Homeಕರ್ನಾಟಕಪ್ರಧಾನಿ ಮೋದಿಯವರ ಬಡವಿರೋಧಿ, ಸೇಡಿನ ರಾಜಕಾರಣದ ಕ್ರೋನಾಲಜಿ ವಿವರಿಸಿದ ಜೈರಾಮ್ ರಮೇಶ್

ಪ್ರಧಾನಿ ಮೋದಿಯವರ ಬಡವಿರೋಧಿ, ಸೇಡಿನ ರಾಜಕಾರಣದ ಕ್ರೋನಾಲಜಿ ವಿವರಿಸಿದ ಜೈರಾಮ್ ರಮೇಶ್

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಅವರ ಬಿಜೆಪಿ ಸರ್ಕಾರ ಬಡವರ ವಿರೋಧಿಯಾಗಿದೆ. ಕರ್ನಾಟಕದ ಅನ್ನಭಾಗ್ಯ ಯೋಜನೆಗೆ ಅಕ್ಕಿ ನೀಡದೇ ಸೇಡಿನ ರಾಜಕಾರಣ ಮಾಡುತ್ತಿದೆ ಎಂದು ಕಾಂಗ್ರೆಸ್ ಮುಖಂಡ ಜೈರಾಮ್ ರಮೇಶ್ ಆರೋಪಿಸಿದ್ದಾರೆ.

ಈ ವಿಚಾರವಾಗಿ ಟ್ವಿಟ್ ಮಾಡಿರುವ ಅವರು, ಪ್ರಧಾನಿ ಮೋದಿಯವರ ಬಡವಿರೋಧಿ ಮತ್ತು ಸೇಡಿನ ರಾಜಕಾರಣದ ಇತ್ತೀಚಿನ ಕ್ರೋನಾಲಜಿ ಹೀಗಿದೆ ಎಂದು ಟ್ವಿಟ್ ಮಾಡಿದ್ದಾರೆ.

1. ಮೇ 13, 2023: ಕರ್ನಾಟಕದ ಜನರಿಂದ ಪ್ರಧಾನಿ ಮತ್ತು ಬಿಜೆಪಿಯನ್ನು ಸಂಪೂರ್ಣವಾಗಿ ತಿರಸ್ಕರಿಸಲಾಗಿದೆ.

2. ಜೂನ್ 2, 2023: ಬಡ ಕುಟುಂಬಗಳಿಗೆ 10 ಕೆಜಿ ಉಚಿತ ಆಹಾರ ಧಾನ್ಯಗಳನ್ನು ನೀಡುವ ಅನ್ನಭಾಗ್ಯ ಗ್ಯಾರಂಟಿಯನ್ನು ಜುಲೈ 1ರಿಂದ ಜಾರಿಗೊಳಿಸುವುದಾಗಿ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದರು.

3. ಜೂನ್ 13, 2023: ಮುಕ್ತ ಮಾರುಕಟ್ಟೆ ಮಾರಾಟ ಯೋಜನೆಯಡಿಯಲ್ಲಿ ಎಫ್‌ಸಿಐನಿಂದ ರಾಜ್ಯಗಳಿಗೆ ಅಕ್ಕಿ ಮಾರಾಟವನ್ನು ನಿಷೇಧಿಸುವ ಸುತ್ತೋಲೆಯನ್ನು ಕೇಂದ್ರ ಸರ್ಕಾರ ಹೊರಡಿಸಿದೆ. ಅನ್ನಭಾಗ್ಯ ಯೋಜನೆಗೆ ಹಿನ್ನಡೆ ತರಲು ಈ ಆದೇಶ ಹೊರಡಿಸಲಾಯಿತು.

”ಕರ್ನಾಟಕವು ಎಫ್‌ಸಿಐಗೆ ಪ್ರತಿ ಕ್ವಿಂಟಲ್‌ಗೆ 3400ರೂ. ನೀಡುತ್ತೇವೆ ಎಂದರೂ ಅಕ್ಕಿ ನೀಡಲಿಲ್ಲ. ಆದರೆ ಎಫ್‌ಸಿಐ ಎಥೆನಾಲ್ ಉತ್ಪಾದನೆ ಮತ್ತು ಪೆಟ್ರೋಲ್ ಮಿಶ್ರಣಕ್ಕಾಗಿ ಪ್ರತಿ ಕ್ವಿಂಟಾಲ್‌ಗೆ 2000ರೂ.ಗೆ ಅಕ್ಕಿಯನ್ನು ಮಾರಾಟ ಮಾಡಲು ಸಿದ್ಧವಾಗಿದೆ. ಬೇರೆಲ್ಲಕ್ಕಿಂತಲೂ ಆಹಾರ ಭದ್ರತೆ ಕುರಿತ ಕಾಳಜಿ ಆದ್ಯತೆಯಾಗಬೇಕಿದೆ” ಎಂದು ಜೈರಾಂ ರಮೇಶ್ ಟ್ವಿಟ್ ಮಾಡಿದ್ದಾರೆ.

