Homeಕರ್ನಾಟಕಪ್ರಧಾನಿ ಮೋದಿಯವರ ಬಡವಿರೋಧಿ, ಸೇಡಿನ ರಾಜಕಾರಣದ ಕ್ರೋನಾಲಜಿ ವಿವರಿಸಿದ ಜೈರಾಮ್ ರಮೇಶ್

ಪ್ರಧಾನಿ ಮೋದಿಯವರ ಬಡವಿರೋಧಿ, ಸೇಡಿನ ರಾಜಕಾರಣದ ಕ್ರೋನಾಲಜಿ ವಿವರಿಸಿದ ಜೈರಾಮ್ ರಮೇಶ್

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಅವರ ಬಿಜೆಪಿ ಸರ್ಕಾರ ಬಡವರ ವಿರೋಧಿಯಾಗಿದೆ. ಕರ್ನಾಟಕದ ಅನ್ನಭಾಗ್ಯ ಯೋಜನೆಗೆ ಅಕ್ಕಿ ನೀಡದೇ ಸೇಡಿನ ರಾಜಕಾರಣ ಮಾಡುತ್ತಿದೆ ಎಂದು ಕಾಂಗ್ರೆಸ್ ಮುಖಂಡ ಜೈರಾಮ್ ರಮೇಶ್ ಆರೋಪಿಸಿದ್ದಾರೆ.

ಈ ವಿಚಾರವಾಗಿ ಟ್ವಿಟ್ ಮಾಡಿರುವ ಅವರು, ಪ್ರಧಾನಿ ಮೋದಿಯವರ ಬಡವಿರೋಧಿ ಮತ್ತು ಸೇಡಿನ ರಾಜಕಾರಣದ ಇತ್ತೀಚಿನ ಕ್ರೋನಾಲಜಿ ಹೀಗಿದೆ ಎಂದು ಟ್ವಿಟ್ ಮಾಡಿದ್ದಾರೆ.

1. ಮೇ 13, 2023: ಕರ್ನಾಟಕದ ಜನರಿಂದ ಪ್ರಧಾನಿ ಮತ್ತು ಬಿಜೆಪಿಯನ್ನು ಸಂಪೂರ್ಣವಾಗಿ ತಿರಸ್ಕರಿಸಲಾಗಿದೆ.

2. ಜೂನ್ 2, 2023: ಬಡ ಕುಟುಂಬಗಳಿಗೆ 10 ಕೆಜಿ ಉಚಿತ ಆಹಾರ ಧಾನ್ಯಗಳನ್ನು ನೀಡುವ ಅನ್ನಭಾಗ್ಯ ಗ್ಯಾರಂಟಿಯನ್ನು ಜುಲೈ 1ರಿಂದ ಜಾರಿಗೊಳಿಸುವುದಾಗಿ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದರು.

3. ಜೂನ್ 13, 2023: ಮುಕ್ತ ಮಾರುಕಟ್ಟೆ ಮಾರಾಟ ಯೋಜನೆಯಡಿಯಲ್ಲಿ ಎಫ್‌ಸಿಐನಿಂದ ರಾಜ್ಯಗಳಿಗೆ ಅಕ್ಕಿ ಮಾರಾಟವನ್ನು ನಿಷೇಧಿಸುವ ಸುತ್ತೋಲೆಯನ್ನು ಕೇಂದ್ರ ಸರ್ಕಾರ ಹೊರಡಿಸಿದೆ. ಅನ್ನಭಾಗ್ಯ ಯೋಜನೆಗೆ ಹಿನ್ನಡೆ ತರಲು ಈ ಆದೇಶ ಹೊರಡಿಸಲಾಯಿತು.

”ಕರ್ನಾಟಕವು ಎಫ್‌ಸಿಐಗೆ ಪ್ರತಿ ಕ್ವಿಂಟಲ್‌ಗೆ 3400ರೂ. ನೀಡುತ್ತೇವೆ ಎಂದರೂ ಅಕ್ಕಿ ನೀಡಲಿಲ್ಲ. ಆದರೆ ಎಫ್‌ಸಿಐ ಎಥೆನಾಲ್ ಉತ್ಪಾದನೆ ಮತ್ತು ಪೆಟ್ರೋಲ್ ಮಿಶ್ರಣಕ್ಕಾಗಿ ಪ್ರತಿ ಕ್ವಿಂಟಾಲ್‌ಗೆ 2000ರೂ.ಗೆ ಅಕ್ಕಿಯನ್ನು ಮಾರಾಟ ಮಾಡಲು ಸಿದ್ಧವಾಗಿದೆ. ಬೇರೆಲ್ಲಕ್ಕಿಂತಲೂ ಆಹಾರ ಭದ್ರತೆ ಕುರಿತ ಕಾಳಜಿ ಆದ್ಯತೆಯಾಗಬೇಕಿದೆ” ಎಂದು ಜೈರಾಂ ರಮೇಶ್ ಟ್ವಿಟ್ ಮಾಡಿದ್ದಾರೆ.

