Homeಅಂತರಾಷ್ಟ್ರೀಯಬಾಲಕೋಟ್ ನಲ್ಲಿ ಉಗ್ರರು ಮತ್ತೆ ಸಕ್ರಿಯರಾಗಿದ್ದಾರೆ: ಸೇನಾ ಮುಖ್ಯಸ್ಥ ಬಿಪಿನ್ ರಾವತ್

ಬಾಲಕೋಟ್ ನಲ್ಲಿ ಉಗ್ರರು ಮತ್ತೆ ಸಕ್ರಿಯರಾಗಿದ್ದಾರೆ: ಸೇನಾ ಮುಖ್ಯಸ್ಥ ಬಿಪಿನ್ ರಾವತ್

- Advertisement -
- Advertisement -

ಭಾರತಕ್ಕೆ ನುಸುಳಲು ಇಸ್ರೇಲಿ ನಿರ್ಮಿತ ಲೇಸರ್ ಮಾರ್ಗದರ್ಶಿ ಬಾಂಬುಗಳಿಂದ ಸುಮಾರು 129 ಜೈಶ್ ಭಯೋತ್ಪಾದಕರು ಬಾಲಕೋಟ್ ಶಿಬಿರದಲ್ಲಿ ಕಾಯುತ್ತಿದ್ದಾರೆ ಎಂದು ಭಾರತದ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಹೇಳಿದ್ದಾರೆ.

ಫೆಬ್ರವರಿಯಲ್ಲಿ ಭಾರತದಿಂದ ಬಾಂಬ್ ದಾಳಿಗೊಳಗಾದ ಪಾಕಿಸ್ತಾನದ ಬಾಲಕೋಟ್ನಲ್ಲಿನ ಭಯೋತ್ಪಾದಕ ಶಿಬಿರವನ್ನು ಇತ್ತೀಚೆಗೆ ಪುನಃ ಸಕ್ರಿಯಗೊಳಿಸಲಾಗಿದ್ದು, ಸುಮಾರು 500 ಭಯೋತ್ಪಾದಕರು ಭಾರತಕ್ಕೆ ನುಸುಳಲು ಕಾಯುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.

“ಬಾಲಕೋಟ್ ಅನ್ನು ಪಾಕಿಸ್ತಾನವು ಇತ್ತೀಚೆಗೆ ಪುನಃ ಸಕ್ರಿಯಗೊಳಿಸಿದೆ. ಬಾಲಾಕೋಟ್ ನಲ್ಲಿ ಸಾಕಷ್ಟು ಹಾನಿ ನಡೆದಿದೆ ಎಂಬುದನ್ನು ಇದು ತೋರಿಸುತ್ತದೆ. ಹಾಗಾಗಿ ಬಾಲಕೋಟ್ ನಲ್ಲಿ ಭಾರತೀಯ ವಾಯುಪಡೆಯು ಕೆಲವು ಕ್ರಮಗಳನ್ನು ತೆಗೆದುಕೊಂಡಿದೆ. ಆದ್ದರಿಂದ ಪಾಕಿಸ್ತಾನ ಈಗ ಅವರ ಜನರನ್ನು ಅಲ್ಲಿಂದ ವಾಪಸ್ ಕರೆಸಿಕೊಳ್ಳುತ್ತಿದ್ದಾರೆ ” ಎಂದು ಜನರಲ್ ರಾವತ್ ರವರಯ ಚೆನ್ನೈನಲ್ಲಿ, ಅಧಿಕಾರಿಗಳ ತರಬೇತಿ ಅಕಾಡೆಮಿಯಲ್ಲಿ ಹೇಳಿದ್ದಾರೆ.

ನಿನ್ನೆ ಹೂಸ್ಟನ್ ನಲ್ಲಿ ನಡೆದ ಹೌಡಿ ಮೋದಿ ಕಾರ್ಯಕ್ರಮದಲ್ಲಿ ಭಾರತದ ಪ್ರಧಾನಿ ಮೋದಿಯವರು, ಭಯೋತ್ಪಾದನೆ ಮತ್ತು ಭಯೋತ್ಪಾದನೆಯನ್ನು ಬೆಂಬಲಿಸುವವರ ವಿರುದ್ಧ ಹೋರಾಡುವ ಸಮಯ ಇದಾಗಿದೆ ಎಂದು ಹೇಳಿದ್ದಾರೆ. “ಇದು ಅಮೆರಿಕಾದಲ್ಲಿ 9/11 ಆಗಿರಲಿ ಅಥವಾ ಮುಂಬೈಯಲ್ಲಿ 26/11 ಆಗಿರಲಿ, ಅದರ ಸಂಚುಕೋರರು ಎಲ್ಲಿದ್ದಾರೆ? ನೀವು ಮಾತ್ರವಲ್ಲ, ಈ ಜನರು ಯಾರೆಂದು ಇಡೀ ಜಗತ್ತಿಗೆ ತಿಳಿದಿದೆ” ಎಂದು ಅವರು ಪಾಕಿಸ್ತಾನವನ್ನು ಹೆಸರಿಸದೆ ಟೀಕಿಸಿದ್ದಾರೆ.