ಇದನ್ನೂ ಓದಿ: ಬಿಜೆಪಿಯ ಹೀನ ರಾಜಕೀಯವು ಬಡವರ ತಟ್ಟೆಯ ಅನ್ನಕ್ಕೂ ವ್ಯಾಪಿಸಿರುವುದು ದುರಂತ: ಕಾಂಗ್ರೆಸ್

ಅಕ್ಕಿ ವಿಚಾರಕ್ಕೆ ಬಿಜೆಪಿ ವಿರುದ್ಧ ರಾಜ್ಯ ಕಾಂಗ್ರೆಸ್ ಆಕ್ರೋಶ

ಅನ್ನಭಾಗ್ಯ ಯೋಜನೆಗೆ ಅಕ್ಕಿ ನೀಡಲು ನಿರಾಕರಿಸಿರುವ ಕೇಂದ್ರ ಬಿಜೆಪಿ ವಿರುದ್ಧ ರಾಜ್ಯ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿ ಸರಣಿ ಟ್ವೀಟ್ ಮಾಡಿದ್ದು, ”ಬಿಜೆಪಿಯ ಹೀನ ರಾಜಕೀಯವು ಬಡವರ ತಟ್ಟೆಯ ಅನ್ನಕ್ಕೂ ವ್ಯಾಪಿಸಿರುವುದು ದುರಂತ. FCI ಗೋದಾಮುಗಳು ಕರ್ನಾಟಕದಲ್ಲೇ ಇವೆ, FCI ನಿಂದ ಅಕ್ಕಿ ಖರೀದಿಸುವುದಾದರೆ ಸಾಗಣೆ ವೆಚ್ಚ ಹಾಗೂ ಸಮಯ ಉಳಿಯಲಿದೆ. ಇತರ ರಾಜ್ಯಗಳಿಂದ ತರಿಸುವುದಾದರೆ ಸಾಗಣೆಯ ದರ ಹಾಗೂ ಸಮಯ ಹೆಚ್ಚಲಿದೆ. ನಮ್ಮ ಗ್ಯಾರಂಟಿಗಳ ಯಶಸ್ಸನ್ನು ತಡೆಯುವ ಬಿಜೆಪಿಯ ಕುತಂತ್ರವು ರಾಜ್ಯಕ್ಕೆ ಹೊರೆಯಾಗಿ ಪರಿಣಮಿಸಿದೆ” ಎಂದಿದ್ದಾರೆ.

ರಾಜ್ಯ ಬಿಜೆಪಿ ನಾಯಕರ ವಿರುದ್ಧ ಕೆಂಡಕಾರಿರುವ ಕಾಂಗ್ರೆಸ್, ”ಕರ್ನಾಟಕದ ಬಡವರಿಗೆ ಅನ್ನ ನೀಡುವ ಯೋಜನೆಯೊಂದಕ್ಕೆ ಅಡೆತಡೆ ಉಂಟಾದಾಗ ಪಕ್ಷಾತೀತವಾಗಿ ಜನಪರವಾಗಿ ಕೆಲಸ ಮಾಡಬೇಕಿತ್ತು, ಬಡವರಿಗೆ ಅನ್ನ ಕೊಡಿಸುವ ಹೊಣೆಗಾರಿಕೆಯನ್ನು ವಿರೋಧಪಕ್ಷಗಳೂ ಹೊರಬೇಕಿತ್ತು. ಆದರೆ ರಾಜ್ಯ ಬಿಜೆಪಿ ನಾಯಕರು ಕೇಂದ್ರದ ಮೇಲೆ ಒತ್ತಡ ಹೇರುವ ಬದಲು ಅನ್ನದ ವಿಷಯದಲ್ಲೂ ಕ್ಷುಲ್ಲುಕ ರಾಜಕೀಯ ಮಾಡಲು ಹೊರಟಿದ್ದು ದುರಾದೃಷ್ಟಕರ” ಎಂದು ಟ್ವೀಟ್ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....