾಗ್ಯ ಯೋಜನೆಗೆ ಹಿನ್ನಡೆ ತರಲು ಈ ಆದೇಶ ಹೊರಡಿಸಲಾಯಿತು.

”ಕರ್ನಾಟಕವು ಎಫ್‌ಸಿಐಗೆ ಪ್ರತಿ ಕ್ವಿಂಟಲ್‌ಗೆ 3400ರೂ. ನೀಡುತ್ತೇವೆ ಎಂದರೂ ಅಕ್ಕಿ ನೀಡಲಿಲ್ಲ. ಆದರೆ ಎಫ್‌ಸಿಐ ಎಥೆನಾಲ್ ಉತ್ಪಾದನೆ ಮತ್ತು ಪೆಟ್ರೋಲ್ ಮಿಶ್ರಣಕ್ಕಾಗಿ ಪ್ರತಿ ಕ್ವಿಂಟಾಲ್‌ಗೆ 2000ರೂ.ಗೆ ಅಕ್ಕಿಯನ್ನು ಮಾರಾಟ ಮಾಡಲು ಸಿದ್ಧವಾಗಿದೆ. ಬೇರೆಲ್ಲಕ್ಕಿಂತಲೂ ಆಹಾರ ಭದ್ರತೆ ಕುರಿತ ಕಾಳಜಿ ಆದ್ಯತೆಯಾಗಬೇಕಿದೆ” ಎಂದು ಜೈರಾಂ ರಮೇಶ್ ಟ್ವಿಟ್ ಮಾಡಿದ್ದಾರೆ.

ಇದನ್ನೂ ಓದಿ: ಬಿಜೆಪಿಯ ಹೀನ ರಾಜಕೀಯವು ಬಡವರ ತಟ್ಟೆಯ ಅನ್ನಕ್ಕೂ ವ್ಯಾಪಿಸಿರುವುದು ದುರಂತ: ಕಾಂಗ್ರೆಸ್

ಅಕ್ಕಿ ವಿಚಾರಕ್ಕೆ ಬಿಜೆಪಿ ವಿರುದ್ಧ ರಾಜ್ಯ ಕಾಂಗ್ರೆಸ್ ಆಕ್ರೋಶ

ಅನ್ನಭಾಗ್ಯ ಯೋಜನೆಗೆ ಅಕ್ಕಿ ನೀಡಲು ನಿರಾಕರಿಸಿರುವ ಕೇಂದ್ರ ಬಿಜೆಪಿ ವಿರುದ್ಧ ರಾಜ್ಯ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿ ಸರಣಿ ಟ್ವೀಟ್ ಮಾಡಿದ್ದು, ”ಬಿಜೆಪಿಯ ಹೀನ ರಾಜಕೀಯವು ಬಡವರ ತಟ್ಟೆಯ ಅನ್ನಕ್ಕೂ ವ್ಯಾಪಿಸಿರುವುದು ದುರಂತ. FCI ಗೋದಾಮುಗಳು ಕರ್ನಾಟಕದಲ್ಲೇ ಇವೆ, FCI ನಿಂದ ಅಕ್ಕಿ ಖರೀದಿಸುವುದಾದರೆ ಸಾಗಣೆ ವೆಚ್ಚ ಹಾಗೂ ಸಮಯ ಉಳಿಯಲಿದೆ. ಇತರ ರಾಜ್ಯಗಳಿಂದ ತರಿಸುವುದಾದರೆ ಸಾಗಣೆಯ ದರ ಹಾಗೂ ಸಮಯ ಹೆಚ್ಚಲಿದೆ. ನಮ್ಮ ಗ್ಯಾರಂಟಿಗಳ ಯಶಸ್ಸನ್ನು ತಡೆಯುವ ಬಿಜೆಪಿಯ ಕುತಂತ್ರವು ರಾಜ್ಯಕ್ಕೆ ಹೊರೆಯಾಗಿ ಪರಿಣಮಿಸಿದೆ” ಎಂದಿದ್ದಾರೆ.

ರಾಜ್ಯ ಬಿಜೆಪಿ ನಾಯಕರ ವಿರುದ್ಧ ಕೆಂಡಕಾರಿರುವ ಕಾಂಗ್ರೆಸ್, ”ಕರ್ನಾಟಕದ ಬಡವರಿಗೆ ಅನ್ನ ನೀಡುವ ಯೋಜನೆಯೊಂದಕ್ಕೆ ಅಡೆತಡೆ ಉಂಟಾದಾಗ ಪಕ್ಷಾತೀತವಾಗಿ ಜನಪರವಾಗಿ ಕೆಲಸ ಮಾಡಬೇಕಿತ್ತು, ಬಡವರಿಗೆ ಅನ್ನ ಕೊಡಿಸುವ ಹೊಣೆಗಾರಿಕೆಯನ್ನು ವಿರೋಧಪಕ್ಷಗಳೂ ಹೊರಬೇಕಿತ್ತು. ಆದರೆ ರಾಜ್ಯ ಬಿಜೆಪಿ ನಾಯಕರು ಕೇಂದ್ರದ ಮೇಲೆ ಒತ್ತಡ ಹೇರುವ ಬದಲು ಅನ್ನದ ವಿಷಯದಲ್ಲೂ ಕ್ಷುಲ್ಲುಕ ರಾಜಕೀಯ ಮಾಡಲು ಹೊರಟಿದ್ದು ದುರಾದೃಷ್ಟಕರ” ಎಂದು ಟ್ವೀಟ್ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...