Homeಅಂತರಾಷ್ಟ್ರೀಯಬಾಲಕೋಟ್ ನಲ್ಲಿ ಉಗ್ರರು ಮತ್ತೆ ಸಕ್ರಿಯರಾಗಿದ್ದಾರೆ: ಸೇನಾ ಮುಖ್ಯಸ್ಥ ಬಿಪಿನ್ ರಾವತ್

ಬಾಲಕೋಟ್ ನಲ್ಲಿ ಉಗ್ರರು ಮತ್ತೆ ಸಕ್ರಿಯರಾಗಿದ್ದಾರೆ: ಸೇನಾ ಮುಖ್ಯಸ್ಥ ಬಿಪಿನ್ ರಾವತ್

- Advertisement -
- Advertisement -

ಭಾರತಕ್ಕೆ ನುಸುಳಲು ಇಸ್ರೇಲಿ ನಿರ್ಮಿತ ಲೇಸರ್ ಮಾರ್ಗದರ್ಶಿ ಬಾಂಬುಗಳಿಂದ ಸುಮಾರು 129 ಜೈಶ್ ಭಯೋತ್ಪಾದಕರು ಬಾಲಕೋಟ್ ಶಿಬಿರದಲ್ಲಿ ಕಾಯುತ್ತಿದ್ದಾರೆ ಎಂದು ಭಾರತದ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಹೇಳಿದ್ದಾರೆ.

ಫೆಬ್ರವರಿಯಲ್ಲಿ ಭಾರತದಿಂದ ಬಾಂಬ್ ದಾಳಿಗೊಳಗಾದ ಪಾಕಿಸ್ತಾನದ ಬಾಲಕೋಟ್ನಲ್ಲಿನ ಭಯೋತ್ಪಾದಕ ಶಿಬಿರವನ್ನು ಇತ್ತೀಚೆಗೆ ಪುನಃ ಸಕ್ರಿಯಗೊಳಿಸಲಾಗಿದ್ದು, ಸುಮಾರು 500 ಭಯೋತ್ಪಾದಕರು ಭಾರತಕ್ಕೆ ನುಸುಳಲು ಕಾಯುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.

“ಬಾಲಕೋಟ್ ಅನ್ನು ಪಾಕಿಸ್ತಾನವು ಇತ್ತೀಚೆಗೆ ಪುನಃ ಸಕ್ರಿಯಗೊಳಿಸಿದೆ. ಬಾಲಾಕೋಟ್ ನಲ್ಲಿ ಸಾಕಷ್ಟು ಹಾನಿ ನಡೆದಿದೆ ಎಂಬುದನ್ನು ಇದು ತೋರಿಸುತ್ತದೆ. ಹಾಗಾಗಿ ಬಾಲಕೋಟ್ ನಲ್ಲಿ ಭಾರತೀಯ ವಾಯುಪಡೆಯು ಕೆಲವು ಕ್ರಮಗಳನ್ನು ತೆಗೆದುಕೊಂಡಿದೆ. ಆದ್ದರಿಂದ ಪಾಕಿಸ್ತಾನ ಈಗ ಅವರ ಜನರನ್ನು ಅಲ್ಲಿಂದ ವಾಪಸ್ ಕರೆಸಿಕೊಳ್ಳುತ್ತಿದ್ದಾರೆ ” ಎಂದು ಜನರಲ್ ರಾವತ್ ರವರಯ ಚೆನ್ನೈನಲ್ಲಿ, ಅಧಿಕಾರಿಗಳ ತರಬೇತಿ ಅಕಾಡೆಮಿಯಲ್ಲಿ ಹೇಳಿದ್ದಾರೆ.

ನಿನ್ನೆ ಹೂಸ್ಟನ್ ನಲ್ಲಿ ನಡೆದ ಹೌಡಿ ಮೋದಿ ಕಾರ್ಯಕ್ರಮದಲ್ಲಿ ಭಾರತದ ಪ್ರಧಾನಿ ಮೋದಿಯವರು, ಭಯೋತ್ಪಾದನೆ ಮತ್ತು ಭಯೋತ್ಪಾದನೆಯನ್ನು ಬೆಂಬಲಿಸುವವರ ವಿರುದ್ಧ ಹೋರಾಡುವ ಸಮಯ ಇದಾಗಿದೆ ಎಂದು ಹೇಳಿದ್ದಾರೆ. “ಇದು ಅಮೆರಿಕಾದಲ್ಲಿ 9/11 ಆಗಿರಲಿ ಅಥವಾ ಮುಂಬೈಯಲ್ಲಿ 26/11 ಆಗಿರಲಿ, ಅದರ ಸಂಚುಕೋರರು ಎಲ್ಲಿದ್ದಾರೆ? ನೀವು ಮಾತ್ರವಲ್ಲ, ಈ ಜನರು ಯಾರೆಂದು ಇಡೀ ಜಗತ್ತಿಗೆ ತಿಳಿದಿದೆ” ಎಂದು ಅವರು ಪಾಕಿಸ್ತಾನವನ್ನು ಹೆಸರಿಸದೆ ಟೀಕಿಸಿದ್ದಾರೆ.