ಇದನ್ನೂ ಓದಿ: ಬಿಜೆಪಿಯ ಹೀನ ರಾಜಕೀಯವು ಬಡವರ ತಟ್ಟೆಯ ಅನ್ನಕ್ಕೂ ವ್ಯಾಪಿಸಿರುವುದು ದುರಂತ: ಕಾಂಗ್ರೆಸ್

ಅಕ್ಕಿ ವಿಚಾರಕ್ಕೆ ಬಿಜೆಪಿ ವಿರುದ್ಧ ರಾಜ್ಯ ಕಾಂಗ್ರೆಸ್ ಆಕ್ರೋಶ

ಅನ್ನಭಾಗ್ಯ ಯೋಜನೆಗೆ ಅಕ್ಕಿ ನೀಡಲು ನಿರಾಕರಿಸಿರುವ ಕೇಂದ್ರ ಬಿಜೆಪಿ ವಿರುದ್ಧ ರಾಜ್ಯ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿ ಸರಣಿ ಟ್ವೀಟ್ ಮಾಡಿದ್ದು, ”ಬಿಜೆಪಿಯ ಹೀನ ರಾಜಕೀಯವು ಬಡವರ ತಟ್ಟೆಯ ಅನ್ನಕ್ಕೂ ವ್ಯಾಪಿಸಿರುವುದು ದುರಂತ. FCI ಗೋದಾಮುಗಳು ಕರ್ನಾಟಕದಲ್ಲೇ ಇವೆ, FCI ನಿಂದ ಅಕ್ಕಿ ಖರೀದಿಸುವುದಾದರೆ ಸಾಗಣೆ ವೆಚ್ಚ ಹಾಗೂ ಸಮಯ ಉಳಿಯಲಿದೆ. ಇತರ ರಾಜ್ಯಗಳಿಂದ ತರಿಸುವುದಾದರೆ ಸಾಗಣೆಯ ದರ ಹಾಗೂ ಸಮಯ ಹೆಚ್ಚಲಿದೆ. ನಮ್ಮ ಗ್ಯಾರಂಟಿಗಳ ಯಶಸ್ಸನ್ನು ತಡೆಯುವ ಬಿಜೆಪಿಯ ಕುತಂತ್ರವು ರಾಜ್ಯಕ್ಕೆ ಹೊರೆಯಾಗಿ ಪರಿಣಮಿಸಿದೆ” ಎಂದಿದ್ದಾರೆ.

ರಾಜ್ಯ ಬಿಜೆಪಿ ನಾಯಕರ ವಿರುದ್ಧ ಕೆಂಡಕಾರಿರುವ ಕಾಂಗ್ರೆಸ್, ”ಕರ್ನಾಟಕದ ಬಡವರಿಗೆ ಅನ್ನ ನೀಡುವ ಯೋಜನೆಯೊಂದಕ್ಕೆ ಅಡೆತಡೆ ಉಂಟಾದಾಗ ಪಕ್ಷಾತೀತವಾಗಿ ಜನಪರವಾಗಿ ಕೆಲಸ ಮಾಡಬೇಕಿತ್ತು, ಬಡವರಿಗೆ ಅನ್ನ ಕೊಡಿಸುವ ಹೊಣೆಗಾರಿಕೆಯನ್ನು ವಿರೋಧಪಕ್ಷಗಳೂ ಹೊರಬೇಕಿತ್ತು. ಆದರೆ ರಾಜ್ಯ ಬಿಜೆಪಿ ನಾಯಕರು ಕೇಂದ್ರದ ಮೇಲೆ ಒತ್ತಡ ಹೇರುವ ಬದಲು ಅನ್ನದ ವಿಷಯದಲ್ಲೂ ಕ್ಷುಲ್ಲುಕ ರಾಜಕೀಯ ಮಾಡಲು ಹೊರಟಿದ್ದು ದುರಾದೃಷ್ಟಕರ” ಎಂದು ಟ್ವೀಟ್ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...