ಫೆಬ್ರವರಿ 26 ರಂದು, ಭಾರತೀಯ ವಾಯುಸೇನೆಯ ಹಲವು ಫ್ರೆಂಚ್ ಮೂಲದ ಮಿರಾಜ್ 2000 ಜೆಟ್‌ಗಳೊಂದಿಗೆ ಪಾಕಿಸ್ತಾನದ ಬಾಲಾಕೋಟ್ ನಲ್ಲಿನ ಜೈಷ್-ಎ-ಮೊಹಮ್ಮದ್ ಕ್ಯಾಂಪ್‌ ಮೇಲೆ ವಾಯುದಾಳಿ ನಡೆಸಿತ್ತು. ಇದರಿಂದ ಹಲವು ಉಗ್ರರು ಹತರಾಗಿದ್ದರು ಎನ್ನಲಾಗುತ್ತಿದೆ.

ಇದಕ್ಕೂ ಮೊದಲು ಕಾಶ್ಮೀರದ ಪುಲ್ವಾಮಾದ ಅರೆಸೈನಿಕ ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ಮೇಲೆ ಉಗ್ರರ ಆತ್ಮಾಹುತಿ ಬಾಂಬ್ ದಾಳಿಯಿಂದಾಗಿ 45ಕ್ಕೂ ಹೆಚ್ಚು ಸೈನಿಕರು ಸಾವನ್ನಪ್ಪಿದ್ದರು.

ಬಾಲಕೋಟ್ ಜೈಶ್ ಶಿಬಿರವನ್ನು ಪುನಃ ಸಕ್ರಿಯಗೊಳಿಸುವ ಪಾಕಿಸ್ತಾನದ ಕ್ರಮವು ತನ್ನ ನೆಲದಲ್ಲಿ ಭಯೋತ್ಪಾದಕರಿಗೆ ಆಶ್ರಯ ನೀಡದಿರುವ ಬಗ್ಗೆ ಅಂತರರಾಷ್ಟ್ರೀಯ ಸಮುದಾಯಕ್ಕೆ ತನ್ನ ಬದ್ಧತೆಯನ್ನು ನಿರಾಕರಿಸುತ್ತಿದೆ ಎಂದು ಹಲವರು ಟೀಕಿಸಿದ್ದಾರೆ.

ಜಾಗತಿಕ ಭಯೋತ್ಪಾದಕ ಹಣಕಾಸು ವಾಚ್‌ಡಾಗ್ (ಫೈನಾನ್ಷಿಯಲ್ ಆಕ್ಷನ್ ಟಾಸ್ಕ್ ಫೋರ್ಸ್ -ಎಫ್‌ಎಟಿಎಫ್) ಪಾಕಿಸ್ತಾನವನ್ನು “ವರ್ಧಿತ ಕಪ್ಪುಪಟ್ಟಿ” ಯಲ್ಲಿ ಇರಿಸಿದೆ. ಭಯೋತ್ಪಾದಕರನ್ನು ಬಂಧಿಸುವುದು ಮತ್ತು ಅವರ ನಿಧಿ ಮೂಲಗಳನ್ನು ಸ್ಥಗಿತಗೊಳಿಸುವುದು ಸೇರಿದಂತೆ ಎಫ್‌ಎಟಿಎಫ್‌ನ 27 ಅಂಶಗಳ ಕ್ರಿಯಾ ಯೋಜನೆಯನ್ನು ಪಾಕಿಸ್ತಾನವು ಅಳವಡಿಸಿಕೊಳ್ಳಲು 15 ತಿಂಗಳ ಗಡುವು ಅಕ್ಟೋಬರ್‌ನಲ್ಲಿ ಕೊನೆಗೊಳ್ಳುತ್ತದೆ.

ಎಫ್‌ಎಟಿಎಫ್‌ನ ಗುರಿಯನ್ನು ಪೂರೈಸದಿರುವುದು ಪಾಕಿಸ್ತಾನವನ್ನು ಅಂತರರಾಷ್ಟ್ರೀಯ ಹಣಕಾಸು ನಿಧಿ, ವಿಶ್ವಬ್ಯಾಂಕ್ ಮತ್ತು ಏಷ್ಯನ್ ಡೆವಲಪ್‌ಮೆಂಟ್ ಬ್ಯಾಂಕ್‌ಗಳು ಯಾವ ರೀತಿ ನೋಡುತ್ತವೆ ಎಂಬುದು ಗೊತ್ತಾಗಲಿದೆ. ಜೊತೆಗೆ ಕ್ರೆಡಿಟ್ ರೇಟಿಂಗ್ ಏಜೆನ್ಸಿಗಳಾದ ಮೂಡಿಸ್, ಸ್ಟ್ಯಾಂಡರ್ಡ್ & ಪೂವರ್ಸ್ ಮತ್ತು ಫಿಚ್‌ನ ಋಣಾತ್ಮಕ ಮೌಲ್ಯಮಾಪನಗಳನ್ನು ಎದುರಿಸಬೇಕಾಗುತ್ತದೆ. ಇದು ಆರ್ಥಿಕ ಕುಸಿತವನ್ನು ನಿವಾರಿಸಲು ಸಾಧ್ಯವಿರುವ ಎಲ್ಲ ಅಂತಾರಾಷ್ಟ್ರೀಯ ಮೂಲಗಳಿಂದ ನೆರವು ಪಡೆಯುತ್ತಿರುವ ಪಾಕಿಸ್ತಾನದ ಆರ್ಥಿಕ ಹೊರೆಯನ್ನು ಹೆಚ್ಚಿಸುತ್ತದೆ ಎಂಬ ಅಭಿಪ್ರಾಯ ಕೇಳಿಬಂದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...