ಫೆಬ್ರವರಿ 26 ರಂದು, ಭಾರತೀಯ ವಾಯುಸೇನೆಯ ಹಲವು ಫ್ರೆಂಚ್ ಮೂಲದ ಮಿರಾಜ್ 2000 ಜೆಟ್‌ಗಳೊಂದಿಗೆ ಪಾಕಿಸ್ತಾನದ ಬಾಲಾಕೋಟ್ ನಲ್ಲಿನ ಜೈಷ್-ಎ-ಮೊಹಮ್ಮದ್ ಕ್ಯಾಂಪ್‌ ಮೇಲೆ ವಾಯುದಾಳಿ ನಡೆಸಿತ್ತು. ಇದರಿಂದ ಹಲವು ಉಗ್ರರು ಹತರಾಗಿದ್ದರು ಎನ್ನಲಾಗುತ್ತಿದೆ.

ಇದಕ್ಕೂ ಮೊದಲು ಕಾಶ್ಮೀರದ ಪುಲ್ವಾಮಾದ ಅರೆಸೈನಿಕ ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ಮೇಲೆ ಉಗ್ರರ ಆತ್ಮಾಹುತಿ ಬಾಂಬ್ ದಾಳಿಯಿಂದಾಗಿ 45ಕ್ಕೂ ಹೆಚ್ಚು ಸೈನಿಕರು ಸಾವನ್ನಪ್ಪಿದ್ದರು.

ಬಾಲಕೋಟ್ ಜೈಶ್ ಶಿಬಿರವನ್ನು ಪುನಃ ಸಕ್ರಿಯಗೊಳಿಸುವ ಪಾಕಿಸ್ತಾನದ ಕ್ರಮವು ತನ್ನ ನೆಲದಲ್ಲಿ ಭಯೋತ್ಪಾದಕರಿಗೆ ಆಶ್ರಯ ನೀಡದಿರುವ ಬಗ್ಗೆ ಅಂತರರಾಷ್ಟ್ರೀಯ ಸಮುದಾಯಕ್ಕೆ ತನ್ನ ಬದ್ಧತೆಯನ್ನು ನಿರಾಕರಿಸುತ್ತಿದೆ ಎಂದು ಹಲವರು ಟೀಕಿಸಿದ್ದಾರೆ.

ಜಾಗತಿಕ ಭಯೋತ್ಪಾದಕ ಹಣಕಾಸು ವಾಚ್‌ಡಾಗ್ (ಫೈನಾನ್ಷಿಯಲ್ ಆಕ್ಷನ್ ಟಾಸ್ಕ್ ಫೋರ್ಸ್ -ಎಫ್‌ಎಟಿಎಫ್) ಪಾಕಿಸ್ತಾನವನ್ನು “ವರ್ಧಿತ ಕಪ್ಪುಪಟ್ಟಿ” ಯಲ್ಲಿ ಇರಿಸಿದೆ. ಭಯೋತ್ಪಾದಕರನ್ನು ಬಂಧಿಸುವುದು ಮತ್ತು ಅವರ ನಿಧಿ ಮೂಲಗಳನ್ನು ಸ್ಥಗಿತಗೊಳಿಸುವುದು ಸೇರಿದಂತೆ ಎಫ್‌ಎಟಿಎಫ್‌ನ 27 ಅಂಶಗಳ ಕ್ರಿಯಾ ಯೋಜನೆಯನ್ನು ಪಾಕಿಸ್ತಾನವು ಅಳವಡಿಸಿಕೊಳ್ಳಲು 15 ತಿಂಗಳ ಗಡುವು ಅಕ್ಟೋಬರ್‌ನಲ್ಲಿ ಕೊನೆಗೊಳ್ಳುತ್ತದೆ.

ಎಫ್‌ಎಟಿಎಫ್‌ನ ಗುರಿಯನ್ನು ಪೂರೈಸದಿರುವುದು ಪಾಕಿಸ್ತಾನವನ್ನು ಅಂತರರಾಷ್ಟ್ರೀಯ ಹಣಕಾಸು ನಿಧಿ, ವಿಶ್ವಬ್ಯಾಂಕ್ ಮತ್ತು ಏಷ್ಯನ್ ಡೆವಲಪ್‌ಮೆಂಟ್ ಬ್ಯಾಂಕ್‌ಗಳು ಯಾವ ರೀತಿ ನೋಡುತ್ತವೆ ಎಂಬುದು ಗೊತ್ತಾಗಲಿದೆ. ಜೊತೆಗೆ ಕ್ರೆಡಿಟ್ ರೇಟಿಂಗ್ ಏಜೆನ್ಸಿಗಳಾದ ಮೂಡಿಸ್, ಸ್ಟ್ಯಾಂಡರ್ಡ್ & ಪೂವರ್ಸ್ ಮತ್ತು ಫಿಚ್‌ನ ಋಣಾತ್ಮಕ ಮೌಲ್ಯಮಾಪನಗಳನ್ನು ಎದುರಿಸಬೇಕಾಗುತ್ತದೆ. ಇದು ಆರ್ಥಿಕ ಕುಸಿತವನ್ನು ನಿವಾರಿಸಲು ಸಾಧ್ಯವಿರುವ ಎಲ್ಲ ಅಂತಾರಾಷ್ಟ್ರೀಯ ಮೂಲಗಳಿಂದ ನೆರವು ಪಡೆಯುತ್ತಿರುವ ಪಾಕಿಸ್ತಾನದ ಆರ್ಥಿಕ ಹೊರೆಯನ್ನು ಹೆಚ್ಚಿಸುತ್ತದೆ ಎಂಬ ಅಭಿಪ್ರಾಯ ಕೇಳಿಬಂದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...