Homeಅಂತರಾಷ್ಟ್ರೀಯಬಾಲಕೋಟ್ ನಲ್ಲಿ ಉಗ್ರರು ಮತ್ತೆ ಸಕ್ರಿಯರಾಗಿದ್ದಾರೆ: ಸೇನಾ ಮುಖ್ಯಸ್ಥ ಬಿಪಿನ್ ರಾವತ್

ಬಾಲಕೋಟ್ ನಲ್ಲಿ ಉಗ್ರರು ಮತ್ತೆ ಸಕ್ರಿಯರಾಗಿದ್ದಾರೆ: ಸೇನಾ ಮುಖ್ಯಸ್ಥ ಬಿಪಿನ್ ರಾವತ್

- Advertisement -
- Advertisement -

ಭಾರತಕ್ಕೆ ನುಸುಳಲು ಇಸ್ರೇಲಿ ನಿರ್ಮಿತ ಲೇಸರ್ ಮಾರ್ಗದರ್ಶಿ ಬಾಂಬುಗಳಿಂದ ಸುಮಾರು 129 ಜೈಶ್ ಭಯೋತ್ಪಾದಕರು ಬಾಲಕೋಟ್ ಶಿಬಿರದಲ್ಲಿ ಕಾಯುತ್ತಿದ್ದಾರೆ ಎಂದು ಭಾರತದ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಹೇಳಿದ್ದಾರೆ.

ಫೆಬ್ರವರಿಯಲ್ಲಿ ಭಾರತದಿಂದ ಬಾಂಬ್ ದಾಳಿಗೊಳಗಾದ ಪಾಕಿಸ್ತಾನದ ಬಾಲಕೋಟ್ನಲ್ಲಿನ ಭಯೋತ್ಪಾದಕ ಶಿಬಿರವನ್ನು ಇತ್ತೀಚೆಗೆ ಪುನಃ ಸಕ್ರಿಯಗೊಳಿಸಲಾಗಿದ್ದು, ಸುಮಾರು 500 ಭಯೋತ್ಪಾದಕರು ಭಾರತಕ್ಕೆ ನುಸುಳಲು ಕಾಯುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.

“ಬಾಲಕೋಟ್ ಅನ್ನು ಪಾಕಿಸ್ತಾನವು ಇತ್ತೀಚೆಗೆ ಪುನಃ ಸಕ್ರಿಯಗೊಳಿಸಿದೆ. ಬಾಲಾಕೋಟ್ ನಲ್ಲಿ ಸಾಕಷ್ಟು ಹಾನಿ ನಡೆದಿದೆ ಎಂಬುದನ್ನು ಇದು ತೋರಿಸುತ್ತದೆ. ಹಾಗಾಗಿ ಬಾಲಕೋಟ್ ನಲ್ಲಿ ಭಾರತೀಯ ವಾಯುಪಡೆಯು ಕೆಲವು ಕ್ರಮಗಳನ್ನು ತೆಗೆದುಕೊಂಡಿದೆ. ಆದ್ದರಿಂದ ಪಾಕಿಸ್ತಾನ ಈಗ ಅವರ ಜನರನ್ನು ಅಲ್ಲಿಂದ ವಾಪಸ್ ಕರೆಸಿಕೊಳ್ಳುತ್ತಿದ್ದಾರೆ ” ಎಂದು ಜನರಲ್ ರಾವತ್ ರವರಯ ಚೆನ್ನೈನಲ್ಲಿ, ಅಧಿಕಾರಿಗಳ ತರಬೇತಿ ಅಕಾಡೆಮಿಯಲ್ಲಿ ಹೇಳಿದ್ದಾರೆ.

ನಿನ್ನೆ ಹೂಸ್ಟನ್ ನಲ್ಲಿ ನಡೆದ ಹೌಡಿ ಮೋದಿ ಕಾರ್ಯಕ್ರಮದಲ್ಲಿ ಭಾರತದ ಪ್ರಧಾನಿ ಮೋದಿಯವರು, ಭಯೋತ್ಪಾದನೆ ಮತ್ತು ಭಯೋತ್ಪಾದನೆಯನ್ನು ಬೆಂಬಲಿಸುವವರ ವಿರುದ್ಧ ಹೋರಾಡುವ ಸಮಯ ಇದಾಗಿದೆ ಎಂದು ಹೇಳಿದ್ದಾರೆ. “ಇದು ಅಮೆರಿಕಾದಲ್ಲಿ 9/11 ಆಗಿರಲಿ ಅಥವಾ ಮುಂಬೈಯಲ್ಲಿ 26/11 ಆಗಿರಲಿ, ಅದರ ಸಂಚುಕೋರರು ಎಲ್ಲಿದ್ದಾರೆ? ನೀವು ಮಾತ್ರವಲ್ಲ, ಈ ಜನರು ಯಾರೆಂದು ಇಡೀ ಜಗತ್ತಿಗೆ ತಿಳಿದಿದೆ” ಎಂದು ಅವರು ಪಾಕಿಸ್ತಾನವನ್ನು ಹೆಸರಿಸದೆ ಟೀಕಿಸಿದ್ದಾರೆ.

ಫೆಬ್ರವರಿ 26 ರಂದು, ಭಾರತೀಯ ವಾಯುಸೇನೆಯ ಹಲವು ಫ್ರೆಂಚ್ ಮೂಲದ ಮಿರಾಜ್ 2000 ಜೆಟ್‌ಗಳೊಂದಿಗೆ ಪಾಕಿಸ್ತಾನದ ಬಾಲಾಕೋಟ್ ನಲ್ಲಿನ ಜೈಷ್-ಎ-ಮೊಹಮ್ಮದ್ ಕ್ಯಾಂಪ್‌ ಮೇಲೆ ವಾಯುದಾಳಿ ನಡೆಸಿತ್ತು. ಇದರಿಂದ ಹಲವು ಉಗ್ರರು ಹತರಾಗಿದ್ದರು ಎನ್ನಲಾಗುತ್ತಿದೆ.

ಇದಕ್ಕೂ ಮೊದಲು ಕಾಶ್ಮೀರದ ಪುಲ್ವಾಮಾದ ಅರೆಸೈನಿಕ ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ಮೇಲೆ ಉಗ್ರರ ಆತ್ಮಾಹುತಿ ಬಾಂಬ್ ದಾಳಿಯಿಂದಾಗಿ 45ಕ್ಕೂ ಹೆಚ್ಚು ಸೈನಿಕರು ಸಾವನ್ನಪ್ಪಿದ್ದರು.

ಬಾಲಕೋಟ್ ಜೈಶ್ ಶಿಬಿರವನ್ನು ಪುನಃ ಸಕ್ರಿಯಗೊಳಿಸುವ ಪಾಕಿಸ್ತಾನದ ಕ್ರಮವು ತನ್ನ ನೆಲದಲ್ಲಿ ಭಯೋತ್ಪಾದಕರಿಗೆ ಆಶ್ರಯ ನೀಡದಿರುವ ಬಗ್ಗೆ ಅಂತರರಾಷ್ಟ್ರೀಯ ಸಮುದಾಯಕ್ಕೆ ತನ್ನ ಬದ್ಧತೆಯನ್ನು ನಿರಾಕರಿಸುತ್ತಿದೆ ಎಂದು ಹಲವರು ಟೀಕಿಸಿದ್ದಾರೆ.

ಜಾಗತಿಕ ಭಯೋತ್ಪಾದಕ ಹಣಕಾಸು ವಾಚ್‌ಡಾಗ್ (ಫೈನಾನ್ಷಿಯಲ್ ಆಕ್ಷನ್ ಟಾಸ್ಕ್ ಫೋರ್ಸ್ -ಎಫ್‌ಎಟಿಎಫ್) ಪಾಕಿಸ್ತಾನವನ್ನು “ವರ್ಧಿತ ಕಪ್ಪುಪಟ್ಟಿ” ಯಲ್ಲಿ ಇರಿಸಿದೆ. ಭಯೋತ್ಪಾದಕರನ್ನು ಬಂಧಿಸುವುದು ಮತ್ತು ಅವರ ನಿಧಿ ಮೂಲಗಳನ್ನು ಸ್ಥಗಿತಗೊಳಿಸುವುದು ಸೇರಿದಂತೆ ಎಫ್‌ಎಟಿಎಫ್‌ನ 27 ಅಂಶಗಳ ಕ್ರಿಯಾ ಯೋಜನೆಯನ್ನು ಪಾಕಿಸ್ತಾನವು ಅಳವಡಿಸಿಕೊಳ್ಳಲು 15 ತಿಂಗಳ ಗಡುವು ಅಕ್ಟೋಬರ್‌ನಲ್ಲಿ ಕೊನೆಗೊಳ್ಳುತ್ತದೆ.

ಎಫ್‌ಎಟಿಎಫ್‌ನ ಗುರಿಯನ್ನು ಪೂರೈಸದಿರುವುದು ಪಾಕಿಸ್ತಾನವನ್ನು ಅಂತರರಾಷ್ಟ್ರೀಯ ಹಣಕಾಸು ನಿಧಿ, ವಿಶ್ವಬ್ಯಾಂಕ್ ಮತ್ತು ಏಷ್ಯನ್ ಡೆವಲಪ್‌ಮೆಂಟ್ ಬ್ಯಾಂಕ್‌ಗಳು ಯಾವ ರೀತಿ ನೋಡುತ್ತವೆ ಎಂಬುದು ಗೊತ್ತಾಗಲಿದೆ. ಜೊತೆಗೆ ಕ್ರೆಡಿಟ್ ರೇಟಿಂಗ್ ಏಜೆನ್ಸಿಗಳಾದ ಮೂಡಿಸ್, ಸ್ಟ್ಯಾಂಡರ್ಡ್ & ಪೂವರ್ಸ್ ಮತ್ತು ಫಿಚ್‌ನ ಋಣಾತ್ಮಕ ಮೌಲ್ಯಮಾಪನಗಳನ್ನು ಎದುರಿಸಬೇಕಾಗುತ್ತದೆ. ಇದು ಆರ್ಥಿಕ ಕುಸಿತವನ್ನು ನಿವಾರಿಸಲು ಸಾಧ್ಯವಿರುವ ಎಲ್ಲ ಅಂತಾರಾಷ್ಟ್ರೀಯ ಮೂಲಗಳಿಂದ ನೆರವು ಪಡೆಯುತ್ತಿರುವ ಪಾಕಿಸ್ತಾನದ ಆರ್ಥಿಕ ಹೊರೆಯನ್ನು ಹೆಚ್ಚಿಸುತ್ತದೆ ಎಂಬ ಅಭಿಪ್ರಾಯ ಕೇಳಿಬಂದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...